Homeಮುಖಪುಟರಾಮಮಂದಿರ ಉದ್ಘಾಟನೆ: ಸುಳ್ಳು, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸುದ್ದಿ ಪ್ರಕಟಿಸದಂತೆ ಸೂಚಿಸಿದ ಕೇಂದ್ರ ಸರಕಾರ

ರಾಮಮಂದಿರ ಉದ್ಘಾಟನೆ: ಸುಳ್ಳು, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸುದ್ದಿ ಪ್ರಕಟಿಸದಂತೆ ಸೂಚಿಸಿದ ಕೇಂದ್ರ ಸರಕಾರ

- Advertisement -
- Advertisement -

ಜನವರಿ 22ರಂದು ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆ ಅಯೋಧ್ಯೆಯಲ್ಲಿನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವುದೇ ಸುಳ್ಳು ಅಥವಾ ಆಕ್ಷೇಪಾರ್ಹ ಸುದ್ದಿ ಪ್ರಕಟಿಸದಂತೆ ಮುಖ್ಯವಾಹಿನಿ ಮಾದ್ಯಮಗಳಿಗೆ ಮತ್ತು ಸಾಮಾಜಿಕ ಮಾದ್ಯಮಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಎಚ್ಚರಿಕೆಯನ್ನು ನೀಡಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಹೊರಡಿಸಿದ ಸಲಹೆಯಲ್ಲಿ, ಪರಿಶೀಲಿಸದ, ಪ್ರಚೋದನಕಾರಿ ಮತ್ತು ನಕಲಿ ಸಂದೇಶಗಳನ್ನು ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವುದನ್ನು ಗಮನಿಸಲಾಗಿದೆ. ಇದು ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುತ್ತದೆ.  ಪತ್ರಿಕೆಗಳು, ಖಾಸಗಿ ಉಪಗ್ರಹ ಟಿವಿ ಚಾನೆಲ್‌ಗಳು ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಮತ್ತು  ದೇಶದಲ್ಲಿ ಕೋಮು ಸೌಹಾರ್ದತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಯಾವುದೇ ವಿಷಯವನ್ನು ಪ್ರಕಟಿಸುವುದು ಮತ್ತು ಪ್ರಸಾರ ಮಾಡುವುದನ್ನು ತಡೆಯುವಂತೆ ಸೂಚನೆಯನ್ನು ನೀಡಿದೆ.

ಇದಲ್ಲದೆ ಸಾಮಾಜಿಕ ಮಾದ್ಯಮಗಳ ಬಳಕೆದಾರರು ಕೂಡ ಯಾವುದೇ ರೀತಿಯ ಸುಳ್ಳು, ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ವಿಚಾರಗಳನ್ನು ಪ್ರಕಟಿಸದಂತೆ ಸಲಹೆ ನೀಡಲಾಗಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ ನಿಯಂತ್ರಣ ಕಾಯ್ದೆ 1995ರ ಅಡಿಯಲ್ಲಿನ ಪ್ರೋಗ್ರಾಂ ಕೋಡ್‌ನ ನಿಬಂಧನೆಗಳನ್ನು ಮತ್ತು ಪ್ರೆಸ್ ಕೌನ್ಸಿಲ್ ಆಕ್ಟ್-1978ರ ಪತ್ರಿಕೋದ್ಯಮ ನಡವಳಿಕೆಯ ಮಾನದಂಡಗಳನ್ನು ಸಲಹೆಯ ಜೊತೆ ಉಲ್ಲೇಖಿಸಿದೆ. ಇದಲ್ಲದೆ ಪತ್ರಿಕಾ ಮಂಡಳಿ ಕಾಯ್ದೆ, ಮಾಹಿತಿ ತಂತ್ರಜ್ಞಾನ(ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಾವಳಿಗಳು 2021ರ ಅಡಿ ನಿಬಂಧನೆಗಳನ್ನು ಉಲ್ಲೇಖಿಸಿದೆ. ಈ ನಿಬಂಧನೆಗಳಿಗೆ ಅನುಗುಣವಾಗಿ ಸುಳ್ಳು ಅಥವಾ ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯನ್ನುಂಟು ಮಾಡಬಹುದಾದ ಯಾವುದೇ ಸುದ್ದಿ, ಮಾಹಿತಿಯನ್ನು ಪ್ರಕಟಿಸದಂತೆ ಮತ್ತು ಪ್ರಚಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದೆ.

ಜ.22ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ದೇಶದಾದ್ಯಂತ ಕೇಂದ್ರ ಸರಕಾರದ ಅಧೀನದಲ್ಲಿನ ಕಚೇರಿಗಳಿಗೆ ಅರ್ಧ ದಿನ ರಜೆಯನ್ನು ಘೋಷಿಸಿದೆ. ಇದಲ್ಲದೆ ತ್ರಿಪುರಾ, ಉತ್ತರಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ರಾಜಸ್ಥಾನ, ಗುಜರಾತ್‌, ಉತ್ತರಖಂಡ, ಪುದುಚೇರಿ ಸರಕಾರಗಳು ರಾಮಮಂದಿರ ಉದ್ಘಾಟನೆ ಹಿನ್ನೆಲೆ ಅರ್ಧದಿನ ರಜೆಯನ್ನು ಘೋಷಿಸಿದೆ. ಗೋವಾದಲ್ಲಿ ಶಾಲೆಗಳಿಗೆ ಮತ್ತು ಸರಕಾರಿ ಕಚೇರಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಹರ್ಯಾಣದಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಮಹಾರಾಷ್ಟ್ರ ಸರಕಾರ ರಾಜ್ಯದಲ್ಲಿ ಜ.22ರಂದು ಸಾರ್ವಜನಿಕ ರಜೆಯನ್ನು ಘೋಷಿಸಿದೆ.

ರಾಮಮಂದಿರ ಪ್ರಾಣ ಪ್ರತಿಷ್ಟಾಪಾನಾ ದಿನ ಸರಕಾರಿ ಕಚೇರಿ, ಶಾಲೆಗಳಿಗೆ ರಜೆ ನೀಡಿರುವ ಕೇಂದ್ರ ಸರಕಾರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿದೆ. ಸರ್ಕಾರವು ಇಂತಹ ಸುತ್ತೋಲೆ ಹೊರಡಿಸುವ ಮೂಲಕ ಅಧಿಕಾರದ ದುರುಪಯೋಗ ಮಾಡಿದೆ. ಧಾರ್ಮಿಕ ನಂಬಿಕೆಯ ವಿಚಾರದಲ್ಲಿ ವೈಯಕ್ತಿಕವಾಗಿ ತೀರ್ಮಾನ ತೆಗೆದುಕೊಳ್ಳುವ ಹಕ್ಕು ನೌಕರರಿಗೆ ಇದೆ. ಸರ್ಕಾರದ ಇಂತಹ ಕ್ರಮವು ಸಂವಿಧಾನ ಮತ್ತು ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಸಿಪಿಎಂ ಪಾಲಿಟ್‌ ಬ್ಯೂರೊ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯವೊಂದು ಈದ್‌ ಮಿಲಾದ್‌ ದಿನದ ರಜೆಯನ್ನು ರದ್ದುಗೊಳಿಸಿದೆ. ಶುಕ್ರವಾರದ ನಮಾಝ್‌ಗೆ ಮೀಸಲಿಟ್ಟಿದ್ದ 30 ನಿಮಿಷಗಳ ವಿರಾಮದ ಅವಧಿಯನ್ನು ಸಾಂವಿಧಾನಿಕ ಹುದ್ದೆಯಲ್ಲಿರುವ ಒಬ್ಬರು ರದ್ದು ಮಾಡಿದ್ದಾರೆ. ಯಾರ ತುಷ್ಟೀಕರಣವೂ ಇಲ್ಲದೆ ಎಲ್ಲರ ಅಭಿವೃದ್ಧಿ ಎಂದರೆ ಇದೇನಾ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ಪ್ರಶ್ನಿಸಿದ್ದರು.

ಇದನ್ನು ಓದಿ: ರಾಜಸ್ಥಾನ: ಅಧಿಕಾರಕ್ಕೆ ಬಂದ ಬೆನ್ನಲ್ಲಿ ಸಾವಿರಾರು ಯುವಕರ ‘ಉದ್ಯೋಗ’ ಕಸಿದುಕೊಂಡ ಬಿಜೆಪಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...