Homeಮುಖಪುಟರಾಜ್ಯಗಳ ಅನುದಾನ ಕಡಿತಕ್ಕೆ ಹಿಂಬಾಗಿಲಿನಿಂದ ಪ್ರಯತ್ನಿಸಿದ್ದ ಮೋದಿ: ಅಲ್‌ ಜಝೀರಾ ವರದಿ

ರಾಜ್ಯಗಳ ಅನುದಾನ ಕಡಿತಕ್ಕೆ ಹಿಂಬಾಗಿಲಿನಿಂದ ಪ್ರಯತ್ನಿಸಿದ್ದ ಮೋದಿ: ಅಲ್‌ ಜಝೀರಾ ವರದಿ

- Advertisement -
- Advertisement -

2014 ರಲ್ಲಿ ಪ್ರಧಾನ ಮಂತ್ರಿಯಾದ ತಕ್ಷಣ, ನರೇಂದ್ರ ಮೋದಿ ಅವರು ರಾಜ್ಯಗಳಿಗೆ ಮೀಸಲಿಟ್ಟ ಅನುದಾನವನ್ನು ಗಮನಾರ್ಹವಾಗಿ ಕಡಿತಗೊಳಿಸಲು ಭಾರತದ ಹಣಕಾಸು ಆಯೋಗದೊಂದಿಗೆ ‘ಹಿಂಬಾಗಿಲಿನ ಮಾತುಕತೆ’ ನಡೆಸಿದ್ದರು ಎಂದು ‘ಅಲ್‌ ಜಝೀರಾ’ ವರದಿ ಮಾಡಿದೆ.

‘ಕೇಂದ್ರೀಯ ತೆರಿಗೆಗಳಿಂದ ರಾಜ್ಯಗಳ ಪಾಲನ್ನು ನಿರ್ಧರಿಸುವ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಿದೆ’ ಎಂದು ಆಯೋಗದ ಮುಖ್ಯಸ್ಥರು ವಿರೋಧಿಸಿದ ನಂತರ, ಮೋದಿ ಅವರು ಹಿಂದೆ ಸರಿಯಬೇಕಾಯಿತು ಎಂದು ಹೇಳಲಾಗಿದೆ.

ಹಣಕಾಸು ಆಯೋಗದ ದೃಢವಾದ ನಿಲುವು ಮೋದಿ ಸರ್ಕಾರವು ತನ್ನ ಮೊದಲ ಪೂರ್ಣ ಬಜೆಟ್ ಅನ್ನು 48 ಗಂಟೆಗಳಲ್ಲಿ ತರಾತುರಿಯಲ್ಲಿ ಮರುಪರಿಶೀಲಿಸುವಂತೆ ಮಾಡಿತು. ತೆರಿಗೆಗಳ ಹೆಚ್ಚಿನ ಭಾಗವನ್ನು ಕೇಂದ್ರದಲ್ಲೇ ಉಳಿಸಿಕೊಳ್ಳುವ ಅವರ ಊಹೆಯು ಕಾರ್ಯಸಾಧುವಾಗದ ಕಾರಣ, ಒಕ್ಕೂಟ ಸರ್ಕಾರವು ತನ್ನ ಕಲ್ಯಾಣ ಕಾರ್ಯಕ್ರಮಗಳ ಹಣವನ್ನು ಕಡಿತಗೊಳಿಸಿತ್ತು.

ಅದೇ ಸಮಯದಲ್ಲಿ, ‘ರಾಜ್ಯಗಳಿಗೆ ಹಂಚಿಕೆ ಮಾಡಬೇಕಾದ ತೆರಿಗೆ ಭಾಗಗಳ ಕುರಿತು ಹಣಕಾಸು ಆಯೋಗದ ಶಿಫಾರಸುಗಳನ್ನು ನಾನು ಸ್ವಾಗತಿಸುತ್ತೇನೆ’ ಎಂದು ಮೋದಿ ಸಂಸತ್ತಿನಲ್ಲಿ ಸುಳ್ಳು ಹೇಳಿಕೆ ನೀಡಿದರು.

ಒಕ್ಕೂಟ ಸರ್ಕಾರ ಬಜೆಟ್ ತಯಾರಿಕೆಯಲ್ಲಿ ಹಣಕಾಸಿನ ಚೌಕಾಶಿ ಮತ್ತು ತೆರೆಮರೆಯ ಕಾರ್ಯಾಚರಣೆ ಬಗ್ಗೆ ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಅವರಿಂದ ಬಹಿರಂಗವಾಗಿದೆ. ಪ್ರಧಾನ ಮಂತ್ರಿ ಕಚೇರಿಯಲ್ಲಿ ಜಂಟಿ ಕಾರ್ಯದರ್ಶಿಯಾಗಿ, ಅವರು ಮೋದಿ ಮತ್ತು ಹಣಕಾಸು ಆಯೋಗದ ಅಧ್ಯಕ್ಷ ವೈವಿ ರೆಡ್ಡಿ ನಡುವಿನ ‘ಹಿಂಬಾಗಿಲ ಸಂಧಾನ’ದಲ್ಲಿ ಸಂವಹಕಾರರಾಗಿದ್ದರು.

ಪ್ರಧಾನ ಮಂತ್ರಿ ಮತ್ತು ಅವರ ತಂಡವು ರಾಜ್ಯಗಳ ಹಣಕಾಸು ಕಡಿತಗೊಳಿಸಲು ಮೊದಲಿನಿಂದಲೂ ಪ್ರಯತ್ನಿಸಿದೆ ಎಂದು ಪ್ರಸ್ತುತ ಭಾರತ ಸರ್ಕಾರದ ಉನ್ನತ ಸರ್ಕಾರಿ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ಒಪ್ಪಿಕೊಂಡಿರುವುದು ಚರ್ಚಗೆ ಗ್ರಾಸವಾಗಿದೆ. ಈಗ ಬಗ್ಗೆ ಹಲವು ರಾಜ್ಯಗಳು ಪದೇ ಪದೇ ಕಳವಳ ವ್ಯಕ್ತಪಡಿಸಿವೆ.
ಸರ್ಕಾರೇತರ ಚಿಂತಕರ ಚಾವಡಿಯಾದ ‘ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯ ಕೇಂದ್ರ’ (ಸಿಎಸ್ಇಪಿ) ಆಯೋಜಿಸಿದ್ದ ‘ಭಾರತದಲ್ಲಿ ಹಣಕಾಸು ವರದಿ’ ಕುರಿತು ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡುತ್ತಾ ಸುಬ್ರಹ್ಮಣ್ಯಂ ಅವರು ಈ ಮಾಹಿತಿಯನ್ನು ಹಂಚಿಕೊಂಡರು.

ಒಕ್ಕೂಟ ಸರ್ಕಾರ ಬಜೆಟ್‌ಗಳು “ಸತ್ಯವನ್ನು ಮುಚ್ಚುವ ಪ್ರಯತ್ನದ ಪದರಗಳಲ್ಲಿ ಹೇಗೆ ಆವರಿಸಲ್ಪಟ್ಟಿವೆ” ಎಂಬುದನ್ನು ಅವರು ಬಹಿರಂಗಪಡಿಸಿದರು. ‘ಸರ್ಕಾರದ ಖಾತೆಗಳು ಪಾರದರ್ಶಕವಾಗಿದ್ದರೆ, ಹಣಕಾಸಿನ ಸ್ಥಿತಿಯ ಸತ್ಯವು ಸ್ಪಷ್ಟವಾಗುತ್ತದೆ. ಅದಾನಿ ಗ್ರೂಪ್‌ನ ಹಣಕಾಸಿನ ಸ್ಥಿತಗತಿಯನ್ನು ಅಮೆರಿಕ ಮೂಲದ ‘ಹಿಂಡೆನ್ಬರ್ಗ್’ ರಿಸರ್ಚ್ ಕಳೆದ ವರ್ಷ ಹೇಗೆ ಬೆಳಕಿಗೆ ತಂದಿತು ಎಂಬುದರ ಬಗ್ಗೆ ಅವರು ಮಾತನಾಡಿದ್ದಾರೆ.

ಭಾರತದ ಅತಿ ದೊಡ್ಡ ವ್ಯಾಪಾರ ಸಮೂಹಗಳ ಲೆಕ್ಕಪತ್ರ ವಂಚನೆ ಮತ್ತು ಇತರ ಸಮಸ್ಯೆಗಳ ಆಪಾದನೆಗಳು ಅದಾನಿ ಗುಂಪಿನ ಮೌಲ್ಯಮಾಪನದಲ್ಲಿ ಸುಮಾತು $132 ಬಿಲಿಯನ್ ಮಾರುಕಟ್ಟೆ ಕುಸಿತಕ್ಕೆ ಕಾರಣವಾಯಿತು.

ಅಲ್ ಜಝೀರಾಗೆ ರಿಪೋರ್ಟರ್ಸ್ ಕಲೆಕ್ಟಿವ್ ಚರ್ಚೆಯಲ್ಲಿ ಒಂದು ದಶಕದ ಹಿಂದಿನ ಬಜೆಟ್ ಮತ್ತು ಇತರ ದಾಖಲೆಗಳ ವಿರುದ್ಧ ಸುಬ್ರಹ್ಮಣ್ಯಂ ಅವರ ಆರೋಪಗಳ ಕುರಿತು ಸ್ವತಂತ್ರವಾಗಿ ಪರಿಶೀಲಿಸಿತು.

ಸುಬ್ರಹ್ಮಣ್ಯಂ ಅವರು ಸರ್ಕಾರದ ಅನುದಾನಿತ ಮೂಲಸೌಕರ್ಯ ಯೋಜನೆಯಲ್ಲಿ ಹಣಕಾಸಿನ ದುರುಪಯೋಗ ಮತ್ತು ವಂಚನೆಯ ವಿವರಗಳನ್ನು ಬಹಿರಂಗಪಡಿಸಿ, ಅದನ್ನು “ತಮಾಷೆಯ ಪ್ರಕರಣ” ಎಂದು ಉಲ್ಲೇಖಿಸಿದ್ದಾರೆ.

ಅವರ ಬಹುಮುಖ್ಯ ಮುಚ್ಚಿಟ್ಟ ಸತ್ಯದ ಬಹಿರಂಗಪಡಿಸುವಿಕೆಯ ಹೊರತಾಗಿಯೂ, ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದ ನೇರಪ್ರಸಾರ ವಿಡಿಯೋ 500 ಕ್ಕಿಂತ ಕಡಿಮೆ ವೀಕ್ಷಣೆ ಕಂಡಿದೆ. ದಿ ರಿಪೋರ್ಟರ್ಸ್ ಕಲೆಕ್ಟಿವ್ ಪ್ರಧಾನ ಮಂತ್ರಿ ಕಚೇರಿಗೆ ವಿವರವಾದ ಪ್ರಶ್ನೆಗಳನ್ನು ಕಳುಹಿಸಿದ ಗಂಟೆಗಳ ನಂತರ, ಸಿಎಸ್ಇಪಿ ಯೂಟ್ಯೂಬ್ ಚಾನೆಲ್‌ನಲ್ಲಿ ವಿಚಾರ ಸಂಕಿರಣದ ವೀಡಿಯೋ ವೀಕ್ಷಣೆಯನ್ನು ಕಡಿತಗೊಳಿಸಲಾಯಿತು. ಸುಬ್ರಹ್ಮಣ್ಯಂ ಮತ್ತು ದಿ ರಿಪೋರ್ಟರ್ಸ್ ಕಲೆಕ್ಟಿವ್‌ನ ವಿವರವಾದ ಪ್ರಶ್ನೆಗಳಿಗೆ ಹಣಕಾಸು ಸಚಿವಾಲಯ-ಪಿಎಂಒ ಈವರೆಗೆ ಪ್ರತಿಕ್ರಿಯಿಸಿಲ್ಲ.

ಅಲ್ ಜಝೀರಾ ವರದಿ ಬಗ್ಗೆ ಕಾಂಗ್ರೆಸ್‌ನ ಜೈರಾಮ್ ರಮೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.

ಸಾಂವಿಧಾನಿಕ ಸಂಸ್ಥೆಯ ಈ ನಿರ್ಲಕ್ಷ್ಯವು ಪ್ರಧಾನ ಮಂತ್ರಿಯ ನಿಜವಾದ ನಿಯತ್ತನ್ನು ಬಹಿರಂಗಪಡಿಸುತ್ತದೆ: ಅತಿಕೇಂದ್ರೀಕರಣ, ಸಂಪೂರ್ಣ ನಿಯಂತ್ರಣ ಮತ್ತು ಭಾರತದ ಒಕ್ಕೂಟ ವ್ಯವಸ್ಥೆಯನ್ನು ಕಿತ್ತುಹಾಕುವಿಕೆ. ರಾಜ್ಯಕ್ಕಾಗಿ ಕಡ್ಡಾಯ ನಿಧಿಗಳನ್ನು ಮೂಲೆಗುಂಪು ಮಾಡುವ ಈ ಪ್ರಯತ್ನದ ಪ್ರಭಾವವನ್ನು ನಾವು ನಿರ್ಲಕ್ಷಿಸಲಾಗುವುದಿಲ್ಲ. ನಾವು ಅವರ ಸಾಂವಿಧಾನಿಕ ಹಕ್ಕನ್ನು ನಿರಾಕರಿಸಲಾಗುವುದಿಲ್ಲ. ರಾಜ್ಯ ಸರ್ಕಾರಗಳು ಕಾನೂನು ಮತ್ತು ಸುವ್ಯವಸ್ಥೆಯಿಂದ ಶಾಲಾ ಶಿಕ್ಷಣದವರೆಗೆ ಎಲ್ಲದಕ್ಕೂ ಹಣಕಾಸು ಒದಗಿಸುತ್ತವೆ. ಜಿಎಸ್‌ಟಿಯ ಪರಿಚಯದ ನಂತರ ಕಡಿಮೆ ಆದಾಯದ ಮೂಲಗಳನ್ನು ಹೊಂದಿವೆ’ ಎಂದು ಜೈರಾಮ್ ರಮೇಶ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸೆಸ್ ಮತ್ತು ಸರ್ಚಾರ್ಜ್‌ಗಳು: ರಾಜ್ಯ ಹಕ್ಕುಗಳನ್ನು ಬದಿಗೊತ್ತುವ ಸಾಧನ

ಅಲ್‌ ಝಜೀರಾ ಅವರದಿಯ ಕುರಿತು ಮುಖ್ಯಮಂತ್ರಿ ಸಿದ್ದರಾನಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಅವರು, ‘ರಾಜ್ಯಗಳೊಂದಿಗೆ ಹಂಚಿಕೊಳ್ಳದಿರುವ ಸೆಸ್ ಮತ್ತು ಸರ್ಚಾರ್ಜ್‌ಗಳ ಸಂಗ್ರಹದಲ್ಲಿನ ಸ್ಥಿರವಾದ ಹೆಚ್ಚಳವು ಕರ್ನಾಟಕದಂತಹ ರಾಜ್ಯಗಳ ಆದಾಯದ ಸರಿಯಾದ ಪಾಲನ್ನು ಕಸಿದುಕೊಳ್ಳುವ ತಂತ್ರವಾಗಿ ಹೊರಹೊಮ್ಮಿದೆ. ಮಾಲಿನಿ ಚಕ್ರವರ್ತಿ ಅವರು ವಿವರಿಸಿರುವ ಈ ವಿಧಾನವು, ರಾಜ್ಯದ ಹಣಕಾಸಿನ ವೆಚ್ಚದಲ್ಲಿ ಕೇಂದ್ರ ಸರ್ಕಾರದ ಪಾಲನ್ನು ಹೆಚ್ಚಿಸಲು ಲೆಕ್ಕಾಚಾರದ ತಂತ್ರವನ್ನು ಪ್ರದರ್ಶಿಸುತ್ತದೆ. 2011-12ರಲ್ಲಿ ಒಟ್ಟು ತೆರಿಗೆಗಳ ಶೇ.10.4ರಿಂದ 2021-22ರ ವೇಳೆಗೆ ಶೇ.18.4ಕ್ಕೆ ಸೆಸ್ ಮತ್ತು ಸರ್ಚಾರ್ಜ್ಗಳ ಪಾಲು ಗಣನೀಯವಾಗಿ ಏರಿಕೆಯಾಗಲು ಬಿಜೆಪಿ ಸರ್ಕಾರದ ಆರ್ಥಿಕ ತಂತ್ರಗಳು ಕಾರಣವಾಗಿವೆ’ ಎಂದು ಆರೋಪಿಸಿದ್ದಾರೆ.

‘ಬಿವಿಆರ್ ಸುಬ್ರಹ್ಮಣ್ಯಂ ಅವರು ಬಹಿರಂಗಪಡಿಸಿದ ಸಂಗತಿಗಳು ಮತ್ತು ಅಲ್ ಜಝೀರಾ ಅವರ ಲೇಖನದ ಒಳನೋಟಗಳು ಒಕ್ಕೂಟದ ಹಣಕಾಸು ಸಂಬಂಧಗಳ ಬಗ್ಗೆ ಮೋದಿ ಸರ್ಕಾರದ ಧೋರಣೆಯ ಚಿತ್ರವನ್ನು ಬಹಿರಂಗಪಡಿಸುತ್ತವೆ. ಕರ್ನಾಟಕದಂತಹ ರಾಜ್ಯಗಳು ಕೇಂದ್ರ ಸರ್ಕಾರದ ಆರ್ಥಿಕ ದುರುಪಯೋಗದ ಭಾರವನ್ನು ಹೊರಲು ಬಿಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಈ ವಿಷಯಗಳನ್ನು ಸಾರ್ವಜನಿಕ ಚರ್ಚೆಯ ಮುಂಚೂಣಿಗೆ ತರುವುದು ಅನಿವಾರ್ಯವಾಗಿದೆ’ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ; ಮಸೀದಿ ಧ್ವಂಸಗೊಳಿಸಿ ರಾಮಮಂದಿರ ಕಟ್ಟುವುದನ್ನು ಒಪ್ಪುವುದಿಲ್ಲ: ಉದಯನಿಧಿ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...