Homeಮುಖಪುಟಅಕ್ರಮ ಹಣ ವರ್ಗಾವಣೆ ಪ್ರಕರಣ: 5 ಗಂಟೆಗಳ ಕಾಲ ಹೇಮಂತ್ ಸೊರೇನ್ ವಿಚಾರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: 5 ಗಂಟೆಗಳ ಕಾಲ ಹೇಮಂತ್ ಸೊರೇನ್ ವಿಚಾರಣೆ

- Advertisement -
- Advertisement -

ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಶನಿವಾರ ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ‘ಇದು ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ’ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಆರೋಪಿಸಿದ್ದಾರೆ.

ಕೇಂದ್ರ ತನಿಖಾ ಸಂಸ್ಥೆಯು ಹೇಮಂತ್ ಸೊರೇನ್ ಅವರನ್ನು ಮತ್ತೊಂದು ದಿನ ವಿಚಾರಣೆ ನಡೆಸುವ ಸಾಧ್ಯತೆ ಇದ್ದು, ವಿಚಾರಣಾ ದಿನಾಂಕವನ್ನು ನಂತರ ನಿರ್ಧರಿಸಲಾಗುವುದು ಎಂದು ಇಡಿ ಮೂಲಗಳಿಂದ ತಿಳಿದುಬಂದಿದೆ. ಭಾರೀ ಭದ್ರತಾ ನಿಯೋಜನೆಯ ನಡುವೆ ಇಡಿ ಅಧಿಕಾರಿಗಳು ರಾಜ್ಯ ರಾಜಧಾನಿ ರಾಂಚಿಯ ಸಿಎಂ ಅವರ ಕಂಕೆ ರಸ್ತೆಯ ನಿವಾಸದಿಂದ ವಿಚಾರಣೆ ಮುಗಿಸಿ ನಿರ್ಗಮಿಸಿದರು.

‘ಅವರು (ಕೇಂದ್ರ) ನಮ್ಮ ವಿರುದ್ಧ ಷಡ್ಯಂತ್ರಗಳನ್ನು ಹೆಣೆಯುತ್ತಿದ್ದಾರೆ. ನಾವು ಅವರ ಷಡ್ಯಂತ್ರಗಳನ್ನು ಚೂರುಚೂರು ಮಾಡುವ ಮೂಲಕ ರಾಜ್ಯದ ಅಭಿವೃದ್ಧಿಯನ್ನು ಮಾಡುತ್ತಿದ್ದೇವೆ. ಅವರ ಶವಪೆಟ್ಟಿಗೆಗೆ ಅಂತಿಮ ಮೊಳೆ ಹಾಕುವ ಸಮಯ ಬಂದಿದೆ. ಹೇಮಂತ್ ಸೊರೆನ್ ಯಾವಾಗಲೂ ಕಾರ್ಮಿಕರೊಂದಿಗೆ ನಿಲ್ಲುತ್ತಾರೆ’ ಎಂದು ಜೆಎಂಎಂನ ಕಾರ್ಯಕಾರಿ ಅಧ್ಯಕ್ಷರು ವಿಚಾರಣೆಯ ನಂತರ ಬೆಂಬಲಿಗರಿಗೆ ತಿಳಿಸಿದರು.

ಸೊರೇನ್ ಅವರು ಮೊದಲ ಏಳು ಸಮನ್ಸ್‌ಗಳನ್ನು ನಿರ್ಲಕ್ಷಿಸಿದ್ದರು. ನಂತರ, ಎಂಟನೇ ಬಾರಿಗೆ ತನಿಖಾ ಸಂಸ್ಥೆ ಅವರನ್ನು ಕರೆಸಿದಾಗ ವಿಚಾರಣೆಗೆ ತಮ್ಮ ಒಪ್ಪಿಗೆಯನ್ನು ಸೂಚಿಸಿ, ದಿನ ಹಾಗೂ ಸ್ಥಳ ನಿಗದಿ ಮಾಡಿದ್ದರು.

‘ನಿಮ್ಮ ಬೆಂಬಲಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳುತ್ತೇನೆ; ನಾನು ಅವರಿಗೆ ಭಯಪಡುವುದಿಲ್ಲ ಅಥವಾ ಭಾಗುವುದಿಲ್ಲ ಎಂದು ನಿಮಗೆ ಭರವಸೆ ನೀಡಲು ಬಯಸುತ್ತೇನೆ. ಯಾವುದೇ ಅಡೆತಡೆಗಳನ್ನು ಲೆಕ್ಕಿಸದೆ ನಾವು ಸುಳ್ಳಿಗೆ ತಲೆಬಾಗುವುದಿಲ್ಲ’ ಎಂದು ಅವರು ತಮ್ಮ ಮನೆಯ ಹೊರಗೆ ಮಾಡಿದ ಭಾಷಣದಲ್ಲಿ ಹೇಳಿದರು. ಅಲ್ಲಿ ಇಡಿ ಕ್ರಮವನ್ನು ಪ್ರತಿಭಟಿಸಲು ನೂರಾರು ಜೆಎಂಎಂ ಬೆಂಬಲಿಗರು ಜಮಾಯಿಸಿದ್ದರು.

‘ನಾವು ಪ್ರತಿಪಕ್ಷಗಳ ಷಡ್ಯಂತ್ರದ ಜಾಲವನ್ನು ಬಿಡಿಸುತ್ತಾ ಮುನ್ನಡೆಯುತ್ತಿದ್ದೇವೆ. ನೀವು ಭಯಪಡುವ ಅಗತ್ಯವಿಲ್ಲ. ನಿಮ್ಮ ನೈತಿಕತೆಯನ್ನು ಉನ್ನತ ಮಟ್ಟದಲ್ಲಿ ಇರಿಸಿ. ನಮ್ಮ ಮೇಲೆ ಹಾರಿದ ಮೊದಲ ಬುಲೆಟ್ ಅನ್ನು ನಿಮ್ಮ ನಾಯಕನೇ ತೆಗೆದುಕೊಳ್ಳುತ್ತಾನೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ’ ಎಂದು ಸೊರೆನ್ ಹೇಳಿದರು.

ರಾಂಚಿಯ ಬಜ್ರಾ ಪ್ರದೇಶದಲ್ಲಿ 7.16 ಎಕರೆ ವಿಸ್ತೀರ್ಣದ ಜಮೀನಿನ ಮಾಲೀಕತ್ವಕ್ಕೆ ಸಂಬಂಧಿಸಿದ ಆಪಾದಿತ ಭೂ ಹಗರಣಕ್ಕೆ ಸಂಬಂಧಿಸಿ ಕೇಂದ್ರೀಯ ಏಜೆನ್ಸಿಯ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಸೋರೆನ್ ವಿರುದ್ಧ ತನಿಖೆ ನಡೆಸುತ್ತಿದೆ. ಸೇನಾ ಭೂಮಿಯನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂಬ ಆರೋಪಿಸಲಾಗಿದೆ. ಆದರೆ, ‘ಪ್ರಕರಣವು ಸ್ಪಷ್ಟವಾಗಿಲ್ಲ ಮತ್ತು ಅವರ ಆಸ್ತಿಯ ವಿವರಗಳು ಈಗಾಗಲೇ ಸಾರ್ವಜನಿಕವಾಗಿವೆ’ ಎಂದು ಸೊರೇನ್ ಸರ್ಕಾರ ಹೇಳಿದೆ.

‘ಇಡಿ ಅಧಿಕಾರಿಗಳ ತಂಡ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಿಎಂ ನಿವಾಸವನ್ನು ತಲುಪಿತು; ಮಧ್ಯಾಹ್ನ 3 ಗಂಟೆಯ ಸುಮಾರಿಗೆ ವಿಚಾರಣೆ ಆರಂಭಿಸಿದರು’ ಎಂದು ಜಾರ್ಖಂಡ್ ಸರ್ಕಾರದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

‘2023 ರಲ್ಲಿ ದಾಖಲಾದ ಜಾರಿ ಪ್ರಕರಣ ಮಾಹಿತಿ ವರದಿಗೆ ಸಂಬಂಧಿಸಿದಂತೆ ಭಾನು ಪ್ರತಾಪ್ ಪ್ರಸಾದ್, ಆಗಿನ ಕಂದಾಯ ಸಬ್ ಇನ್ಸ್ಪೆಕ್ಟರ್ಗಳು ಮತ್ತು ಇತರರನ್ನು ಒಳಗೊಂಡಿರುವ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದೆ. ತನಿಖಾ ಸಂಸ್ಥೆಯು ಈ ವಿಷಯಕ್ಕೆ ಸಂಬಂಧಿಸಿದಂತೆ ಸೊರೇನ್ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದೆ. ಅವರ ಸ್ವಾಧೀನದಲ್ಲಿರುವ ಆಸ್ತಿಗಳ ವಿವರಗಳನ್ನು ಪಡೆಯುತ್ತಿದೆ’ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಛವಿ ರಂಜನ್, ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಮತ್ತು ರಾಂಚಿಯ ಉಪ ಆಯುಕ್ತ ಭಾನು ಪ್ರತಾಪ್ ಪ್ರಸಾದ್ ಮತ್ತು ಉದ್ಯಮಿಗಳಾದ ಅಮಿತ್ ಅಗರವಾಲ್ ಮತ್ತು ಬಿಷ್ಣು ಅಗರವಾಲ್ ಸೇರಿದಂತೆ 14 ಜನರನ್ನು ಬಂಧಿಸಿದೆ.

ಶನಿವಾರ ನೂರಾರು ಜೆಎಂಎಂ ಕಾರ್ಯಕರ್ತರು, ವಿವಿಧ ಬುಡಕಟ್ಟು ಸಂಘಟನೆಗಳೊಂದಿಗೆ ರಾಜ್ಯಾದ್ಯಂತ ಪ್ರದರ್ಶನಗಳನ್ನು ನಡೆಸಿದರು. ಸೋರೆನ್ ಅವರನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರವು ಇಡಿಯಂತಹ ಏಜೆನ್ಸಿಗಳ ಮೂಲಕ ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು. ಇಡಿ ಪ್ರಶ್ನಿಸಿರುವುದನ್ನು ವಿರೋಧಿಸಿ ಬುಡಕಟ್ಟು ಸಂಘಟನೆ ಆದಿವಾಸಿ ಸಂಘವು ಗಿರಿದಿಹ್-ಡುಮ್ರಿ ರಸ್ತೆಯನ್ನು ತಡೆದಿತ್ತು.

1,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವುದರೊಂದಿಗೆ ಸಿಎಂ ಮನೆಯ ಸುತ್ತಲಿನ ಪ್ರದೇಶವು ತಾತ್ಕಾಲಿಕ ಕೋಟೆಯಾಗಿ ಮಾರ್ಪಟ್ಟಿತ್ತು. ‘ಒಂದು ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮೂರು ಹಂತದ ಭದ್ರತೆಯನ್ನು ಖಾತ್ರಿಪಡಿಸಲಾಗಿದೆ’ ಎಂದು ರಾಂಚಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.

‘ಯಾವುದೇ ಸಂಭವನೀಯ ಅಹಿತಕರ ಘಟನೆಯನ್ನು ತಪ್ಪಿಸಲು ರಾಂಚಿ ಆಡಳಿತವು ತನಿಖಾ ಸಂಸ್ಥೆಯ ಕಚೇರಿ ಮತ್ತು ಸಿಎಂ ಮನೆಯ ಸುತ್ತಲೂ ಮೂರು ಹಂತದ ಭದ್ರತಾ ವ್ಯವಸ್ಥೆಯನ್ನು ಖಾತ್ರಿಪಡಿಸಿದೆ’ ಎಂದು ಅವರು ಹೇಳಿದರು.

ಬಹುಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ಇಡಿ ಅಧಿಕಾರಿಗಳ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ; ರಾಮಮಂದಿರ ಉದ್ಘಾಟನೆ: ದೆಹಲಿ ಏಮ್ಸ್‌ಗೆ ಅರ್ಧದಿನ ರಜೆ, ಒಪಿಡಿ ಸೇವೆ ಬಂದ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...