Homeಮುಖಪುಟಎಲ್‌ಡಿಎಫ್ ಸರ್ಕಾರದ ಜನಪ್ರಿಯತೆ ಕಡಿಮೆ ಮಾಡಲು ಕೇಂದ್ರದಿಂದ ಪ್ರಯತ್ನ: ಸಿಪಿಐ(ಎಂ)

ಎಲ್‌ಡಿಎಫ್ ಸರ್ಕಾರದ ಜನಪ್ರಿಯತೆ ಕಡಿಮೆ ಮಾಡಲು ಕೇಂದ್ರದಿಂದ ಪ್ರಯತ್ನ: ಸಿಪಿಐ(ಎಂ)

- Advertisement -
- Advertisement -

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರಕಾರದ ಪ್ರತಿನಿಧಿಗಳು ಫೆ.8ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ರಾಜ್ಯದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಲಿದ್ದಾರೆ. ಮಂಗಳವಾರ ತಿರುವನಂತಪುರದಲ್ಲಿ ನಡೆದ ಎಲ್‌ಡಿಎಫ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.  ಎಲ್‌ಡಿಎಫ್ ಸಂಚಾಲಕ ಮತ್ತು ಹಿರಿಯ ಸಿಪಿಐ(ಎಂ) ನಾಯಕ ಇ ಪಿ ಜಯರಾಜನ್ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಅಭಿವೃದ್ಧಿಯಲ್ಲಿ ಹಿನ್ನೆಡೆ ಸೃಷ್ಟಿಸುವ ಮೂಲಕ ಎಲ್‌ಡಿಎಫ್ ಸರ್ಕಾರದ ಜನಪ್ರಿಯತೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರದ ಕಡೆಯಿಂದ ಸಂಘಟಿತ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ತೆರಿಗೆ ಪಾಲು ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಹಣವನ್ನು ಕೇಂದ್ರ ತಡೆ ಹಿಡಿಯುತ್ತದೆ. ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಬಹಳ ಮುಖ್ಯ. ರಾಜ್ಯವು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಾಗ ಕೇಂದ್ರ ಸರ್ಕಾರವು ಅಭಿವೃದ್ಧಿ ಚಟುವಟಿಕೆಗಳಿಗೆ ಹಣಕಾಸು ಸಹಾಯ ಪಡೆಯುವ ಹಕ್ಕನ್ನು ಸಹ ಮೊಟಕುಗೊಳಿಸಿದೆ.  ಕೇರಳಕ್ಕೆ ಸಾಲ ಪಡೆಯಲು ಅವಕಾಶವಿಲ್ಲದಂತೆ ಮಾಡಿದೆ ಎಂದು ಆರೋಪಿಸಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೇರಳಕ್ಕೆ ಕೇಂದ್ರ ಸರ್ಕಾರ ಮಾಡಿರುವ ಅನ್ಯಾಯವನ್ನು ಎತ್ತಿ ತೋರಿಸಲಾಗುವುದು ಎಂದು ಜಯರಾಜನ್ ಹೇಳಿದ್ದಾರೆ. ಫೆಬ್ರವರಿ 8 ರಂದು ಪಿಣರಾಯ್‌ ವಿಜಯನ್ ನೇತೃತ್ವದ ಸಚಿವ ಸಂಪುಟವು ದೆಹಲಿಯ ಕೇರಳ ಹೌಸ್‌ನಿಂದ ಜಂತರ್ ಮಂತರ್‌ಗೆ ಪ್ರತಿಭಟನೆ ಮೆರವಣಿಗೆ ನಡೆಸಲಿದೆ. ಅಲ್ಲದೆ ಕ್ಯಾಬಿನೆಟ್ ಸದಸ್ಯರು, ಎಲ್ಲಾ ಎಲ್‌ಡಿಎಫ್ ಶಾಸಕರು ಮತ್ತು ಸಂಸತ್ ಸದಸ್ಯರು ಆಂದೋಲನದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಹಲವಾರು ತಿಂಗಳುಗಳಿಂದ ಕೇರಳ ಸರ್ಕಾರ ಮತ್ತು ಎಲ್‌ಡಿಎಫ್ ರಾಜ್ಯದಲ್ಲಿ ಪ್ರತಿಭಟನೆಗೆ ಮುಂದಾಗಿದೆ. ಬಿಜೆಪಿ ನೇತೃತ್ವದ ಸರ್ಕಾರವು ರಾಜ್ಯದ ಸಾಲದ ಮಿತಿಯನ್ನು ಕಡಿತಗೊಳಿಸುವ ಮೂಲಕ ರಾಜ್ಯವನ್ನು ಹೇಗೆ ಆರ್ಥಿಕವಾಗಿ ಉಸಿರುಗಟ್ಟಿಸುತ್ತಿದೆ ಎಂಬುವುದನ್ನು ಹೇಳಿಕೊಂಡು ಬಂದಿದೆ. ರಾಜ್ಯದ ಸಾಲದ ಮೇಲೆ ಕೇಂದ್ರ ಸರ್ಕಾರ ಹೇರಿರುವ ಮಿತಿಯನ್ನು ಪ್ರಶ್ನಿಸಿ ರಾಜ್ಯವು ಈಗಾಗಲೇ ಸುಪ್ರೀಂಕೋರ್ಟ್‌ಗೆ ಅರ್ಜಿಯನ್ನು ಕೂಡ ಸಲ್ಲಿಸಿದೆ.

ಎಲ್‌ಡಿಎಫ್ ಇಡೀ ರಾಜ್ಯದಲ್ಲಿ ಈ ಬಗ್ಗೆ ಆಂದೋಲನವಾಗಬೇಕೆಂದು ಬಯಸುತ್ತದೆ ಎಂದು ಜಯರಾಜನ್ ಹೇಳಿದ್ದು, ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷ ಯುಡಿಎಫ್ ಆಂದೋಲನಕ್ಕೆ ಸಹಕರಿಸಬೇಕೆಂದು ನಾವು ಬಯಸುತ್ತೇವೆ. ಇದು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧದ ರಾಜ್ಯದ ಪ್ರತಿಭಟನೆಯಾಗಿದೆ. ಯುಡಿಎಫ್‌ ಶಾಸಕರು ಮತ್ತು ಸಂಸದರು ಆಂದೋಲನದಲ್ಲಿ ಪಾಲ್ಗೊಳ್ಳಬೇಕೆಂದು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದರೆ ರಾಜ್ಯದ ಬೂತ್ ಮಟ್ಟದ ಎಲ್‌ಡಿಎಫ್ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ರಾಜ್ಯದ ಜನರಿಗೆ ಈ ಬಗ್ಗೆ ತಿಳಿಸಲಿದ್ದಾರೆ. ಎಲ್ಲಾ ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಈ ಬಗ್ಗೆ ಸಾರ್ವಜನಿಕ ಸಭೆ ಕೂಡ ನಡೆಯಲಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಹಾಗೂ ಉಪ ನಾಯಕ ಪಿ.ಕೆ.ಕುನ್ಹಲಿಕುಟ್ಟಿ ಅವರೊಂದಿಗೆ ಆನ್‌ಲೈನ್ ಮೂಲಕ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಕುರಿತು ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಧರಣಿಯಲ್ಲಿ ಪಾಲ್ಗೊಳ್ಳಬೇಕೇ ಅಥವಾ ಬೇಡವೇ ಎಂಬುದನ್ನು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗೆ ಸತೀಶನ್ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಇದನ್ನು ಓದಿ: ಆಂಧ್ರಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...