Homeಮುಖಪುಟವಿಜಯವಾಡದಲ್ಲಿ ವಿಶ್ವದ ಅತಿದೊಡ್ಡ 'ಅಂಬೇಡ್ಕರ್' ಪ್ರತಿಮೆ ಅನಾವರಣ

ವಿಜಯವಾಡದಲ್ಲಿ ವಿಶ್ವದ ಅತಿದೊಡ್ಡ ‘ಅಂಬೇಡ್ಕರ್’ ಪ್ರತಿಮೆ ಅನಾವರಣ

- Advertisement -
- Advertisement -

ಆಂಧ್ರಪ್ರದೇಶದ ವಿಜಯವಾಡದ ಸ್ವರಾಜ್ ಮೈದಾನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಶ್ವದ ಅತಿ ದೊಡ್ಡ ಪ್ರತಿಮೆಯನ್ನು ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರು ಅನಾವರಣಗೊಳಿಸಿದ್ದಾರೆ.

ವಿಜಯವಾಡದ ಬಂದರ್ ರಸ್ತೆಯಲ್ಲಿರುವ ಸ್ವರಾಜ್ ಮೈದಾನದಲ್ಲಿ ‘ಸಾಮಾಜಿಕ ನ್ಯಾಯದ ಪ್ರತಿಮೆ’ ಹೆಸರಿನ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಸಿಎಂ ಜಗನ್‌ ಮೋಹನ್‌ ರೆಡ್ಡಿ ಅನಾವರಣ ಮಾಡಿದ್ದಾರೆ. ಪ್ರತಿಮೆ ಅನಾವರಣಗೊಳಿಸುವ ಮೊದಲು ಸಾಮಾಜಿಕ ಸಮತಾ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಜಗನ್‌ ಮೋಹನ್‌ ರೆಡ್ಡಿ, ಈ ಪ್ರತಿಮೆಯು ದಲಿತರು ಮತ್ತು ದೇಶದ ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸೇರಿದಂತೆ ಸಮಾಜದ ಇತರ ದೀನದಲಿತ ವರ್ಗಗಳ ಆತ್ಮವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ವಿಗ್ರಹದ ಎತ್ತರವು 125 ಅಡಿ ಇದ್ದು, 85 ಅಡಿ ಇರುವ ಮೂರ್ತಿ ಪೀಠವನ್ನು ಸೇರಿಸಿದರೆ, ಪ್ರತಿಮೆಯ ಒಟ್ಟಾರೆ ಎತ್ತರವು 206 ಅಡಿಯಾಗಿದೆ. ಸ್ವರಾಜ್ ಮೈದಾನದಲ್ಲಿ ನಿರ್ಮಿಸಲಾಗಿರುವ ಈ ಪ್ರತಿಮೆಯ ಸುತ್ತ ಅನುಭವ ಕೇಂದ್ರ, 2000 ಆಸನ ಸಾಮರ್ಥ್ಯದ ಸಮ್ಮೇಳನ ಸಭಾಂಗಣ, ಉಪಾಹಾರ ಗೃಹ, ಮಕ್ಕಳ ಆಟದ ಆವರಣ, ಕೊಳಗಳು, ಸಂಗೀತ ಕಾರಂಜಿ ಹಾಗೂ ಕಾಲ್ನಡಿಗೆಯ ದಾರಿಯಂತಹ ನಾಗರಿಕ ಸೌಕರ್ಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ಹಿಂದೆ ಸ್ವರಾಜ್‌ ಮೈದಾನ ಎಂದು ಕರೆಯಲ್ಪಡುತ್ತಿದ್ದ ಮೈದಾನ ಈಗ ಅಧಿಕೃತವಾಗಿ ಡಾ.ಬಿ.ಆರ್. ಅಂಬೇಡ್ಕರ್ ಸ್ವರಾಜ್ ಮೈದಾನವಾಗಿದೆ. ಇಂದಿನಿಂದ ಸ್ವರಾಜ್ ಮೈದಾನದ ದ್ವಾರಗಳು ತೆರೆಯಲಿದೆ.  ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ನಿರ್ಮಿಸಲಾಗಿರುವ 125 ಅಡಿ ಎತ್ತರದ ಪ್ರತಿಮೆಯ ವೀಕ್ಷಣೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಇದು ಭಾರತೀಯ ಸಂವಿಧಾನದ ಶಿಲ್ಪಿಗೆ ಸಲ್ಲಿಸುವ ಗೌರವವಾಗಿದೆ. ಈ ಪ್ರತಿಮೆಯು ಭಾರತದಲ್ಲಿನ ಅತಿ ಎತ್ತರದ ಧಾರ್ಮಿಕವಲ್ಲದ ಪ್ರತಿಮೆಯಾಗಿದೆ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ  ವರದಿ ಮಾಡಿದಂತೆ ಇದು ಭಾರತದಲ್ಲೇ ತಯಾರಿಸಿದ ಪ್ರತಿಮೆ ಆಗಿದೆ. ಆಂಧ್ರ ಪ್ರದೇಶ ಸರ್ಕಾರವು ಈ ಪ್ರತಿಮೆ ವೀಕ್ಷಣೆಗೆ ಅವಕಾಶವನ್ನು ಇಂದಿನಿಂದ ಕಲ್ಪಿಸಿದೆ.

ಈ ಯೋಜನೆಯನ್ನು ನೊಯ್ಡಾ ಮೂಲದ ಡಿಸೈನ್ ಅಸೋಸಿಯೇಟ್ಸ್ ಸಂಸ್ಥೆಗೆ ವಹಿಸಲಾಗಿತ್ತು. ಅನುಭವ ಕೇಂದ್ರವು ಕಾಲಚಕ್ರ ಮಹಾ ಮಂಟಪದ ಕಟ್ಟಡದಲ್ಲಿದೆ. ಇದು ಡಾ. ಅಂಬೇಡ್ಕರ್ ಅವರ ಮೌಲ್ಯಗಳು ಮತ್ತು ನೀತಿಗಳ ಬಗ್ಗೆ ಸ್ಫೂರ್ತಿ ನೀಡುತ್ತದೆ. ಗ್ರಂಥಾಲಯವನ್ನು ಕೂಡ ಅಲ್ಲಿ ನಿರ್ಮಿಸಲಾಗಿದೆ. ಕಂಚಿನ ಪ್ರತಿಮೆಯನ್ನು ದೆಹಲಿಯಲ್ಲಿ ಸಿದ್ಧಪಡಿಸಲಾಗಿದ್ದು. ಅದನ್ನು ಭಾಗಗಳಾಗಿ ವಿಜಯವಾಡಕ್ಕೆ ಸ್ಥಳಾಂತರಿಸಿ ನಿಯಮಿತ ರೀತಿಯಲ್ಲಿ ಸ್ಮೃತಿವನದಲ್ಲಿ ಸ್ಥಾಪಿಸಿ ಸುಂದರವಾಗಿ ಅಲಂಕರಿಸಲಾಗಿದೆ.

ನೆಲ ಮಹಡಿಯಲ್ಲಿ ನಾಲ್ಕು ಸಭಾಂಗಣಗಳಿದ್ದು, ಪ್ರತಿಯೊಂದೂ ನಾಲ್ಕು ಸಾವಿರ ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ. ಅವುಗಳಲ್ಲಿ ಒಂದು ಸಿನಿಮಾ ಹಾಲ್ ಮತ್ತು ಉಳಿದ ಮೂರು ಹಾಲ್‌ಗಳಲ್ಲಿ ಅಂಬೇಡ್ಕರ್ ಅವರ ಇತಿಹಾಸವನ್ನು ಹೇಳುವ ಡಿಜಿಟಲ್ ಮ್ಯೂಸಿಯಂ ಇರುತ್ತದೆ.

ಈ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು,  ಪ್ರತಿಮೆ ಸ್ಥಾಪನೆ ಬಗ್ಗೆ ಹೆಮ್ಮೆಯನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ಸರ್ಕಾರವು ವಿಜಯವಾಡದಲ್ಲಿ ಸ್ಥಾಪಿಸಿರುವ ಅಂಬೇಡ್ಕರ್ ಅವರ 206 ಅಡಿ ಮಹಾಶಿಲ್ಪವು ರಾಜ್ಯಕ್ಕೆ ಮಾತ್ರವಲ್ಲ, ದೇಶಕ್ಕೆ ಕೂಡ ವಿಶೇಷವಾಗಿದೆ ಎಂದು ಹೇಳಿದ್ದಾರೆ.

ಸರ್ಕಾರವು ಈ ಪ್ರತಿಷ್ಠಿತ ಯೋಜನೆಯನ್ನು 2020ರಲ್ಲಿ 268 ಕೋಟಿಗಳ ಅಂದಾಜು ಬಜೆಟ್‌ನೊಂದಿಗೆ ಪ್ರಾರಂಭಿಸಿತು. ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಜೂನ್ 2020ರಲ್ಲಿ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು.

 

ಇದನ್ನು ಓದಿ: ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...