Homeಕರ್ನಾಟಕಕೇಂದ್ರದ ಅಂಗಳಕ್ಕೆ ಒಳ ಮೀಸಲಾತಿ ಚೆಂಡು; 341(3)ನೇ ವಿಧಿ ತಿದ್ದುಪಡಿಗೆ ರಾಜ್ಯ ಸರ್ಕಾರ ಶಿಫಾರಸು

ಕೇಂದ್ರದ ಅಂಗಳಕ್ಕೆ ಒಳ ಮೀಸಲಾತಿ ಚೆಂಡು; 341(3)ನೇ ವಿಧಿ ತಿದ್ದುಪಡಿಗೆ ರಾಜ್ಯ ಸರ್ಕಾರ ಶಿಫಾರಸು

- Advertisement -
- Advertisement -

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೆ, ಸಾಮಾಜಿಕ ನ್ಯಾಯದಡಿ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನದ 341(3) ನೇ ವಿಧಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಒಳ ಮೀಸಲಾತಿ ಜಾರಿ ಮಾಡುವ ವಿಚಾರದಲ್ಲಿ ಸಾಕಷ್ಟು ಗೊಂದಲ ಸೃಷ್ಟಿಸಿತ್ತು. ಅಂದಿನ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಜೆಸಿ ಮಾಧುಸ್ವಾಮಿ ನೇತೃತ್ವದಲ್ಲಿ ಉಪ ಸಮಿತಿ ರಚಿಸಿ, ಮೀಸಲಾತಿ ವರ್ಗೀಕರಣ ಮಾಡಲಾಗಿತ್ತು. ಆದರೆ, ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿದ್ದ ನ್ಯಾ. ಸದಾಶಿವ ಆಯೋಗದ ವರದಿಗೆ ಬಿಜೆಪಿ ಹೆಚ್ಚಿನ ಮಹತ್ವ ನೀಡಿರಲಿಲ್ಲ.

ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲೇಬೇಕು ಎಂದು ಪರಿಶಿಷ್ಟ ಬಲಗೈ ಸಮುದಾಯದ ಸಚಿವರು ಮತ್ತು ಶಾಸಕರು ಪಟ್ಟು ಹಿಡಿದಿದ್ದರು ಎನ್ನಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಳ ಮೀಸಲಾತಿ ವಿವಾದ ಮುನ್ನೆಲೆಗೆ ಬಂದಿದ್ದಾಗ, ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೊಳಿಸಲಾಗುವುದು’ ಎಂದು ಕೈ ಮುಖಂಡರು ಭರವಸೆಯನ್ನು ನೀಡಿದ್ದರು.
ಅಂತಿಮವಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಬರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಇನ್ನು ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದು, ‘ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬಗ್ಗೆ ಒಂದು ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ನಮ್ಮ ಹಿಂದಿನ ಸರ್ಕಾರದಲ್ಲಿ ಚಿತ್ರದುರ್ಗ ಸಮಾವೇಶದಲ್ಲಿ ಸದಾಶಿವ ಆಯೋಗ ಬಗ್ಗೆ ನಿರ್ಣಯ ಕೈಗೊಳ್ಳಲು ತೀರ್ಮಾನ ಮಾಡಿದ್ದೆವು. ನಂತರ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಸದಾಶಿವ ಆಯೋಗದ ವರದಿಯನ್ನೇ ತಿರಸ್ಕಾರ ಮಾಡಿದ್ರು. ಕಾನೂನಾತ್ಮಕವಾಗಿ ಒಳ ಮೀಸಲಾತಿ ಕೊಡಬೇಕಾಗುತ್ತದೆ. ನಾವೇ ಸಂವಿಧಾನಕ್ಕೆ ತಿದ್ದುಪಡಿ ತರಲು ಆಗಲ್ಲ. ಹಾಗಾಗಿ ಕೇಂದ್ರಕ್ಕೆ ಸಂವಿಧಾನ ತಿದ್ದುಪಡಿ ಮಾಡಲು ಶಿಫಾರಸು ಕಳಿಸುವ ಬಗ್ಗೆ ಇವತ್ತಿನ ಸಂಪುಟ ಸಭೆಯಲ್ಲಿ ಚರ್ಚಿಸ್ತೇವೆ’ ಎಂದು ಸಭೆಗೂ ಮುನ್ನ ಹೇಳಿದ್ದರು.

ಸಂಪುಟ ಸಭೆ ನಂತರ ಮಾತನಾಡಿದ ಸಚಿವ ಡಾ. ಎಚ್.ಸಿ. ಮಹದೇವಪ್ಪ, ‘ಕಳೆದ ಎರಡು ದಶಕಗಳಿಂದ ದಲಿತ ಸಮುದಾಯದ ಒಳಪಂಗಡಗಳು ಒಳಮೀಸಲಾತಿಗೆ ಬೇಡಿಕೆ ಇಟ್ಟಿದ್ದವು. ಚಿತ್ರದುರ್ಗದಲ್ಲಿ ಎಸ್‌ಸಿ-ಎಸ್‌ಟಿ ಸಮಾವೇಶದಲ್ಲಿ ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದೆವು. ಆದರೆ, ಬಿಜೆಪಿ ಸರ್ಕಾರ ತರಾತುರಿಯಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡಿ ಸದಾಶಿವ ಆಯೋಗದ ವರದಿ ಅಪ್ರಸ್ತುತ ಎಂದು ಶಿಫಾರಸು ಮಾಡಿತ್ತು’ ಎಂದು ಹೇಳಿದರು.

‘ಪರಿಶಿಷ್ಟ ಸಮುದಾಯದ 101 ಜಾತಿಗಳ ಹಿತ ಕಾಪಾಡಲು ಯಾರನ್ನು ಹೊರಗಡೆ ಬಿಡುವ ಪ್ರಶ್ನೆ ಇಲ್ಲ. ಈ ನಿಟ್ಟಿನಲ್ಲಿ 341(3) ಗೆ ತಿದ್ದುಪಡಿ ಮಾಡದೆ ಒಳಮೀಸಲಾತಿ ಕೊಡಲು ಸಾಧ್ಯ ಇಲ್ಲ. ಆದ್ದರಿಂದ, ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ಸಭೆ ನಿರ್ಧರಿಸಿದೆ ಎಂದು ತಿಳಿಸಿದರು.

ಒಳ ಮೀಸಲಾತಿ ಜಾರಿ ಕಾಂಗ್ರೆಸ್-ಬಿಜೆಪಿ ಜವಾಬ್ದಾರಿ:

ಹಲವು ವರ್ಷಗಳಿಂದ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಹೋರಾಟವನ್ನು ಮುನ್ನಡೆಸುತ್ತಿರುವ ಅಂಬಣ್ಣ ಅರೋಲಿಕರ್ ನಾನುಗೌರಿ.ಕಾಂ ಜತೆ ಮಾತನಾಡಿ, ‘ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ, ಒಳ ಮೀಸಲಾತಿ ಜಾರಿ ಮಾಡಿಸುವ ಜವಾಬ್ದಾರಿ ಆಡಳಿ ಪಕ್ಷ ಕಾಂಗ್ರೆಸ್ ಹಾಗೂ ವಿರೋಧ ಪಕ್ಷವಾದ ಬಿಜೆಪಿ ಎರಡರ ಮೇಲೂ ಇದೆ’ ಎಂದು ಹೇಳಿದರು.

‘ಬಿಜೆಪಿ ಸರ್ಕಾರ ಕಳೆದ ಮಾರ್ಚ್ ತಿಂಗಳಲ್ಲಿ ಒಳ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೇವೆ ಎಂದು ಸುಳ್ಳು ಹೇಳಿತ್ತು. ನ್ಯಾ. ಸದಾಶಿವ ಆಯೋಗದ ವರದಿಯನ್ನು ಬದಿಗೆ ಸರಿಸಿ, ಸಂಪುಟ ಉಪ ಸಮಿತಿ ರಚಿಸಿತ್ತು. ಒಳ ಮೀಸಲಾತಿ ಜಾರಿಗೆ ಮುಂದಾಗಿರುವ ಪಂಜಾಬ್, ಆಂಧ್ರಪ್ರದೇಶ ಯಾವ ರಾಜ್ಯದಲ್ಲೂ ಈ ರೀತಿ ಮಾಡಿರಲಿಲ್ಲ. ಆಯೋಗ ನೀಡಿದ ವರದಿಯನ್ನೇ ಪರಿಗಣಿಸಿದ್ದವು’ ಎಂದರು.

‘ಬಿಜೆಪಿಯ ಈ ತಪ್ಪನ್ನು ಸರಿಪಡಿಸುವ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ನಮ್ಮ ಒತ್ತಡ ಹೆಚ್ಚಾದ ನಂತರ ನ್ಯಾ. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಪರಸು ಮಾಡಿದೆ. ಈ ವಿಚಾರದಲ್ಲಿ ಆಡಳಿತ ಹಾಗೂ ವಿಪಕ್ಷಗಳೆರಡರ ಪಾತ್ರ ಬಹಳ ಮುಖ್ಯವಾಗಿದೆ. ಕಾಂಗ್ರೆಸ್-ಬಿಜೆಪಿ ಸೇರಿ ಸಂಸತ್ತಿನಲ್ಲಿ ಅಂಗೀಕಾರ ಆಗುವಂತೆ ಮಾಡಬೇಕು. ಸುಪ್ರೀಂಕೋರ್ಟಿನಲ್ಲಿ ಅರ್ಜಿ ಬಾಕಿ ಇವೆ ಎಂದು ಹೇಳುತ್ತಾರೆ; ಆದರೆ, ನಮ್ಮ ದೇಶದ ಸಂಸತ್ತಿಗೆ ಪರಮಾಧಿಕಾರ ಇದೆ. ಅಲ್ಲಿ ನಿರ್ಧಾರ ಮಾಡಲೇಬೇಕು. ಆರ್ಥಿಕ ಹಿಂದುಳಿದ ವರ್ಗ (ಇಡಬ್ಲ್ಯೂಎಸ್)ಕ್ಕೆ ಮೀಸಲಾತಿ ಜಾರಿ ಮಾಡಿದಂತೆ ಒಳ ಮೀಸಲಾತಿಯೂ ಜಾರಿಯಾಗಬೇಕು. ಯಾವುದೇ ಹೋರಾಟ, ಬೇಡಿಕೆ, ಕಾಯುವಿಕೆ ಏನೂ ಇಲ್ಲದೆ ಅವರಿಗೆ ಮೀಸಲಾತಿ ನೀಡಲಾಗಿದೆ’ ಎಂದರು.

ಒಳ ಮೀಸಲಾತಿ ಜಾರಿಗೆ ಮೂರು ದಿನ.. ಮೂರು ತಿಂಗಳ ಮಾಡಬಾರದು. ಈಗಾಗಲೇ 30 ವರ್ಷಗಳಿಂದ ಸಮುದಾಯದ ಒಂದಿಡೀ ತಲೆಮಾರು ಸರ್ಕಾರಿ ಉದ್ಯೋಗದಿಂದ ಹಿಡಿದು, ಹಲವು ರೀತಿಯಲ್ಲಿ ವಂಚಿತವಾಗಿದೆ. ಆದ್ದರಿಂದ ವಿಪಕ್ಷವಾದ ಬಿಜೆಪಿ ಮತ್ತು ಆಡಳಿತ ಪಕ್ಷವಾದ ಕಾಂಗ್ರೆಸ್ ಮುತುವರ್ಜಿ ತೆಗದುಕೊಂಡು, ಕೇಂದ್ರ ಸರ್ಕಾರ ಒಳ ಮೀಸಲಾತಿ ಜಾರಿಗೆ ತಿದ್ದುಪಡಿ ತರುವಂತೆ ನೋಡಿಕೊಳ್ಳಬೇಕು’ ಎಂದು ಅಂಬಣ್ಣ ಆಗ್ರಹಿಸಿದರು.

ಇದನ್ನೂ ಓದಿ; ‘ಅನ್ನಪೂರ್ಣಿ’ ವಿವಾದ: ಹಿಂದುತ್ವವಾದಿಗಳ ಒತ್ತಡಕ್ಕೆ ಮಣಿದ ನಯನತಾರಾ, ಬಹಿರಂಗ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...