Homeಕರ್ನಾಟಕಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ: ಶಾಸಕ ಮಂಜುನಾಥ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ: ಶಾಸಕ ಮಂಜುನಾಥ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

- Advertisement -
- Advertisement -

ಕೋಲಾರದ ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮುಳಬಾಗಿಲ ಮೀಸಲು ಕ್ಷೇತ್ರದ ಮಾಜಿ ಶಾಸಕ ಜಿ ಮಂಜುನಾಥ್ (ಕೊತ್ತೂರು ಮಂಜುನಾಥ್) ಅವರಿಗೆ ಜಾತಿ ಸಿಂಧುತ್ವ ಪ್ರಕರಣದಲ್ಲಿ ಮತ್ತೆ ಹಿನ್ನಡೆಯಾಗಿದೆ. ಕೋಲಾರ ಜಿಲ್ಲಾಧಿಕಾರಿ ನೇತೃತ್ವದ ಜಾತಿ ಪರಿಶೀಲನಾ ಸಮಿತಿಯ ನಿರ್ಣಯ ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನಾ ಸಮಿತಿಯ ನಿರ್ಣಯ ಪ್ರಶ್ನಿಸಿ ಜಿ ಮಂಜುನಾಥ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಬುಧವಾರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ಪ್ರಕಟಿಸಿದೆ.

ಪರಿಶಿಷ್ಟ ಜಾತಿಗೆ ಮೀಸಲಿಟ್ಟಿದ್ದ ಕ್ಷೇತ್ರವನ್ನು ಕಸಿದುಕೊಳ್ಳುವ ಮೂಲಕ ಮಂಜುನಾಥ್‌ ಪರಿಶಿಷ್ಟ ಜಾತಿಗಳ ವರ್ಗಕ್ಕೆ ವಂಚಿಸಿದ್ದಾರೆ. ಇದು ಸಂವಿಧಾನಕ್ಕೆ ಎಸಗಿದ ಮೋಸ. ಹೀಗಾಗಿ, ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯ ವರದಿಯಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಹೈಕೋರ್ಟ್‌ ತಿಳಿಸಿದೆ. ಮಂಜುನಾಥ್‌ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದನ್ನು ಸರ್ಕಾರವೇ ನಿರ್ಧರಿಸಬೇಕು ಎಂದು ಆದೇಶದಲ್ಲಿ ಹೇಳಿದೆ.

ಹೈಕೋರ್ಟ್‌ನ ಆದೇಶದಿಂದ ಮಂಜುನಾಥ್ ಅವರ ಹಾಲಿ ಶಾಸಕ ಸ್ಥಾನಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ. 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಗೆದ್ದಾಗ ಪಡೆದುಕೊಂಡಿದ್ದ ಸೌಲಭ್ಯಗಳನ್ನು ಪೂರ್ವಾಯನ್ವಯವಾಗುವಂತೆ ಅವರಿಂದ ವಾಪಸ್ ಪಡೆದುಕೊಳ್ಳಬಹುದಾಗಿದೆ. ಒಂದೊಮ್ಮೆ ಇದೇ ವಿಚಾರವಾಗಿ ಅವರ ವಿರುದ್ಧ ಹೈಕೋರ್ಟ್‌ನಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆಗೆ ಒಳಪಟ್ಟರೆ 6 ವರ್ಷಗಳ ಕಾಲ ಚುನಾವಣಾ ಸ್ಪರ್ಧೆಗೆ ನಿರ್ಬಂಧ ಸೇರಿದಂತೆ ಕೆಲವು ಕಾನೂನು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಎಂದು ಬಾರ್ ಅಂಡ್ ಬೆಂಚ್ ವರದಿ ತಿಳಿಸಿದೆ.

ಮಂಜುನಾಥ್ ಅವರು ಬುಡಗ ಜಂಗಮ ಜಾತಿಗೆ ಸೇರಿಲ್ಲ. ಅವರು ಬೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ನಿರ್ಣಯ ಕೈಗೊಂಡಿತ್ತು. ಇದನ್ನು ಮಂಜುನಾಥ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಬುಡಗ ಜಂಗಮ ಪರಿಶಿಷ್ಟ ಜಾತಿಯಾದರೆ, ಬೈರಾಗಿ ಒಬಿಸಿ ಪ್ರವರ್ಗ-1ಕ್ಕೆ ಸೇರಿದೆ.

ಪ್ರಕರಣದ ಹಿನ್ನೆಲೆ : ಜಿ ಮಂಜುನಾಥ್ 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದರು. ಜೆಡಿಎಸ್ ಪರಾಜಿತ ಅಭ್ಯರ್ಥಿ ಮುನಿನಂಜಪ್ಪ ಜಾತಿ ಪ್ರಮಾಣದ ಸಿಂಧುತ್ವ ಪ್ರಶ್ನಿಸಿದ್ದರು. ಈ ಪ್ರಕರಣ ತಹಶೀಲ್ದಾರ್, ಜಿಲ್ಲಾಧಿಕಾರಿ, ಸಿವಿಲ್ ನ್ಯಾಯಾಲಯ ಮತ್ತು ಹೈಕೋರ್ಟ್‌ನಲ್ಲಿ ವಿಚಾರಣೆಗೊಳಪಟ್ಟಿತ್ತು. ಅಂತಿಮವಾಗಿ ಹೈಕೋರ್ಟ್ ಮಂಜುನಾಥ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು.

ಇದರ ವಿರುದ್ಧ ಮಂಜುನಾಥ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್ ಅರ್ಜಿ ವಜಾಗೊಳಿಸಿ, ಜಾತಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿತ್ತು. ಜಾತಿ ಪರಿಶೀಲನಾ ಸಮಿತಿಯ ನಿರ್ಣಯದ ಬಗ್ಗೆ ಆಕ್ಷೇಪವಿದ್ದರೆ ಪುನಃ ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಅದರಂತೆ ಜಾತಿ ಪರಿಶೀಲನಾ ಸಮಿತಿಯ ನಿರ್ಣಯವನ್ನು ಮಂಜುನಾಥ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಇದೀಗ ಹೈಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿದೆ.

ಇದನ್ನೂ ಓದಿ : ಆದೇಶ ಪಾಲಿಸದ ರಾಜ್ಯ ಸರ್ಕಾರಕ್ಕೆ ₹5 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...