Homeಕರ್ನಾಟಕಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ್ದ ವಕೀಲ ಕಾಂಗ್ರೆಸ್‌ನಿಂದ ಉಚ್ಚಾಟನೆ

ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ್ದ ವಕೀಲ ಕಾಂಗ್ರೆಸ್‌ನಿಂದ ಉಚ್ಚಾಟನೆ

- Advertisement -
- Advertisement -

ಮುಸ್ಲಿಂ ಮಹಿಳೆಯರ ಪರ ಅವಹೇಳನಕಾರಿಯಾಗಿ ಮಾತನಾಡಿದ ಪ್ರಕರಣದ ಆರೋಪಿ, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿರುವ ವಕೀಲ ಡಿ. ಚಂದ್ರೇಗೌಡ ಅವರನ್ನು ಶ್ರೀರಂಗಪಟ್ಟಣ ತಾಲೂಕು ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ.

ಈ ಬಗ್ಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ಡಿ ಗಂಗಾಧರ್ ಅವರು ನಾನುಗೌರಿ.ಕಾಂಗೆ ಖಚಿತಪಡಿಸಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ ಕಾರಣಕ್ಕೆ ಉಚ್ಚಾಟನೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಮುಸ್ಲಿಂ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಚಂದ್ರೇಗೌಡ ಜಾಮೀನು ಕೊಡಿಸಿದ್ದಾರೆ. ಇದು ಪಕ್ಷದ ಕಾನೂನು ಘಟಕದ ನಿಯಮಗಳಿಗೆ ವಿರುದ್ದವಾಗಿದೆ. ಈ ಕಾರಣಕ್ಕೆ ಅವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಕಾನೂನು ಘಟಕದ ಮಂಡ್ಯ ಜಿಲ್ಲಾಧ್ಯಕ್ಷ ಎ.ಎಸ್‌ ಗೌರಿ ಶಂಕರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ : ಡಿ.24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬರು ಗಂಡಂದಿರು, ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ, ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನು ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ?” ಎಂದು ಹೇಳಿಕೆ ನೀಡಿದ್ದರು.

ಇದರ ವಿರುದ್ದ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ಮಂಡ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಕಲ್ಲಡ್ಕ ಭಟ್ ವಿರುದ್ದ ಐಪಿಸಿ ಸೆಕ್ಷನ್ 294, 354, 509, 506ರಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಸ್ತುತ ಪ್ರಕರಣದ ವಿಚಾರಣೆ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಸ್ಥಳೀಯರಿಬ್ಬರ ಶ್ಯೂರಿಟಿ, 2 ಲಕ್ಷ ರೂ. ಮೌಲ್ಯದ ಬಾಂಡ್ ಆಧಾರದ ಮೇಲೆ ಜನವರಿ 17ರಂದು ನ್ಯಾಯಾಲಯ ಕಲ್ಲಡ್ಕ ಭಟ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.‌ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರ ಪರವಾಗಿ ಹಿರಿಯ ವಕೀಲರಾದ ಎಸ್ ಬಾಲನ್ ವಾದ ಮಂಡಿಸಿದ್ದರು. ಜನವರಿ 10ರಂದು ಈ ಕುರಿತು ವಿಚಾರಣೆ ನಡೆಸಿದ್ದ ನ್ಯಾಯಾಲಯ, ಆದೇಶವನ್ನು ಜ.17ಕ್ಕೆ ಕಾಯ್ದಿರಿಸಿತ್ತು.

ಇದನ್ನೂ ಓದಿ: ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವೋ, ಆರ್‌ಎಸ್‌ಎಸ್‌ ಸರ್ಕಾರವೋ ಗೊತ್ತಾಗುತ್ತಿಲ್ಲ: ಬಿ.ಕೆ. ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...