Homeಮುಖಪುಟಪಾಕಿಸ್ತಾನದ 'ಜೈಶ್ ಅಲ್-ಅದ್ಲ್‌' ನೆಲೆಯ ಮೇಲೆ ಇರಾನ್‌ನಿಂದ ಕ್ಷಿಪಣಿ ದಾಳಿ

ಪಾಕಿಸ್ತಾನದ ‘ಜೈಶ್ ಅಲ್-ಅದ್ಲ್‌’ ನೆಲೆಯ ಮೇಲೆ ಇರಾನ್‌ನಿಂದ ಕ್ಷಿಪಣಿ ದಾಳಿ

- Advertisement -
- Advertisement -

ಪಾಕಿಸ್ತಾನದ ಸುನ್ನಿ ತೀವ್ರಗಾಮಿ ಗುಂಪು ಜೈಶ್ ಅಲ್-ಅದ್ಲ್‌ಗೆ ಸೇರಿದ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್‌ ಕ್ಷಿಪಣಿ ದಾಳಿ ನಡೆಸಿದ್ದು, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಮತ್ತು ಮೂವರಿಗೆ ಗಾಯಗಳಾಗಿವೆ ಎಂದು ಪಾಕಿಸ್ತಾನ ತಿಳಿಸಿದೆ. ಇರಾನ್ ಕಳೆದ ಕೆಲ ದಿನಗಳಿಂದ ಸಿರಿಯಾ ಮತ್ತು ಇರಾಕ್ ಮೇಲೆ ಇದೇ ರೀತಿಯ ದಾಳಿಯನ್ನು ನಡೆಸಿತ್ತು.

ಪಾಕಿಸ್ತಾನದ ಸುನ್ನಿ ತೀವ್ರಗಾಮಿ ಗುಂಪು ಜೈಶ್ ಅಲ್-ಅದ್ಲ್‌ಗೆ ಸೇರಿದ ನೆಲೆಗಳ ಮೇಲೆ ಕಾರ್ಯಾಚರಣೆಗೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು ಇರಾನ್‌ನ ಸರ್ಕಾರಿ ಮಾದ್ಯಮಗಳು ವರದಿ ಮಾಡಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ದಾಳಿಯನ್ನು ದೃಢಪಡಿಸಿದ್ದು, ಇದು ಪಾಕ್‌ನ ವಾಯುಪ್ರದೇಶದ ಮೇಲೆ ನಡೆದ ಅಪ್ರಚೋದಿತ ದಾಳಿ ಎಂದು ಹೇಳಿಕೊಂಡಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಈ ದಾಳಿಯು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ವಾಯುನೆಲೆಯ ನಿಯಮಗಳನ್ನು ಉಲ್ಲಂಘಿಸಿ ಇರಾನ್‌ ದಾಳಿ ನಡೆಸಿದೆ. ಇಂತಹ ಕ್ರಮಗಳು ಉಭಯ ದೇಶಗಳ ನಡುವೆವಿನ ಸಂಬಂಧದ ಮೇಲೆ ಗಂಭೀರ ಪರಿಣಾಮ ಉಂಟುಮಾಡಬಹುದು ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆಯು ತಿಳಿಸಿದೆ. ಇರಾನ್ ರಾಯಭಾರಿಯನ್ನು ಕರೆಸಿಕೊಂಡಿರುವ ಪಾಕ್‌, ಕ್ಷಿಪಣಿ ದಾಳಿ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.

ಪಾಕಿಸ್ತಾನ ಹಾಗೂ ಇರಾನ್ ನಡುವೆ ಸಂವಹನಕ್ಕೆ ಹಲವು ಮಾರ್ಗಗಳಿದ್ದರೂ, ಈ ದಾಳಿಯನ್ನು ನಡೆಸಿರುವುದು  ಹೆಚ್ಚು ಕಳವಳಕಾರಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಭಯೋತ್ಪಾದಕತೆ ಈ ಭಾಗದ ಎಲ್ಲ ದೇಶಗಳಿಗೆ ಸಮಾನ ಅಪಾಯ ಎನ್ನುವುದನ್ನು ಪಾಕಿಸ್ತಾನ ಪ್ರತಿಪಾದಿಸುತ್ತ ಬಂದಿದೆ ಹಾಗೂ ಇದರ ತಡೆಗೆ ಪರಸ್ಪರ ಸಮನ್ವಯದ ಕ್ರಮ ಅಗತ್ಯವಾಗಿದೆ. ಇಂಥ ಏಕಪಕ್ಷೀಯ ಕೃತ್ಯಗಳು ನೆರೆಹೊರೆಯ ದೇಶಗಳ ನಡುವಿನ ಉತ್ತಮ ಬಾಂಧವ್ಯಕ್ಕೆ ಪೂರಕವಲ್ಲ ಹಾಗೂ ದ್ವಿಪಕ್ಷೀಯ ವಿಶ್ವಾಸಕ್ಕೆ ಗಂಭೀರವಾಗಿ ಧಕ್ಕೆ ತರುವಂಥದ್ದು ಎಂದು ಹೇಳಿದೆ.

ಜೈಶ್ ಅಲ್ ಅದ್ಲ್‌:

ಪಾಕಿಸ್ತಾನ ತೀವ್ರಗಾಮಿ ಸಂಘಟನೆಗಳನ್ನು ಪಾಕಿಸ್ತಾನ ಪೋಷಿಸುತ್ತಿದೆ ಎಂದು ಇರಾನ್‌ ಈ ಹಿಂದೆಯೇ ಅಸಮಾಧಾನ ವ್ಯಕ್ತಪಡಿಸಿತ್ತು.  ‘ಜೈಶ್ ಅಲ್ ಅದ್ಲ್‌‘ ಪಾಕಿಸ್ತಾನದ ಬಲೂಚಿಯಲ್ಲಿ ನೆಲೆಯೂರಿರುವ ಒಂದು ತೀವ್ರಗಾಮಿ ಸಂಘಟನೆಯಾಗಿದೆ. ಇದು 2012ರಲ್ಲಿ ಸ್ಠಾಪನೆಗೊಂಡಿತ್ತು. ಜೈಶ್ ಅಲ್ ಅದ್ಲ್‌  ತೀವ್ರಗಾಮಿ ಗುಂಪನ್ನು ಹೆಡೆಮುರಿ ಕಟ್ಟವುದಾಗಿ ಇರಾನ್ ಪ್ರಯತ್ನಿಸಿದ್ದು,  ಅದರ ವಿರುದ್ಧ ಗಡಿಯಲ್ಲಿ ಯುದ್ಧ ಸಾರಿತ್ತು. ತೀವ್ರಗಾಮಿ ಗುಂಪಿನ ನೆಲೆಗಳನ್ನು ನಾಶ ಮಾಡಲು ಕ್ಷಿಪಣಿ ದಾಳಿ ನಡೆಸುವುದು ಅನಿವಾರ್ಯವಾಗಿದೆ ಎಂದು ಇರಾನ್‌ ಹೇಳಿತ್ತು.

ಇರಾನ್‌ನಲ್ಲಿ ಈ ತಿಂಗಳ ಆರಂಭದಲ್ಲಿ ಎರಡು ಆತ್ಮಾಹುತಿ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಕನಿಷ್ಠ 84 ಜನರು ಮೃತಪಟ್ಟಿದ್ದರು ಮತ್ತು 284 ಜನರು ಗಾಯಗೊಂಡಿದ್ದರು. ಇದಕ್ಕೆ ಪ್ರತೀಕಾರವಾಗಿ ಇರಾಕ್ ಮತ್ತು ಸಿರಿಯಾದಲ್ಲಿ ಇರಾನ್‌ ಕ್ಷಿಪಣಿ ದಾಳಿ ನಡೆಸಿತ್ತು.

ಗಾಝಾದಲ್ಲಿನ ಸಂಘರ್ಷದ ಮಧ್ಯೆ ಈ ಘಟನೆಯು ಇರಾಕ್‌ ಮತ್ತು ಇರಾನ್‌ ನಡುವಿನ ಸಂಬಂಧವನ್ನು ಹದಗೆಡುವಂತೆ ಮಾಡಿದೆ. ಎರಡೂ ದೇಶಗಳು ರಾಜತಾಂತ್ರಿಕ ಸಂಬಂಧಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದವು. ಇರಾನ್ ಈ ಹಿಂದೆ ಜೈಶ್ ಅಲ್-ಅದ್ಲ್ ವಿರುದ್ಧ ಗಡಿಯಲ್ಲಿ ಕದನಗಳಲ್ಲಿ ತೊಡಗಿಸಿಕೊಂಡಿದ್ದರೂ, ಗಡಿಯಾಚೆಗಿನ ಕ್ಷಿಪಣಿ ದಾಳಿಯ ಎಂದಿಗೂ ನಡೆಸಿರಲಿಲ್ಲ.

ಇದನ್ನು ಓದಿ: ‘ಹಿಂದುತ್ವ ವಾಚ್’ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...