Homeಮುಖಪುಟಡಿಎಂಕೆ ಶಾಸಕನ ಪುತ್ರನ ನಿವಾಸದಲ್ಲಿ ಸಿಗರೇಟಿನಿಂದ ಸುಟ್ಟು ದೌರ್ಜನ್ಯ: ದಲಿತ ಬಾಲಕಿ ಆರೋಪ

ಡಿಎಂಕೆ ಶಾಸಕನ ಪುತ್ರನ ನಿವಾಸದಲ್ಲಿ ಸಿಗರೇಟಿನಿಂದ ಸುಟ್ಟು ದೌರ್ಜನ್ಯ: ದಲಿತ ಬಾಲಕಿ ಆರೋಪ

- Advertisement -
- Advertisement -

ತಮಿಳುನಾಡಿನ ಡಿಎಂಕೆ ಶಾಸಕ ಐ ಕರುಣಾನಿತಿ ಪುತ್ರ ಮತ್ತು ಸೋಸೆ, ದಲಿತ ಯುವತಿಗೆ ದೌರ್ಜನ್ಯ ನಡೆಸಿದ್ದಾರೆ. ಯುವತಿ ಉಲುಂದೂರ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಾದಾಗ ಪ್ರಕರಣ ಬಯಲಿಗೆ ಬಂದಿದ್ದು, ಯುವತಿಯ ಮೈಮೇಲೆ ಸಿಗರೇಟ್‌ನಿಂದ ಸುಟ್ಟ ಗಾಯಗಳು ಕಂಡುಬಂದಿದೆ.

ಪಲ್ಲವರಂ ಕ್ಷೇತ್ರದ ಡಿಎಂಕೆ ಶಾಸಕ ಐ ಕರುಣಾನಿತಿ ಅವರ ಮಗ ಆಂಟೊ ಮನೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವತಿ ಕೆಲಸ ಮಾಡುತ್ತಿದ್ದಳು. ಬಾಲಕಿಯ ಮುಖ ಮತ್ತು ದೇಹದ ಮೇಲೆ ಸಿಗರೇಟ್‌ನಿಂದ ಸುಟ್ಟಗಾಯಗಳಿದ್ದು,  ಶಾಸಕರ ಮಗ ಮತ್ತು ಸೊಸೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಪೊಂಗಲ್ ಹಬ್ಬಕ್ಕೆ ತಾಯಿಯ ಮನೆಗೆ ಯುವತಿ ತೆರಳಿದಾಗ ಮಗಳ ಮೇಲೆ ಗಾಯವಾಗಿರುವುದನ್ನು ತಾಯಿ ಗಮನಿಸಿದ್ದಾರೆ. ಯುವತಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಯುವತಿಯಿಂದ ದೂರು ಸ್ವೀಕರಿಸಬೇಕಿದೆ. ಈ ಬಗ್ಗೆ ಉಲುಂದೂರ್‌ಪೇಟೆ ಪೊಲೀಸರಿಂದ ಮಾಹಿತಿ ಪಡೆದಿದ್ದೇವೆ. ಅದರ ಆಧಾರದಲ್ಲಿ ಹೆಚ್ಚಿನ ತನಿಖೆಯನ್ನು ನಡೆಸಲಾಗುವುದು ಎಂದು ನೀಲಂಕರೈ ಸಹಾಯಕ ಪೊಲೀಸ್‌ ಆಯುಕ್ತರ ಕಚೇರಿ ತಿಳಿಸಿದೆ.

ಕರುಣಾನಿತಿ ಅವರ ಮಗ ಆಂಟೊ ಹಾಗೂ ಸೊಸೆ ಮೆರ್ಲಿನಾ ಅವರು ಚೆನ್ನೈನ ತಿರುವನ್ಮಿಯೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಥಳಿಸಿದ್ದಾರೆ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾರೆ. ಕಲ್ಲಾಕುರಿಚಿ ಜಿಲ್ಲೆಯ ಉಲುಂದೂರುಪೇಟೆ ಮೂಲದ ಅನು(ಹೆಸರು ಬದಲಿಸಲಾಗಿದೆ) ಅವರು ಎಂಟು ತಿಂಗಳ ಹಿಂದೆ ಅಂದರೆ 12ನೇ ತರಗತಿ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ಆಂಟೊ ಅವರ ನಿವಾಸದಲ್ಲಿ ಮನೆ ಕೆಲಸಕ್ಕೆ ಸೇರಿಕೊಂಡಿದ್ದರು.

ಸಂತ್ರಸ್ತೆ ಅನು(ಹೆಸರು ಬದಲಿಸಲಾಗಿದೆ) ಅವರ ತಾಯಿ ಚೆನ್ನೈನ ಕೋಲಪಾಕ್ಕಂನಲ್ಲಿ ಮನೆ ಕೆಲಸ ಮಾಡುತ್ತಿದ್ದಾರೆ. ಹಣಕಾಸಿನ ಸಮಸ್ಯೆಯಿಂದ ಆಂಟೊ ಅವರ ನಿವಾಸದಲ್ಲಿ ಮನೆ ಸಹಾಯಕರಾಗಿ ಕೆಲಸ ಮಾಡಲು ತಾಯಿ ಅನು ಅವರನ್ನು ಕಳುಹಿಸಿದ್ದರು. ಕಳೆದ ಎಂಟು ತಿಂಗಳಲ್ಲಿ ಮೆರ್ಲಿನಾ ಆಕೆಯನ್ನು ಥಳಿಸಿದ್ದಾಳೆ, ಸಿಗರೇಟ್‌ನಿಂದ ಚರ್ಮವನ್ನು ಸುಟ್ಟುಹಾಕಿದ್ದಾಳೆ ಮತ್ತು ಅವಳ ಕೂದಲನ್ನು ಚಿಕ್ಕದಾಗಿ ಕತ್ತರಿಸಿದ್ದಾಳೆ. ಇದಲ್ಲದೆ ದೌರ್ಜನ್ಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಉಲುಂದೂರುಪೇಟೆ ಆಸ್ಪತ್ರೆಯ ದಾಖಲಾತಿಯಲ್ಲಿ ಅನು ಅವರ ಮೇಲೆ ಕೋಲು ಮತ್ತು ಹೇರ್ ಸ್ಟ್ರೈಟ್ನರ್ ಬಳಸಿ ಹಲ್ಲೆ ನಡೆಸಲಾಗಿದೆ ಎಂದು ದಾಖಲಿಸಲಾಗಿದೆ. ಆಸ್ಪತ್ರೆಯ ಅಧಿಕಾರಿಗಳಿಗೆ ನೀಡಿದ ಹೇಳಿಕೆಯ ಪ್ರಕಾರ, ಆಕೆಯ ಉದ್ಯೋಗ ಸ್ಥಳದಲ್ಲಿ ಆಕೆಯ ಮೇಲೆ ಒದೆಯಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಹಣೆ, ಗಲ್ಲದ ಮೇಲೆ ಗಾಯ ಮತ್ತು ಎರಡೂ ಮುಂಗೈಗಳಲ್ಲಿ ಸುಟ್ಟ ಗಾಯಗಳಿರುವುದು ಕಂಡುಬಂದಿದೆ. ಆಕೆಯ ದೇಹದಲ್ಲಿ ಹಲವು ಗಾಯಗಳು ಕಂಡು ಬಂದಿರುವುದರಿಂದ ಆಸ್ಪತ್ರೆಯ ಆಡಳಿತವು ಪೊಲೀಸರಿಗೆ ಮಾಹಿತಿ ನೀಡಿದೆ. ಚೆನ್ನೈನಲ್ಲಿ ಘಟನೆಗಳು ನಡೆದಿದ್ದರಿಂದ ಉಲುಂದೂರ್‌ಪೇಟೆ ಪೊಲೀಸರು ತಿರುವನ್ಮಿಯೂರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಅವರು ನನ್ನ ಫೋನ್‌ನ್ನು ಕಸಿದುಕೊಂಡರು, ಆದ್ದರಿಂದ ನಾನು ನನ್ನ ತಾಯಿಯೊಂದಿಗೆ ಮಾತನಾಡಲು ನಡೆಸಲು ಸಾಧ್ಯವಾಗಲಿಲ್ಲ. ಅವರು ಮೇ 2023ರಲ್ಲಿ ಆರು ತಿಂಗಳ ಕಾಲ ಇಲ್ಲಿ ಕೆಲಸ ಮಾಡಲು ನನ್ನ ತಾಯಿಯ ಸಮ್ಮುಖದಲ್ಲಿ ಬಾಂಡ್ ಪೇಪರ್‌ಗೆ ಸಹಿ ಹಾಕುವಂತೆ ಒತ್ತಾಯಿಸಿದರು. ಆ ಸಮಯದಲ್ಲಿ ಮೆರ್ಲಿನಾ ನನ್ನ ಫೋನ್‌ನ್ನು ನನ್ನ ತಾಯಿಗೆ ಹಸ್ತಾಂತರಿಸಿದ್ದಾರೆ. 12ನೇ ತರಗತಿ ಪರೀಕ್ಷೆಯಲ್ಲಿ 433 ಅಂಕ ಪಡೆದಿರುವ ನಾನು ಮೆಡಿಕಲ್ ಓದಲು ಬಯಸಿದ್ದೆ. NEET ಕೋಚಿಂಗ್‌ಗಾಗಿ ಹಣಕ್ಕೆ ಕೆಲಸಕ್ಕೆ ಸೇರ್ಪಡೆಯಾಗಿದ್ದೆ. ನಾನು ಓದಲು ಹಣ ಸಂಪಾದಿಸಲು ಇಲ್ಲಿದ್ದೇನೆ ಎಂದು ನಾನು ಅವರಿಗೆ ಹೇಳಿದೆ ಮತ್ತು ಅವರು ನನ್ನನ್ನು ಆರ್ಥಿಕವಾಗಿ ಬೆಂಬಲಿಸುತ್ತಾರೆ ಎಂದು ಹೇಳಿದ್ದರು. ಆಗಸ್ಟ್ 2023ರಲ್ಲಿ ನಾನು ನನ್ನ ವರ್ಗಾವಣೆ ಪ್ರಮಾಣಪತ್ರವನ್ನು ಪಡೆಯಲು ಹೋಗುವಾಗ ಮೆರ್ಲಿನಾ ನನ್ನೊಂದಿಗೆ ಶಾಲೆಗೆ ಬಂದಿದ್ದರು. ಕೆಲವು ದಿನಗಳ ನಂತರ ಅವರು ನನ್ನನ್ನು ಆನ್‌ಲೈನ್ ಶಿಕ್ಷಣವನ್ನು ಪಡೆಯುವ ಸಂಸ್ಥೆಗೆ ಸೇರಿಸುವುದಾಗಿ ಹೇಳಿದ್ದರು. ಅವಳು ಕೋರ್ಸ್‌ಗೆ 2 ಲಕ್ಷ ರೂ.ಕೊಟ್ಟಿರುವುದಾಗಿ ಹೇಳಿದ್ದಾರೆ. ಆದರೆ ನಾನು ಆನ್‌ಲೈನ್‌ನಲ್ಲಿ ಯಾವುದೇ ತರಗತಿಗಳಿಗೆ ಹಾಜರಾಗಲಿಲ್ಲ.  ಮೆರ್ಲಿನಾಗೆ ಮನೆಗೆ ಮರಳಲು ಅವಕಾಶ ನೀಡುವಂತೆ ಹಲವಾರು ಬಾರಿ ವಿನಂತಿಸಿದ್ದೆ. ಅವರು 10 ಮತ್ತು 12ನೇ ತರಗತಿಯ ಅಂಕಪಟ್ಟಿಗಳನ್ನು ವರ್ಗಾವಣೆ ಪ್ರಮಾಣಪತ್ರದೊಂದಿಗೆ ಇಟ್ಟುಕೊಂಡಿದ್ದರು. ಅವಳು  ಕೆಲಸಕ್ಕೆ ಸಂಬಳ ನೀಡಲಿಲ್ಲ. ಒಪ್ಪಂದದಂತೆ ತಿಂಗಳಿಗೆ 16,000 ರೂ.ಗಳನ್ನು ನೀಡಬೇಕಿತ್ತು. ಆದರೆ ಕೇವಲ 5,000 ರೂ.ನೀಡಲಾಗಿದೆ ಎಂದು ಸಂತ್ರಸ್ತ ಬಾಲಕಿ ಆರೋಪಿಸಿದ್ದಾಳೆ.

ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಐ ಕರುಣಾನಿತಿ, ಮಗ ಮತ್ತು ಸೊಸೆ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಮಗನ ಮನೆಯಲ್ಲಿ ಏನಾಯಿತು ಎಂಬುದು ತನಗೆ ತಿಳಿದಿಲ್ಲ, ಆದರೆ ಮನೆಮಂದಿ ಯಾವತ್ತೂ ತಮ್ಮ ಉದ್ಯೋಗಿಗಳನ್ನು ಈ ರೀತಿ ನಡೆಸಿಕೊಂಡಿಲ್ಲ. ಅವರು ಅವಳ 18ನೇ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಈ ದೂರಿನ ಹಿಂದೆ ವೈಯಕ್ತಿಕ ಪ್ರೇರಣೆ ಇರಬಹುದು. ನಾವು ಅವಳನ್ನು ನಮ್ಮ ಕುಟುಂಬದ ಸದಸ್ಯರಂತೆ ನೋಡಿಕೊಂಡೆವು ಮತ್ತು ಶಿಕ್ಷಣ ಪಡೆಯಲು ಅವಳನ್ನು ಬೆಂಬಲಿಸಿದೆವು. ಇವು ಸುಳ್ಳು ಆರೋಪಗಳು ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ: ಮಣಿಪುರದಲ್ಲಿ ಮತ್ತೆ ಉದ್ವಿಗ್ನ: ಪೊಲೀಸ್ ಪ್ರಧಾನ ಕಚೇರಿ ಮೇಲೆ ದಾಳಿ, ಮನೆಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...