Homeಮುಖಪುಟಏನಿದು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ? ಯಾರೆಲ್ಲಾ ಪಡೆದಿದ್ದಾರೆ?

ಏನಿದು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ? ಯಾರೆಲ್ಲಾ ಪಡೆದಿದ್ದಾರೆ?

- Advertisement -
- Advertisement -

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಭಾರತೀಯ ಚಿತ್ರರಂಗದಲ್ಲಿ ಜೀವಮಾನದ ಸಾಧನೆ ಮಾಡಿದವರಿಗೆ ಭಾರತ ಸರ್ಕಾರವು ನೀಡುವ ಅತ್ಯುತ್ತಮ ವಾರ್ಷಿಕ ಪ್ರಶಸ್ತಿ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರು ಪಡೆದಿರುವ ದಾದಾಸಾಹೇಬ್ ಫಾಲ್ಕೆಯವರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಭಾರಿ ಈ ಪ್ರಶಸ್ತಿಗೆ ಹಿಂದಿ ಚಿತ್ರರಂಗದ ಹಿರಿಯ ಪ್ರಸಿದ್ದ ನಟ ಅಮಿತಾಬ್ ಬಚ್ಚನ್‌ರವರು ಭಾಜನರಾಗಿದ್ದಾರೆ.

ಚಿತ್ರಕೃಪೆ: ಸತೀಶ್ ಆಚಾರ್ಯ

ಈ ಪ್ರಶಸ್ತಿಯನ್ನು 1969ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ ಆರಂಭಿಸಿತು. ಈ ಪ್ರಶಸ್ತಿಯನ್ನು ಪ್ರತಿ ವರ್ಷ ‘ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನದ ಸಂದರ್ಭ’ದಲ್ಲಿ ನೀಡಲಾಗುತ್ತದೆ. ಮೊಟ್ಟ ಮೊದಲ ಪ್ರಶಸ್ತಿಯನ್ನು ಬಾಲಿಹುಡ್‌ನ ಖ್ಯಾತ ನಟಿ ದೇವಿಕಾರಾಣೀಯವರಿಗೆ 1969ರಲ್ಲಿ ನೀಡಲಾಯಿತು. 43ನೇ ಪ್ರಶಸ್ತಿಯನ್ನು 1995ರಲ್ಲಿ ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ಅವರಿಗೆ ನೀಡಿ ಗೌರವಿಸಲಾಗಿದೆ. ರಾಜ್ ಕುಮಾರ್ ಅವರು ಫಾಲ್ಕೆ ಪ್ರಶಸ್ತಿ ಪಡೆದ ಕನ್ನಡ ಚಿತ್ರರಂಗದ ಏಕೈಕ ನಟರೆಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಈ ಪ್ರಶಸ್ತಿಯನ್ನು ಕೇವಲ ಬೆರಳೆಣಿಕೆಯ ಸಿನಿಮಾಗಳಲ್ಲಿ ಮಿಂಚಿದವರಿಗೆ ನೀಡಲಾಗುವುದಿಲ್ಲ. ಭಾರತೀಯ ಚಿತ್ರರಂಗದಲ್ಲಿ ಸಾಕಷ್ಟು ಅನುಭವ ಮತ್ತು ಚಿತ್ರರಂಗದಲ್ಲಿ ಸುಧೀರ್ಘ ಕೊಡುಗೆ ನೀಡಿದವರಿಗೆ ಭಾರತ ಸರ್ಕಾರ ನೀಡಲಾಗುವ ಪ್ರಶಸ್ತಿ ಇದು.

ಯಾರೂ ಈ ದಾದಾಸಾಹೇಬ್ ಫಾಲ್ಕೆ?

ಮಹಾರಾಷ್ಟ್ರದ ಹಾಗೂ ಭಾರತದ ಬೆಳ್ಳಿತೆರೆಯ ಇತಿಹಾಸದಲ್ಲಿ, ಎಂದೆಂದಿಗೂ ಮರೆಯಲಾರದ ವ್ಯಕ್ತಿಯಾಗಿ ಫಾಲ್ಕೆಯವರು ವಿಜೃಂಭಿಸುತ್ತಿದ್ದಾರೆ. ಭಾರತೀಯ ಚಿತ್ರರಂಗದ ಪಿತಾಮಹರೆಂದು ಕರೆಯಲ್ಪಡುವ ದಾದಾ ಸಾಹೇಬ್ ಫಾಲ್ಕೆಯವರ ಮೂಲ ಹೆಸರು ದುಂಡಿರಾಜ್ ಗೋವಿಂದ ಫಾಲ್ಕೆ. ಇವರು ವೃತ್ತಿಯಲ್ಲಿ ಸಂಸ್ಕೃತ ಪ್ರಾಧ್ಯಾಪಕರು. ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದ್ದ ಫಾಲ್ಕೆಯವರು ವೃತ್ತಿ ಜೀವನಕ್ಕಾಗಿ ಮುಂಬಯಿಯಲ್ಲಿ ನೆಲೆಸಿದ್ದರು.

ಅದೃಷ್ಟವಶಾತ್ ಇವರಿಗೆ ಮುಂಬೈನ ಪ್ರಸಿದ್ಧ ‘ಜೆ.ಜೆ.ಸ್ಕೂಲ್ ಆಫ್ ಆರ್ಟ್ಸ್‌ನಲ್ಲಿ ಚಿತ್ರಕಲಾ ತರಗತಿ’ಗೆ ಪ್ರವೇಶ ದೊರಕಿತು. ನಂತರ ಮುಂದಿನ ಕಲಿಕೆಗಾಗಿ ‘ಬರೋಡದ ಕಲಾಭವನ’ ಸೇರಿದರು. ಶಿಕ್ಷಣವನ್ನು ಮುಗಿಸಿದ ಇವರಿಗೆ ‘ಸರಕಾರಿ ಪ್ರಾಚ್ಯವಸ್ತು ಇಲಾಖೆ’ಯಲ್ಲಿ ‘ಚಿತ್ರಕಾರ’ರಾಗಿ, ‘ಛಾಯಾಚಿತ್ರಗಾರ’ರಾಗಿ 1903 ರಲ್ಲಿ ‘ಖಾಯಂ ನೌಕರಿ’ಯಲ್ಲಿ ಭರ್ತಿಯಾದರು. ಅಲ್ಲಿ ‘ಪ್ರೊ.ಗುಜ್ಜರ್’ ಎಂಬುವವರು ಇವರ ಆಸಕ್ತಿಯನ್ನು ನೋಡಿ ಛಾಯಾಚಿತ್ರ ವಿಭಾಗದ ಮೇಲ್ವಿಚಾರಕನಾಗಿ ನೇಮಿಸಿದರು. ಅಲ್ಲಿಂದ ಧುಂಡಿರಾಜರು ‘ಫೋಟೋ-ಕೆಮಿಕಲ್ ರಂಗ’ದಲ್ಲಿ ಹಲವಾರು ಸಾಧನೆಗಳನ್ನು ಮಾಡಿದರು.

ಫಾಲ್ಕೆಯವರು ಒಮ್ಮೆ ಬೇಸರ ಕಳೆಯಲೆಂದು “ಲೈಫ್ ಆಫ್ ಕ್ರೈಸ್ಟ್” ಎಂಬ ಇಂಗ್ಲೀಷ್ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಹೋಗಿದ್ದರು. ಚಿತ್ರಮಂದಿರದ ಬಳಿ ಎಸೆದಿದ್ದ ರೀಲಿನ ಸಣ್ಣ ಸಣ್ಣ ತುಣುಕುಗಳನ್ನು ಸಂಗ್ರಹಿಸಿ ಅದನ್ನು ಮಸೂರದ ಸಹಾಯದಿಂದ ನೋಡಿದರು ನಂತರ ಆಟಿಕೆಯ ಸಿನಿಮಾ ಪ್ರದರ್ಶಿಸುವ ಯಂತ್ರವೊಂದನ್ನು, ಸಣ್ಣ ಪ್ರಮಾಣದ ರೀಲನ್ನು ತಂದು ಮನೆ ಗೋಡೆ ಮೇಲೆ ಚಿತ್ರ ಪ್ರದರ್ಶಿಸಿದರು. ಅಲ್ಲಿಂದ ಇವರಿಗೆ ಅಪ್ಪಟ ಭಾರತೀಯ ಚಿತ್ರ ಮಾಡಬೇಕೆಂಬ ಹಂಬಲ ಮೂಡಿತು. ತಮ್ಮ ಸಮಸ್ತ ಆಸ್ತಿಯನ್ನು ಅಡವಿಟ್ಟು, ಚಿತ್ರ ನಿರ್ಮಾಣಕ್ಕೆ ಬೇಕಾಗುವ ಯಂತ್ರೋಪಕರಣಗಳನ್ನು ಖರೀದಿಸಲು ಲಂಡನ್ನಿಗೆ ತೆರಳಿದರು.

ಅಲ್ಲಿನ ‘ಚಿತ್ರ ನಿರ್ಮಾಪಕ ಸಿಸಿಲ್ ‘ ಅವರ ಗರಡಿಯಲ್ಲಿ ಚಲನಚಿತ್ರ ನಿರ್ಮಾಣದ ಎಲ್ಲಾ ವಿಭಾಗಗಳನ್ನು ಅಧ್ಯಯನ ಮಾಡಿ, ಚಿತ್ರ ನಿರ್ಮಾಣದ ಅಚಲ ನಿರ್ಧಾರದೊಂದಿಗೆ ಭಾರತಕ್ಕೆ ಹಿಂದಿರುಗಿದರು. ಫಾಲ್ಕೆಯವರು ತಮ್ಮ ಮನೆಯನ್ನೇ ಫಾಲ್ಕೆ ಫಿಲ್ಮ್ ಸಂಸ್ಥೆಯಾಗಿ ಬಳಸಿಕೊಂಡಿದ್ದರು. ‘ರಾಜಾ ಹರಿಶ್ಚಂದ್ರನ ಕಥೆ’ಯನ್ನು ಸಿನಿಮಾ ಮಾಡಲು ಮುಂದಾದ ಫಾಲ್ಕೆಯವರು ಲೇಖನ, ನಿರ್ಮಾಣ ಕಾರ್ಯ, ನಿರ್ದೇಶನ, ಹಾಗೂ ನಟನೆ ಮತ್ತು ಛಾಯಾಗ್ರಹಣವನ್ನೂ ಒಬ್ಬರೇ ಸಮರ್ಪಕವಾಗಿ ನಿರ್ವಹಿಸಿದರು. ಈ ಚಿತ್ರವೂ ಭಾರತದ ಪ್ರಪಥಮ ಸಿನಿಮಾವೆಂದು ಖ್ಯಾತಿ ಪಡೆಯಿತು.

ಈ ಸಿನಿಮಾದ ಮೂಲಕ ಭಾರತೀಯ ಚಲನಚಿತ್ರರಂಗದ ಮಾಯಾಲೋಕವನ್ನು ಸೃಷ್ಟಿಸಿದ ಕೀರ್ತಿ ಫಾಲ್ಕೆಯವರದ್ದು. ಹಾಗಾಗಿಯೇ ಇವರನ್ನು ಭಾರತೀಯ ಚಿತ್ರರಂಗದ ಪಿತಾಮಹನೆಂದು ಕರೆಯಲಾಗುತ್ತಿದೆ. ಇವರ ನೆನಪಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿದ ಪ್ರಶಸ್ತಿ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ. ಜೊತೆಗೆ ಸರ್ಕಾರ ಇವರ ಹೆಸರಿನಲ್ಲಿ ಅಂಚೇ ಚೀಟಿಯನ್ನು ಸಹ ಬಿಡುಗಡೆ ಮಾಡಿತ್ತು.

ನಟ ಯಶ್ ಪಡೆದ ದಕ್ಷಿಣ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಯಾವುದು.

ಭಾರತ ಸರ್ಕಾರ ನೀಡುವ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ ಅಲ್ಲದೆ, ಫಾಲ್ಕೆಯವರ ಹೆಸರಿನಲ್ಲಿ ಹಲವಾರು ಅಕಾಡೆಮಿಗಳು ಮತ್ತು ಅವಾರ್ಡ್‌ಗಳು ಹುಟ್ಟಿಕೊಂಡಿವೆ. ಅಂತೆಯೆ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ ಫೆಸ್ಟ್ ಕೂಡ ಒಂದು. ಇದು ಮೊನ್ನೆ ಹೈದರಾಬಾದ್‌ನಲ್ಲಿ ಕಾರ್ಯಕ್ರಮವನ್ನು ನಡೆಸಿತು. ಮೊತ್ತಮೊದಲ ಬಾರಿಗೆ ಅದು ‘ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ’ಯನ್ನು ನೀಡಿದೆ. ಇದು ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಆ ವರ್ಷ ಹೆಚ್ಚು ಖ್ಯಾತಿ ಪಡೆದ ಮತ್ತು ಉತ್ತಮ ನಟನೆಗೆ ನೀಡಲಾಗುವ ಪ್ರಶಸ್ತಿ. ಕೆಜಿಎಫ್-1 ಸಿನಿಮಾದ ಅಭಿನಯಕ್ಕಾಗಿ ನಟ ಯಶ್ ಈ ಪ್ರಶಸ್ತಿ ವಿಜೇತರಾಗಿದ್ದಾರೆ. ಆದರೆ ಇದು ಭಾರತ ಸರ್ಕಾರ ಪ್ರತಿ ವರ್ಷ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೀಡಲಾಗುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಯಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...