Homeಮುಖಪುಟಬಿಲ್ಕಿಸ್ ಬಾನು ಪ್ರಕರಣ: ತಡರಾತ್ರಿ ಜೈಲು ಅಧಿಕಾರಿಗಳಿಗೆ ಶರಣಾದ ಎಲ್ಲಾ11 ಅಪರಾಧಿಗಳು

ಬಿಲ್ಕಿಸ್ ಬಾನು ಪ್ರಕರಣ: ತಡರಾತ್ರಿ ಜೈಲು ಅಧಿಕಾರಿಗಳಿಗೆ ಶರಣಾದ ಎಲ್ಲಾ11 ಅಪರಾಧಿಗಳು

- Advertisement -
- Advertisement -

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಎಲ್ಲಾ 11 ಅಪರಾಧಿಗಳು ಸುಪ್ರೀಂ ಕೋರ್ಟ್ ವಿಧಿಸಿದ ಗಡುವನ್ನು ಅನುಸರಿಸಿ ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾ ಉಪ ಜೈಲಿಗೆ ಭಾನುವಾರ ತಡರಾತ್ರಿ ಶರಣಾಗಿದ್ದಾರೆ.

“ಎಲ್ಲಾ 11 ಅಪರಾಧಿಗಳು ಭಾನುವಾರ ತಡರಾತ್ರಿ ಜೈಲು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಅವರು ಜನವರಿ 21 ರ ಮಧ್ಯರಾತ್ರಿಯ ಮೊದಲು ಜೈಲು ತಲುಪಿದ್ದಾರೆ, ಅದು ಅವರಿಗೆ ಶರಣಾಗಲು ನಿಗದಿಪಡಿಸಿದ ಗಡುವು” ಎಂದು ಸ್ಥಳೀಯ ಕ್ರೈಂ ಬ್ರಾಂಚ್ ಇನ್ಸ್‌ಪೆಕ್ಟರ್ ಎನ್‌ಎಲ್ ದೇಸಾಯಿ ಅವರನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಒಟ್ಟು 11 ಅತ್ಯಾಚಾರಿಗಳ ಪೈಕಿ ಮೂವರು ಶರಣಾಗತಿ ಅವಧಿ ವಿಸ್ತರಿಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕಳೆದ ಶುಕ್ರವಾರ ಅವರ ಮನವಿಯನ್ನು ತಿರಸ್ಕರಿಸಿದ ಕೋರ್ಟ್‌, ಜನವರಿ 8ರಂದು ನೀಡಿದ್ದ ತೀರ್ಪಿನಂತೆ ಜನವರಿ 21ರಂದು ಎಲ್ಲಾ 11 ಅಪರಾಧಿಗಳು ಜೈಲಿಗೆ ಮರಳಬೇಕು ಎಂದಿತ್ತು. ಅದರಂತೆ ಎಲ್ಲರೂ ಜೈಲಿಗೆ ಮರಳಿದ್ದಾರೆ.

ಒಟ್ಟು 11 ಅತ್ಯಾಚಾರಿಗಳ ಪೈಕಿ ಪ್ರಮುಖರಾದ ಗೋವಿಂದಭಾಯಿ ನಾಯ್, ರಮೇಶ್ ರೂಪಾಭಾಯ್ ಚಂದನ್ ಮತ್ತು ಮಿತೇಶ್ ಚಿಮನ್ಲಾಲ್ ಭಟ್ ಮಕ್ಕಳ ಮದುವೆ, ಅನಾರೋಗ್ಯ, ಚಳಿಗಾಲದ ಕೊಯ್ಲು ಇತ್ಯಾದಿ ಕಾರಣಗಳನ್ನು ನೀಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಶರಣಾಗಲು 6 ವಾರಗಳ ಹೆಚ್ಚುವರಿ ಸಮಯ ನೀಡುವಂತೆ ಕೋರಿದ್ದರು.

11 ಮಂದಿ 2002ರ ಗುಜರಾತ್ ಗಲಭೆಯ ಸಮಯದಲ್ಲಿ ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರ ಕೊಲೆಯ ಅಪರಾಧಿಗಳಾಗಿದ್ದಾರೆ.

ಅಪರಾಧಿಗಳು 14 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ ಬಳಿಕ, 2022ರ ಆಗಸ್ಟ್‌ನಲ್ಲಿ ಗುಜರಾತ್ ಸರ್ಕಾರ ಸನ್ನಡೆಯ ನೆಪ ಹೇಳಿ ಬಿಡುಗಡೆ ಮಾಡಿತ್ತು. ಇದರ ವಿರುದ್ದ ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಜನವರಿ 8, 2024ರಂದು ತೀರ್ಪು ನೀಡಿದ್ದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ರದ್ದುಪಡಿಸಿತ್ತು. ಎರಡು ವಾರಗಳಲ್ಲಿ ಜೈಲಿಗೆ ಮರುಳುವಂತೆ ಅಪರಾಧಿಗಳಿಗೆ ಸೂಚಿಸಿತ್ತು.

ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ತೀರ್ಪು ನೀಡಿದ್ದ ಪೀಠದಲ್ಲಿದ್ದ ಓರ್ವ ಜಡ್ಜ್‌ !

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...