Homeಮುಖಪುಟಅತ್ಯಾಚಾರ ಅಪರಾಧಿ ಗುರ್ಮೀತ್‌ ಸಿಂಗ್‌ಗೆ ಮತ್ತೆ ಪೆರೋಲ್‌: ನಾಲ್ಕು ವರ್ಷಗಳಲ್ಲಿ 9ನೇ ಬಾರಿ ಬಿಡುಗಡೆ ಭಾಗ್ಯ!

ಅತ್ಯಾಚಾರ ಅಪರಾಧಿ ಗುರ್ಮೀತ್‌ ಸಿಂಗ್‌ಗೆ ಮತ್ತೆ ಪೆರೋಲ್‌: ನಾಲ್ಕು ವರ್ಷಗಳಲ್ಲಿ 9ನೇ ಬಾರಿ ಬಿಡುಗಡೆ ಭಾಗ್ಯ!

- Advertisement -
- Advertisement -

ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹರ್ಯಾಣದ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ಗೆ ಮತ್ತೆ ಪೆರೋಲ್‌ ಮಂಜೂರಾಗಿದೆ.

ಈ ಬಾರಿ ಗುರ್ಮೀತ್ ಸಿಂಗ್‌ಗೆ 50 ದಿನಗಳ ಪೆರೋಲ್ ನೀಡಲಾಗಿದೆ. ಅತ್ಯಾಚಾರ ಪ್ರಕರಣದ ಅಪರಾಧಿಯಾಗಿರುವ ಈತ, ಕಳೆದ 24 ತಿಂಗಳಲ್ಲಿ ಏಳನೇ ಬಾರಿ ಮತ್ತು ಕಳೆದ ನಾಲ್ಕು ವರ್ಷಗಳಲ್ಲಿ ಒಂಬತ್ತನೇ ಬಾರಿ ಪೆರೋಲ್ ಪಡೆದಿದ್ದಾನೆ.

ಹರ್ಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಲ್ಲಿರುವ ಗುರ್ಮೀತ್ ಸಿಂಗ್‌ಗೆ ಕಳೆದ ವರ್ಷ ನವೆಂಬರ್‌ನಲ್ಲಿ 21 ದಿನ, ಜುಲೈನಲ್ಲಿ 30 ದಿನ ಮತ್ತು ಜನವರಿಯಲ್ಲಿ ಡೇರಾ ಸಚ್ಚಾ ಸೌಧದ ಮಾಜಿ ಮುಖ್ಯಸ್ಥ ಶಾ ಸತ್ನಾಮ್ ಅವರ ಜನ್ಮ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು 40 ದಿನ ಸೇರಿ, ಒಟ್ಟು 91 ದಿನಗಳ ಪೆರೋಲ್ ನೀಡಲಾಗಿತ್ತು.

ಕಳೆದ ವರ್ಷ ಪೆರೋಲ್‌ ಮೇಲೆ ಜೈಲಿನಿಂದ ಹೊರಗಿದ್ದಾಗಲೇ ಗುರ್ಮೀತ್ ಸಿಂಗ್ ತಲವಾರಿನಿಂದ ತನ್ನ ಹುಟ್ಟು ಹಬ್ಬದ ಕೇಕ್ ಕತ್ತರಿಸಿದ್ದ. ಈ ಕುರಿತ ಫೋಟೋ, ವಿಡಿಯೋ ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಆ ವೇಳೆ ” ನಾನು ಐದು ವರ್ಷಗಳ ಬಳಿಕ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸುತ್ತಿದ್ದೇನೆ. ಒಟ್ಟು ಐದು ಕೇಕ್ ಕತ್ತರಿಸಬೇಕಿದೆ. ಇದು ಮೊದಲನೆಯದ್ದು” ಎಂದು ಗುರ್ಮೀತ್ ಸಿಂಗ್ ಹೇಳಿದ್ದ ವಿಡಿಯೋ ವೈರಲ್ ಆಗಿತ್ತು.

ಆಯುಧಗಳ ಸಾರ್ವಜನಿಕ ಪ್ರದರ್ಶನವನ್ನು (ಕತ್ತಿಯಿಂದ ಕೇಕ್ ಕತ್ತರಿಸುವುದು ಆ ವರ್ಗಕ್ಕೆ ಸೇರುತ್ತದೆ) ಶಸ್ತ್ರಾಸ್ತ್ರ ಕಾಯಿದೆಯಡಿಯಲ್ಲಿ ನಿಷೇಧಿಸಲಾಗಿದೆ. ಆದರೆ, ಗುರ್ಮೀತ್ ಮೇಲೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಗುರ್ಮೀತ್ ಸಿಂಗ್‌ಗೆ ಜನವರಿ 2023ರಲ್ಲಿ ಲಭಿಸಿದ್ದ ಪೆರೋಲ್, ವಿಶೇಷವಾಗಿ ಹರ್ಯಾಣದ ಮುಖ್ಯಮಂತ್ರಿ ಮನೋಹರಲಾಲ್‌ ಖಟ್ಟರ್ ಅದನ್ನು ಸಮರ್ಥಿಸಿಕೊಂಡ ಬಳಿಕ ವಿವಾದವನ್ನು ಸೃಷ್ಟಿಸಿತ್ತು.

“ರಾಮ್‌ ರಹೀಮ್ ಗೆ ಪೆರೋಲ್ ಸಿಕ್ಕಿರುವುದು ನನಗೆ ಗೊತ್ತಿಲ್ಲ. ಆದರೆ, ಪೆರೋಲ್ ಸಿಕ್ಕಿದ್ದು ಹೌದಾದರೆ ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿದ ಬಳಿಕವೇ ಅದು ಮಂಜೂರಾಗಿರಬೇಕು ಮತ್ತು ಅದು ಆತನ ಹಕ್ಕು ಆಗಿದೆ. ಅದರಲ್ಲಿ ನಾನು ಮಧ್ಯಪ್ರವೇಶ ಮಾಡುವುದಿಲ್ಲ” ಎಂದು ಖಟ್ಟರ್ ಹೇಳಿದ್ದರು.

2022ರಲ್ಲಿಯೂ ಹರಿಯಾಣದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಗುರ್ಮೀತ್‌ಗೆ ಮೂರು ಸಲ ಪೆರೋಲ್ ನೀಡಿತ್ತು. ತನ್ನ ತಾಯಿಯನ್ನು ಭೇಟಿಯಾಗಲು 2021 ಮತ್ತು 2020ರಲ್ಲೂ ಆತನಿಗೆ ತಲಾ ಒಂದು ಬಾರಿ ಪೆರೋಲ್ ಲಭಿಸಿತ್ತು.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಹರ್ಯಾಣದಲ್ಲಿ ಪಂಚಾಯತ್ ಚುನಾವಣೆಗೆ ಮುನ್ನ ಸಿಂಗ್‌ಗೆ ಪೆರೋಲ್ ಲಭಿಸಿದ್ದಾಗ ಆತ ನಡೆಸಿದ್ದ ‘ವರ್ಚುವಲ್ ಸತ್ಸಂಗ’ ದಲ್ಲಿ ಹಲವಾರು ಬಿಜೆಪಿ ನಾಯಕರು ಭಾಗವಹಿಸಿದ್ದರು. ಇದರ ವಿರುದ್ದ ಪ್ರತಿಪಕ್ಷಗಳು ಕಿಡಿಕಾರಿತ್ತು.

ಹರ್ಯಾಣದ ಪಂಚಕುಲಾದ ವಿಶೇಷ ಸಿಬಿಐ ನ್ಯಾಯಾಲಯವು ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆಗಸ್ಟ್ 2017ರಲ್ಲಿ ಗುರ್ಮೀತ್‌ನನ್ನು ಅಪರಾಧಿ ಎಂದು ಘೋಷಿಸಿತ್ತು.

ಇದನ್ನೂ ಓದಿ: ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...