Homeಮುಖಪುಟಮಣಿಪುರದಲ್ಲಿ ಮತ್ತೆ ಉದ್ವಿಗ್ನ: ಪೊಲೀಸ್ ಪ್ರಧಾನ ಕಚೇರಿ ಮೇಲೆ ದಾಳಿ, ಮನೆಗಳ ಧ್ವಂಸ

ಮಣಿಪುರದಲ್ಲಿ ಮತ್ತೆ ಉದ್ವಿಗ್ನ: ಪೊಲೀಸ್ ಪ್ರಧಾನ ಕಚೇರಿ ಮೇಲೆ ದಾಳಿ, ಮನೆಗಳ ಧ್ವಂಸ

- Advertisement -
- Advertisement -

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇಂದು ಮುಂಜಾನೆ ತೌಬಲ್ ಜಿಲ್ಲೆಯ ಪೊಲೀಸ್ ಪ್ರಧಾನ ಕಚೇರಿಯ ಮೇಲೆ ಗುಂಪೊಂದು ದಾಳಿ ಮಾಡಿದ್ದು, ಮೂವರು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿಗೆ ಬುಲೆಟ್ ಗಾಯಗಳಾಗಿವೆ. ಕಳೆದ ಮೇ.ತಿಂಗಳಿನಿಂದ ಹಿಂಸಾಚಾರಕ್ಕೆ ಸುದ್ದಿಯಾಗುತ್ತಿರುವ ಮಣಿಪುರ ಪದೇ ಪದೇ  ಹಿಂಸಾಚಾರವನ್ನು ನೋಡುತ್ತಿದ್ದು, ಆಡಳಿತರೂಢ ಬಿಜೆಪಿ ಸರಕಾರ ಮಣಿಪುರದಲ್ಲಿ ಶಾಂತಿಯನ್ನು ಸ್ಥಾಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎನ್ನುವುದನ್ನು ಗಮನಿಸಬಹುದು.

ನಿನ್ನೆ ಮೊರೆಹ್‌ನಲ್ಲಿ ನಡೆದ ಗುಂಡಿನ ದಾಳಿಗೆ ಇಬ್ಬರು ಪೊಲೀಸ್‌ ಕಮಾಂಡೋಗಳು ಮೃತಪಟ್ಟಿದ್ದರು, ಮೂವರು ಗಾಯಗೊಂಡಿದ್ದರು. ರಾಕೆಟ್ ಚಾಲಿತ ಗ್ರೆನೇಡ್ ದಾಳಿಯನ್ನು ನಡೆಸಲಾಗಿದ್ದು, ತೆಂಗೋಪಾಲ್ ಜಿಲ್ಲೆಯ ಸಂಘರ್ಷಪೀಡಿತ ಪಟ್ಟಣದಲ್ಲಿ ಹಲವು ಮನೆಗಳನ್ನು ಮತ್ತು ಶಾಲೆಗಳನ್ನು ಧ್ವಂಸಮಾಡಲಾಗಿದೆ.

 

 

ಪೊಲೀಸರ ಪ್ರಕಾರ, ಇಂದು ತೌಬಲ್‌ನ ಖಂಗಾಬೊಕ್ ಪ್ರದೇಶದಲ್ಲಿ 3ನೇ ರಿಸರ್ವ್ ಬೆಟಾಲಿಯನ್‌ನ ಕಾಂಪ್ಲೆಕ್ಸ್ನ್ ಗುರಿಯಾಗಿಸಿ ಗುಂಪು ದಾಳಿ ನಡೆಸಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಅಗತ್ಯ ಬಲ ಬಳಸಿ ಗುಂಪನ್ನು ಚದುರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ವು ತೌಬಲ್ ಪೊಲೀಸ್ ಪ್ರಧಾನ ಕಛೇರಿಯನ್ನು ಗುರಿಯಾಗಿಸಿ ಗುಂಡಿನ ದಾಳಿ ಮಾಡಲಾಗಿದೆ. ಇದರ ಪರಿಣಾಮವಾಗಿ ಬಿಎಸ್‌ಎಫ್‌ನ ಮೂವರು ಸಿಬ್ಬಂದಿಗೆ ಬುಲೆಟ್ ಗಾಯಗಳಾಗಿವೆ ಎಂದು ಮಣಿಪುರ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಗೃಹ ಇಲಾಖೆ ಆಯುಕ್ತರಾದ ಟಿ ರಂಜಿತ್ ಸಿಂಗ್ ಅವರು ನಿನ್ನೆ ಗೃಹ ಸಚಿವಾಲಯಕ್ಕೆ ಪತ್ರ ಬರೆದು ತುರ್ತು ಅಗತ್ಯತೆಗಳನ್ನು ಉಲ್ಲೇಖಿಸಿ ಕನಿಷ್ಠ 7 ದಿನಗಳ ಕಾಲ ಇಂಫಾಲ್‌ನಲ್ಲಿ ಹೆಲಿಕಾಪ್ಟರ್‌ಗಳನ್ನು ಇರಿಸಲು ವಿನಂತಿಸಿದ್ದಾರೆ. ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯು ಗಂಭೀರ ಕಾಳಜಿಯ ವಿಷಯವಾಗಿದೆ ಏಕೆಂದರೆ ನಿರಂತರ ಬಾಂಬ್‌ ದಾಳಿಗಳು ನಡೆಯುತ್ತಿವೆ. ಇದು ಇಂದು ಬೆಳಿಗ್ಗೆ ಒಬ್ಬ ಐಆರ್‌ಬಿ ಸಿಬ್ಬಂದಿಯ ಸಾವಿಗೆ ಕಾರಣವಾಗಿದೆ. ಪ್ರಚಲಿತ ಪರಿಸ್ಥಿತಿಯ ದೃಷ್ಟಿಯಿಂದ, ಮೊರೆಯಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು. ಯಾವುದೇ ಸಮಯದಲ್ಲಿ ವೈದ್ಯಕೀಯ ತುರ್ತುಸ್ಥಿತಿ ಉಂಟಾಗಬಹುದು. ಮೊರೆಹ್‌ ಪಟ್ಟಣಕ್ಕೆ ಭದ್ರತಾ ಸಿಬ್ಬಂದಿ, ಮದ್ದುಗುಂಡುಗಳು ಇತ್ಯಾದಿಗಳನ್ನು ಏರ್‌ಲಿಫ್ಟಿಂಗ್ ಮಾಡುವ ಅವಶ್ಯಕತೆಯಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

ಪೊಲೀಸ್ ಸಿಬ್ಬಂದಿಯ ಹತ್ಯೆಯ ಸುದ್ದಿ ನಗರಕ್ಕೆ ತಲುಪುತ್ತಿದ್ದಂತೆ ರಾಜಧಾನಿ ಇಂಫಾಲ್ ಕೂಡ ಉದ್ವಿಗ್ನವಾಗಿತ್ತು. ಹೆಚ್ಚಿನ ಸಂಖ್ಯೆಯ ಮಹಿಳೆಯರು ಬುಧವಾರ ಬೀದಿಗಿಳಿದು ಮೊರೆಹ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡುವಂತೆ ಆಗ್ರಹಿಸಿದ್ದಾರೆ. ಮೊರೆಹ್‌ನಲ್ಲಿ ಪೊಲೀಸರ ವಿರುದ್ಧದ ದಾಳಿಯಲ್ಲಿ ಮ್ಯಾನ್ಮಾರ್ ಪ್ರಜೆಗಳು ಭಾಗಿಯಾಗಿದ್ದಾರೆ ಎಂದು ಮೈತೈ ನಾಗರಿಕ ಸಮಾಜದ ಗುಂಪುಗಳು ಆರೋಪಿಸಿದೆ. ಪಟ್ಟಣದಲ್ಲಿ ಪದೇ ಪದೇ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸುತ್ತಿರುವುದನ್ನು ತಡೆಯುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಕೆಲ ಪ್ರತಿಭಟನಾಕಾರರು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಮತ್ತು ರಾಜ್ಯಪಾಲರಾದ ಅನುಸೂಯಾ ಉಕ್ಲಿ ಅವರ ನಿವಾಸಕ್ಕೆ ನುಗ್ಗಲು ಪ್ರಯತ್ನಿಸಿದ್ದಾರೆ.

2023ರ ಮೇ ತಿಂಗಳ ಆರಂಭದಿಂದ ಮಣಿಪುರದಲ್ಲಿ ಜನಾಂಗೀಯ ಕಲಹ ನಡೆಯುತ್ತಿದ್ದು, ರಾಜ್ಯದಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಮೈತೈ ಹಾಗೂ ಕುಕಿಗಳ ನಡುವೆ ಸಂಘರ್ಷ ನಡೆಯುತ್ತಿದೆ. ಇದುವರೆಗೆ ಹಿಂಸಾಚಾರಕ್ಕೆ  200ಕ್ಕೂ ಅಧಿಕ ಮಂದಿ ಬಲಿಯಾಗಿದ್ದು, ಎರಡೂ ಸಮುದಾಯಗಳಿಗೆ ಸೇರಿದ  60 ಸಾವಿರಕ್ಕೂ ಹೆಚ್ಚು ನಾಗರಿಕರು ನೆಲೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದ. ಇದಲ್ಲದೆ ಮಣಿಪುರ  ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದರು. ಡಿ.4ರಂದು ತೆಂಗೊಪಾಲ್ ಜಿಲ್ಲೆಯ ಲೀತು ಗ್ರಾಮದಲ್ಲಿ ನಡೆದ ಗುಂಡಿನ ಕಾಳಗದಲ್ಲಿ 13 ಮಂದಿಯನ್ನು ಹತ್ಯೆ ಮಾಡಲಾಗಿತ್ತು. ಇದೀಗ ಮತ್ತೆ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದೆ.

ಇದನ್ನು ಓದಿ: ರಂಜನ್ ಗೊಗೊಯ್‌ಗೆ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’: ‘ರಾಮ ಮಂದಿರ’ ಸ್ಥಾಪನೆಯಾಗಿದ್ದರೆ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...