Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ; ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜಿಸುತ್ತಿದೆ; ರಾಹುಲ್‌ ಗಾಂಧಿ

ಭಾರತ್ ಜೋಡೋ ನ್ಯಾಯ ಯಾತ್ರೆ; ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜಿಸುತ್ತಿದೆ; ರಾಹುಲ್‌ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ ಯಾತ್ರೆ ಬಿಸ್ವನಾಥ್ ಜಿಲ್ಲೆಯ ರಾಜ್‌ಗಢದ ಮೂಲಕ ಎರಡನೇ ಬಾರಿಗೆ ಅಸ್ಸಾಂಗೆ ಪ್ರವೇಶಿದ್ದು, ಇಂದು ಯಾತ್ರೆ ನಾಗಾನ್ ಜಿಲ್ಲೆಯ ಕಡೆಗೆ ಸಾಗುತ್ತಿದೆ.

ನಿನ್ನೆ ರಾತ್ರಿ ಯಾತ್ರೆ ಸಾಗಿ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ವಾಸ್ತವ್ಯ ಹೂಡಲಾಗಿತ್ತು. ಅರುಣಾಚಲ ಪ್ರದೇಶದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ದಿವಂಗತ ತಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು 1987ರಲ್ಲಿ ಅರುಣಾಚಲ ಪ್ರದೇಶಕ್ಕೆ ರಾಜ್ಯದ ಸ್ಥಾನಮಾನ ನೀಡಿದ್ದರು. ಆದರೆ ಬಿಜೆಪಿ ರಾಜ್ಯದ ಜನರಿಗೆ ನಿರುದ್ಯೋಗ, ಬೆಲೆ ಏರಿಕೆ ಮತ್ತು ಜಿಎಸ್‌ಟಿಯ ಒತ್ತಡವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.

ದೋಯಿಮುಖ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಬಿಜೆಪಿ ಜಾತಿ, ಮತ, ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜಿಸುತ್ತಿದೆ. ಧರ್ಮ ಮತ್ತು ಭಾಷೆಯ ಹೆಸರಿನಲ್ಲಿ ಜಗಳವಾಡಲು ಜನರನ್ನು  ಪ್ರಚೋದಿಸುತ್ತದೆ. ಬಿಜೆಪಿಯು ಕೆಲವು ಉದ್ಯಮಿಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತದೆ.  ಕಷ್ಟದಲ್ಲಿರುವ ಜನರ ಹಿತಾಸಕ್ತಿಗಾಗಿ ಅಲ್ಲ. ಆದರೆ ಕಾಂಗ್ರೆಸ್ ಜನರನ್ನು ಒಗ್ಗೂಡಿಸಲು ಕೆಲಸ ಮಾಡುತ್ತಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ದೇಶದಲ್ಲಿ ನಿರುದ್ಯೋಗ ಸಮಸ್ಯೆಗೆ ಹೆಚ್ಚಳಕ್ಕೆ ಬಿಜೆಪಿ ಕಾರಣ. ಬಿಜೆಪಿ ಆಡಳಿತದಲ್ಲಿ ಸರ್ಕಾರವು ಜನರ ಕುಂದುಕೊರತೆಗಳನ್ನು ಆಲಿಸಲು ಸಿದ್ಧರಿಲ್ಲ. ಯಾತ್ರೆಯ ಸಮಯದಲ್ಲಿ ನಾನು ಬೆಳಿಗ್ಗೆಯಿಂದ ಸಂಜೆಯವರೆಗೆ ಹಲವಾರು ಗಂಟೆಗಳ ಕಾಲ ಪ್ರಯಾಣಿಸುತ್ತೇನೆ ಮತ್ತು ಜನರ ನೋವುಗಳಿಗೆ ಕಿವಿಯಾಗುತ್ತೇನೆ ಎಂದು ಹೇಳಿದ್ದಾರೆ.

ನಿನ್ನೆ ಸಂಜೆ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಅರುಣಾಚಲ ಪ್ರದೇಶವನ್ನು ಪ್ರವೇಶಿಸಿತ್ತು.

ಭಾರತ್ ಜೋಡೋ ನ್ಯಾಯ್ ಯಾತ್ರೆಯು ಕಾಲ್ನಡಿಗೆ ಮತ್ತು ಬಸ್ಸಿನಲ್ಲಿ ಸಾಗುತ್ತಿದ್ದು, ಗುರುವಾರದಿಂದ ಶನಿವಾರ ಮಧ್ಯಾಹ್ನದವರೆಗೆ ಅಸ್ಸಾಂನಲ್ಲಿ ಮೊದಲ ಹಂತದ ಪ್ರಯಾಣ ನಡೆದಿತ್ತು. ಆ ಬಳಿಕ ನೆರೆಯ ರಾಜ್ಯ ಅರುಣಾಚಲ ಪ್ರದೇಶವನ್ನು ಪ್ರವೇಶಿಸಿತ್ತು. ಅರುಣಾಚಲ ಪ್ರದೇಶದಲ್ಲಿ ರಾತ್ರಿ ವಾಸ್ತವ್ಯ ಹೂಡಲಾಗಿತ್ತು. ಅಸ್ಸಾಂ ರಾಜ್ಯಕ್ಕೆ ಎರಡನೇ ಬಾರಿ ಭೇಟಿ ನೀಡುತ್ತಿದ್ದಂತೆ ರಾಜ್ಯದಲ್ಲಿ ಯಾತ್ರೆಗೆ ಬೆಂಬಲ ನೀಡಿದ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜೊತೆ ರಾಹುಲ್‌ ಗಾಂಧಿ ಸಭೆ ನಡೆಸಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಗುವಾಹಟಿ ಮೂಲಕ ತೆರಳಲು ಅನುಮತಿ ನಿರಾಕರಿಸಿದ್ದಾರೆ. ಮತ್ತು ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಲಖಿಂಪುರ ಜಿಲ್ಲೆಯ ಗೋಬಿಂದಾಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ನಾವು ಭಾರತ್‌ ಜೋಡೋ ಯಾತ್ರೆಗೆ ಸರಿಯಾದ ಮಾರ್ಗದಲ್ಲಿ  ಅನುಮತಿಗಳಿಗಾಗಿ ಅರ್ಜಿ ಸಲ್ಲಿಸಿದ್ದೇವೆ, ಆದರೆ ಸರ್ಕಾರಿ ಅಧಿಕಾರಿಗಳು ಅಪ್ರಸ್ತುತ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಹೇಗಾದರೂ ಮಾಡಿ ನಮ್ಮನ್ನು ತಡೆಯುವುದು ಅವರ ಉದ್ದೇಶವಾಗಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಇತ್ತೀಚಿನ ಗುವಾಹಟಿ ಭೇಟಿಯ ಸಂದರ್ಭದಲ್ಲಿ ಅವರು ತೆರಳಿದ ಅದೇ ಮಾರ್ಗದಲ್ಲಿ ಪ್ರಯಾಣಿಸಲು ನಾವು ಅಸ್ಸಾಂ ಸರ್ಕಾರವನ್ನು ವಿನಂತಿಸಿದ್ದೇವೆ ಎಂದು ಹೇಳಿದ್ದಾರೆ.

ಶನಿವಾರ ಅಸ್ಸಾಂನಲ್ಲಿ ಯಾತ್ರೆಯಲ್ಲಿ ತೆರಳುತ್ತಿದ್ದ ವಾಹನಗಳ ಮೇಲೆ ದಾಳಿ ನಡೆಸಲಾಗಿದೆ ಮತ್ತು ಉತ್ತರ ಲಖಿಂಪುರದಲ್ಲಿ ಬ್ಯಾನರ್‌ಗಳನ್ನು ಹರಿದು ಹಾಕಲಾಗಿದೆ. ದೇಶದಲ್ಲಿ ಬಿಜೆಪಿ ಆಡಳಿತವಿರುವ ಯಾವುದೇ  ರಾಜ್ಯಗಳು ಅಸ್ಸಾಂ ಸರ್ಕಾರದಂತೆ ಸಮಸ್ಯೆಗಳನ್ನು ಸೃಷ್ಟಿಸಿಲ್ಲ. ಜ.18ರಂದು ಯಾತ್ರೆಯು ಅಸ್ಸಾಂಗೆ ಪ್ರವೇಶಿಸಿದ ದಿನ ಜೋರ್ಹತ್ ಜಿಲ್ಲೆಯಲ್ಲಿ ಯಾತ್ರೆ ಮತ್ತು ಅದರ ಮುಖ್ಯ ಸಂಘಟಕರ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಅಸ್ಸಾಂನ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅಸ್ಸಾಂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿಯಾ ಹೇಳಿದ್ದಾರೆ.

ಅಸ್ಸಾಂ ಸರ್ಕಾರವು ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸದಂತೆ ಜನಸಾಮಾನ್ಯರಿಗೆ ಬೆದರಿಕೆ ಹಾಕುತ್ತಿದೆ. ಕೆಲವು ಕಾರ್ಡ್‌ಗಳ ವಿತರಣೆಯ ಹೆಸರಿನಲ್ಲಿ ಮಹಿಳೆಯರನ್ನು ಕರೆದು ಗಂಟೆಗಟ್ಟಲೆ ಕೊಠಡಿಗಳಲ್ಲಿ ಇರಿಸುತ್ತಾರೆ. ಪೆಟ್ರೋಲ್ ಪಂಪ್‌ಗಳು ನಮಗೆ ಇಂಧನವನ್ನು ನೀಡುತ್ತಿಲ್ಲ. ಯಾತ್ರೆಗೆ ಸೇರದಂತೆ ಬಿಜೆಪಿ ಕಾರ್ಯಕರ್ತರು ಜನರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಶನಿವಾರ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಪ್ರತಿಕ್ರಿಯಿಸಿ, ಅಸ್ಸಾಂ ಸರಕಾರದ ನಡೆಯನ್ನು ಖಂಡಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಬಿಜೆಪಿಯು ಭಾರತದ ಜನರಿಗೆ ಸಂವಿಧಾನವು ಖಾತರಿಪಡಿಸಿದ ಪ್ರತಿಯೊಂದು ಹಕ್ಕು ಮತ್ತು ನ್ಯಾಯವನ್ನು ಕೆಡವಲು ಪ್ರಯತ್ನಿಸಿದೆ. ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ನಡೆಸುತ್ತಿರುವ ದಾಳಿ ಮತ್ತು ಬೆದರಿಕೆಯ ತಂತ್ರಕ್ಕೆ ಕಾಂಗ್ರೆಸ್ ಪಕ್ಷವು ಹೆದರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸೇರಿ ಮೂವರು ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಕೋರ್ಟ್‌ ಆದೇಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...