Homeಫ್ಯಾಕ್ಟ್‌ಚೆಕ್Fact Check: ರಾಹುಲ್ ಗಾಂಧಿ ಬಿಜೆಪಿ ಚಿಹ್ನೆಯಿರುವ ಟಿ ಶರ್ಟ್‌ ಧರಿಸಿದ್ದು ನಿಜಾನಾ?

Fact Check: ರಾಹುಲ್ ಗಾಂಧಿ ಬಿಜೆಪಿ ಚಿಹ್ನೆಯಿರುವ ಟಿ ಶರ್ಟ್‌ ಧರಿಸಿದ್ದು ನಿಜಾನಾ?

- Advertisement -
- Advertisement -

‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿಯ ಕಮಲದ ಚಿಹ್ನೆ ಹೊಂದಿರುವ ಟಿ ಶರ್ಟ್‌ಧರಿಸಿ ಭಾಷಣ ಮಾಡಿದ್ದಾರೆ ಎನ್ನಲಾದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

ಅನೇಕ ಮಂದಿ ಸಾಮಾಜಿಕ ಜಾಲತಾಣ ಬಳಕೆದಾರರು, ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ ರಾಹುಲ್ ಗಾಂಧಿ ಬಿಜೆಪಿಯ ಕಮಲದ ಚಿಹ್ನೆ ಹೊಂದಿದ್ದ ಬಿಳಿ ಬಣ್ಣದ ಟಿ ಶರ್ಟ್‌ ಧರಿಸಿ ಜನರನ್ನು ಉದ್ದೇಶಿಸಿ ಮಾತನಾಡಿರುವುದಾಗಿ ಪೋಟೋ ಹಂಚಿಕೊಂಡಿದ್ದಾರೆ.

“ರಾಹುಲ್ ಗಾಂಧಿ ಬಿಜೆಪಿಯ ಏಜೆಂಟ್ ಎಂದು ನಾವು ಮೊದಲೇ ಹೇಳಿದ್ದೆವು, ಇದೀಗ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದೇವೆ ನೋಡಿ” ಎಂದು ಫೋಟೋದ ಜೊತೆಗೆ ಕೆಲವರು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ನಾನುಗೌರಿ.ಕಾಂ ಮೇಲೆ ತಿಳಿಸಿದ ವೈರಲ್ ಫೋಟೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಮೊದಲು ನಾವು ಭಾರತ್ ಜೋಡೋ ನ್ಯಾಯ್ ಯಾತ್ರೆಯ ಅಧಿಕೃತ ಎಕ್ಸ್‌ ಖಾತೆಯನ್ನು ಪರಿಶೀಲಿಸಿದ್ದೇವೆ. ಈ ವೇಳೆ ಅದರಲ್ಲಿ ಎಲ್ಲೂ ರಾಹುಲ್ ಗಾಂಧಿ ಬಿಜೆಪಿ ಚಿಹ್ನೆ ಹೊಂದಿದ್ದ ಟಿ ಶರ್ಟ್‌ ಧರಿಸಿದ್ದ ಫೋಟೋ ಕಂಡು ಬಂದಿಲ್ಲ.

ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ನಾವು ಈ ಫೋಟೋ ಕುರಿತು ಹುಡುಕಿದ್ದೇವೆ. ಅಲ್ಲಿ ಜನವರಿ 14ರಂದು ಸಂಜೆ 5:07 ಗಂಟೆಗೆ ‘Amock(@Politics_2022_)’ ಎಂಬ ಎಕ್ಸ್‌ ಖಾತೆಯಲ್ಲಿ ಮೇಲಿನ ಪೋಸ್ಟ್‌ ಆಗಿರುವುದು ಕಂಡು ಬಂದಿದೆ. ಅದರಲ್ಲಿ ರಾಹುಲ್ ಗಾಂಧಿ ಧರಿಸಿದ್ದ ಟಿ ಶರ್ಟ್‌ನಲ್ಲಿ ಬಿಜೆಪಿಯ ಕಮಲದ ಚಿಹ್ನೆ ಕಂಡು ಬಂದಿಲ್ಲ.

ವೈರಲ್‌ ಫೋಟೋವನ್ನು ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಕೆಲ ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನು ಪರಿಶೀಲಿಸಿದ್ದೇವೆ. ಈ ವೇಳೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ ತಂಡದ ಮುಖ್ಯಸ್ಥೆ ಮತ್ತು ಎಐಸಿಸಿ ಕಾರ್ಯಕಾರಿ ಸಮಿತಿಯ ಸದಸ್ಯೆ ಸುಪ್ರಿಯಾ ಶ್ರೀನಾಥೆ ಅವರ ಎಕ್ಸ್‌ ಖಾತೆಯಲ್ಲಿ ಫೋಟೋ ಕಂಡು ಬಂದಿದೆ. ಜನವರಿ 14ರಂದು ಸಂಜೆ 4:38 ಗಂಟೆಗೆ ಈ ಫೋಟೋವನ್ನು ಸುಪ್ರಿಯಾ ಶ್ರೀನಾಥೆ ಪೋಸ್ಟ್‌ ಮಾಡಿದ್ದು, “ಪೂರ್ವದಿಂದ ಪಶ್ಚಿಮಕ್ಕೆ ಯಾತ್ರೆಯ ಬಗ್ಗೆ ಮಾತನಾಡುವಾಗ, ಅದು ಮಣಿಪುರದಿಂದ ಪ್ರಾರಂಭವಾಗಬಹುದು ಎಂದು ನಾನು ಹೇಳಿದ್ದೆ” ಎಂದು ಬರೆದುಕೊಂಡಿದ್ದಾರೆ.

ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ಶಿಕ್ಷಣ, ಮಹಿಳೆಯರು, ಮಕ್ಕಳು, ಕ್ರೀಡೆಗಳ ಸಂಸದೀಯ ಸ್ಥಾಯಿ ಸಮಿತಿ ಟಿ.ಎನ್ ಪ್ರತಾಪನ್ ಅವರು ಕೂಡ ಇದೇ ಫೋಟೋವನ್ನು ಜನವರಿ 14ರಂದು ಸಂಜೆ 4:44 ಗಂಟೆಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಸುಪ್ರಿಯಾ ಶ್ರೀನಾಥೆಯಂತೆ ಬರೆದುಕೊಂಡಿದ್ದಾರೆ.

ಭಾರತ್ ಜೋಡೊ ನ್ಯಾಯ ಯಾತ್ರೆಯ ಕುರಿತು ರಾಹುಲ್ ಗಾಂಧಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಫೋಟೋಗಳಲ್ಲಿ ಎಲ್ಲೂ ಟಿ ಶರ್ಟ್‌ ಮೇಲೆ ಬಿಜೆಪಿಯ ಚಿಹ್ನೆ ಕಂಡು ಬಂದಿಲ್ಲ.

ವೈರಲ್ ಫೋಟೋದ ಕುರಿತು ನಾವು ನಡೆಸಿದ ಪರಿಶೀಲನೆಯಲ್ಲಿ ಅದು ಎಡಿಟೆಡ್ ಫೋಟೋ ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check : ಮಣಿಪುರದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. I am next April-2024 going to retair from my job.I am a teacher at government high school.So I am not wish to take loan but you wish sanction loan to my, you will deducted by my pension amount.

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...