Homeಮುಖಪುಟರಾಜಸ್ಥಾನ: ಅಧಿಕಾರಕ್ಕೆ ಬಂದ ಬೆನ್ನಲ್ಲಿ ಸಾವಿರಾರು ಯುವಕರ 'ಉದ್ಯೋಗ' ಕಸಿದುಕೊಂಡ ಬಿಜೆಪಿ ಸರಕಾರ

ರಾಜಸ್ಥಾನ: ಅಧಿಕಾರಕ್ಕೆ ಬಂದ ಬೆನ್ನಲ್ಲಿ ಸಾವಿರಾರು ಯುವಕರ ‘ಉದ್ಯೋಗ’ ಕಸಿದುಕೊಂಡ ಬಿಜೆಪಿ ಸರಕಾರ

- Advertisement -
- Advertisement -

ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬೆನ್ನಲ್ಲಿ ಹಿಂದಿನ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ರಾಜೀವ್ ಗಾಂಧಿ ಯುವ ಮಿತ್ರ ಇಂಟರ್ನ್‌ಶಿಪ್ ಯೋಜನೆಯನ್ನು ಕೊನೆಗೊಳಿಸಿದ್ದು, 4,000ಕ್ಕೂ ಹೆಚ್ಚು ಯುವಕರು ಉದ್ಯೋಗವನ್ನು ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ.

ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯವು 5,000 ರಾಜೀವ್ ಗಾಂಧಿ ಯುವ ಮಿತ್ರರಿಗೆ ಉದ್ಯೋಗ ನೀಡಿತ್ತು. ಇದೀಗ ಯೋಜನೆಯನ್ನು ಕೊನೆಗೊಳಿಸಿರುವುದರಿಂದ ಯೋಜನೆಯಡಿಯಲ್ಲಿ ಯುವಕರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.  ಸರಕಾರದ ನಿರ್ಧಾರದ ವಿರುದ್ಧ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜೀವ್ ಗಾಂಧಿ ಯುವ ಮಿತ್ರ ಇಂಟರ್ನ್‌ಶಿಪ್ ಯೋಜನೆಯಡಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವು ಯೋಜನೆಗಳನ್ನು ಪ್ರಚಾರ ಮಾಡಬೇಕಿತ್ತು. ಈ ಯೋಜನೆಯಡಿ ಉದ್ಯೋಗ ಪಡೆದ ಯುವಕರಿಗೆ ಪ್ರತಿ ತಿಂಗಳು ಸುಮಾರು 17,500 ರೂ. ವೇತನ ಸಿಗುತ್ತಿತ್ತು. ಯೋಜನೆಯನ್ನು ಇದೀಗ ಕೇಂದ್ರ ಸರಕಾರ ರದ್ದುಪಡಿಸಿದ ಕಾರಣ ಸುಮಾರು 4,200 ಯುವಕರು ನಿರುದ್ಯೋಗಿಗಳಾಗಿದ್ದಾರೆ.  ರಾಜೀವ್ ಗಾಂಧಿ ಯುವ ಮಿತ್ರ ಇಂಟರ್ನ್‌ಶಿಪ್ ಯೋಜನೆಯಡಿಯಲ್ಲಿ ಸಿಕ್ಕ ಉದ್ಯೋಗದಿಂದ ನಮ್ಮ ಕುಟುಂಬದ ಜೀವನ ಸಾಗುತ್ತಿತ್ತು. ಸುಮಾರು ಒಂದು ತಿಂಗಳಿನಿಂದ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ಸರ್ಕಾರ ನಮ್ಮ ಮನವಿಗಳನ್ನು ಸ್ವೀಕರಿಸಿಲ್ಲ. ಗುತ್ತಿಗೆ ನೌಕರರಾಗಿ ಸರ್ಕಾರ ನಮ್ಮನ್ನು ಸೇರಿಸಿಕೊಳ್ಳಬೇಕು ಎಂದು ನಾವು ಬಯಸುತ್ತೇವೆ ಎಂದು ಪ್ರತಿಭಟನಾನಿರತ  25 ವರ್ಷದ ದಿಲೀಪ್ ಸಪೇರಾ ಹೇಳಿದ್ದಾರೆ.

2021-22ರ ಬಜೆಟ್ ಭಾಷಣದಲ್ಲಿ ಮಾಜಿ ಸಿಎಂ ಗೆಹ್ಲೋಟ್ ಅವರು ಯುವ ಮಿತ್ರ ಇಂಟರ್ನ್‌ಶಿಪ್ ಯೋಜನೆಯನ್ನು ಘೋಷಿಸಿದ್ದರು. ಇದಕ್ಕೆ ಬಿಜೆಪಿಯು ವಿರೋಧ ಪಕ್ಷದಲ್ಲಿದ್ದಾಗ ಆಕ್ಷೇಪಣೆಗಳನ್ನು ಎತ್ತಿತ್ತು.  ಕಾಂಗ್ರೆಸ್‌ ಪಕ್ಷದ ಸಿದ್ಧಾಂತವನ್ನು ಪ್ರಚಾರ ಮಾಡಲು ಯುವಮಿತ್ರರನ್ನು ಬಳಸಿಕೊಂಡಿದೆ ಎಂದು ಬಿಜೆಪಿ ಆರೋಪಿಸಿತ್ತು.

ಕಾಂಗ್ರೆಸ್ ನಾಯಕ ಮತ್ತು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಜೈಪುರದಲ್ಲಿ ಯುವ ಮಿತ್ರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಯೋಜನೆಯ ರದ್ದತಿಯನ್ನು ಹಿಂಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಐದು ಸಾವಿರ ಯುವಕರನ್ನು ಅವರ ಕೆಲಸದಿಂದ ತೆಗೆದುಹಾಕಲಾಗಿದೆ. ಸರಕಾರದ ಈ ನಿರ್ಧಾರವನ್ನು ನಾನು ಖಂಡಿಸುತ್ತೇನೆ. ಈ ಬಗ್ಗೆ ಸರಕಾರ ಮರು ಪರಿಶೀಲಿಸಿ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಬಿಜೆಪಿ ಸರ್ಕಾರ ತನ್ನ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಉದ್ಯೋಗದ ಭರವಸೆಗಳನ್ನು ಮರೆತಿದೆ. ಈಗ ಯುವಕರನ್ನು ಉದ್ಯೋಗದಿಂದಲೇ ತೆಗೆದುಹಾಕಿದೆ. ಯುವ ಸಮುದಾಯವನ್ನು ನಿರುದ್ಯೋಗಿಗಳನ್ನಾಗಿ ಮಾಡಿದೆ. ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತುವುದಾಗಿ ಸಚಿನ್‌ ಪೈಲೆಟ್‌ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಸವರ್ಣಿಮ್ ಚತುರ್ವೇದಿ ಈ ಕುರಿತು ಪ್ರತಿಕ್ರಿಯಿಸಿದ್ದು, ಬಿಜೆಪಿ ಸರಕಾರ, ಹಿಂದಿನ ಗೆಹ್ಲೋಟ್ ಸರ್ಕಾರ ತಂದ ಕಲ್ಯಾಣ ಯೋಜನೆಗಳನ್ನು ನಿರ್ಲಕ್ಷಿಸಿ ಮಿಸಾ ಕೈದಿಗಳಿಗೆ ಪಿಂಚಣಿಯನ್ನು ಮರಳಿ ತರುವ ಮೂಲಕ ಬಿಜೆಪಿ ತನ್ನ ಸಿದ್ಧಾಂತದ ಜನರಿಗೆ ಲಾಭ ನೀಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಸರ್ಕಾರ ಆದೇಶವನ್ನು ಹಿಂಪಡೆಯಬೇಕು ಮತ್ತು ಉದ್ಯೋಗಗಳನ್ನು ಮತ್ತೆ ನೀಡಬೇಕು ಎನ್ನುವುದು ನಮ್ಮ ಪ್ರಾಥಮಿಕ ಬೇಡಿಕೆಯಾಗಿದೆ. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ಇದನ್ನು ಓದಿ: ವಿಜಯವಾಡದಲ್ಲಿ ವಿಶ್ವದ ಅತಿದೊಡ್ಡ ‘ಅಂಬೇಡ್ಕರ್’ ಪ್ರತಿಮೆ ಅನಾವರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...