Homeಮುಖಪುಟಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

- Advertisement -
- Advertisement -

ಇಂದೋರ್‌ನ ಅನಾಥಾಶ್ರಮವೊಂದರಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದ್ದ ಘಟನೆ ಬಯಲಾಗಿದ್ದು, ಅಧಿಕಾರಿಗಳು ಅನಾಥಾಶ್ರಮಕ್ಕೆ ಭೇಟಿ ನೀಡಿದ ವೇಳೆ ಮಕ್ಕಳು ದೌರ್ಜನ್ಯದ ಬಗ್ಗೆ ದೂರು ನೀಡಿದ್ದಾರೆ.

ಇಂದೋರ್‌ನ ಅನಾಥಾಶ್ರಮಕ್ಕೆ ಜನವರಿ 12ರಂದು ಸಿಡಬ್ಲ್ಯುಸಿ ಅಧಿಕಾರಿಗಳ ತಂಡ ಹಠಾತ್ ಭೇಟಿ ನೀಡಿ ತಪಾಸಣೆ ನಡೆಸಿದೆ. ಈ ವೇಳೆ ಅನಾಥಾಶ್ರಮದಲ್ಲಿ 4-14 ವರ್ಷದೊಳಗಿನ ಮಕ್ಕಳಿಗೆ ಚಿತ್ರಹಿಂಸೆ ನೀಡುತ್ತಿರುವುದು ಬಯಲಾಗಿದೆ.  ನಮ್ಮನ್ನು ತಲೆ ಕೆಳಗಾಗಿ ನೇತು ಹಾಕುತ್ತಿದ್ದಾರೆ, ಕಾಯಿಸಿದ ಕಬ್ಬಿಣದಿಂದ ಬರೆ ಹಾಕುತ್ತಾರೆ ಮತ್ತು ತಮ್ಮನ್ನು ಬೆತ್ತಲೆಗೊಳಿಸಿ ಬಳಿಕ ಚಿತ್ರಗಳನ್ನು ತೆಗೆಯುತ್ತಾರೆ, ಬೆಂಕಿಯಲ್ಲಿ ಉರಿಯುತ್ತಿರುವ ಕೆಂಪು ಮೆಣಸಿನಕಾಯಿಯ ಹೊಗೆಯನ್ನು ಉಸಿರಾಡುವಂತೆಯೂ ಮಾಡಲಾಗುತ್ತಿತ್ತು ಎಂದು ಮಕ್ಕಳ ಕಲ್ಯಾಣ ಸಮಿತಿಯ (ಸಿಡಬ್ಲ್ಯೂಸಿ) ಅಧಿಕಾರಿಗಳ ಬಳಿ ಮಕ್ಕಳು ಭಯದಿಂದಲೇ ಹೇಳಿಕೊಂಡಿದ್ದಾರೆ.

ಸಿಡಬ್ಲ್ಯುಸಿ ಅಧಿಕಾರಿಗಳ ದೂರಿನ ಮೇರೆಗೆ ಅನಾಥಾಶ್ರಮದ ಐವರು ಸಿಬ್ಬಂದಿಗಳ ವಿರುದ್ಧ ಜುವೆನೈಲ್ ಜಸ್ಟೀಸ್ ಆಕ್ಟ್ (ಜೆಜೆ ಆಕ್ಟ್) ಮತ್ತು ಐಪಿಸಿಯ ಸೆಕ್ಸನ್‌ಗಳಡಿಯಲ್ಲಿ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ಪೋಕ್ಸೊ ಕಾಯ್ದೆ ಮತ್ತು ಮಾನವ ಕಳ್ಳಸಾಗಣೆ ಆರೋಪಗಳನ್ನು ಹೊರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಯಾರನ್ನೂ ಬಂಧಿಸಲಾಗಿಲ್ಲ. ಅಧಿಕಾರಿಗಳ ತಂಡಕ್ಕೆ ದೂರು ನೀಡಿದ ಮಕ್ಕಳ ಆರೋಪಗಳ ಬಗ್ಗೆ ಪರಿಶೀಲಿಸುವುದಾಗಿ ಪೊಲೀಸರು ಹೇಳಿದ್ದಾರೆ.

ಇಂದೋರ್‌ನ ಜಿಲ್ಲಾಧಿಕಾರಿ ಆಶೀಶ್ ಸಿಂಗ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಮ್ಮ ತಂಡವು ಜುವೆನೈಲ್ ಜಸ್ಟೀಸ್ ಆಕ್ಟ್‌ನ ಉಲ್ಲಂಘನೆಯನ್ನು ಪತ್ತೆಹಚ್ಚಿದೆ. ನಾವು ಹಾಸ್ಟೆಲ್‌ನ್ನು ಸೀಲ್ ಮಾಡಿದ್ದೇವೆ ಮತ್ತು ಮಕ್ಕಳನ್ನು ಸರ್ಕಾರಿ ವಸತಿ ನಿಲಯಕ್ಕೆ ಸ್ಥಳಾಂತರ ಮಾಡಿದ್ದೇವೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

4 ವರ್ಷದ ಬಾಲಕ ತನ್ನ ಪ್ಯಾಂಟ್‌ನಲ್ಲಿ ಮಲವಿಸರ್ಜನೆ ಮಾಡಿದ್ದಕ್ಕೆ ಗಂಟೆಗಳ ಕಾಲ ಸ್ನಾನಗೃಹದಲ್ಲಿ ಆತನಿಗೆ ದಿಗ್ಭಂಧನ ವಿಧಿಸಲಾಗಿತ್ತು. ಅವನಿಗೆ 2-3 ದಿನಗಳವರೆಗೆ ಆಹಾರವನ್ನು ನೀಡಲಾಗಿಲ್ಲ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಮಕ್ಕಳಿಗಾದ ಗಾಯಗಳ ಕುರಿತು ಚಿತ್ರಗಳಿವೆ. ಅವುಗಳು ಬಿಸಿ ಕಬ್ಬಿಣ ಇಟ್ಟುರುವುದರಿಂದ ಉಂಟಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯ್ ನಗರ ಪೊಲೀಸ್ ಠಾಣೆಯ ಉಸ್ತುವಾರಿ ಚಂದ್ರಭಾನ್ ಸಿಂಗ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ಪ್ರಕರಣದ ತನಿಖಾಧಿಕಾರಿಯಾದ ಸಬ್ ಇನ್ಸ್‌ಪೆಕ್ಟರ್ ಕೀರ್ತಿ ತೋಮರ್ ಅವರು ಮಕ್ಕಳ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದಂತೆ ಅವರು ತಲೆಕೆಳಗಾಗಿ ನೇಣು ಹಾಕಿರುವ ಬಗ್ಗೆ ಈ ವೇಳೆ ಹೇಳಲಿಲ್ಲ. ಆದರೆ ಅವರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಮತ್ತು ಥಳಿಸಲಾಗಿದೆ ಎಂದು ಹೇಳಿರುವ ಬಗ್ಗೆ ಹೇಳಿದ್ದಾರೆ.

ಇಂದೋರ್‌ನ ಅನಾಥಾಶ್ರಮದಲ್ಲಿದ್ದ ಮಕ್ಕಳು ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಒಡಿಶಾ ಮತ್ತು ಮಧ್ಯಪ್ರದೇಶದ ಮಕ್ಕಳಾಗಿದ್ದಾರೆ. ಅವರು ಅಲ್ಲಿಗೆ ಹೇಗೆ ಬಂದಿದ್ದಾರೆ ಎಂಬ ಬಗ್ಗೆ  ಸ್ಪಷ್ಟತೆ ಇಲ್ಲ. ಅನಾಥಾಶ್ರಮದ ಕೇಂದ್ರವು ಇಂದೋರ್, ಜೋಧಪುರ, ಸೂರತ್, ಕೋಲ್ಕತ್ತಾ ಮತ್ತು ಬೆಂಗಳೂರಿನಲ್ಲಿ ಇದೆ.

ಇದನ್ನು ಓದಿ: ಫೇಸ್‌ಬುಕ್‌ ವಿರುದ್ಧ ರೋಹಿಂಗ್ಯಾ ನಿರಾಶ್ರಿತರು ಕೋರ್ಟ್ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...