Homeಕರ್ನಾಟಕರಾಜ್ಯ ದೇಶಕ್ಕೆ ₹100 ಕೊಟ್ರೆ ₹12 ಮಾತ್ರ ಮರಳಿ ಬರುತ್ತಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ದೇಶಕ್ಕೆ ₹100 ಕೊಟ್ರೆ ₹12 ಮಾತ್ರ ಮರಳಿ ಬರುತ್ತಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯವು ದೇಶಕ್ಕೆ ಸಂಗ್ರಹಿಸಿಕೊಡುವ ಪ್ರತಿ 100 ರೂಪಾಯಿಗಳಿಗೆ 12.50 ರೂಪಾಯಿ ಮಾತ್ರ ರಾಜ್ಯಕ್ಕೆ ಮರಳಿ ಬರುತ್ತಿದೆ. ಕರ್ನಾಟಕದಿಂದ ವಾರ್ಷಿಕ ರೂ. 4 ಲಕ್ಷ ಕೋಟಿ ಆದಾಯ ಗಳಿಕೆಯಾದರೆ, ಇದಕ್ಕೆ ಪ್ರತಿಯಾಗಿ ಕೇಂದ್ರದಿಂದ ನಮಗೆ ಬರುವುದು ಸುಮಾರು ರೂ. 50,000 ಕೋಟಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ‘ಆರ್ಥಿಕ ಸಂಯುಕ್ತ ತತ್ವ : 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲು’ಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು.

15ನೇ ಹಣಕಾಸು ಆಯೋಗದ ಶಿಫಾರಸ್ಸುಗಳಿಂದ ಕರ್ನಾಟಕಕ್ಕೆ 5 ವರ್ಷಗಳ ಅವಧಿಯಲ್ಲಿ ರೂ. 62,000 ಕೋಟಿ ನಷ್ಟ ಆಗಲಿದೆ ಎಂದು ಸಿಎಂ ಹೇಳಿದರು.

ಹಿಂದಿನ ಹಣಕಾಸು ಆಯೋಗದ ಶಿಫಾರಸ್ಸುಗಳಿಂದಾಗಿ ಕರ್ನಾಟಕ ಭಾರೀ ನಷ್ಟವನ್ನು ಅನುಭವಿಸಬೇಕಾಗಿ ಬಂದಿದ್ದು, ಇದನ್ನು 16ನೇ ಹಣಕಾಸು ಆಯೋಗದ ಮುಂದೆ ಪ್ರಶ್ನಿಸಬೇಕಿದೆ. 14ನೇ ಹಣಕಾಸು ಆಯೋಗದಡಿ ಕರ್ನಾಟಕದ ಪಾಲಿನ ತೆರಿಗೆ ಹಂಚಿಕೆಯು ಶೇ 4.713 ರಿಂದ ಶೇ. 3.647 ಕ್ಕೆ 15ನೇ ಹಣಕಾಸು ಆಯೋಗದಿಂದಾಗಿ ಇಳಿದಿದೆ ಎಂದರು.

ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಅತ್ಯಂತ ದೊಡ್ಡ ಮೊತ್ತ, ಅಂದರೆ ಶೇ 1.066 ರಷ್ಟು ಇಳಿಕೆಯಾಗಿದೆ. ಈಗಿನ ವ್ಯವಸ್ಥೆ ಆದಾಯದ ದೂರ ವ್ಯಾಪ್ತಿಯನ್ನು ಪರಿಗಣಿಸಿಸುತ್ತಿದ್ದು, ಈ ಪ್ರಕಾರ ಕರ್ನಾಟಕವು ಅತಿ ಹೆಚ್ಚು ತಲಾ ಆದಾಯವಿರುವ ರಾಜ್ಯಕ್ಕೆ ಹೋಲಿಸಿ ಆದಾಯ ಕಡಿಮೆ ದೂರವ್ಯಾಪ್ತಿ ಇರುವ ಕಾರಣ ಸೋಲುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ರೂ.6,21,131 ಕೋಟಿಗೂ ಹೆಚ್ಚಿನ ತಲಾ ಆದಾಯ ಮಟ್ಟವನ್ನು ಕಾಣಬಹುದಾಗಿದೆ ಎನ್ನುವುದನ್ನು ಪರಿಗಣಿಸುವುದು ಮುಖ್ಯ. ಈ ವ್ಯವಸ್ಥೆ ಕರ್ನಾಟಕಕ್ಕೆ ಕೆಲವು ಜಿಲ್ಲೆಗಳಲ್ಲಿ ಕಡಿಮೆಯಿರುವ ತಲಾ ಆದಾಯದ ಸಮಸ್ಯೆಯನ್ನು ಬಗೆಹರಿಸಲು ಸಾಕಷ್ಟು ಸಂಪನ್ಮೂಲ ವರ್ಗಾವಣೆಯಿಂದ ವಂಚಿತವಾಗಿಸಿದೆ. ಅಂತರ ರಾಜ್ಯ ತಲಾ ಆದಾಯ ವ್ಯತ್ಯಾಸಗಳಿಗೆ ಹಣಕಾಸು ಆಯೋಗಗಳು ಅಗತ್ಯವಿರುವ ಹೊಂದಾಣಿಕೆಯನ್ನು ಮಾಡಿಕೊಂಡು ಶಿಫಾರಸ್ಸುಗಳನ್ನು ಮಾಡುವಾಗ ಆದಾಯ ದೂರವ್ಯಾಪ್ತಿಯನ್ನು ಪರಿಗಣಿಸಬೇಕು ಎಂದು ಸಿಎಂ ಆಗ್ರಹಿಸಿದರು.

ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಕ್ಕೆ ತನ್ನ ಕೊಡುಗೆಗೆ ತಕ್ಕ ಪ್ರತಿಫಲ ದೊರಕದಿರುವುದು ವಿಪರ್ಯಾಸ. 16ನೇ ಹಣಕಾಸು ಆಯೋಗವು ದಕ್ಷತೆಗೆ ಪ್ರೋತ್ಸಾಹಕಗಳನ್ನು ಹಾಗೂ ವಿತ್ತೀಯ ಕಾರ್ಯಕ್ಷಮತೆಗೆ ನೀಡುವ ಬೆಲೆಯನ್ನು ಹೆಚ್ಚಿಸುವಂತೆ 16ನೇ ಹಣಕಾಸು ಆಯೋಗವನ್ನು ನಾವು ಒತ್ತಾಯಿಸುತ್ತೇವೆ ಎಂದರು.

ಅತ್ಯುತ್ತಮ ವಿತ್ತೀಯ ಕಾರ್ಯಕ್ಷಮತೆ ಹೊಂದಿರುವ ರಾಜ್ಯ ಎಂದು ದಾಖಲೆ ಹೊಂದಿರುವ ನಮ್ಮ ರಾಜ್ಯಕ್ಕೆ ಅದರ ದಕ್ಷತೆಗಾಗಿ ಯಾವುದೇ ಪ್ರೋತ್ಸಾಹಕಗಳು ದೊರೆಯುತ್ತಿಲ್ಲ. ಕರ್ನಾಟಕದ ಭಾರಿ ವಿತ್ತೀಯ ಕಾರ್ಯಕ್ಷಮತೆ ಗಮನಾರ್ಹವಾಗಿದ್ದು ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಘೋಷಿಸಿದ ಮೊದಲ ರಾಜ್ಯವೆಂದು ಹೆಗ್ಗಳಿಕೆ ಪಡೆದಿದೆ. ಕೋವಿಡ್ ನಂತರದಲ್ಲಿ ರಾಜಸ್ವ ಕೊರತೆಗಳು ಮರುಕಳಿಸಿದ್ದನ್ನು ಹೊರತುಪಡಿಸಿ ಭಾರಿ ಗಾತ್ರದ ವಿತ್ತೀಯ ಸೂಚಕಗಳಾದ ವಿತ್ತೀಯ ಕೊರತೆ ಮತ್ತು ರಾಜಸ್ವ ಕೊರತೆ ಸದಾ ನಿಗದಿತ ವ್ಯಾಪ್ತಿಯಲ್ಲಿಯೇ ಇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಬಲೀಕೃತ ಸಮಿತಿಗಳ ಅಂದಾಜು ಬಳಸಿ ಮಾಡುವ ಒಟ್ಟು ಪ್ರಯತ್ನದ ಹೊರತಾಗಿಯೂ ರಾಜ್ಯ ಸತತವಾದ ಪ್ರಾದೇಶಿಕ ಅಸಮತೋಲನವನ್ನು ಎದುರಿಸುತ್ತಿದೆ. 2022-23ರ ಆರ್ಥಿಕ ಸಮೀಕ್ಷೆಯ ಪ್ರಕಾರ, 6,21,131 ರೂ.ಗಳ ತಲಾದಾಯವನ್ನು ಹೊಂದಿರುವ ಬೆಂಗಳೂರು ನಗರ ಪ್ರಥಮ ಸ್ಥಾನದಲ್ಲಿದ್ದು, 1,24,998 ರೂ.ಗಳ ತಲಾ ಆದಾಯವನ್ನು ಹೊಂದಿರುವ ಕಲಬುರಗಿ ಕೊನೆಯ ಸ್ಥಾನದಲ್ಲಿದೆ ಎಂದು ತಿಳಿಸಿದರು

ಬೆಂಗಳೂರು ನಗರದ ಮಾನವ ಅಭಿವೃದ್ಧಿ ಸೂಚ್ಯಂಕ 0.738 ಪಡೆದು ಮೊದಲ ಸ್ಥಾನದಲ್ಲಿದ್ದರೆ, ಯಾದಗಿರಿ, ಕಲಬುರಗಿ ಮತ್ತು ರಾಯಚೂರು 0.538, 0.539 ಹಾಗೂ 0.562 ಅನುಕ್ರಮವಾಗಿ ಮಾನವ ಅಭಿವೃದ್ಧಿ ಸೂಚ್ಯಂಕ ಪಡೆದು ಕೊನೆಯ ಮೂರು ಸ್ಥಾನಗಳಲ್ಲಿದ್ದು, ಮಾನವ ಅಭಿವೃದ್ಧಿಯ ಅಸಮತೋಲನ ಗಮನಾರ್ಹವಾಗಿದೆ ಎಂದು ಹೇಳಿದರು.

ಇದನ್ನೂ ಓದಿ : “ಬಿಜೆಪಿ ಗೂಂಡಾಗಳಿಂದ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಮೇಲೆ ದಾಳಿ”: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...