Homeಕರ್ನಾಟಕಬಸವಣ್ಣರನ್ನು 'ಕರ್ನಾಟಕದ ಸಾಂಸ್ಕೃತಿಕ ನಾಯಕ'ನೆಂದು ಘೋಷಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

ಬಸವಣ್ಣರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ನೆಂದು ಘೋಷಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ ಅವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

“ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ. ನಮ್ಮ ಸರ್ಕಾರದ ಈ ತೀರ್ಮಾನ ಮುಖ್ಯಮಂತ್ರಿಯಾದ ನನಗೆ ಅತೀವ ಹೆಮ್ಮೆ ಮತ್ತು ತೃಪ್ತಿಯನ್ನು ಉಂಟು ಮಾಡಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ” ಎಂದು ಸಿಎಂ ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ನನ್ನ ಬಳಿ ಬಂದು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಈ ಬೇಡಿಕೆಯನ್ನು ಈಡೇರಿಸಿದ ತೃಪ್ತಿ ನಮ್ಮ ಸರ್ಕಾರಕ್ಕೆ ಇದೆ. ಈ ಎಲ್ಲ ಸ್ವಾಮೀಜಿಗಳ ಆಶೀರ್ವಾದ ನಮ್ಮ ಸರ್ಕಾರದ ಮೇಲೆ ಇರಲಿ ಎಂದು ಇದೇ ಸಂದರ್ಭದಲ್ಲಿ ಅರಿಕೆ ಮಾಡಿಕೊಳ್ಳುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಬಸವಣ್ಣ ನನ್ನವೈಚಾರಿಕ ಗುರು. ಬಸವ ಜಯಂತಿಯ ದಿನವೇ ನಾನು ಮೊದಲ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೆ. ಆ ನಿರ್ಧಾರ ಕಾಕತಾಳೀಯವಲ್ಲ, ಉದ್ದೇಶಪೂರ್ವಕವಾದುದು. ಆ ದಿನ ಬಸವಣ್ಣನವರ ಚಿಂತನೆಗಳ ಹಾದಿಯಲ್ಲಿ ನಡೆಯುತ್ತೇನೆ ಎಂದು ನನ್ನ ಮನಸ್ಸಿನೊಳಗೆ ಪ್ರಮಾಣ ಮಾಡಿದ್ದೆ. ಅದರಂತೆ ಬಸವಣ್ಣನವರ ತತ್ವದ ದಾರಿಯಲ್ಲಿಯೇ ನಮ್ಮ ಸರ್ಕಾರ ಈಗಲೂ ಸಾಗುತ್ತಿದೆ. ಈ ಜಾಗೃತಿ ನಮ್ಮ ಸರ್ಕಾರದ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಇರಬೇಕೆಂಬ ಉದ್ದೇಶದಿಂದಲೇ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕೆಂದು ಆದೇಶಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಅಣ್ಣನ ಅನ್ನದಾಸೋಹದ ಸಂದೇಶಕ್ಕೆ ಅನುಗುಣವಾಗಿ ಮುಖ್ಯಮಂತ್ರಿಯಾದ ಮರುಗಳಿಗೆಯಲ್ಲಿಯೇ ಅನ್ನಭಾಗ್ಯ’ಯೋಜನೆಯನ್ನು ಜಾರಿಗೊಳಿಸಿದೆ. ಈ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪ ಕೈಗೊಂಡೆ. ವಿದ್ಯಾರ್ಥಿಗಳಿಗೆ ಬಿಸಿಯೂಟ, ಕ್ಷೀರಭಾಗ್ಯದ ಮೂಲಕ ಹಾಲು, ಇಂದಿರಾ ಕ್ಯಾಂಟೀನ್, ಗರ್ಭಿಣಿ ಮತ್ತು ಬಾಣಂತಿಯರಿಗಾಗಿ ಮಾತೃಪೂರ್ಣ ಯೋಜನೆಗಳು ಬಸವಣ್ಣನವರ ಅನ್ನದಾಸೋಹದ ಚಿಂತನೆಯಿಂದಲೇ ಪ್ರೇರಿತವಾದುದು. ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶಗಳು ಸಿಗಬೇಕು ಎಂದು ಬಸವಣ್ಣ ಬಯಸಿದ್ದರು. ನಮ್ಮ ಸರ್ಕಾರದ ಯೋಜನೆಗಳತ್ತ ಕಣ್ಣು ಹಾಯಿಸಿದರೆ ಬಸವಣ್ಣನ ಆಶಯಗಳ ಪ್ರಭಾವ ಪ್ರತಿಯೋಜನೆಯಲ್ಲಿಯೂ ಕಾಣಬಹುದು ಎಂದು ಸಿಎಂ ಬರೆದುಕೊಂಡಿದ್ದಾರೆ.

ಬಡತನ ನಿವಾರಣೆ, ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ, ಉದ್ಯೋಗ ಸೃಷ್ಟಿಗೆ ನಮ್ಮ ಸರ್ಕಾರ ಆದ್ಯತೆ ನೀಡಿ ಅಭಿವೃದ್ಧಿಯ ಜೊತೆಯಲ್ಲಿ ಸಾಮಾಜಿಕ ನ್ಯಾಯವನ್ನು ಬೆಸೆಯುವ ನಮ್ಮ ಕರ್ನಾಟಕ ಅಭಿವೃದ್ಧಿ ಮಾದರಿಯನ್ನು ಇಡೀ ದೇಶ ಚರ್ಚಿಸುತ್ತಿದೆ. ಬಸವಣ್ಣ ಎಂಬ ಜ್ಞಾನಭಂಡಾರದ ಮಾರ್ಗದರ್ಶನ ಇಲ್ಲದೆ ಇದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ಕನ್ನಡ ಭಾಷೆಯ ಬಗೆಗಿನ ನಮ್ಮ ಸರ್ಕಾರದ ಬದ್ಧತೆಗೂ ಬಸವಣ್ಣನೇ ಪ್ರೇರಕ ಶಕ್ತಿ. ಬಸವಣ್ಣನವರು ಕನ್ನಡವನ್ನು ಅಂದಿನ ಧರ್ಮದ ಭಾಷೆಯಾಗಿ, ವಿಚಾರದ ಭಾಷೆಯಾಗಿ, ಸಂವಹನದ ಭಾಷೆಯಾಗಿ ಬಳಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಬೆಲೆ ಕಟ್ಟಲಾರದ್ದು. ಹಾಗೆ ನೋಡಿದರೆ ಕನ್ನಡ ಮಾಧ್ಯಮ ಪರಿಣಾಮಕಾರಿಯಾಗಿ ಜಾರಿಗೆ ಬಂದದ್ದೇ ಹನ್ನೆರಡನೇ ಶತಮಾನದಲ್ಲಿ ಎನ್ನುವುದು ಆಶ್ಚರ್ಯದ ಸಂಗತಿಯಾದರೂ ವಾಸ್ತವ ಎಂದಿದ್ದಾರೆ.

ಅನ್ನದಾಸೋಹ ಮತ್ತು ಜ್ಞಾನದಾಸೋಹದ ಮೂಲಕ ರಾಜ್ಯದ ಲಿಂಗಾಯತ ಮಠಗಳು ನಾಡಿನ ಸರ್ವಾಂಗೀಣ ಏಳಿಗೆಗೆ ಶ್ರಮಿಸುತ್ತಿರುವುದನ್ನು ಕೂಡಾ ನಾನು ಕೃತಜ್ಞತಾ ಭಾವದಿಂದ ಸ್ಮರಿಸುತ್ತೇನೆ. ಬಡತನ ಮತ್ತು ಅಜ್ಞಾನದ ನಿವಾರಣೆಯಲ್ಲಿ ಈ ಮಠಗಳು ವಿಶೇಷ ಪಾತ್ರವಹಿಸಿವೆ. ಶಿಕ್ಷಣ ಪ್ರಸಾರಕ್ಕೆ ಧಾರ್ಮಿಕ ಮಠ ಮಾನ್ಯಗಳು ನೀಡಿರುವ ಕೊಡುಗೆ ಅಪಾರವಾದುದು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆಯನ್ನಷ್ಟೇ ಮಾಡಿ ನಾವು ವಿರಮಿಸುವುದಿಲ್ಲ. ಬಸವ ತತ್ವವನ್ನು ಮನೆಮನೆಗೆ ತಲುಪಿಸುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತೇವೆ. ಸಮಸಮಾಜ ನಿರ್ಮಾಣದ ಬಗ್ಗೆ ಬಸವಣ್ಣ ಕಂಡ ಕನಸನ್ನು ಸಾಕಾರಗೊಳಿಸಲು ಎಲ್ಲರ ಸಹಕಾರ ಇರಲಿ ಎಂದು ಸಿಎಂ ಮನವಿ ಮಾಡಿದ್ದಾರೆ.

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಸರ್ಕಾರದ ಪರವಾಗಿ ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಮನವಿ ಮಾಡಿದ್ದರು.

ಇದನ್ನೂ ಓದಿ : ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿ: ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...