Homeಕರ್ನಾಟಕಕೇಂದ್ರದ ಅಂಗಳಕ್ಕೆ ಒಳ ಮೀಸಲಾತಿ ಚೆಂಡು; 341(3)ನೇ ವಿಧಿ ತಿದ್ದುಪಡಿಗೆ ರಾಜ್ಯ ಸರ್ಕಾರ ಶಿಫಾರಸು

ಕೇಂದ್ರದ ಅಂಗಳಕ್ಕೆ ಒಳ ಮೀಸಲಾತಿ ಚೆಂಡು; 341(3)ನೇ ವಿಧಿ ತಿದ್ದುಪಡಿಗೆ ರಾಜ್ಯ ಸರ್ಕಾರ ಶಿಫಾರಸು

- Advertisement -
- Advertisement -

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೆ, ಸಾಮಾಜಿಕ ನ್ಯಾಯದಡಿ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನದ 341(3) ನೇ ವಿಧಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಒಳ ಮೀಸಲಾತಿ ಜಾರಿ ಮಾಡುವ ವಿಚಾರದಲ್ಲಿ ಸಾಕಷ್ಟು ಗೊಂದಲ ಸೃಷ್ಟಿಸಿತ್ತು. ಅಂದಿನ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಜೆಸಿ ಮಾಧುಸ್ವಾಮಿ ನೇತೃತ್ವದಲ್ಲಿ ಉಪ ಸಮಿತಿ ರಚಿಸಿ, ಮೀಸಲಾತಿ ವರ್ಗೀಕರಣ ಮಾಡಲಾಗಿತ್ತು. ಆದರೆ, ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿದ್ದ ನ್ಯಾ. ಸದಾಶಿವ ಆಯೋಗದ ವರದಿಗೆ ಬಿಜೆಪಿ ಹೆಚ್ಚಿನ ಮಹತ್ವ ನೀಡಿರಲಿಲ್ಲ.

ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲೇಬೇಕು ಎಂದು ಪರಿಶಿಷ್ಟ ಬಲಗೈ ಸಮುದಾಯದ ಸಚಿವರು ಮತ್ತು ಶಾಸಕರು ಪಟ್ಟು ಹಿಡಿದಿದ್ದರು ಎನ್ನಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಳ ಮೀಸಲಾತಿ ವಿವಾದ ಮುನ್ನೆಲೆಗೆ ಬಂದಿದ್ದಾಗ, ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೊಳಿಸಲಾಗುವುದು’ ಎಂದು ಕೈ ಮುಖಂಡರು ಭರವಸೆಯನ್ನು ನೀಡಿದ್ದರು.
ಅಂತಿಮವಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಬರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಇನ್ನು ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದು, ‘ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬಗ್ಗೆ ಒಂದು ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ನಮ್ಮ ಹಿಂದಿನ ಸರ್ಕಾರದಲ್ಲಿ ಚಿತ್ರದುರ್ಗ ಸಮಾವೇಶದಲ್ಲಿ ಸದಾಶಿವ ಆಯೋಗ ಬಗ್ಗೆ ನಿರ್ಣಯ ಕೈಗೊಳ್ಳಲು ತೀರ್ಮಾನ ಮಾಡಿದ್ದೆವು. ನಂತರ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಸದಾಶಿವ ಆಯೋಗದ ವರದಿಯನ್ನೇ ತಿರಸ್ಕಾರ ಮಾಡಿದ್ರು. ಕಾನೂನಾತ್ಮಕವಾಗಿ ಒಳ ಮೀಸಲಾತಿ ಕೊಡಬೇಕಾಗುತ್ತದೆ. ನಾವೇ ಸಂವಿಧಾನಕ್ಕೆ ತಿದ್ದುಪಡಿ ತರಲು ಆಗಲ್ಲ. ಹಾಗಾಗಿ ಕೇಂದ್ರಕ್ಕೆ ಸಂವಿಧಾನ ತಿದ್ದುಪಡಿ ಮಾಡಲು ಶಿಫಾರಸು ಕಳಿಸುವ ಬಗ್ಗೆ ಇವತ್ತಿನ ಸಂಪುಟ ಸಭೆಯಲ್ಲಿ ಚರ್ಚಿಸ್ತೇವೆ’ ಎಂದು ಸಭೆಗೂ ಮುನ್ನ ಹೇಳಿದ್ದರು.

ಸಂಪುಟ ಸಭೆ ನಂತರ ಮಾತನಾಡಿದ ಸಚಿವ ಡಾ. ಎಚ್.ಸಿ. ಮಹದೇವಪ್ಪ, ‘ಕಳೆದ ಎರಡು ದಶಕಗಳಿಂದ ದಲಿತ ಸಮುದಾಯದ ಒಳಪಂಗಡಗಳು ಒಳಮೀಸಲಾತಿಗೆ ಬೇಡಿಕೆ ಇಟ್ಟಿದ್ದವು. ಚಿತ್ರದುರ್ಗದಲ್ಲಿ ಎಸ್‌ಸಿ-ಎಸ್‌ಟಿ ಸಮಾವೇಶದಲ್ಲಿ ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದೆವು. ಆದರೆ, ಬಿಜೆಪಿ ಸರ್ಕಾರ ತರಾತುರಿಯಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡಿ ಸದಾಶಿವ ಆಯೋಗದ ವರದಿ ಅಪ್ರಸ್ತುತ ಎಂದು ಶಿಫಾರಸು ಮಾಡಿತ್ತು’ ಎಂದು ಹೇಳಿದರು.

‘ಪರಿಶಿಷ್ಟ ಸಮುದಾಯದ 101 ಜಾತಿಗಳ ಹಿತ ಕಾಪಾಡಲು ಯಾರನ್ನು ಹೊರಗಡೆ ಬಿಡುವ ಪ್ರಶ್ನೆ ಇಲ್ಲ. ಈ ನಿಟ್ಟಿನಲ್ಲಿ 341(3) ಗೆ ತಿದ್ದುಪಡಿ ಮಾಡದೆ ಒಳಮೀಸಲಾತಿ ಕೊಡಲು ಸಾಧ್ಯ ಇಲ್ಲ. ಆದ್ದರಿಂದ, ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ಸಭೆ ನಿರ್ಧರಿಸಿದೆ ಎಂದು ತಿಳಿಸಿದರು.

ಒಳ ಮೀಸಲಾತಿ ಜಾರಿ ಕಾಂಗ್ರೆಸ್-ಬಿಜೆಪಿ ಜವಾಬ್ದಾರಿ:

ಹಲವು ವರ್ಷಗಳಿಂದ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಹೋರಾಟವನ್ನು ಮುನ್ನಡೆಸುತ್ತಿರುವ ಅಂಬಣ್ಣ ಅರೋಲಿಕರ್ ನಾನುಗೌರಿ.ಕಾಂ ಜತೆ ಮಾತನಾಡಿ, ‘ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ, ಒಳ ಮೀಸಲಾತಿ ಜಾರಿ ಮಾಡಿಸುವ ಜವಾಬ್ದಾರಿ ಆಡಳಿ ಪಕ್ಷ ಕಾಂಗ್ರೆಸ್ ಹಾಗೂ ವಿರೋಧ ಪಕ್ಷವಾದ ಬಿಜೆಪಿ ಎರಡರ ಮೇಲೂ ಇದೆ’ ಎಂದು ಹೇಳಿದರು.

‘ಬಿಜೆಪಿ ಸರ್ಕಾರ ಕಳೆದ ಮಾರ್ಚ್ ತಿಂಗಳಲ್ಲಿ ಒಳ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೇವೆ ಎಂದು ಸುಳ್ಳು ಹೇಳಿತ್ತು. ನ್ಯಾ. ಸದಾಶಿವ ಆಯೋಗದ ವರದಿಯನ್ನು ಬದಿಗೆ ಸರಿಸಿ, ಸಂಪುಟ ಉಪ ಸಮಿತಿ ರಚಿಸಿತ್ತು. ಒಳ ಮೀಸಲಾತಿ ಜಾರಿಗೆ ಮುಂದಾಗಿರುವ ಪಂಜಾಬ್, ಆಂಧ್ರಪ್ರದೇಶ ಯಾವ ರಾಜ್ಯದಲ್ಲೂ ಈ ರೀತಿ ಮಾಡಿರಲಿಲ್ಲ. ಆಯೋಗ ನೀಡಿದ ವರದಿಯನ್ನೇ ಪರಿಗಣಿಸಿದ್ದವು’ ಎಂದರು.

‘ಬಿಜೆಪಿಯ ಈ ತಪ್ಪನ್ನು ಸರಿಪಡಿಸುವ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ನಮ್ಮ ಒತ್ತಡ ಹೆಚ್ಚಾದ ನಂತರ ನ್ಯಾ. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಪರಸು ಮಾಡಿದೆ. ಈ ವಿಚಾರದಲ್ಲಿ ಆಡಳಿತ ಹಾಗೂ ವಿಪಕ್ಷಗಳೆರಡರ ಪಾತ್ರ ಬಹಳ ಮುಖ್ಯವಾಗಿದೆ. ಕಾಂಗ್ರೆಸ್-ಬಿಜೆಪಿ ಸೇರಿ ಸಂಸತ್ತಿನಲ್ಲಿ ಅಂಗೀಕಾರ ಆಗುವಂತೆ ಮಾಡಬೇಕು. ಸುಪ್ರೀಂಕೋರ್ಟಿನಲ್ಲಿ ಅರ್ಜಿ ಬಾಕಿ ಇವೆ ಎಂದು ಹೇಳುತ್ತಾರೆ; ಆದರೆ, ನಮ್ಮ ದೇಶದ ಸಂಸತ್ತಿಗೆ ಪರಮಾಧಿಕಾರ ಇದೆ. ಅಲ್ಲಿ ನಿರ್ಧಾರ ಮಾಡಲೇಬೇಕು. ಆರ್ಥಿಕ ಹಿಂದುಳಿದ ವರ್ಗ (ಇಡಬ್ಲ್ಯೂಎಸ್)ಕ್ಕೆ ಮೀಸಲಾತಿ ಜಾರಿ ಮಾಡಿದಂತೆ ಒಳ ಮೀಸಲಾತಿಯೂ ಜಾರಿಯಾಗಬೇಕು. ಯಾವುದೇ ಹೋರಾಟ, ಬೇಡಿಕೆ, ಕಾಯುವಿಕೆ ಏನೂ ಇಲ್ಲದೆ ಅವರಿಗೆ ಮೀಸಲಾತಿ ನೀಡಲಾಗಿದೆ’ ಎಂದರು.

ಒಳ ಮೀಸಲಾತಿ ಜಾರಿಗೆ ಮೂರು ದಿನ.. ಮೂರು ತಿಂಗಳ ಮಾಡಬಾರದು. ಈಗಾಗಲೇ 30 ವರ್ಷಗಳಿಂದ ಸಮುದಾಯದ ಒಂದಿಡೀ ತಲೆಮಾರು ಸರ್ಕಾರಿ ಉದ್ಯೋಗದಿಂದ ಹಿಡಿದು, ಹಲವು ರೀತಿಯಲ್ಲಿ ವಂಚಿತವಾಗಿದೆ. ಆದ್ದರಿಂದ ವಿಪಕ್ಷವಾದ ಬಿಜೆಪಿ ಮತ್ತು ಆಡಳಿತ ಪಕ್ಷವಾದ ಕಾಂಗ್ರೆಸ್ ಮುತುವರ್ಜಿ ತೆಗದುಕೊಂಡು, ಕೇಂದ್ರ ಸರ್ಕಾರ ಒಳ ಮೀಸಲಾತಿ ಜಾರಿಗೆ ತಿದ್ದುಪಡಿ ತರುವಂತೆ ನೋಡಿಕೊಳ್ಳಬೇಕು’ ಎಂದು ಅಂಬಣ್ಣ ಆಗ್ರಹಿಸಿದರು.

ಇದನ್ನೂ ಓದಿ; ‘ಅನ್ನಪೂರ್ಣಿ’ ವಿವಾದ: ಹಿಂದುತ್ವವಾದಿಗಳ ಒತ್ತಡಕ್ಕೆ ಮಣಿದ ನಯನತಾರಾ, ಬಹಿರಂಗ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...