Homeಕರ್ನಾಟಕಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

ಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

- Advertisement -
- Advertisement -

ದಲಿತ ಯುವಕನ ಮೇಲೆ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗೌಡೆಗೆರೆ ಗ್ರಾಮದಲ್ಲಿ ನಡೆದಿದೆ. ಗುಂಪೊಂದು ಅಡ್ಡಗಟ್ಟಿ ಜಾತಿ ನಿಂದಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡುವುದರ ಜೊತೆಗೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಿ ಮೆರವಣಿಗೆ ಮಾಡಿ ಅವಮಾನ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ಈ ಕುರಿತು ಸಂತ್ರಸ್ತ ಯುವಕ ಕಿರಣ್‌ ಜಿ.ಗಂಗಾಧರ್‌ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ?

ಜ.6ರಂದು  ಸಂಜೆ 7.30ರ ಸುಮಾರಿಗೆ ನಾನು ನನ್ನ ಊರಿನಿಂದ ಹಾಡ್ಲಿ ಸರ್ಕಲ್‌ಗೆ ಸ್ನೇಹಿತನಾದ ಶಿವಕುಮರ್‌ ಬಳಿ ಡ್ರಾಪ್‌ ಕೇಳುತ್ತಿದ್ದಾಗ, ವೈ ಸಿ ಎಸ್‌ ಬಾರ್‌ ಮುಂಭಾಗ ಕಾರಿನಲ್ಲಿ ಅತಿ ವೇಗವಾಗಿ ಢಿಕ್ಕಿ ಹೊಡೆಯುವ ರೀತಿಯಲ್ಲಿ ಬಂದು ಬಸವನಪುರ ಗ್ರಾಮದ ಬಿಪಿ ಗಿರೀಶ, ಗಂಗಾಧರ, ಚನ್ನಿಪುರ ಗ್ರಾಮದ ಸುರೇಶ, ಅಗಸನಪುರ ಗ್ರಾಮದ ಅಪ್ಪಯ್ಯ, ಮತ್ತು ಬಸವನಪುರದ ಪ್ರಸನ್ನ ಇತರರು ಸೇರಿಕೊಂಡು ಗುಂಪುಗೂಡಿಕೊಂಡು ಬಂದು  ಬೈಕಿಗೆ ಅಡ್ಡಲಾಗಿ ನಿಂತು ಬೈಕ್‌ನಲ್ಲಿ ಕುಳಿತಿದ್ದ ನನ್ನನ್ನು ಕುತ್ತಿಗೆ ಹಿಡಿದು ಎಳೆದು ಅವಾಚ್ಯವಾಗಿ ನಿಂದಿಸಿ ಜಾತಿ ನಿಂದನೆ ಮಾಡಿದ್ದಾರೆ. ಬಳಿಕ ದೊಣ್ಣೆ ಮತ್ತು ರಾಡ್‌ನಿಂದ ಹಲ್ಲೆ ಮಾಡಲು ಮುಂದಾದಾಗ ನಾನು ತಪ್ಪಿಸಿಕೊಳ್ಳಲು ಯತ್ನಿಸಿದ್ದೇನೆ. ಈ ವೇಳೆ ನನ್ನನ್ನು ಅಟ್ಟಾಡಿಸಿಕೊಂಡು ಬಂದ ಗುಂಪು ಸಾರ್ವಜನಿಕವಾಗಿ ನನ್ನ ಬಟ್ಟೆ ಹರಿದು ದೊಣ್ಣೆ, ರಾಡ್‌ಗಳಿಂದ ಹಲ್ಲೆ ನಡೆಸಿ, ನನ್ನ ಎದೆ ಮತ್ತು ಹೊಟ್ಟೆಯ ಮೇಲೆ ಒದ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಹೊಲಯ ಜಾತಿಯ ಇವನನ್ನು ಬಿಡಬೇಡಿ ಎಂದು ಎಂದು ಥಳಿಸಿದ್ದಾರೆ. ಇದಲ್ಲದೆ ಕತ್ತಿನಲ್ಲಿದ್ದ 50ಗ್ರಾಂ ಚಿನ್ನದ ಸರವನ್ನು ಕಳ್ಳತನ ಮಾಡಿದ್ದಾರೆ. ಜೇಬಿನಲ್ಲಿದ್ದ 50ಸಾವಿರೂ ರೂವನ್ನು ದರೋಡೆ ಮಾಡಿಕೊಂಡು ಬಟ್ಟೆ ಹರಿದು ಹೀಯಾಳಿಸುತ್ತಾ, ಹಲ್ಲೆ ನಡೆಸುತ್ತಾ ಒಂದು ಕಿ.ಮೀ ಮೆರವಣಿಗೆ ಮಾಡಿದ್ದು, ಬಳಿಕ ಸರ್ಕಲ್‌ನಲ್ಲಿ ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ  ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮೈಮೇಲೆ ಮೂತ್ರವಿಸರ್ಜನೆ ಮಾಡಿದ್ದಾರೆ. ಬಳಿಕ ನನ್ನನ್ನು ಅಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ವೇಳೆ ಆರೋಪಿಗಳು ಕೊಲೆ ಮಾಡುವ ಬೆದರಿಕೆಯನ್ನು ಕೂಡ ಹಾಕಿದ್ದಾರೆ. ನಾನು ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದೆ. ನನ್ನನ್ನು ಬಳಿಕ ಹಲಗೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಾನು ಚಿಕಿತ್ಸೆ ಪಡೆದ ಬಳಿಕ ಊರಿನಲ್ಲಿ ಅವಮಾನದಿಂದ ಮುಖವನ್ನು ತೋರಿಸಲು ಸಾಧ್ಯವಾಗದೆ ಪತ್ನಿ ಮನೆ ಕನಕಪುರಕ್ಕೆ ತೆರಳಿರುತ್ತೇನೆ. ಬಳಿಕ ಕನಕಪುರ ಆಸ್ಪತ್ರೆಯಲ್ಲಿ 4 ದಿನ ಒಳರೋಗಿಯಾಗಿ ಚಿಕಿತ್ಸೆಯನ್ನು ಪಡೆದಿದ್ದೇನೆ. ತದ ನಂತರ ಆರೋಪಿಗಳು ರಾಜಿ ಪಂಚಾಯತಿಗೆ ಕರೆದು ದೂರು ನೀಡಬಾರದು ಎಂದು ಬೆದರಿಸಿದ್ದಾರೆ. ನಾನು ಈ ಅವಮಾನ ತಾಳಲಾರದೆ ಇದೀಗ ತಡವಾಗಿ ದೂರು ದಾಖಲಿಸುತ್ತೇನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಹೋರಾಟಗಾರ ಪ್ರೊ.ಹರಿರಾಮ್, ಮಳವಳ್ಳಿಯಲ್ಲಿ ನಡೆದಿರುವುದು ಜಾತಿ ಭಯೋತ್ಪಾದನೆ, ಹಲ್ಲೆ ಜೊತೆ ನಿಂದನೆ ಕೂಡ ಅಲ್ಲಿ ನಡೆದಿದೆ. ನಮ್ಮ ತಂಡ ನಾಳೆ ಮಳವಳ್ಳಿಗೆ ತೆರಳಲಿದೆ. ಪೊಲೀಸ್‌ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ಸರಕಾರ ಬಂದಾಗ ಕೆಲವರಿಗೆ ಒಂದು ರೀತಿ ಅಹಂ ಬಂದಿದೆ. ಕಾಂಗ್ರೆಸ್‌ ಬಂದ ಮೇಲೆ ದಲಿತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿದೆ. ಇವರು ಬಿಜೆಪಿಗಿಂತ ಭಿನ್ನವಾಗಿಲ್ಲ. ಎಲ್ಲೂ ದಲಿತ ದೌರ್ಜನ್ಯ ನಡೆದಾಗ ಗಂಭೀರವಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಎಫ್ಐಆರ್‌ ಆಗಬೇಕಾದರೂ ನಮ್ಮಂತಹ ಹೋರಾಟಗಾರರು ಒತ್ತಡ, ಬಲವಂತ, ಪ್ರತಿಭಟನೆ ಮಾಡಿದ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ. ದಲಿತರಿಗೆ ಸಂಬಂಧಿಸಿದ ಯೋಜನೆಗಳಿಗೆ ಕೂಡ ದುಡ್ಡು ನೀಡುತ್ತಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನವರು ಬಿಜೆಪಿಯನ್ನು ತೊರಿಸಿ ಸುಳ್ಳು ಹೇಳಿ ಮುಸ್ಲಿಮರು ಮತ್ತು ದಲಿತರ ವೋಟ್‌ ತೆಗೆದುಕೊಂಡರು. ಆದರೆ ಅಧಿಕಾರಕ್ಕೆ ಬಂದ ಮೇಲೆ ಕಲ್ಲಡ್ಕ ಭಟ್ಟ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದಾಗ ಆತನಿಗೆ ಬಂಧಿಸಲ್ಲ, ಸರಕಾರಿ ವಕೀಲರೇ ಆತನಿಗೆ ಬಂಧಿಸಲ್ಲ ಎಂದು ಹೇಳುತ್ತಾರೆ. ಆತನಿಗೆ ಜಾಮೀನು ಕೂಡ ಸಿಕ್ಕಿದೆ. ಚಿಕ್ಕಮಗಳೂರಿನ ಗೊಲ್ಲರ ಹಟ್ಟಿ ಘಟನೆ ನಡೆದಿದೆ, ಅದೇ ರೀತಿ ಮಡಿಕೇರಿಯಲ್ಲಿ ಹೆಣ್ಣುಮಗಳ ಮೇಲೆ ದೌರ್ಜನ್ಯ ನಡೆದಿದೆ. ಅದರಲ್ಲಿ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಿಲ್ಲ. ಎಲ್ಲಾ ಸಮಸ್ಯೆ ವೇಳೆ ಮುಂದೆ ನಿಂತು ಬಗೆಹರಿಸಬೇಕಾದ ಕಾಂಗ್ರೆಸ್‌ನವರು ಈ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಹೋರಾಟಗಾರ ಭಾಸ್ಕರ್‌ ಪ್ರಸಾದ್,  ಮಳವಳ್ಳಿಯಲ್ಲಿ ಕಿರಣ್‌ ಎಂಬ ಯುವಕನ ಮೇಲೆ ತುಂಬಾ ಜನ ಗುಂಪಾಗಿ ಹೊಡೆದಿದ್ದಾರೆ. ಈ ಬಗ್ಗೆ ಡಿವೈಎಸ್ಪಿ ಜೊತೆ ಮಾತನಾಡಲು ಯತ್ನಿಸಿದೆ. ಆದರೆ ಅವರು ಪೋನ್‌ ತೆಗೆದಿಲ್ಲ. ಬಳಿಕ ಎಸ್‌ಐ ಜೊತೆ ಮಾತನಾಡಿದೆವು, ಮೊದಲು ಎಫ್‌ಐಆರ್‌ ಮಾಡಿರಲಿಲ್ಲ. ತುಂಬಾ ತಕರಾರು ಮಾಡಿದ್ರು, ಈಗಾದರೆ ನಾವೆಲ್ಲಾ ಅಲ್ಲಿಗೆ ಬರಬೇಕಾಗುತ್ತೆ ಎಂದ ಮೇಲೆ ಎಫ್‌ಐಆರ್‌ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಒಬ್ಬನಿಗೆ ಮಾತ್ರ ಬಂದಿಸಿದ್ದಾರೆ. ಬೇರೆ ಯಾರಿಗೂ ಬಂಧಿಸಿಲ್ಲ. ಸಂತ್ರಸ್ತನಿಗೆ ಪೊಲೀಸರು ಬೆದರಿಸಿದ್ದಾರೆ. ನೀನು 80 ಜನರನ್ನು ಎಫ್‌ಐಆರ್‌ನಲ್ಲಿ ಹೇಳಿದ್ದಿಯಾ, ನೀನೇ ಅವರನ್ನು ಹುಡುಕಿಕೊಡು ಎಂದು ಬೆದರಿಸಿದ್ದಾರೆ. ಈ ಹಿನ್ನೆಲೆ ನಾವು ನಾಳೆ ಮಳವಳ್ಳಿಗೆ ತೆರಳಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರಂಜನ್ ಗೊಗೊಯ್‌ಗೆ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’: ‘ರಾಮ ಮಂದಿರ’ ಸ್ಥಾಪನೆಯಾಗಿದ್ದರೆ…..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...