Homeಮುಖಪುಟ'ಹಿಂದುತ್ವ ವಾಚ್' ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

‘ಹಿಂದುತ್ವ ವಾಚ್’ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

- Advertisement -
- Advertisement -

ಮುಸ್ಲಿಮರ, ಅಲ್ಪಸಂಖ್ಯಾತರ, ಹಿಂದುಳಿದ ಸಮುದಾಯಗಳ ಮೇಲೆ ನಡೆಯುತ್ತಿದ್ದ ದಾಳಿ, ದೌರ್ಜನ್ಯದ ಕುರಿತು ಪೋಸ್ಟ್‌ ಮಾಡುತ್ತಿದ್ದ ‘ಹಿಂದುತ್ವ ವಾಚ್ ಇನ್‌’ ಎಂಬ ಎಕ್ಸ್‌ ಖಾತೆಯನ್ನು ಕೇಂದ್ರ ಸರಕಾರದ ಬೇಡಿಕೆಯ ಮೇರೆಗೆ ಜನವರಿ 16ರಿಂದ ಭಾರತದಲ್ಲಿ ನಿರ್ಬಂಧಿಸಲಾಗಿದೆ.

ಖಾತೆಯ ಸಂಸ್ಥಾಪಕ ರಖೀಬ್ ಹಮೀದ್ ನಾಯಕ್ ಅವರು ಮಂಗಳವಾರ ಬೆಳವಣಿಗೆಯ ಬಗ್ಗೆ ಇಮೇಲ್ ಸ್ವೀಕರಿಸಿದ್ದಾರೆ ಎಂದು ಮಾದ್ಯಮಗಳಿಗೆ ತಿಳಿಸಿದ್ದಾರೆ. ಈ ಖಾತೆಯು ಐಟಿ ಕಾಯ್ದೆಯ ಸೆಕ್ಷನ್‌ಗಳನ್ನು ಉಲ್ಲಂಘಿಸಿದೆ ಎಂದು ಭಾರತ ಸರ್ಕಾರ ಹೇಳಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಮಾದ್ಯಮ ಪ್ಲಾಟ್‌ಫಾರ್ಮ್ ‘ಎಕ್ಸ್’ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ  ‘ಹಿಂದುತ್ವ ವಾಚ್‌ ಇನ್‌’ನ ಖಾತೆಯನ್ನು ತಡೆಹಿಡಿದಿದೆ. ಮಂಗಳವಾರ ಜನವರಿ 16ರ ಸಂಜೆ ‘ಹಿಂದುತ್ವ ವಾಚ್‌ ಇನ್‌’ ಪೇಜ್‌ಗೆ ನಿರ್ಬಂಧ ವಿಧಿಸಲಾಗಿದೆ. ಖಾತೆಯನ್ನು ಎಕ್ಸ್‌ ನಿರ್ಬಂಧಿಸಿದ ಮೂರು ಗಂಟೆಗಳ ನಂತರ ಅವರು ಈ ಕುರಿತ ಇ-ಮೇಲ್‌ ಸಂದೇಶವನ್ನು ಸ್ವೀಕರಿಸಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕ ರಖೀಬ್ ಹಮೀದ್ ನಾಯಕ್ ಹೇಳಿದ್ದಾರೆ.

ಖಾತೆಯನ್ನು ನಿರ್ಬಂಧಿಸಿರುವ ಬಗ್ಗೆ ಎಕ್ಸ್‌ ಇ-ಮೇಲ್‌ ಕಳುಹಿಸಿದ್ದು, ಭಾರತ ಸರ್ಕಾರ @HindutvaWatchIn ಖಾತೆಯನ್ನು ತೆಗೆದುಹಾಕಲು ಬೇಡಿಕೆಯನ್ನು ಇಟ್ಟಿದೆ. ಭಾರತದ ಮಾಹಿತಿ ತಂತ್ರಜ್ಞಾನ ಕಾಯಿದೆ-2000ದ ಅಧಿನಿಯಮವನ್ನು ಉಲ್ಲಂಘಿಸಿದ ಅರೋಪವನ್ನು ಮಾಡಿದೆ.

ಈ ಕ್ರಮಕ್ಕೆ ಪ್ರತಿಕ್ರಿಯಿಸಿದ ರಖೀಬ್ ಹಮೀದ್, ಪ್ರಧಾನಿ ಮೋದಿ ಆಡಳಿತದ ಇತಿಹಾಸ ಮತ್ತು ಮುಕ್ತ ಪತ್ರಿಕಾ ಮತ್ತು ವಿಮರ್ಶಾತ್ಮಕ ಧ್ವನಿಗಳನ್ನು ನಿಗ್ರಹಿಸುವುದನ್ನು ಗಮನಿಸಿದಾಗ ಇದೇನು ಅಚ್ಚರಿಯಲ್ಲ. ಈ ಕ್ರಮದಿಂದ  ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಭಾರತದಲ್ಲಿ ನಮ್ಮ ಖಾತೆಯ ಮೇಲಿನ ನಿರ್ಬಂಧವು ನಮ್ಮ ಕೆಲಸವನ್ನು ಅಡೆತಡೆಯಿಲ್ಲದೆ ಮುಂದುವರಿಸುವ ನಮ್ಮ ಸಂಕಲ್ಪವನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ.

ಹಿಂದುತ್ವ ವಾಚ್ ಎಂಬ ಎಕ್ಸ್‌ ಖಾತೆ ಭಾರತದಲ್ಲಿನ ಮೂಲಭೂತವಾದಿ ಹಿಂದೂಗಳು ಮತ್ತು ಹಿಂದುತ್ವ  ಗುಂಪುಗಳಿಂದ ಅಲ್ಪಸಂಖ್ಯಾತ ಮತ್ತು ಅಂಚಿನಲ್ಲಿರುವ ಸಮುದಾಯಗಳ ಸದಸ್ಯರ ಮೇಲೆ ಮತ್ತು ಅವರ ನಂಬಿಕೆಯ ಮೇಲೆ ನಡೆಯುತ್ತಿರುವ ದಾಳಿಯ ವರದಿಗಳನ್ನು ಮಾಡುತ್ತದೆ. ಇದು ಸಂಸ್ಥೆಗಳು ಮತ್ತು ಹಿಂಸಾಚಾರ ಮತ್ತು ಕುಕೃತ್ಯಗಳಿಗೆ ಕಾರಣವಾದ ಜನರನ್ನು ಬಹಿರಂಗಪಡಿಸುವ ಕೆಲಸವನ್ನು ಕೂಡ ಮಾಡುತ್ತಿತ್ತು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಹಿಂದುತ್ವ ವಾಚ್ ಇನ್‌ ವರದಿಯನ್ನು ಬಿಡುಗಡೆ ಮಾಡಿದ್ದು, 2023ರ ಮೊದಲ ಆರು ತಿಂಗಳುಗಳಲ್ಲಿ ಮುಸ್ಲಿಂ ವಿರೋಧಿ ದ್ವೇಷ ಭಾಷಣವನ್ನು ಒಳಗೊಂಡ 250ಕ್ಕೂ ಹೆಚ್ಚು ದಾಖಲೆಗಳನ್ನು ಬಹಿರಂಗಪಡಿಸಿದೆ. ಅವುಗಳಲ್ಲಿ ಹೆಚ್ಚಿನವು ಭಾರತೀಯ ಜನತಾ ಪಕ್ಷದ ಆಡಳಿತ ಇರುವ ರಾಜ್ಯಗಳದ್ದಾಗಿದೆ. ಮತ್ತು ಅದರಲ್ಲಿ ಸುಮಾರು 70% 2023 ಅಥವಾ 2024ರಲ್ಲಿ ಚುನಾವಣೆಗಳಿದ್ದ ರಾಜ್ಯದಲ್ಲಿ ದ್ವೇಷ ಭಾಷಣವನ್ನು ಮಾಡಲಾಗಿದೆ ಎಂದು ಬಹಿರಂಗಪಡಿಸಿತ್ತು.

ಇದನ್ನು ಓದಿ: ಉತ್ತರಪ್ರದೇಶ: ಬೀದಿ ವ್ಯಾಪಾರಿಯನ್ನು ಥಳಿಸಿ ಹತ್ಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...