Homeಮುಖಪುಟಬಿಲ್ಕಿಸ್‌ ಬಾನು ಪ್ರಕರಣ: ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಮೂವರು ಅಪರಾಧಿಗಳು

ಬಿಲ್ಕಿಸ್‌ ಬಾನು ಪ್ರಕರಣ: ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಮೂವರು ಅಪರಾಧಿಗಳು

- Advertisement -
- Advertisement -

ಶರಣಾಗಲು ಸಮಯ ವಿಸ್ತರಿಸುವಂತೆ ಕೋರಿ ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಪೈಕಿ ಮೂವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಜನವರಿ 9ರಂದು ರದ್ದುಪಡಿಸಿದ್ದ ಸುಪ್ರೀಂ ಕೋರ್ಟ್‌ ಮುಂದಿನ ಎರಡು ವಾರಗಳಲ್ಲಿ ಜೈಲಿಗೆ ಮರಳುವಂತೆ ಸೂಚಿಸಿತ್ತು.

ಒಟ್ಟು 11 ಅತ್ಯಾಚಾರಿಗಳ ಪೈಕಿ ಪ್ರಮುಖರಾದ ಗೋವಿಂದಭಾಯಿ ನಾಯ್, ರಮೇಶ್ ರೂಪಾಭಾಯ್ ಚಂದನ್ ಮತ್ತು ಮಿತೇಶ್ ಚಿಮನ್ಲಾಲ್ ಭಟ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅತ್ಯಾಚಾರಿ ಗೋವಿಂದಭಾಯಿ ನಾಯ್ ತಮ್ಮ ಅನಾರೋಗ್ಯ ಮತ್ತು ಮನೆಯ ಜವಾಬ್ದಾರಿಗಳನ್ನು ಉಲ್ಲೇಖಿಸಿ ಸಮಯ ವಿಸ್ತರಣೆಗೆ ಅರ್ಜಿ ಸಲ್ಲಿಸಿದ್ದಾನೆ. “ನನ್ನ 88 ವರ್ಷದ ತಂದೆ ಹಾಸಿಗೆ ಹಿಡಿದಿದ್ದಾರೆ. ಅವರು ನನ್ನ ಮೇಲೆ ಅವಲಂಬಿತರಾಗಿದ್ದಾರೆ. ಹೆತ್ತವರನ್ನು ನೋಡಿಕೊಳ್ಳಲು ನನ್ನನ್ನು ಬಿಟ್ಟು ಬೇರೆ ಯಾರು ಇಲ್ಲ” ಎಂದು ಆತ ತನ್ನ ಅರ್ಜಿಯಲ್ಲಿ ಹೇಳಿದ್ದಾನೆ.

ಅಲ್ಲದೆ, ಇತ್ತೀಚೆಗೆ ಆಂಜಿಯೋಗ್ರಫಿಗೆ ಒಳಗಾಗಿದ್ದೇನೆ. ಮೂಲವ್ಯಾಧಿ ಚಿಕಿತ್ಸೆಗಾಗಿ ಮತ್ತೊಂದು ಶಸ್ತ್ರಚಿಕಿತ್ಸೆಗೆ ಮಾಡಿಸಿಕೊಳ್ಳಬೇಕಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. 55 ವರ್ಷ ವಯಸ್ಸಿನವನಾದ ನಾನು ಆಸ್ತಮಾದಿಂದ ಬಳಲುತ್ತಿದ್ದು, ಆರೋಗ್ಯ ಮಟ್ಟ ನಿಜವಾಗಿಯೂ ಕಳಪೆಯಾಗಿದೆ ಎಂದು ಹೇಳಿಕೊಂಡಿದ್ದಾನೆ.

ಮತ್ತೊಬ್ಬ ಅತ್ಯಾಚಾರಿ ರಮೇಶ್ ರೂಪಾಭಾಯ್ ಚಂದನ್, ತನ್ನ ಮಗನಿಗೆ ಮದುವೆಯಿದೆ, ಹಾಗಾಗಿ ಆರು ವಾರಗಳ ಕಾಲಾವಕಾಶ ನೀಡುವಂತೆ ಕೋರಿದ್ದಾನೆ. ಇನ್ನೋರ್ವ ಅತ್ಯಾಚಾರಿ ಮಿತೇಶ್ ಚಿಮನ್ಲಾಲ್ ಭಟ್, ತನ್ನ ಚಳಿಗಾಲದ ಕೃಷಿ ಉತ್ಪನ್ನಗಳು ಕೊಯ್ಲಿಗೆ ಸಿದ್ಧವಾಗಿವೆ. ಅದರ ಪ್ರಕ್ರಿಯೆ ಪೂರ್ಣಗೊಳಿಸಲು ಆರು ವಾರಗಳ ಕಾಲವಕಾಶ ಕೋರಿದ್ದಾನೆ. ಕೊಯ್ಲು ಕೆಲಸ ಮುಗಿದ ಬಳಿ ಶರಣಾಗುವುದಾಗಿ ತಿಳಿಸಿದ್ದಾನೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಅಪರಾಧಿಗಳಿಗೆ ಶರಣಾಗಲು ಜನವರಿ 21 ಕೊನೆಯ ದಿನಾಂಕವಾಗಿರುವುದರಿಂದ ಅವರು ಸಲ್ಲಿಸಿದ್ದ ಅರ್ಜಿಯನ್ನು ಆದಷ್ಟು ಬೇಗ ವಿಚಾರಣೆ ನಡೆಸಬೇಕೆಂದು ಹಿರಿಯ ವಕೀಲ ವಿ ಚಿತಂಬರೇಶ್‌ ಕೋರಿದ್ದರು.

ಈ ಅರ್ಜಿಗಳ ವಿಚಾರಣೆಯನ್ನು ಶುಕ್ರವಾರ ನಡೆಸಲು ಪೀಠವನ್ನು ರಚಿಸುವಂತೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಅವರಿಗೆ ಕೋರಲು ರಿಜಿಸ್ಟ್ರಿಗೆ ನ್ಯಾಯಮೂರ್ತಿ ಬಿವಿ ನಾಗರತ್ನ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಮೂವರು ಸೇರಿದಂತೆ ಒಟ್ಟು 11 ಮಂದಿ 2002ರ ಗುಜರಾತ್ ಗಲಭೆಯ ಸಮಯದಲ್ಲಿ ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರ ಕೊಲೆಯ ಅಪರಾಧಿಗಳಾಗಿದ್ದಾರೆ.

ಅಪರಾಧಿಗಳು 14 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ ಬಳಿಕ, 2022ರ ಆಗಸ್ಟ್‌ನಲ್ಲಿ ಗುಜರಾತ್ ಸರ್ಕಾರ ಸನ್ನಡೆಯ ನೆಪ ಹೇಳಿ ಬಿಡುಗಡೆ ಮಾಡಿತ್ತು. ಇದರ ವಿರುದ್ದ ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಜನವರಿ 8, 2024ರಂದು ತೀರ್ಪು ನೀಡಿದ್ದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ರದ್ದುಪಡಿಸಿದೆ. ಎರಡು ವಾರಗಳಲ್ಲಿ ಜೈಲಿಗೆ ಮರುಳುವಂತೆ ಅಪರಾಧಿಗಳಿಗೆ ಸೂಚಿಸಿದೆ.

ಇದನ್ನೂ ಓದಿ : ರಾಮ ಮಂದಿರ ಉದ್ಘಾಟನಾ ಸಮಾರಂಭದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...