Homeಮುಖಪುಟಅಸ್ಸಾಂ ತಲುಪಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ, ಆರೆಸ್ಸೆಸ್ ದ್ವೇಷ ಹರಡಿ, ಸಾರ್ವಜನಿಕರ ಹಣವನ್ನು...

ಅಸ್ಸಾಂ ತಲುಪಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ, ಆರೆಸ್ಸೆಸ್ ದ್ವೇಷ ಹರಡಿ, ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದೆ; ರಾಹುಲ್‌ ಗಾಂಧಿ

- Advertisement -
- Advertisement -
ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ 5ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಯಾತ್ರೆ ಅಸ್ಸಾಂನ ಶಿವಸಾಗರಕ್ಕೆ ತಲುಪಿದೆ. ನಾಗಾಲ್ಯಾಂಡ್‌ನಿಂದ ಶಿವಸಾಗರ್‌ನ ಹಲುವತಿಂಗ್‌ ಮೂಲಕ ಅಸ್ಸಾಂಗೆ ಭಾರತ್‌ ಜೋಡೋ ನ್ಯಾಯ ಯಾತ್ರೆ ಪ್ರವೇಶಿಸಿದೆ. ಇಂದು ಮುಂಜಾನೆ ನಾಗಾಲ್ಯಾಂಡ್‌ನ ತುಲಿಯಿಂದ ಬಸ್‌ ಯಾತ್ರೆ ಆರಂಭಿಸಿದ ರಾಹುಲ್ ಗಾಂಧಿ, ಬೆಳಿಗ್ಗೆ ಸುಮಾರು 9.45ರ ವೇಳೆಗೆ ಅಸ್ಸಾಂ ಪ್ರವೇಶಿಸಿದ್ದರು.

ಹಲುವತಿಂಗ್‌ನಲ್ಲಿ ಸೇರಿದ್ದ ನೂರಾರು ಕಾರ್ಯಕರ್ತರು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕರನ್ನು ರಾಜ್ಯಕ್ಕೆ ಬರಮಾಡಿಕೊಂಡಿದ್ದಾರೆ. ಅಸ್ಸಾಂನಲ್ಲಿ ತ್ರಿವರ್ಣ ಧ್ವಜವನ್ನು ಹಸ್ತಾಂತರ ಕಾರ್ಯಕ್ರಮವು ರಾಜ್ಯದಲ್ಲಿ ಯಾತ್ರೆ ಆರಂಭಕ್ಕೆ ಮೊದಲು ನಡೆದಿದೆ.

ಅಸ್ಸಾಂನಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಹುಶಃ ಭಾರತದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಅಸ್ಸಾಂ ಸರಕಾರ, ಬಿಜೆಪಿ, ಆರೆಸ್ಸೆಸ್ ದ್ವೇಷ ಹರಡಿ, ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದೆ. ಬಿಜೆಪಿ-ಆರೆಸ್ಸೆಸ್‌ ದೇಶ ಮತ್ತು ರಾಜ್ಯಗಳಲ್ಲಿ ಅನ್ಯಾಯ ಮಾಡುತ್ತಿದೆ. ಆರ್ಥಿಕ ಅನ್ಯಾಯ, ಸಾಮಾಜಿಕ ಅನ್ಯಾಯ ಅಥವಾ ರಾಜಕೀಯ ಅನ್ಯಾಯವಾಗುತ್ತಿದೆ. ಮಣಿಪುರದಲ್ಲಿ ಅಂತರ್ಯುದ್ಧದ ವಾತಾವರಣವಿದ್ದು, ಇಲ್ಲಿಯವರೆಗೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿಲ್ಲ. ನಾಗಾಲ್ಯಾಂಡ್‌ನಲ್ಲಿ 9 ವರ್ಷಗಳ ಹಿಂದೆ ಮೋದಿ ದೊಡ್ಡ ಭರವಸೆಗಳನ್ನು ಕೊಟ್ಟಿದ್ದರು. ಅವರು ನಾಗಾ ಒಪ್ಪಂದದ ಬಗ್ಗೆ ಭರವಸೆ ನೀಡಿದ್ದರು. ಆ ಒಪ್ಪಂದ ಈಗ ಏನಾಗಿದೆ ಎಂದು ನಾಗಾಲ್ಯಾಂಡ್‌ನ ಜನರು ಇಂದು ಕೇಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಅಸ್ಸಾಂನಲ್ಲೂ ಇದೇ ರೀತಿಯ ಘಟನೆಗಳು ನಡೆಯುತ್ತಿವೆ. ಬಹುಶಃ ಭಾರತದ ಅತ್ಯಂತ ಭ್ರಷ್ಟ ಸರ್ಕಾರ ಅಸ್ಸಾಂನ ಸರಕಾರವಾಗಿದೆ. ನಮಗೆ ನಾಗಾಲ್ಯಾಂಡ್‌ನಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಮತ್ತು ಅಸ್ಸಾಂನಲ್ಲೂ ನಾವು ಅದೇ ರೀತಿ ಬೆಂಬಲ ಪಡೆಯುತ್ತೇನೆ ಎಂದು ನಾನು ಭಾವಿಸುತ್ತೇನೆ. ನಾವು ಅಸ್ಸಾಂನ ಇತಿಹಾಸವನ್ನು ಮತ್ತೆ ಪುನರಾವರ್ತಿಸುತ್ತಿದ್ದೇವೆ, ಶಂಕರ್ ದೇವ್ ಜಿ ನಿಮಗೆ ದಾರಿ ತೋರಿಸಿದ್ದಾರೆ, ಎಲ್ಲರನ್ನೂ ಒಗ್ಗೂಡಿಸಲು ಕೆಲಸ ಮಾಡಿದ್ದಾರೆ. ಅದೇ ರೀತಿ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಪ್ರಯಾಣವು ಅಸ್ಸಾಂನ ಜನರಿಗೆ ಉತ್ಸಾಹ ಮತ್ತು ಧೈರ್ಯದ ಪ್ರಯಾಣವಾಗಿದೆ ಏಕೆಂದರೆ ಇಲ್ಲಿನ ಜನರು ತೊಂದರೆಗೀಡಾಗಿದ್ದಾರೆ. ಜನರು ರಾಹುಲ್ ಗಾಂಧಿ ಇಲ್ಲಿಗೆ ಯಾವಾಗ ಬರುತ್ತಾರೆ ಎಂದು ಕಾಯುತ್ತಿದ್ದಾರೆ. ಇದು ಐತಿಹಾಸಿಕ ಪ್ರಯಾಣವಾಗಿದೆ. ನಮ್ಮ ಪಕ್ಷವು ಭಾರತದ ಸಂವಿಧಾನವನ್ನು ನಂಬುತ್ತದೆ. ಇಂದು
ಬಿಜೆಪಿಯು ಶಂಕರಾಚಾರ್ಯರಿಗಿಂತ ಹೆಚ್ಚು ಜ್ಞಾನಿ ಎಂದು ಹೇಳುತ್ತಿದೆ. ಅವರಲ್ಲಿ ಅಹಂಕಾರ ತುಂಬಿದೆ ಎಂದು ಇದೇ ವೇಳೆ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ.
ನಮಗೆ ನ್ಯಾಯದ ಹಕ್ಕು ಸಿಗುವವರೆಗೂ ಯಾತ್ರೆ ಮುಂದುವರಿಯಲಿದೆ ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಕಾಂಗ್ರೆಸ್‌ ಸ್ಪಷ್ಟಪಡಿಸಿದೆ. ಭಾರತ ಜೋಡೋ ನ್ಯಾಯ ಯಾತ್ರೆಯ ಐದನೇ ದಿನವಾದ ಇಂದು ದೇಶದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಸಾರ್ವಜನಿಕರು ಈ ‘ನ್ಯಾಯ ಯಾತ್ರೆ’ಯಲ್ಲಿ ನಮ್ಮೊಂದಿಗೆ ಒಗ್ಗಟ್ಟಾಗಿ ಮುನ್ನಡೆಯುತ್ತಿದ್ದಾರೆ. ಈ ಯಾತ್ರೆಯು ನಮಗೆ ನ್ಯಾಯದ ಹಕ್ಕು ಸಿಗುವವರೆಗೆ ಮುಂದುವರಿಯುತ್ತದೆ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ತಿಳಿಸಿದೆ.
ಭಾರತ್ ಜೋಡೋ ನ್ಯಾಯ್ ಯಾತ್ರೆ ಜನವರಿ 14ರಂದು ಮಣಿಪುರದ ತೌಬಲ್‌ನಿಂದ ಪ್ರಾರಂಭವಾಯಿತು. ಬಳಿಕ ನಾಗಾಲ್ಯಾಂಡ್‌ ಮೂಲಕ ಇಂದು ಅಸ್ಸಾಂಗೆ ತಲುಪಿದೆ. ಯಾತ್ರೆಯು 67 ದಿನಗಳಲ್ಲಿ 6,700 ಕಿಲೋಮೀಟರ್‌ಗಳನ್ನು ಕ್ರಮಿಸಲಿದ್ದು 110 ಜಿಲ್ಲೆಗಳಲ್ಲಿ ಸಂಚರಿಸಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...