Homeಕರ್ನಾಟಕಎಸ್ಸಿ-ಎಸ್ಟಿ ವಸತಿ ನಿಲಯಗಳಲ್ಲಿ ವಾರ್ಡನ್‌ಗಳ ಕೊರತೆ: ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

ಎಸ್ಸಿ-ಎಸ್ಟಿ ವಸತಿ ನಿಲಯಗಳಲ್ಲಿ ವಾರ್ಡನ್‌ಗಳ ಕೊರತೆ: ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳ ಸರಕಾರಿ ವಸತಿ ನಿಲಯಗಳಲ್ಲಿನ ವಾರ್ಡನ್ ಮತ್ತು ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಸ್ವಯಂ ಪ್ರೇರಿತ ಅರ್ಜಿಯ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.

ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಎಸ್ಸಿ, ಎಸ್ಟಿ ಹಾಸ್ಟೆಲ್‍ಗಳಲ್ಲಿ ಸಿಬ್ಬಂದಿ ಕೊರತೆಯ ಕುರಿತಂತೆ ಮಾದ್ಯಮಗಳ ವರದಿ ಆಧರಿಸಿ ಸ್ವಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ನಡೆಸಿದೆ.

ಅರ್ಜಿ ವಿಚಾರಣೆ ವೇಳೆ ಹಾಸ್ಟೆಲ್‍ಗಳಲ್ಲಿ ಸಿಬ್ಬಂದಿ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ  ತೊಂದರೆಯಾಗಲಿದೆ. ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವ ವಿಚಾರದಲ್ಲಿ ಸಿಬ್ಬಂದಿಗಳ ಕೊರತೆ ಒಂದು ಗಂಭಿರ ಸಮಸ್ಯೆ ಎನ್ನುವುದನ್ನು ಕೋರ್ಟ್‌ ಗಮನಿಸಿದೆ.

ವಿಚಾರಣೆ ವೇಳೆ ಪ್ರಕರಣದಲ್ಲಿ ಅಮಿಕಸ್ ಕ್ಯೂರಿ ನಿತಿನ್ ರಮೇಶ್ ಹಾಜರಾಗಿ, ವಿದ್ಯಾರ್ಥಿ ನಿಲಯಗಳ ನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ಬಗ್ಗೆ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ನಿತಿನ್ ರಮೇಶ್ ಮುಖ್ಯವಾದ ಅಂಶವನ್ನು ಗಮನಕ್ಕೆ ತಂದಿದ್ದಾರೆ, ಈ ಅಂಶಗಳ ಬಗ್ಗೆ ರಾಜ್ಯ ಸರ್ಕಾರದ ಪ್ರತಿಕ್ರಿಯೆಯನ್ನು ನಾವು ನಿರೀಕ್ಷಿಸುತ್ತೇವೆ. ಈ ಬಗ್ಗೆ ಸಮಗ್ರವಾದ ವಿವರಣೆಯುಳ್ಳ ವರದಿ ಸಲ್ಲಿಸಬೇಕು ಎಂದು ಸರಕಾರದ ಪರ ವಕೀಲರಿಗೆ ತಿಳಿಸಿದ್ದಾರೆ. ಅಲ್ಲದೆ, ಈ ಕುರಿತ ವರದಿಯನ್ನು ಅಮಿಕಸ್ ಕ್ಯೂರಿ ಅವರಿಗೆ ಒಂದು ಪ್ರತಿಯನ್ನು ಅರ್ಜಿ ವಿಚಾರಣೆಗೂ ಬರುವ ಮುನ್ನ ಸಲ್ಲಿಸಬೇಕು. ಅದರಂತೆ ನಾವು ಪ್ರತಿಕ್ರಿಯೆಗೆ ಎರಡು ವಾರಗಳ ಕಾಲಾವಕಾಶ ನೀಡುತ್ತೇವೆ ಎಂದು ಕೋರ್ಟ್‌ ಹೇಳಿದೆ.

ಡಿಸೆಂಬರ್ 7, 2023ರ ಸುದ್ದಿ ವರದಿಯನ್ನು ಆಧರಿಸಿ ಈ ಕುರಿತು ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಇದರಲ್ಲಿ ನೇಮಕಾತಿಗೆ ನಿರ್ದಿಷ್ಟ ಮಾರ್ಗಸೂಚಿಗಳ ಹೊರತಾಗಿಯೂ ಸಮಾಜ ಕಲ್ಯಾಣ ಇಲಾಖೆಗಳು ಸಿಬ್ಬಂದಿಯನ್ನು ನೇಮಿಸಿಲ್ಲ ಎಂದು ಹೇಳಲಾಗಿದೆ. 1,296 ಮೆಟ್ರಿಕ್ ಪೂರ್ವ ಹಾಸ್ಟೆಲ್‌ಗಳು ಮತ್ತು 1,165 ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಿವೆ ಆದರೆ ಸೂಪರಿಂಟೆಂಡೆಂಟ್‌ಗಳು ಮತ್ತು ವಾರ್ಡನ್‌ಗಳ ಸಂಖ್ಯೆ 1,200 ಕ್ಕಿಂತ ಕಡಿಮೆಯಿರುವುದರಿಂದ ಅಗತ್ಯ ಮಾನವ ಸಂಪನ್ಮೂಲದ ಕೊರತೆ ಉಂಟಾಗುತ್ತದೆ. ಇದು ವಿದ್ಯಾರ್ಥಿಗಳ ಶೈಕ್ಷಣದ ಮೇಲೆ ಪ್ರಭಾವ ಬೀರಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇದನ್ನು ಓದಿ: ‘ಹಿಂದುತ್ವ ವಾಚ್’ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...