Homeಫ್ಯಾಕ್ಟ್‌ಚೆಕ್Fact Check : ಮಣಿಪುರದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ ಗಾಂಧಿಗೆ...

Fact Check : ಮಣಿಪುರದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ್ರಾ?

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಅರುಣಾಚಲ ಪ್ರದೇಶದ ಬದಲು ಮಣಿಪುರದಿಂದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಧನ್ಯವಾದ ಹೇಳಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

“ರಾಹುಲ್ ಗಾಂಧಿ ಭಾರತ ಆಕ್ರಮಿತ ಅರುಣಾಚಲ ಪ್ರದೇಶದ ಬದಲು ಮಣಿಪುರದಿಂದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಆರಂಭಿಸುವ ಮೂಲಕ ಚೀನಾದ ಸಾರ್ವಭೌಮತ್ವವನ್ನು ಗೌರವಿಸಿದ್ದಾರೆ. ಇದಕ್ಕೆ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಧನ್ಯವಾದ ತಿಳಿಸಿದ್ದಾರೆ” ಎಂದು ಚೀನಾದ ಗ್ಲೋಬಲ್ ಟೈಮ್ಸ್ ಎಂಬ ಪತ್ರಿಕೆ ಎಕ್ಸ್ ಖಾತೆಯಲ್ಲಿ ಸುದ್ದಿ ಪೋಸ್ಟ್ ಮಾಡಿರುವುದಾಗಿ ಹಲವರು ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದಾರೆ.

ಅರುಣಾಚಲ ಪ್ರದೇಶ ಚೀನಾದ ಭಾಗವಾಗಿದೆ. ಅದನ್ನು ಭಾರತ ಆಕ್ರಮಿಸಿದೆ ಎಂದು ಚೀನಾ ಪ್ರತಿಪಾದಿಸುತ್ತಾ ಬಂದಿದೆ. ರಾಹುಲ್ ಗಾಂಧಿ ಚೀನಾದ ಸಾರ್ವಭೌಮತ್ವ ಗೌರವಿಸುವ ಸಲುವಾಗಿ, ಅಂದರೆ ಚೀನಾ ಪರವಾಗಿ ಅರುಣಾಚಲ ಪ್ರದೇಶದ ಬದಲು ಮಣಿಪುರದಿಂದ ಯಾತ್ರೆ ಆರಂಭಿಸಿದ್ದಾರೆ ಎಂಬ ಅರ್ಥದಲ್ಲಿ ಗ್ಲೋಬಲ್ ಟೈಮ್ಸ್ ಸುದ್ದಿ ಪ್ರಕಟಿಸಿರುವುದಾಗಿ ಹೇಳಲಾಗಿದೆ.

ಬರೋಬ್ಬರಿ 1ಲಕ್ಷದ 4 ಸಾವಿರ ಫಾಲೋವರ್ಸ್ ಹೊಂದಿರುವ ‘Pradhan Gaurav’ ಎಂಬವರ ಫೇಸ್‌ಬುಕ್‌ ಖಾತೆಯಲ್ಲಿ ಗ್ಲೋಬಲ್ ಟೈಮ್ಸ್ ಪ್ರಕಟಿಸಿರುವುದು ಎನ್ನಲಾದ ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು ” ನಾನು ನಿಮಗೆ ಈ ಹಿಂದೆ ಏನು ಹೇಳಿದ್ದೆ, ನೋಡಿ ಅರುಣಾಚಲವನ್ನು ಹೊರಗಿಡಲಾಗಿದೆ. ಕಾಂಗ್ರೆಸ್ ಎಂದರೆ ಚೈನೀಸ್ ಫ್ರಾಂಚೈಸಿ” ಎಂದು ಬರೆಯಲಾಗಿದೆ.

ಪೋಸ್ಟ್ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ

‘Minni Razdan’ ಎಂಬ ಎಕ್ಸ್ ಖಾತೆಯಲ್ಲೂ ಗ್ಲೋಬಲ್ ಟೈಮ್ಸ್ ಸುದ್ದಿಯದ್ದು ಎನ್ನಲಾದ ಸ್ಕ್ರೀನ್ ಶಾಟ್ ಹಂಚಿಕೊಂಡು ” ಭಾರತ ಆಕ್ರಮಿತ ಅರುಣಾಚಲದ (ಚೀನಾ ಪ್ರಕಾರ) ಬದಲಾಗಿ ಮಣಿಪುರದಿಂದ ನ್ಯಾಯ್ ಯಾತ್ರೆಯನ್ನು ಆರಂಭಿಸಿದ್ದಕ್ಕಾಗಿ ರಾಹುಲ್ ಗಾಂಧಿಗೆ ಚೀನಾ ಧನ್ಯವಾದಗಳನ್ನು ಅರ್ಪಿಸಿದೆ?. ಬೇರೆ ರೀತಿಯಲ್ಲಿ ಹೇಳುವುದಾದರೆ ಕಾಂಗ್ರೆಸ್ ಚೀನಾ ಒಂದೇ ಪುಟದಲ್ಲಿದೆ” ಎಂದು ಬರೆಯಲಾಗಿದೆ.

ಪೋಸ್ಟ್ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ

ವಾಸ್ತವ : ನಾನು ಗೌರಿ.ಕಾಂ ಈ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಈ ವೇಳೆ ಗ್ಲೋಬಲ್ ಟೈಮ್ಸ್ ತನ್ನ ಎಕ್ಸ್ ಖಾತೆಯಲ್ಲಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ರಾಹುಲ್ ಗಾಂಧಿಗೆ ಧನ್ಯವಾದ ಹೇಳಿರುವುದರ ಕುರಿತು ಯಾವುದೇ ಸುದ್ದಿಯನ್ನು ಪ್ರಕಟಿಸಿರುವುದು ಕಂಡು ಬಂದಿಲ್ಲ.

“ನಾವು ಎಕ್ಸ್ ಅಡ್ವಾನ್ಸ್ ಸರ್ಚ್‌ ಮಾಡಿದ್ದೇವೆ. ಈ ವೇಳೆ ಕ್ಸಿ ಜಿನ್‌ಪಿಂಗ್ ಅವರು ರಾಹುಲ್ ಗಾಂಧಿಗೆ ಧನ್ಯವಾದ ಹೇಳಿರುವುದರ ಕುರಿತು ಗ್ಲೋಬಲ್ ಟೈಮ್ಸ್ ಯಾವುದೇ ಸುದ್ದಿ ಪ್ರಕಟಿಸಿರುವುದು ಕಂಡು ಬಂದಿರುವುದಿಲ್ಲ. ಗ್ಲೋಬಲ್ ಟೈಮ್ಸ್ ಇಂತಹ ಸುದ್ದಿಯ ಪೋಸ್ಟ್ ಅನ್ನು ಪ್ರಕಟಿಸಿ ಡಿಲಿಟ್ ಮಾಡಿಯೂ ಇಲ್ಲ. ಭಾರತ್ ಜೋಡೋ ನ್ಯಾಯ ಯಾತ್ರೆಯ ಬಗ್ಗೆ ಕ್ಸಿ ಜಿನ್‌ಪಿಂಗ್ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿರುವ ಕುರಿತು ಸುದ್ದಿ ದೊರೆತಿಲ್ಲ” ಎಂದು ಖ್ಯಾತ ಫ್ಯಾಕ್ಟ್ ಚೆಕ್ ವೆಬ್‌ಸೈಟ್ ಬೂಮ್ ಹೇಳಿದೆ.

“ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಗ್ಲೋಬಲ್ ಟೈಮ್ಸ್ ಸುದ್ದಿ ಪ್ರಕಟಿಸಿರುವುದಾಗಿ ಸ್ಕ್ರೀನ್ ಶಾಟ್ ಹರಿದಾಡುತ್ತಿದೆ. ಭಾರತದ ಯಾವುದೇ ಮುಖ್ಯವಾಹಿನಿ ಸುದ್ದಿ ಮಾಧ್ಯಮಗಳು ರಾಹುಲ್ ಗಾಂಧಿಗೆ ಕ್ಸಿ ಜಿನ್‌ಪಿಂಗ್ ಧನ್ಯವಾದ ಹೇಳಿರುವ ಕುರಿತು ಇದುವರೆಗೆ ಸುದ್ದಿ ಪ್ರಕಟಿಸಿಲ್ಲ” ಎಂದು ಬೂಮ್ ತಿಳಿಸಿದೆ.

ಒಟ್ಟಿನಲ್ಲಿ, ನಾನು ಗೌರಿ.ಕಾಂ ಪರಿಶೀಲನೆಯ ಪ್ರಕಾರ ಅರುಣಾಚಲ ಪ್ರದೇಶದ ಬದಲು ಮಣಿಪುರದಿಂದ ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಧನ್ಯವಾದ ಹೇಳಿದ್ದಾರೆ ಎಂಬುವುದು ಸತ್ಯಕ್ಕೆ ದೂರವಾದದ್ದು. ಗ್ಲೋಬಲ್ ಟೈಮ್ಸ್ ಪತ್ರಿಕೆ ಹೆಸರಿನಲ್ಲಿ ಹರಿದಾಡುತ್ತಿರುವ ಸ್ಕ್ರೀನ್ ಶಾಟ್ ಕೂಡ ಸುಳ್ಳು ಎಂಬುವುದು ತಿಳಿದು ಬಂದಿದೆ.

ಇದನ್ನೂ ಓದಿ : Fact Check : 500 ರೂ. ನೋಟಿನಲ್ಲಿ ಗಾಂಧಿ ಬದಲು ರಾಮನ ಫೋಟೋ ಮುದ್ರಿಸಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...