Homeಫ್ಯಾಕ್ಟ್‌ಚೆಕ್Fact Check: ರಾಮ ಮಂದಿರ ಉದ್ಘಾಟನೆಯಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ಕೇರಳ ಸರ್ಕಾರ ನಿರ್ಧರಿಸಿದೆಯಾ?

Fact Check: ರಾಮ ಮಂದಿರ ಉದ್ಘಾಟನೆಯಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ಕೇರಳ ಸರ್ಕಾರ ನಿರ್ಧರಿಸಿದೆಯಾ?

- Advertisement -
- Advertisement -

ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಯ ದಿನವಾದ ಜನವರಿ 22ರಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ಕೇರಳದ ಕಮ್ಯುನಿಸ್ಟ್ ಸರ್ಕಾರ ನಿರ್ಧರಿಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹಬ್ಬಿದೆ.

ರಾಮ ಮಂದಿರ ಉದ್ಘಾಟನಾ ಸಮಾರಂಭವನ್ನು ಜನರು ನೋಡದಂತೆ ತಡೆಯಲು ಕೇರಳ ಸರ್ಕಾರ ಹುನ್ನಾರ ಮಾಡಿದೆ ಎಂಬ ಅರ್ಥದಲ್ಲಿ ಸುದ್ದಿ ಹಂಚಿಕೊಳ್ಳಲಾಗ್ತಿದೆ.

ಪೋಸ್ಟ್ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ

ಪೋಸ್ಟ್‌ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಜನವರಿ 22ರಂದು ಕೇರಳ ಶಾಲಾ ಶಿಕ್ಷಕರ ಸಂಘದ (ಕೆಎಸ್‌ಟಿಎ) ಎರ್ನಾಕುಲಂ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ್ದ ಸಿಪಿಎಂ ರಾಜ್ಯ ಕಾರ್ಯದರ್ಶಿ ಪಿ ಕೆ ಬಿಜು ‘ಜನವರಿಯಲ್ಲಿ ಟಿವಿ ಆನ್ ಮಾಡಬೇಡಿ’ ಎಂದು ಹೇಳಿದ್ದರು. ಆ ಬಳಿಕ ಈ ರೀತಿಯ ಸುದ್ದಿ ಹಂಚಿಕೊಳ್ಳಲಾಗ್ತಿದೆ ಎಂದು ನ್ಯೂಸ್ ಚೆಕ್ಕರ್ ಡಾಟ್ ಇನ್ ಎಂಬ ವೆಬ್‌ಸೈಟ್ ತಿಳಿಸಿದೆ.

ನ್ಯೂಸ್‌ ಚೆಕ್ಕರ್ ಡಾಟ್ ಇನ್ ಸುದ್ದಿ ಲಿಂಕ್‌

ಕೇರಳ ರಾಜ್ಯ ವಿದ್ಯುತ್ ಮಂಡಳಿ (ಕೆಎಸ್‌ಇಬಿ) ಜನವರಿ 22ರಂದು ಪ್ರಮುಖ ನಿರ್ವಹಣಾ ಕಾರ್ಯ ಕೈಗೊಂಡಿದೆ. ಈ ಕಾರಣದಿಂದ ರಾಜ್ಯಾದ್ಯಂತ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂದು ಸುದ್ದಿಯಾಗಿದೆ.

ವಾಸ್ತವ : ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿದುಕೊಳ್ಳಲು ನಾನು ಗೌರಿ.ಕಾಂ “Electricity supply will remain closed in entire Kerala on January 22” ಎಂದು ಗೂಗಲ್‌ನಲ್ಲಿ ಕೀ ವರ್ಡ್‌ ಸರ್ಚ್ ಮಾಡಿದೆ. ಈ ವೇಳೆ ಕೇರಳ ಸರ್ಕಾರ ಜನವರಿ 22ರಂದು ರಾಜ್ಯಾದ್ಯಂತ ವಿದ್ಯುತ್ ಕಡಿತ ಮಾಡಲು ನಿರ್ಧರಿಸಿದೆ ಎಂಬುವುದರ ಕುರಿತು ಯಾವುದೇ ಮುಖ್ಯ ವಾಹಿನಿ ಮಾಧ್ಯಮ ವರದಿಗಳು ದೊರೆತಿಲ್ಲ.

ಬಲಪಂಥೀಯ ಡಿಜಿಟಲ್ ಮಾಧ್ಯಮಗಳಾದ Opindia (ಓಪ್ ಇಂಡಿಯಾ), Organiser (ಆರ್ಗನೈಸರ್) ಜನವರಿ 22ರಂದು ಟಿವಿ ಆನ್‌ ಮಾಡಬೇಡಿ ಎಂದು ಪಿಕೆ ಬಿಜು ಅವರು ಹೇಳಿರುವುದಾಗಿ ಸುದ್ದಿ ಪ್ರಕಟಿಸಿವೆ. ಅವುಗಳು ಕೂಡ ಜನವರಿ 22ರಂದು ರಾಜ್ಯಾದ್ಯಂತ ವಿದ್ಯುತ್ ಕಡಿತವಾಗಲಿದೆ ಎಂದು ಸ್ಪಷ್ಟವಾಗಿ ಹೇಳಿಲ್ಲ.

ನಾವು ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಅಧಿಕೃತ ಫೇಸ್‌ಬುಕ್ ಖಾತೆಯನ್ನು ಪರಿಶೀಲಿಸಿದ್ದೇವೆ. ಅದರಲ್ಲಿ ಜನವರಿ 22ರಂದು ವಿದ್ಯುತ್ ಕಡಿತದ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.

ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಅಧಿಕೃತ ಫೇಸ್‌ಬುಕ್ ಖಾತೆ ಲಿಂಕ್ 

“ನಾವು ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಸಾಮಾಜಿಕ ಮಾಧ್ಯಮ ತಂಡವನ್ನು ಸಂಪರ್ಕಿಸಿದ್ದೇವೆ. ಅವರು ಜನವರಿ 22ರಂದು ವಿದ್ಯುತ್ ಕಡಿತವಾಗಲಿದೆ ಎಂಬುವುದನ್ನು ನಿರಾಕರಿಸಿದ್ದಾರೆ. ಅಂದು ಯಾವುದೇ ನಿರ್ವಹಣಾ ಕಾರ್ಯ ಕೈಗೊಂಡಿಲ್ಲ ಎಂದು ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ” ಎಂದು ಇಂಗ್ಲಿಷ್ ಫ್ಯಾಕ್ಟ್ ಚೆಕ್ ವೆಬ್‌ಸೈಟ್ ನ್ಯೂಸ್ ಚೆಕ್ಕರ್ ಡಾಟ್ ಇನ್ ತಿಳಿಸಿದೆ.

ನಾವು ಕೇರಳ ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ ಪಿ ಎಂ ಮನೋಜ್ ಅವರನ್ನೂ ಸಂಪರ್ಕಿಸಿದ್ದೇವೆ. ಅವರೂ ಈ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ ಎಂದು ನ್ಯೂಸ್ ಚೆಕ್ಕರ್ ಹೇಳಿದೆ.

ನ್ಯೂಸ್‌ ಚೆಕ್ಕರ್ ಡಾಟ್ ಇನ್ ಸುದ್ದಿ ಲಿಂಕ್‌

ಒಟ್ಟಿನಲ್ಲಿ, ಲಭ್ಯವಾದ ಮೂಲಗಳನ್ನು ಬಳಸಿಕೊಂಡು ನಾನುಗೌರಿ.ಕಾಂ ನಡೆಸಿದ ಪರಿಶೀಲನೆಯ ಪ್ರಕಾರ ಜನವರಿ 22ರಂದು ರಾಮ ಮಂದಿರದ ಉದ್ಘಾಟನೆಯ ದಿನ ವಿದ್ಯುತ್ ಕಡಿತ ಮಾಡಲು ಕೇರಳ ಸರ್ಕಾರ ನಿರ್ಧರಿಸಿದೆ ಎಂಬ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.

Fact Check: ರಾಮ ಮಂದಿರ ಉದ್ಘಾಟನೆಯಂದು ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಿಸಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...