HomeUncategorizedರಾಮಮಂದಿರ ಉದ್ಘಾಟನೆ; ಅಧಿಕಾರ ದುರುಪಯೋಗ ಪಡಿಸಿ ಸರಕಾರಿ ರಜೆ ಘೋಷಣೆ; ಪ್ರತಿಪಕ್ಷಗಳ ಟೀಕೆ

ರಾಮಮಂದಿರ ಉದ್ಘಾಟನೆ; ಅಧಿಕಾರ ದುರುಪಯೋಗ ಪಡಿಸಿ ಸರಕಾರಿ ರಜೆ ಘೋಷಣೆ; ಪ್ರತಿಪಕ್ಷಗಳ ಟೀಕೆ

- Advertisement -
- Advertisement -

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಟಾಪನಾ ಕಾರ್ಯಕ್ರಮವಿದ್ದು, ದೇಶದಾದ್ಯಂತ ಇರುವ ಎಲ್ಲಾ ಕೇಂದ್ರ ಸರ್ಕಾರದ ಅಧೀನದ ಕಚೇರಿಗಳು, ಸಂಸ್ಥೆಗಳು ಮತ್ತು  ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನ ರಜೆಯನ್ನು ಘೋಷಿಸಲಾಗಿದೆ. ಈ ಬಗ್ಗೆ ಪ್ರತಿಪಕ್ಷಗಳು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಸರಕಾರವು ಅಧಿಕಾರ ದುರುಪಯೋಗ ಪಡಿಸಿ ರಜೆಯನ್ನು ಘೋಷಣೆ ಮಾಡಿದೆ ಎಂದು ಆರೋಪಿಸಿದೆ.

ಅಪೂರ್ಣವಾಗದ ದೇವಾಲಯದ ಉದ್ಘಾಟನೆ ‘ಶಾಸ್ತ್ರಗಳಿಗೆ ವಿರುದ್ಧ’ ಎಂದು ಶಂಕಾರಾಚಾರ್ಯ ಮಠದ ಮಠಾಧೀಶರು ಸೇರಿ ಹಲವು ಹಿಂದೂ ಮಠಾಧೀಶರು ವಿರೋಧಿಸಿದ್ದರು. ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ರಾಮಮಂದಿರ ಉದ್ಘಾಟನೆಯನ್ನು ರಾಜಕೀಯಗೊಳಿಸಿದೆ ಎಂದು ಪ್ರತಿಪಕ್ಷಗಳು ಈ ಮೊದಲು ಟೀಕಿಸುತ್ತಾ ಬಂದಿದೆ. ಧರ್ಮದ ಜೊತೆ ರಾಜಕೀಯ ಮತ್ತು ಸಿಎಂ, ಪ್ರಧಾನಿಗಳು ಸೇರಿ ಆಡಳಿತ ಯಂತ್ರಗಳು ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವುದು ಸಂವಿಧಾನ ಬಾಹಿರ ಮತ್ತು ಅಧಿಕಾರದ ದುರುಪಯೋಗವಾಗಿದೆ. ಇದೀಗ ಅಧಿಕಾರದ ದುರುಪಯೋಗ ಮಾಡಿಕೊಂಡು ಸಾರ್ವಜನಿಕ ರಜೆ ನೀಡಲಾಗಿದೆ ಎಂದು ಟೀಕೆ ವ್ಯಕ್ತವಾಗಿದೆ.

ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಬುಧವಾರ ಈ ಕುರಿತು ಆದೇಶವನ್ನು ಹೊರಡಿಸಿದ್ದು, ಜನವರಿ 22ರಂದು ಮಧ್ಯಾಹ್ನ 2.30ರವರೆಗೆ  ಸರಕಾರಿ ಕಚೇರಿಗಳನ್ನು ಮುಚ್ಚಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಮ್ ಲಲ್ಲಾ ಪ್ರಾಣ್ ಪ್ರತಿಷ್ಠಾಪನೆ ಸಮಾರಂಭವು ಜನವರಿ 22ರಂದು ಅಯೋಧ್ಯೆಯ ಮಧ್ಯಾಹ್ನ 12.20ಕ್ಕೆ ಪ್ರಾರಂಭವಾಗಲಿದ್ದು, ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಳ್ಳಲಿದೆ ಎನ್ನಲಾಗಿದೆ. ಹಣಕಾಸು ಸಚಿವಾಲಯದ ಅಧೀನದ ಹಣಕಾಸು ಸೇವೆಗಳ ಇಲಾಖೆಯು ಪ್ರತ್ಯೇಕ ಆದೇಶದಲ್ಲಿ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್‌ಗಳು, ಸಾರ್ವಜನಿಕ ವಲಯದ ವಿಮಾ ಕಂಪನಿಗಳು, ಸಾರ್ವಜನಿಕ ವಲಯದ ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಜನವರಿ 22ರಂದು ಮಧ್ಯಾಹ್ನ 2.30ರವರೆಗೆ ಅರ್ಧ ದಿನದ ರಜೆಯನ್ನು ಪಡೆಯಲಿದೆ. ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಸಂದರ್ಭ ಇದು ಉದ್ಯೋಗಿಗಳಿಗೆ ರಾಮ್ ಲಲ್ಲಾ ಪ್ರಾಣಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದೆ.

ಈ ಮೊದಲು ಮಾದ್ಯಮಗಳ ಜೊತೆ ಮಾತನಾಡಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆಯ ದಿನ ಜನವರಿ 22ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ಮುಚ್ಚಲಾಗುವುದು ಎಂದು ತಿಳಿಸಿದ್ದರು.

ಇದಲ್ಲದೆ ತ್ರಿಪುರಾ, ಉತ್ತರಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ರಾಜಸ್ಥಾನ, ಗುಜರಾತ್‌, ಉತ್ತರಖಂಡ, ಪುದುಚೇರಿಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಅರ್ಧದಿನ ರಜೆಯನ್ನು ಘೋಷಿಸಲಾಗಿದೆ. ಗೋವಾದಲ್ಲಿ ಶಾಲೆಗಳಿಗೆ ಮತ್ತು ಸರಕಾರಿ ಕಚೇರಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಹರ್ಯಾಣದಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಮಹಾರಾಷ್ಟ್ರ ಸರಕಾರ ರಾಜ್ಯದಲ್ಲಿ ಜ.22ರಂದು ಸಾರ್ವಜನಿಕ ರಜೆಯನ್ನು ಘೋಷಿಸಿದೆ.

ವಿಪಕ್ಷಗಳಿಂದ ಟೀಕೆ:

ರಾಮಮಂದಿರ ಪ್ರಾಣಪ್ರತಿಷ್ಟಾಪಾನಾ ದಿನ ಸರಕಾರಿ ಕಚೇರಿ, ಶಾಲೆಗಳಿಗೆ ರಜೆ ನೀಡಿರುವ ಕೇಂದ್ರ ಸರಕಾರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿದೆ. ಸರ್ಕಾರವು ಇಂತಹ ಸುತ್ತೋಲೆ ಹೊರಡಿಸುವ ಮೂಲಕ ಅಧಿಕಾರದ ದುರುಪಯೋಗ ಮಾಡಿದೆ. ಧಾರ್ಮಿಕ ನಂಬಿಕೆಯ ವಿಚಾರದಲ್ಲಿ ವೈಯಕ್ತಿಕವಾಗಿ ತೀರ್ಮಾನ ತೆಗೆದುಕೊಳ್ಳುವ ಹಕ್ಕು ನೌಕರರಿಗೆ ಇದೆ. ಸರ್ಕಾರದ ಇಂತಹ ಕ್ರಮವು ಸಂವಿಧಾನ ಮತ್ತು ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಸಿಪಿಎಂ ಪಾಲಿಟ್‌ ಬ್ಯೂರೊ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯವೊಂದು ಈದ್‌ ಮಿಲಾದ್‌ ದಿನದ ರಜೆಯನ್ನು ರದ್ದುಗೊಳಿಸಿದೆ. ಶುಕ್ರವಾರದ ನಮಾಝ್‌ಗೆ ಮೀಸಲಿಟ್ಟಿದ್ದ 30 ನಿಮಿಷಗಳ ವಿರಾಮದ ಅವಧಿಯನ್ನು ಸಾಂವಿಧಾನಿಕ ಹುದ್ದೆಯಲ್ಲಿರುವ ಒಬ್ಬರು ರದ್ದು ಮಾಡಿದ್ದಾರೆ. ಯಾರ ತುಷ್ಟೀಕರಣವೂ ಇಲ್ಲದೆ ಎಲ್ಲರ ಅಭಿವೃದ್ಧಿ ಎಂದರೆ ಇದೇನಾ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ಪ್ರಶ್ನಿಸಿದ್ದಾರೆ.

ಇದನ್ನು ಓದಿ:ಭಾರತದಲ್ಲಿ ಕಠಿಣ ಕಾಯ್ದೆಯಡಿಯಲ್ಲಿ ಜೈಲಿನಲ್ಲಿರುವ ಪತ್ರಕರ್ತರೆಷ್ಟು?: ಸಿಪಿಜೆ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...