Homeಕರ್ನಾಟಕನಕಲಿ ಮೈಸೂರು ಸ್ಯಾಂಡಲ್ ಸೋಪ್ ಪ್ರಕರಣ: ಬಂಧಿತರು ಬಿಜೆಪಿಯ ಸಕ್ರಿಯ ಕಾರ್ಯಕರ್ತರು; ಪ್ರಿಯಾಂಕ್ ಖರ್ಗೆ

ನಕಲಿ ಮೈಸೂರು ಸ್ಯಾಂಡಲ್ ಸೋಪ್ ಪ್ರಕರಣ: ಬಂಧಿತರು ಬಿಜೆಪಿಯ ಸಕ್ರಿಯ ಕಾರ್ಯಕರ್ತರು; ಪ್ರಿಯಾಂಕ್ ಖರ್ಗೆ

- Advertisement -
- Advertisement -

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದ್ದು, ಈ ಅಕ್ರಮದಲ್ಲಿ ಬಿಜೆಪಿ ನಾಯಕರ ಪಾಲೆಷ್ಟು?” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಈ ವಿಚಾರವಾಗಿ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆ, “ನಮ್ಮ ವಿಶ್ವ ವಿಖ್ಯಾತ ಮೈಸೂರು ಸ್ಯಾಂಡಲ್ ಸೋಪಿನ ನಕಲಿ ಉತ್ಪನ್ನಗಳ ಮಾರಾಟದ ಬಗ್ಗೆ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಗಿದೆ. ಜನವರಿ ಮೊದಲ ವಾರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರಿಗೆ ಅನಾಮಿಕ ಕರೆ ಬಂದಿತ್ತು. ಅದರಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿತ್ತು. ಕೂಡಲೇ ಸಚಿವರು ಕೆಎಎಸ್‌ಡಿಎಲ್ ಎಂಡಿ ಪ್ರಶಾಂತ್ ಅವರಿಗೆ ಮಾಹಿತಿ ನೀಡಿದ್ದರು ಎಂದು ತಿಳಿಸಿದ್ದಾರೆ.

ಸಚಿವರ ಮಾಹಿತಿ ನಂತರ ನಕಲಿ ಜಾಲದ ಹುಡುಕಾಟ ನಡೆಸಲಾಗಿತ್ತು. ಈ ವೇಳೆ ನಕಲಿ ಸೋಪ್ ತಯಾರಿಕಾ ಘಟಕ ಹೈದರಾಬಾದ್‌ನಲ್ಲಿದೆ ಎಂದು ತಿಳಿದು ಬಂದಿತ್ತು. ಅದನ್ನು ತಡೆಗಟ್ಟಲು ಕೆಲವು ಅಧಿಕಾರಿಗಳು ಹೋಗಿ 25 ಲಕ್ಷದ ರೂಪಾಯಿಯ ಸೋಪ್ ಆರ್ಡರ್ ಕೊಟ್ಟಿದ್ದರು. ನಕಲಿ ತಯಾರಕರು ಅದನ್ನು ಪೂರೈಸುವುದಾಗಿ ಒಪ್ಪಿಕೊಂಡಿದ್ದರು. ಇದು ದೊಡ್ಡ ಮಟ್ಟದ ಆರ್ಡರ್ ಆಗಿರುವುದರಿಂದ ನಿಮ್ಮ ಕಾರ್ಖಾನೆಗೆ ಬಂದು ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದರು. ಅದಕ್ಕೆ ನಕಲಿ ತಯಾರಕರು ಒಪ್ಪಿದ್ದರು. ನಕಲಿ ಸೋಪ್ ಉತ್ಪಾದನಾ ಘಟಕದ ವಿಳಾಸ ತಿಳಿದ ತಕ್ಷಣ ಅಲ್ಲಿಗೆ ದಾಳಿ ಮಾಡಿ ನಕಲಿ ಸೋಪ್ ಮತ್ತು ಅದನ್ನು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಕುರಿತು ತೆಲಂಗಾಣ ಮತ್ತು ಆಂಧ್ರಪ್ರದೇಶದ ಮೈಸೂರು ಸ್ಯಾಂಡಲ್ ಸೋಪ್ ಸೇಲ್ಸ್ ಮ್ಯಾನೇಜರ್ ದೂರು ನೀಡಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಬಂಧಿತರು ಬಿಜೆಪಿ ಕಾರ್ಯಕರ್ತರು:

ನಕಲಿ ಸೋಪ್ ತಯಾರಿಸುತ್ತಿದ್ದ ಹೈದರಾಬಾದ್‌ನ ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬ ಇಬ್ಬರು ವ್ಯಕ್ತಿಗಳ ವಿರುದ್ದ ಅಲ್ಲಿನ ಮಲಕ್‌ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪ್ರಸ್ತುತ ಇಬ್ಬರೂ ಪೊಲೀಸರ ವಶದಲ್ಲಿದ್ದಾರೆ. ವಿಚಾರಣೆ ವೇಳೆ ಹೊರಬಂದ ಅಚ್ಚರಿ ಹಾಗೂ ಮುಖ್ಯ ಸಂಗತಿ ಎಂದರೆ, ಬಂಧಿತ ಇಬ್ಬರು ವ್ಯಕ್ತಿಗಳೂ ಬಿಜೆಪಿಯ ಸಕ್ರಿಯ ಕಾರ್ಯಕರ್ತರು. ಇವರು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ತೆಲಂಗಾಣ ಶಾಸಕ ರಾಜಾ ಸಿಂಗ್ ಅವರ ಒಡನಾಡಿಗಳಿದ್ದಾರೆ ಎಂದು ಸಚಿವ ಪ್ರಯಾಂಕ್ ಖರ್ಗೆ ಆರೋಪಿಸಿದ್ದಾರೆ. ಇಷ್ಟೆಲ್ಲಾ ಒಡನಾಟ ಇಟ್ಟುಕೊಂಡಿರುವವರ ಜೊತೆ ರಾಜ್ಯ ಬಿಜೆಪಿ ನಾಯಕರು ಸಂಪರ್ಕ ಹೊಂದಿರುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಥೋಡ್, ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ಪುತ್ರ ವಿಠಲ್ ನಾಯಕ್ ಜೊತೆ ಆರೋಪಿಗಳು ಒಡನಾಟ ಇಟ್ಟುಕೊಂಡಿದ್ದಾರೆ  ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬಿಜೆಪಿ ನಾಯಕರ ಜೊತೆ ಆರೋಪಿ ನಿಂತಿರುವುದು ಎನ್ನಲಾದ ಫೋಟೋ

ರಾಜ್ಯದ ಆಸ್ತಿ ಉಳಿಸಿಕೊಳ್ಳಲು ನಾವು ಕಾರ್ಯಾಚರಣೆ ಮಾಡಿದ್ದೇವೆ. ಮೈಸೂರು ಸ್ಯಾಂಡಲ್ ಸೋಪ್‌ ಫ್ಯಾಕ್ಟರಿ ಕೃಷ್ಣರಾಜ ಒಡೆಯರ್ ಅವರು 1916ರಲ್ಲಿ ಸ್ಥಾಪಿಸಿದ ಸಂಸ್ಥೆಯಾಗಿದೆ. ಸ್ಯಾಂಡಲ್ ಸೋಪ್ ಕರ್ನಾಟಕದ ಹೆಮ್ಮೆಯ ಉತ್ಪನ್ನ. ಪ್ರಧಾನಮಂತ್ರಿಗಳ ಮೇಕ್ ಇನ್ ಇಡಿಯಾ, ವೋಕಲ್ ಫಾರ್ ಲೋಕಲ್ ಯೋಜನೆಗೂ ಮುನ್ನ ಇದು ಪ್ರಾರಂಭವಾಗಿತ್ತು ಎಂದಿದ್ದಾರೆ.

ನಾನು ಪ್ರವಾಸೋದ್ಯಮ ಸಚಿವನಾಗಿದ್ದಾಗ ಪ್ಯಾರೀಸ್ ಹೋಗುವ ಅವಕಾಶ ಸಿಕ್ಕಿತ್ತು. ಅಲ್ಲಿ ಪ್ರತಿ ದೇಶದ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಅವಕಾಶವಿರುತ್ತದೆ. ಅಲ್ಲಿನ ಜನ ಮೈಸೂರು ಸ್ಯಾಂಡಲ್ ಸೋಪನ್ನು ಪ್ಯಾರೀಸ್‌ನಲ್ಲಿ ಮಾರಾಟ ಮಾಡುವುದಿಲ್ಲ ಯಾಕೆ? ಎಂದು ಕೇಳಿದ್ದರು. ನಮ್ಮ ರಾಜ್ಯದ ಉತ್ಪನ್ನ ವಿಶ್ವದಲ್ಲೇ ಹೆಸರುವಾಸಿಯಾಗಿದೆ. ಇಂತಹ ಉತ್ಪನ್ನಗಳನ್ನು ಬಿಜೆಪಿ ನಾಯಕರು ನಕಲಿ ಮಾಡಿ ಮಾರಾಟ ಮಾಡುವಲ್ಲಿ ಶಾಮೀಲಾಗಿದ್ದಾರೆ. ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಮಾಡಿದ್ದರು. ಈಗ ಕರ್ನಾಟಕದ ಆಸ್ತಿ ಮಾರಲು ತಯಾರಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಸ್ಯಾಂಟ್ರೋ ರವಿ, ಸೈಲೆಂಟ್ ಸುನೀಲ್, ಫೈಟರ್ ರವಿ, ಪೃಥ್ವಿ ಸಿಂಗ್‌ರಂತವರು ಬಿಜೆಪಿಯಲ್ಲೇ ಕಾಣಿಸಿಕೊಳ್ಳುತ್ತಿರುವುದೇಕೆ? ರಾಜ್ಯದ ಆಸ್ತಿ ಮಾರಲು ಹೊರಟವರಿಗೆ ಪಕ್ಷದ ಟಿಕೆಟ್ ನೀಡಿ, ಪದಾಧಿಕಾರಿ ಮಾಡುತ್ತೀರಾ? ನಿಮಗೆ ನಾಚಿಕೆ ಇದ್ದರೆ ಅವರನ್ನು ವಜಾ ಮಾಡುತ್ತಿದ್ದಿರಿ. ಮೊನ್ನೆ ಗರೀಬ್ ಕಲ್ಯಾಣ್ ಯೋಜನೆಯ 700 ಕ್ವಿಂಟಾಲ್ ಅಕ್ಕಿ ಬಿಜೆಪಿ ನಾಯಕರ ಗೋದಾಮಿನಲ್ಲಿ ಸಿಕ್ಕಿದೆ. ಮೋದಿ ಅಕ್ಕಿ ಎಂದು ಬೀಗುವ ಬಿಜೆಪಿ ನಾಯಕರು ಅದನ್ನು ಕದ್ದು ಸಿಕ್ಕಿಬಿದ್ದನಂತರವೂ ಆತನನ್ನು ಪಕ್ಷದಿಂದ ಹೊರಹಾಕಿಲ್ಲ ಎಂದರೆ ನಿಮಗೂ ಇದರಲ್ಲಿ ಪಾಲಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರಿಗೆ ಮಣಿಕಂಠ, ಪೃಥ್ವಿ ಸಿಂಗ್, ಸ್ಯಾಂಟ್ರೋ ರವಿ ಅವರ ಮೇಲೆ ಕ್ರಮ ಕೈಗೊಳ್ಳುವ ತಾಕತ್ತು ಇಲ್ಲ. ಕಾರಣ ಅವರ ಗುಟ್ಟುಗಳೆಲ್ಲಾ ಇವರ ಬಳಿಯೇ ಇದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಕಲಿ ಮೈಸೂರು ಸ್ಯಾಂಡಲ್ ಸೋಪ್ ಮಾರಿರುವ ಅಕ್ರಮದಲ್ಲಿ ನಿಮಗೆ ಎಷ್ಟು ಪಾಲು ಸಿಗುತ್ತಿದೆ? ಬಿಜೆಪಿ ಶಾಸಕರಾಗಿದ್ದ ಮಾಡಾಲ್ ವಿರುಪಾಕ್ಷಪ್ಪ ಅವರ ಮನೆಯಲ್ಲಿ 7 ಕೋಟಿ ಹಣ ಸಿಕ್ಕಿತ್ತು. ಅವರು ಇದೇ ಸಂಸ್ಥೆಯ ಜವಾಬ್ದಾರಿ ಹೊತ್ತಿದ್ದರು. ಆ ಪ್ರಕರಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದ್ದರೂ ಅವರ ಪುತ್ರನ ಹೆಸರು ಹಾಗೇ ಇದೆ. ಈ ಅಕ್ರಮದಲ್ಲೂ ಅವರ ಕೈವಾಡ ಇಲ್ಲವೇ? ಈ ಬಗ್ಗೆ ತನಿಖೆಯಾಗಬೇಕಲ್ಲವೇ?  ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಉತ್ತರ ನೀಡಬೇಕು. ಇವರನ್ನು ಕೂಡ ರಾಮಭಕ್ತರು ಎಂದು ಹೇಳಿ ಬೀದಿಗಿಳಿದು ಹೋರಾಟ ಮಾಡುತ್ತೀರಾ? ಅಥವಾ ಇವರನ್ನು ಪಕ್ಷದಿಂದ ವಜಾ ಮಾಡಿ ರಾಜ್ಯದ ಜನರಿಗೆ ತ್ತರ ನೀಡುತ್ತೀರಾ? ಎಂದು ಸಚಿವರು ಪ್ರಶ್ನಿಸಿದರು.

ರಾಜ್ಯ ಬಿಜೆಪಿ ನಾಯಕರಿಗೆ ಇದರಲ್ಲಿ ಪಾಲಿದೆ. ಇವರು ಕನ್ನಡ ವಿರೋಧಿ ಬಿಜೆಪಿ. ಇವರಿಗೆ ಹಣ ಬಂದರೆ ಸಾಕು ಯಾವುದಕ್ಕೂ ಹಿಂಜರಿಯುವುದಿಲ್ಲ. ರಾಜ್ಯದ ಗೌರವವನ್ನು ಈ ರೀತಿ ಮಾರಾಟ ಮಾಡುತ್ತಾರೆ ಎಂದು ಭಾವಿಸಿರಲಿಲ್ಲ. ನಮ್ಮ ಸರ್ಕಾರ ಈ ವಿಚಾರದಲ್ಲಿ ಎಚ್ಛೆತ್ತು ಎಫ್‌ಐಆರ್ ದಾಖಲಾಗುವಂತೆ ಮಾಡಿದೆ. ನಮ್ಮ ಅಧಿಕಾರಿಗಳು ಹೈದರಾಬಾದ್‌ನಲ್ಲಿದ್ದು, ತೆಲಂಗಾಣ ಉಪಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ತನಿಖೆಗೆ ಸಹಕಾರ ನೀಡುವಂತೆ ಕೋರಿದ್ದೇವೆ. ಈ ವಿಚಾರವಾಗಿ ಎಂ.ಬಿ ಪಾಟೀಲ್ ಅವರಿಗೂ ತಿಳಿಸಿದ್ದೇನೆ. ಅವರು ದಾವೋಸ್‌ನಲ್ಲಿರುವ ಕಾರಣ ಈ ವಿಚಾರವಾಗಿ ನಾನು ಮಾಧ್ಯಮಗೋಷ್ಠಿ ಮೂಲಕ ತಿಳಿಸುತ್ತಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಎಂದು ಹೇಳಿದರು.

ಇದನ್ನೂ ಓದಿ : ಹೈದರಾಬಾದ್‌: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...