Homeಕರ್ನಾಟಕಕೇಂದ್ರದ ಅಂಗಳಕ್ಕೆ ಒಳ ಮೀಸಲಾತಿ ಚೆಂಡು; 341(3)ನೇ ವಿಧಿ ತಿದ್ದುಪಡಿಗೆ ರಾಜ್ಯ ಸರ್ಕಾರ ಶಿಫಾರಸು

ಕೇಂದ್ರದ ಅಂಗಳಕ್ಕೆ ಒಳ ಮೀಸಲಾತಿ ಚೆಂಡು; 341(3)ನೇ ವಿಧಿ ತಿದ್ದುಪಡಿಗೆ ರಾಜ್ಯ ಸರ್ಕಾರ ಶಿಫಾರಸು

- Advertisement -
- Advertisement -

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೆ, ಸಾಮಾಜಿಕ ನ್ಯಾಯದಡಿ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನದ 341(3) ನೇ ವಿಧಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಒಳ ಮೀಸಲಾತಿ ಜಾರಿ ಮಾಡುವ ವಿಚಾರದಲ್ಲಿ ಸಾಕಷ್ಟು ಗೊಂದಲ ಸೃಷ್ಟಿಸಿತ್ತು. ಅಂದಿನ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಜೆಸಿ ಮಾಧುಸ್ವಾಮಿ ನೇತೃತ್ವದಲ್ಲಿ ಉಪ ಸಮಿತಿ ರಚಿಸಿ, ಮೀಸಲಾತಿ ವರ್ಗೀಕರಣ ಮಾಡಲಾಗಿತ್ತು. ಆದರೆ, ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿದ್ದ ನ್ಯಾ. ಸದಾಶಿವ ಆಯೋಗದ ವರದಿಗೆ ಬಿಜೆಪಿ ಹೆಚ್ಚಿನ ಮಹತ್ವ ನೀಡಿರಲಿಲ್ಲ.

ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲೇಬೇಕು ಎಂದು ಪರಿಶಿಷ್ಟ ಬಲಗೈ ಸಮುದಾಯದ ಸಚಿವರು ಮತ್ತು ಶಾಸಕರು ಪಟ್ಟು ಹಿಡಿದಿದ್ದರು ಎನ್ನಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಳ ಮೀಸಲಾತಿ ವಿವಾದ ಮುನ್ನೆಲೆಗೆ ಬಂದಿದ್ದಾಗ, ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೊಳಿಸಲಾಗುವುದು’ ಎಂದು ಕೈ ಮುಖಂಡರು ಭರವಸೆಯನ್ನು ನೀಡಿದ್ದರು.
ಅಂತಿಮವಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಬರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಇನ್ನು ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದು, ‘ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬಗ್ಗೆ ಒಂದು ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ನಮ್ಮ ಹಿಂದಿನ ಸರ್ಕಾರದಲ್ಲಿ ಚಿತ್ರದುರ್ಗ ಸಮಾವೇಶದಲ್ಲಿ ಸದಾಶಿವ ಆಯೋಗ ಬಗ್ಗೆ ನಿರ್ಣಯ ಕೈಗೊಳ್ಳಲು ತೀರ್ಮಾನ ಮಾಡಿದ್ದೆವು. ನಂತರ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಸದಾಶಿವ ಆಯೋಗದ ವರದಿಯನ್ನೇ ತಿರಸ್ಕಾರ ಮಾಡಿದ್ರು. ಕಾನೂನಾತ್ಮಕವಾಗಿ ಒಳ ಮೀಸಲಾತಿ ಕೊಡಬೇಕಾಗುತ್ತದೆ. ನಾವೇ ಸಂವಿಧಾನಕ್ಕೆ ತಿದ್ದುಪಡಿ ತರಲು ಆಗಲ್ಲ. ಹಾಗಾಗಿ ಕೇಂದ್ರಕ್ಕೆ ಸಂವಿಧಾನ ತಿದ್ದುಪಡಿ ಮಾಡಲು ಶಿಫಾರಸು ಕಳಿಸುವ ಬಗ್ಗೆ ಇವತ್ತಿನ ಸಂಪುಟ ಸಭೆಯಲ್ಲಿ ಚರ್ಚಿಸ್ತೇವೆ’ ಎಂದು ಸಭೆಗೂ ಮುನ್ನ ಹೇಳಿದ್ದರು.

ಸಂಪುಟ ಸಭೆ ನಂತರ ಮಾತನಾಡಿದ ಸಚಿವ ಡಾ. ಎಚ್.ಸಿ. ಮಹದೇವಪ್ಪ, ‘ಕಳೆದ ಎರಡು ದಶಕಗಳಿಂದ ದಲಿತ ಸಮುದಾಯದ ಒಳಪಂಗಡಗಳು ಒಳಮೀಸಲಾತಿಗೆ ಬೇಡಿಕೆ ಇಟ್ಟಿದ್ದವು. ಚಿತ್ರದುರ್ಗದಲ್ಲಿ ಎಸ್‌ಸಿ-ಎಸ್‌ಟಿ ಸಮಾವೇಶದಲ್ಲಿ ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದೆವು. ಆದರೆ, ಬಿಜೆಪಿ ಸರ್ಕಾರ ತರಾತುರಿಯಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡಿ ಸದಾಶಿವ ಆಯೋಗದ ವರದಿ ಅಪ್ರಸ್ತುತ ಎಂದು ಶಿಫಾರಸು ಮಾಡಿತ್ತು’ ಎಂದು ಹೇಳಿದರು.

‘ಪರಿಶಿಷ್ಟ ಸಮುದಾಯದ 101 ಜಾತಿಗಳ ಹಿತ ಕಾಪಾಡಲು ಯಾರನ್ನು ಹೊರಗಡೆ ಬಿಡುವ ಪ್ರಶ್ನೆ ಇಲ್ಲ. ಈ ನಿಟ್ಟಿನಲ್ಲಿ 341(3) ಗೆ ತಿದ್ದುಪಡಿ ಮಾಡದೆ ಒಳಮೀಸಲಾತಿ ಕೊಡಲು ಸಾಧ್ಯ ಇಲ್ಲ. ಆದ್ದರಿಂದ, ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ಸಭೆ ನಿರ್ಧರಿಸಿದೆ ಎಂದು ತಿಳಿಸಿದರು.

ಒಳ ಮೀಸಲಾತಿ ಜಾರಿ ಕಾಂಗ್ರೆಸ್-ಬಿಜೆಪಿ ಜವಾಬ್ದಾರಿ:

ಹಲವು ವರ್ಷಗಳಿಂದ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಹೋರಾಟವನ್ನು ಮುನ್ನಡೆಸುತ್ತಿರುವ ಅಂಬಣ್ಣ ಅರೋಲಿಕರ್ ನಾನುಗೌರಿ.ಕಾಂ ಜತೆ ಮಾತನಾಡಿ, ‘ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ, ಒಳ ಮೀಸಲಾತಿ ಜಾರಿ ಮಾಡಿಸುವ ಜವಾಬ್ದಾರಿ ಆಡಳಿ ಪಕ್ಷ ಕಾಂಗ್ರೆಸ್ ಹಾಗೂ ವಿರೋಧ ಪಕ್ಷವಾದ ಬಿಜೆಪಿ ಎರಡರ ಮೇಲೂ ಇದೆ’ ಎಂದು ಹೇಳಿದರು.

‘ಬಿಜೆಪಿ ಸರ್ಕಾರ ಕಳೆದ ಮಾರ್ಚ್ ತಿಂಗಳಲ್ಲಿ ಒಳ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೇವೆ ಎಂದು ಸುಳ್ಳು ಹೇಳಿತ್ತು. ನ್ಯಾ. ಸದಾಶಿವ ಆಯೋಗದ ವರದಿಯನ್ನು ಬದಿಗೆ ಸರಿಸಿ, ಸಂಪುಟ ಉಪ ಸಮಿತಿ ರಚಿಸಿತ್ತು. ಒಳ ಮೀಸಲಾತಿ ಜಾರಿಗೆ ಮುಂದಾಗಿರುವ ಪಂಜಾಬ್, ಆಂಧ್ರಪ್ರದೇಶ ಯಾವ ರಾಜ್ಯದಲ್ಲೂ ಈ ರೀತಿ ಮಾಡಿರಲಿಲ್ಲ. ಆಯೋಗ ನೀಡಿದ ವರದಿಯನ್ನೇ ಪರಿಗಣಿಸಿದ್ದವು’ ಎಂದರು.

‘ಬಿಜೆಪಿಯ ಈ ತಪ್ಪನ್ನು ಸರಿಪಡಿಸುವ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ನಮ್ಮ ಒತ್ತಡ ಹೆಚ್ಚಾದ ನಂತರ ನ್ಯಾ. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಪರಸು ಮಾಡಿದೆ. ಈ ವಿಚಾರದಲ್ಲಿ ಆಡಳಿತ ಹಾಗೂ ವಿಪಕ್ಷಗಳೆರಡರ ಪಾತ್ರ ಬಹಳ ಮುಖ್ಯವಾಗಿದೆ. ಕಾಂಗ್ರೆಸ್-ಬಿಜೆಪಿ ಸೇರಿ ಸಂಸತ್ತಿನಲ್ಲಿ ಅಂಗೀಕಾರ ಆಗುವಂತೆ ಮಾಡಬೇಕು. ಸುಪ್ರೀಂಕೋರ್ಟಿನಲ್ಲಿ ಅರ್ಜಿ ಬಾಕಿ ಇವೆ ಎಂದು ಹೇಳುತ್ತಾರೆ; ಆದರೆ, ನಮ್ಮ ದೇಶದ ಸಂಸತ್ತಿಗೆ ಪರಮಾಧಿಕಾರ ಇದೆ. ಅಲ್ಲಿ ನಿರ್ಧಾರ ಮಾಡಲೇಬೇಕು. ಆರ್ಥಿಕ ಹಿಂದುಳಿದ ವರ್ಗ (ಇಡಬ್ಲ್ಯೂಎಸ್)ಕ್ಕೆ ಮೀಸಲಾತಿ ಜಾರಿ ಮಾಡಿದಂತೆ ಒಳ ಮೀಸಲಾತಿಯೂ ಜಾರಿಯಾಗಬೇಕು. ಯಾವುದೇ ಹೋರಾಟ, ಬೇಡಿಕೆ, ಕಾಯುವಿಕೆ ಏನೂ ಇಲ್ಲದೆ ಅವರಿಗೆ ಮೀಸಲಾತಿ ನೀಡಲಾಗಿದೆ’ ಎಂದರು.

ಒಳ ಮೀಸಲಾತಿ ಜಾರಿಗೆ ಮೂರು ದಿನ.. ಮೂರು ತಿಂಗಳ ಮಾಡಬಾರದು. ಈಗಾಗಲೇ 30 ವರ್ಷಗಳಿಂದ ಸಮುದಾಯದ ಒಂದಿಡೀ ತಲೆಮಾರು ಸರ್ಕಾರಿ ಉದ್ಯೋಗದಿಂದ ಹಿಡಿದು, ಹಲವು ರೀತಿಯಲ್ಲಿ ವಂಚಿತವಾಗಿದೆ. ಆದ್ದರಿಂದ ವಿಪಕ್ಷವಾದ ಬಿಜೆಪಿ ಮತ್ತು ಆಡಳಿತ ಪಕ್ಷವಾದ ಕಾಂಗ್ರೆಸ್ ಮುತುವರ್ಜಿ ತೆಗದುಕೊಂಡು, ಕೇಂದ್ರ ಸರ್ಕಾರ ಒಳ ಮೀಸಲಾತಿ ಜಾರಿಗೆ ತಿದ್ದುಪಡಿ ತರುವಂತೆ ನೋಡಿಕೊಳ್ಳಬೇಕು’ ಎಂದು ಅಂಬಣ್ಣ ಆಗ್ರಹಿಸಿದರು.

ಇದನ್ನೂ ಓದಿ; ‘ಅನ್ನಪೂರ್ಣಿ’ ವಿವಾದ: ಹಿಂದುತ್ವವಾದಿಗಳ ಒತ್ತಡಕ್ಕೆ ಮಣಿದ ನಯನತಾರಾ, ಬಹಿರಂಗ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...