Homeಮುಖಪುಟಅಸ್ಸಾಂ ತಲುಪಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ, ಆರೆಸ್ಸೆಸ್ ದ್ವೇಷ ಹರಡಿ, ಸಾರ್ವಜನಿಕರ ಹಣವನ್ನು...

ಅಸ್ಸಾಂ ತಲುಪಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ, ಆರೆಸ್ಸೆಸ್ ದ್ವೇಷ ಹರಡಿ, ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದೆ; ರಾಹುಲ್‌ ಗಾಂಧಿ

- Advertisement -
- Advertisement -
ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ 5ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಯಾತ್ರೆ ಅಸ್ಸಾಂನ ಶಿವಸಾಗರಕ್ಕೆ ತಲುಪಿದೆ. ನಾಗಾಲ್ಯಾಂಡ್‌ನಿಂದ ಶಿವಸಾಗರ್‌ನ ಹಲುವತಿಂಗ್‌ ಮೂಲಕ ಅಸ್ಸಾಂಗೆ ಭಾರತ್‌ ಜೋಡೋ ನ್ಯಾಯ ಯಾತ್ರೆ ಪ್ರವೇಶಿಸಿದೆ. ಇಂದು ಮುಂಜಾನೆ ನಾಗಾಲ್ಯಾಂಡ್‌ನ ತುಲಿಯಿಂದ ಬಸ್‌ ಯಾತ್ರೆ ಆರಂಭಿಸಿದ ರಾಹುಲ್ ಗಾಂಧಿ, ಬೆಳಿಗ್ಗೆ ಸುಮಾರು 9.45ರ ವೇಳೆಗೆ ಅಸ್ಸಾಂ ಪ್ರವೇಶಿಸಿದ್ದರು.

ಹಲುವತಿಂಗ್‌ನಲ್ಲಿ ಸೇರಿದ್ದ ನೂರಾರು ಕಾರ್ಯಕರ್ತರು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕರನ್ನು ರಾಜ್ಯಕ್ಕೆ ಬರಮಾಡಿಕೊಂಡಿದ್ದಾರೆ. ಅಸ್ಸಾಂನಲ್ಲಿ ತ್ರಿವರ್ಣ ಧ್ವಜವನ್ನು ಹಸ್ತಾಂತರ ಕಾರ್ಯಕ್ರಮವು ರಾಜ್ಯದಲ್ಲಿ ಯಾತ್ರೆ ಆರಂಭಕ್ಕೆ ಮೊದಲು ನಡೆದಿದೆ.

ಅಸ್ಸಾಂನಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಹುಶಃ ಭಾರತದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಅಸ್ಸಾಂ ಸರಕಾರ, ಬಿಜೆಪಿ, ಆರೆಸ್ಸೆಸ್ ದ್ವೇಷ ಹರಡಿ, ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದೆ. ಬಿಜೆಪಿ-ಆರೆಸ್ಸೆಸ್‌ ದೇಶ ಮತ್ತು ರಾಜ್ಯಗಳಲ್ಲಿ ಅನ್ಯಾಯ ಮಾಡುತ್ತಿದೆ. ಆರ್ಥಿಕ ಅನ್ಯಾಯ, ಸಾಮಾಜಿಕ ಅನ್ಯಾಯ ಅಥವಾ ರಾಜಕೀಯ ಅನ್ಯಾಯವಾಗುತ್ತಿದೆ. ಮಣಿಪುರದಲ್ಲಿ ಅಂತರ್ಯುದ್ಧದ ವಾತಾವರಣವಿದ್ದು, ಇಲ್ಲಿಯವರೆಗೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿಲ್ಲ. ನಾಗಾಲ್ಯಾಂಡ್‌ನಲ್ಲಿ 9 ವರ್ಷಗಳ ಹಿಂದೆ ಮೋದಿ ದೊಡ್ಡ ಭರವಸೆಗಳನ್ನು ಕೊಟ್ಟಿದ್ದರು. ಅವರು ನಾಗಾ ಒಪ್ಪಂದದ ಬಗ್ಗೆ ಭರವಸೆ ನೀಡಿದ್ದರು. ಆ ಒಪ್ಪಂದ ಈಗ ಏನಾಗಿದೆ ಎಂದು ನಾಗಾಲ್ಯಾಂಡ್‌ನ ಜನರು ಇಂದು ಕೇಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಅಸ್ಸಾಂನಲ್ಲೂ ಇದೇ ರೀತಿಯ ಘಟನೆಗಳು ನಡೆಯುತ್ತಿವೆ. ಬಹುಶಃ ಭಾರತದ ಅತ್ಯಂತ ಭ್ರಷ್ಟ ಸರ್ಕಾರ ಅಸ್ಸಾಂನ ಸರಕಾರವಾಗಿದೆ. ನಮಗೆ ನಾಗಾಲ್ಯಾಂಡ್‌ನಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಮತ್ತು ಅಸ್ಸಾಂನಲ್ಲೂ ನಾವು ಅದೇ ರೀತಿ ಬೆಂಬಲ ಪಡೆಯುತ್ತೇನೆ ಎಂದು ನಾನು ಭಾವಿಸುತ್ತೇನೆ. ನಾವು ಅಸ್ಸಾಂನ ಇತಿಹಾಸವನ್ನು ಮತ್ತೆ ಪುನರಾವರ್ತಿಸುತ್ತಿದ್ದೇವೆ, ಶಂಕರ್ ದೇವ್ ಜಿ ನಿಮಗೆ ದಾರಿ ತೋರಿಸಿದ್ದಾರೆ, ಎಲ್ಲರನ್ನೂ ಒಗ್ಗೂಡಿಸಲು ಕೆಲಸ ಮಾಡಿದ್ದಾರೆ. ಅದೇ ರೀತಿ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಪ್ರಯಾಣವು ಅಸ್ಸಾಂನ ಜನರಿಗೆ ಉತ್ಸಾಹ ಮತ್ತು ಧೈರ್ಯದ ಪ್ರಯಾಣವಾಗಿದೆ ಏಕೆಂದರೆ ಇಲ್ಲಿನ ಜನರು ತೊಂದರೆಗೀಡಾಗಿದ್ದಾರೆ. ಜನರು ರಾಹುಲ್ ಗಾಂಧಿ ಇಲ್ಲಿಗೆ ಯಾವಾಗ ಬರುತ್ತಾರೆ ಎಂದು ಕಾಯುತ್ತಿದ್ದಾರೆ. ಇದು ಐತಿಹಾಸಿಕ ಪ್ರಯಾಣವಾಗಿದೆ. ನಮ್ಮ ಪಕ್ಷವು ಭಾರತದ ಸಂವಿಧಾನವನ್ನು ನಂಬುತ್ತದೆ. ಇಂದು
ಬಿಜೆಪಿಯು ಶಂಕರಾಚಾರ್ಯರಿಗಿಂತ ಹೆಚ್ಚು ಜ್ಞಾನಿ ಎಂದು ಹೇಳುತ್ತಿದೆ. ಅವರಲ್ಲಿ ಅಹಂಕಾರ ತುಂಬಿದೆ ಎಂದು ಇದೇ ವೇಳೆ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ.
ನಮಗೆ ನ್ಯಾಯದ ಹಕ್ಕು ಸಿಗುವವರೆಗೂ ಯಾತ್ರೆ ಮುಂದುವರಿಯಲಿದೆ ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಕಾಂಗ್ರೆಸ್‌ ಸ್ಪಷ್ಟಪಡಿಸಿದೆ. ಭಾರತ ಜೋಡೋ ನ್ಯಾಯ ಯಾತ್ರೆಯ ಐದನೇ ದಿನವಾದ ಇಂದು ದೇಶದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಸಾರ್ವಜನಿಕರು ಈ ‘ನ್ಯಾಯ ಯಾತ್ರೆ’ಯಲ್ಲಿ ನಮ್ಮೊಂದಿಗೆ ಒಗ್ಗಟ್ಟಾಗಿ ಮುನ್ನಡೆಯುತ್ತಿದ್ದಾರೆ. ಈ ಯಾತ್ರೆಯು ನಮಗೆ ನ್ಯಾಯದ ಹಕ್ಕು ಸಿಗುವವರೆಗೆ ಮುಂದುವರಿಯುತ್ತದೆ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ತಿಳಿಸಿದೆ.
ಭಾರತ್ ಜೋಡೋ ನ್ಯಾಯ್ ಯಾತ್ರೆ ಜನವರಿ 14ರಂದು ಮಣಿಪುರದ ತೌಬಲ್‌ನಿಂದ ಪ್ರಾರಂಭವಾಯಿತು. ಬಳಿಕ ನಾಗಾಲ್ಯಾಂಡ್‌ ಮೂಲಕ ಇಂದು ಅಸ್ಸಾಂಗೆ ತಲುಪಿದೆ. ಯಾತ್ರೆಯು 67 ದಿನಗಳಲ್ಲಿ 6,700 ಕಿಲೋಮೀಟರ್‌ಗಳನ್ನು ಕ್ರಮಿಸಲಿದ್ದು 110 ಜಿಲ್ಲೆಗಳಲ್ಲಿ ಸಂಚರಿಸಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...