Homeಮುಖಪುಟಮಣಿಪುರ ಗಲಭೆ: ಎರಡು ದಿನಗಳ ರಾಜ್ಯ ಬಂದ್‌ಗೆ ಕರೆಕೊಟ್ಟ ಮೈತೇಯಿ ಗುಂಪು

ಮಣಿಪುರ ಗಲಭೆ: ಎರಡು ದಿನಗಳ ರಾಜ್ಯ ಬಂದ್‌ಗೆ ಕರೆಕೊಟ್ಟ ಮೈತೇಯಿ ಗುಂಪು

- Advertisement -
- Advertisement -

ಗಲಭೆ ಪೀಡಿತ ಮಣಿಪುರ ರಾಜ್ಯದಲ್ಲಿ 23 ವರ್ಷದ ತಖೆಲ್ಲಂಬಮ್ ಮನೋರಂಜನ್ ಸಿಂಗ್ ಹತ್ಯೆಯ ವಿರುದ್ಧ ರಚಿಸಲಾದ ಜಂಟಿ ಕ್ರಿಯಾ ಸಮಿತಿ (ಜೆಎಸಿ) ರಾಜ್ಯಾದ್ಯಂತ 48 ಗಂಟೆಗಳ ಬಂದ್‌ಗೆ ಕರೆ ನೀಡಿದ್ದು, ಜ.20ರಿಂದ ಬಂದ್ ಜಾರಿಗೆ ಬಂದಿದ್ದು, ಜ.22 ರವರೆಗೆ ಜಾರಿಯಲ್ಲಿರುತ್ತದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಗುರುವಾರ (ಜನವರಿ 17) ಇಂಫಾಲ್ ಪೂರ್ವದಲ್ಲಿ ಶಸ್ತ್ರಸಜ್ಜಿತ ಉಗ್ರಗಾಮಿಗಳಿಂದ ತಖೆಲ್ಲಂಬಮ್ ಮನೋರಂಜನ್ ಸಿಂಗ್ ಸಾವಿಗೆ ರಾಜ್ಯವು ಶೋಕ ವ್ಯಕ್ತಪಡಿಸುತ್ತಿದ್ದಂತೆ, ಜನವರಿ 21ರಂದು ತನ್ನ ರಾಜ್ಯತ್ವ ದಿನವನ್ನು ಆಚರಿಸುವ ಮಣಿಪುರವು ಭೀಕರ ಪರಿಸ್ಥಿತಿಗೆ ಸಾಕ್ಷಿಯಾಗಿದೆ.

‘ತಖೆಲ್ಲಂಬಮ್ ಮನೋರಂಜನ್ ಸಿಂಗ್ ಗ್ರಾಮ ಕಾವಲುಗಾರರಾಗಿದ್ದರು. ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಸಿಂಗ್ ಸಾವನ್ನಪ್ಪಿದ್ದಾರೆ’ ಎಂದು ಜೆಎಸಿ ಆರೋಪಿಸಿದೆ.

ಜೆಎಸಿ ಸಂಚಾಲಕರು ಮುಖ್ಯಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಎನ್ ಬಿರೇನ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು 24 ಗಂಟೆಗಳ ಗಡುವು ನೀಡಲಾಗಿದೆ ಎಂದು ತಿಳಿಸಿದ್ದಾರೆ.

‘ಕಾಂಗ್ಚುಪ್ ಹಿಲ್ ರೇಂಜ್‌ನಲ್ಲಿ ಒಬ್ಬ ಮಹಿಳೆ ಸೇರಿದಂತೆ ಏಳಕ್ಕೂ ಹೆಚ್ಚು ಜನರು ಬಂದೂಕುಧಾರಿಗಳಿಂದ ಸಿಂಗ್ ಕೊಲ್ಲಲ್ಪಟ್ಟರು’ ಎಂದು ಸ್ಥಳೀಯ ನಿವಾಸಿಗಳು ಶನಿವಾರ ಮಾಹಿತಿ ನೀಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯ ವರದಿ ಮಾಡಿದೆ.

‘ಶನಿವಾರ ಬಂದ್‌ಗೆ ಕರೆ ನೀಡಿದ್ದ ಜೆಎಸಿ, ನಿಗದಿತ ಗಡುವಿನೊಳಗೆ ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಲು ಸರ್ಕಾರ ವಿಫಲವಾಗಿದೆ’ ಎಂದು ಆರೋಪಿಸಿದೆ.

‘ಪರಿಣಾಮಕಾರಿಯಲ್ಲದ ಕೇಂದ್ರ ಪಡೆಗಳನ್ನು ರಾಜ್ಯದಿಂದ ತೆಗೆದುಹಾಕುವುದು ಮತ್ತು ರಾಜ್ಯ ಪಡೆಗಳನ್ನು ನಿಯೋಜಿಸುವಂತೆ’ ಎನ್ ಬಿರೇನ್ ಸಿಂಗ್ ಅವರು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಜೊತೆಗೆ, ಕುಕಿ ಉಗ್ರಗಾಮಿ ಗುಂಪುಗಳು ಮತ್ತು ಸರ್ಕಾರದ ನಡುವೆ ಸಹಿ ಹಾಕಲಾದ ಕಾರ್ಯಾಚರಣೆಯ ಅಮಾನತು ಒಪ್ಪಂದದ ಹಿಂಪಡೆಯಬೇಕು. ಮಣಿಪುರದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ ಅನುಷ್ಠಾನ ಮಾಡಬೇಕು ಎಂಬ ಬೇಡಿಕೆಗಳನ್ನೂ ಸೇರಿಸಿದ್ದಾರೆ.

ರಾಜ್ಯದ ಎಲ್ಲ ಪ್ರದೇಶಗಳಲ್ಲಿ ಗ್ರಾಮ ಸಂರಕ್ಷಣಾ ಪಡೆಗಳ ರಚನೆಗೆ ಅವಕಾಶ ನೀಡುವಂತೆ ಜೆಎಸಿ ಸರ್ಕಾರವನ್ನು ಒತ್ತಾಯಿಸಿದೆ. ಕಾಂಗ್ಚುಪ್ ಹಿಲ್ ರೇಂಜ್, ಮೇಟಿ ಪ್ರಾಬಲ್ಯವಿರುವ ಪ್ರದೇಶದಲ್ಲಿ ಹೆಚ್ಚುವರಿ ಭದ್ರತಾ ಪಡೆಗಳ ನಿಯೋಜನೆಗೆ ಒತ್ತಾಯಿಸಿದೆ.

ಇಮಾ ಕೈಥೆಲ್ ಸೇರಿದಂತೆ ಮಾರುಕಟ್ಟೆಗಳು, ಇತರ ವ್ಯಾಪಾರ ಉದ್ಯಮಗಳು ಇಂಫಾಲ್ ಮತ್ತು ಇತರ ಕಣಿವೆ ಜಿಲ್ಲೆಗಳಲ್ಲಿ ಮುಚ್ಚಲ್ಪಟ್ಟಿವೆ. ಇಂಫಾಲ್ ಕಣಿವೆಯಲ್ಲಿ ಸಾರ್ವಜನಿಕ ಸಾರಿಗೆಯು ಜೆಎಸಿ ಕರೆ ನೀಡಿರುವ ಮುಷ್ಕರಕ್ಕೆ ಬೆಂಬಲವಾಗಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತು.

ಅಗತ್ಯ ಸೇವೆಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಬಂದ್‌ನ ವ್ಯಾಪ್ತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಜೆಎಸಿಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ವರ್ಷದ ಮೇ ತಿಂಗಳಿನಿಂದ, ಮಣಿಪುರವು ಜನಾಂಗೀಯ ಉದ್ವಿಗ್ನತೆಯನ್ನು ಎದುರಿಸುತ್ತಿದೆ. ಇದರ ಪರಿಣಾಮವಾಗಿ 180 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮೇ 3 ರಂದು ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತೇಯಿ ಸಮುದಾಯದ ಕರೆಯನ್ನು ವಿರೋಧಿಸಲು ಬೆಟ್ಟದ ಜಿಲ್ಲೆಗಳಲ್ಲಿ ಆಯೋಜಿಸಲಾದ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ನಂತರ ಹಿಂಸಾಚಾರ ಭುಗಿಲೆದ್ದಿತು.

ಮಣಿಪುರದ ಜನಸಂಖ್ಯೆಯ ಸರಿಸುಮಾರು 53 ಪ್ರತಿಶತವನ್ನು ಒಳಗೊಂಡಿರುವ, ಮೈತೇಯಿಗಳು ಪ್ರಾಥಮಿಕವಾಗಿ ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಾರೆ. ಜೊತೆಗೆ ಬುಡಕಟ್ಟು ಜನಾಂಗದವರು, ನಾಗಾಗಳು ಮತ್ತು ಕುಕಿ ಸಮುದಾಗಳು ರಾಜ್ಯದ ಜನಸಂಖ್ಯೆಯ ಶೇ.40ರಷ್ಟಿದ್ದಾರೆ. ಇವರು ಪ್ರಧಾನವಾಗಿ ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಾರೆ.

ಇದನ್ನೂ ಓದಿ; ಹೆದ್ದಾರಿಯಲ್ಲಿ ಹಸುಗಳ ಹಿಂಡು: ‘ಎಕ್ಸ್‌ಪ್ರೆಸ್‌ ವೇ’ ಅಲ್ಲ ‘ಆಕ್ಸ್‌ಪ್ರೆಸ್ ವೇ’ ಎಂದು ಅಖಿಲೇಶ್ ಲೇವಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...