Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ: ಲಖಿಂಪುರದಲ್ಲಿ ನಾಗರಿಕರ ಜೊತೆ ರಾಹುಲ್‌ ಸಂವಾದ

ಭಾರತ್ ಜೋಡೋ ನ್ಯಾಯ ಯಾತ್ರೆ: ಲಖಿಂಪುರದಲ್ಲಿ ನಾಗರಿಕರ ಜೊತೆ ರಾಹುಲ್‌ ಸಂವಾದ

- Advertisement -
- Advertisement -

ಭಾರತ್ ಜೋಡೋ ನ್ಯಾಯ ಯಾತ್ರೆ 7ನೇ ದಿನಕ್ಕೆ ಕಾಲಿಟ್ಟಿದೆ. ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ರಾಹುಲ್‌ ಗಾಂಧಿ ನಾಗರಿಕರ ಜೊತೆ ಸಂವಾದ ನಡೆಸಿದ್ದು, ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.

ಇಂದು ಅಸ್ಸಾಂನ ಲಖಿಂಪುರ ಜಿಲ್ಲೆಯಿಂದ ಭಾರತ್ ಜೋಡೋ ನ್ಯಾಯ ಯಾತ್ರೆ ಪುನರಾರಂಭವಾಗಿತ್ತು. ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಬಿಜೆಪಿ ಮತ್ತು ಆರೆಸ್ಸೆಸ್ ಹಿಂದೂಸ್ತಾನವನ್ನು ದೆಹಲಿಯಿಂದ ಒಂದೇ ಭಾಷೆ, ಒಬ್ಬ ನಾಯಕನಿಂದ ನಡೆಸಬೇಕು ಎಂದು ಬಯಸುತ್ತದೆ. ಅಸ್ಸಾಂ ಮುಖ್ಯಮಂತ್ರಿ ಹೇಮಂತ್ ಬಿಸ್ವ ಶರ್ಮಾ ಅವರು ದೇಶದ ಅತ್ಯಂತ ಭ್ರಷ್ಟ ಸಿಎಂ ಎಂದು ಹೇಳಿದ್ದಾರೆ.

ಅಸ್ಸಾಂನ ಮಜುಲಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತೀಯ ಜನತಾ ಪಕ್ಷವು ಆದಿವಾಸಿಗಳನ್ನು ಅರಣ್ಯಕ್ಕೆ ಸೀಮಿತಗೊಳಿಸಲು ಮತ್ತು ಶಿಕ್ಷಣ ಮತ್ತು ಅವಕಾಶಗಳಿಂದ ವಂಚಿತರನ್ನಾಗಿಸಲು ಬಯಸುತ್ತದೆ. ಕಾಂಗ್ರೆಸ್, ಬುಡಕಟ್ಟು ಜನಾಂಗದವರನ್ನು ‘ಆದಿವಾಸಿಗಳು’ (ಮೊದಲ ನಿವಾಸಿಗಳು) ಎಂದು ಉಲ್ಲೇಖಿಸಿದರೆ, ಬಿಜೆಪಿ ಅವರನ್ನು ಕೇವಲ ‘ವನವಾಸಿಗಳು’ (ಅರಣ್ಯವಾಸಿಗಳು) ಎಂದು ಸೀಮಿತಗೊಳಿಸುತ್ತದೆ ಎಂದು ಅವರು ಹೇಳಿದರು.

ಕಳೆದ ವರ್ಷ ಮೇ ತಿಂಗಳಿನಿಂದ ಮಣಿಪುರದಲ್ಲಿ ಜನಾಂಗೀಯ ಕಲಹ ಮುಂದುವರಿದಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡದಿರುವ ಬಗ್ಗೆ ರಾಹುಲ್‌ ವಾಗ್ದಾಳಿ ನಡೆಸಿದರು. ಮಣಿಪುರದಲ್ಲಿ ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಂತರ್ಯುದ್ಧದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಪ್ರಧಾನಿ ಒಂದೇ ಒಂದು ಬಾರಿಯೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಅಸ್ಸಾಂ ಸಿಎಂ ದೇಶದ ಅತ್ಯಂತ ಭ್ರಷ್ಟ ಸಿಎಂ, ಅವರು ಬಿಜೆಪಿಯ ಇತರ ಸಿಎಂಗಳಿಗೆ ಭ್ರಷ್ಟಾಚಾರ ನಡೆಸಲು ಕಲಿಸಬಹುದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಜೆಂಗ್ರೈಮುಖ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೌರವ್‌ ಗೊಗೋಯ್, ಯಾತ್ರೆ ಮೂಲಕ ನಾವು ಜನರ ಪ್ರಮುಖ ಸಮಸ್ಯೆಯನ್ನು ಎತ್ತಿ ತೋರಿಸುತ್ತೇವೆ. ಮಣಿಪುರದಲ್ಲಿ ನಾವು ಯಾತ್ರೆ ಪ್ರಾರಂಭಿಸಿದ್ದೇವೆ,  ಅಲ್ಲಿ ಹಿಂಸಾಚಾರ ನಡೆಯುತ್ತಿದೆ. ನಾಗಾಲ್ಯಾಂಡ್‌ನಲ್ಲಿ ಯಾತ್ರೆ ಸಾಗಿದೆ ಅಲ್ಲಿ ಶಾಂತಿ ಒಪ್ಪಂದದ ಭರವಸೆ ಈಡೇರಿಸಿಲ್ಲ. ಅಸ್ಸಾಂನಲ್ಲಿ ಜನರು ನಮಗೆ ಉದ್ಯೋಗಗಳು ಸಿಗುತ್ತಿಲ್ಲ, ಬೆಲೆಗಳು ಹೆಚ್ಚಿವೆ ಆದರೆ ಇವುಗಳನ್ನು ಪರಿಹರಿಸುವ ಬದಲು ಸಿಎಂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಮತ್ತು ಅವರ ಕುಟುಂಬ ಮತ್ತು ಅವರ ಆಪ್ತರನ್ನು ಶ್ರೀಮಂತರನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ನಮಗೆ ಹೇಳಿದರು. ಅದಕ್ಕಾಗಿಯೇ ಭ್ರಷ್ಟಾಚಾರದತ್ತ ಗಮನ ಹರಿಸಲಾಗಿದೆ ಎಂದು  ಗೌರವ್‌ ಗೊಗೋಯ್ ಹೇಳಿದ್ದಾರೆ.

7ನೇ ದಿನದ ಭಾರತ್‌ ಜೋಡೋ ನ್ಯಾಯ ಯಾತ್ರೆ ಅರುಣಾಚಲ ಪ್ರದೇಶದಲ್ಲಿ ಸಮಾಪ್ತಿಯಾಗಲಿದೆ. ಜೋರ್ಹತ್ ಪಟ್ಟಣದಲ್ಲಿ ಅನುಮತಿಸಲಾದ ಮಾರ್ಗ ಬದಲಿಸಿದ್ದಕ್ಕೆ ಯಾತ್ರೆ ಮುಖ್ಯ ಸಂಘಟಕ ಕೆಬಿ ಬೈಜು ವಿರುದ್ಧ ಜೋರ್ಹತ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಯಾತ್ರೆಯ ಹಾದಿಯಲ್ಲಿ ದಿಢೀರ್‌ ಬದಲಾವಣೆಯಿಂದಾಗಿ ಸಂಚಾರ ವ್ಯತ್ಯಯವುಂಟಾಗಿತ್ತಲ್ಲದೆ ಬೈಜಿಯು ಮತ್ತಿತರರು ಟ್ರಾಫಿಕ್‌ ಬ್ಯಾರಿಕೇಡುಗಳನ್ನು ಮುರಿಯಲು ನೆರೆದಿದ್ದವರನ್ನು ಪ್ರಚೋದಿಸಿದರು ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯು 67 ದಿನಗಳಲ್ಲಿ 6,713 ಕಿಮೀ ಕ್ರಮಿಸಲಿದ್ದು, 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಸಾಗಲಿದೆ. ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಇದನ್ನು ಓದಿ: ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...