Homeಮುಖಪುಟಭದ್ರತೆ ಹಿಂಪಡೆದ ಬಳಿಕ ಭಯದಿಂದ ಬದುಕುತ್ತಿರುವ ಗುಜರಾತ್‌ ಗಲಭೆ ಸಾಕ್ಷಿಗಳು

ಭದ್ರತೆ ಹಿಂಪಡೆದ ಬಳಿಕ ಭಯದಿಂದ ಬದುಕುತ್ತಿರುವ ಗುಜರಾತ್‌ ಗಲಭೆ ಸಾಕ್ಷಿಗಳು

- Advertisement -
- Advertisement -

ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ದಹನ ಮತ್ತು ನಂತರದ ದಂಗೆ ಪ್ರಕರಣಗಳಲ್ಲಿನ ಎಲ್ಲಾ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ಇತ್ತೀಚೆಗೆ ಹಿಂತೆಗೆದುಕೊಳ್ಳಲಾಗಿತ್ತು. ಗಲಭೆ ಪ್ರಕರಣದ ಸಾಕ್ಷಿಗಳು, ದೂರುದಾರರು ಇದೀಗ ಭದ್ರತೆಯ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಗುಜರಾತ್‌ ಗಲಭೆ ನಡೆದು 22 ವರ್ಷಗಳೇ ಕಳೆದಿವೆ. ಆದರೂ ನಾನು ಹಿಂದೂ ಪ್ರಾಬಲ್ಯದ ಪ್ರದೇಶಗಳಿಗೆ ಹೋಗಲು ಹೆದರುತ್ತೇನೆ. ನಾನು ಅಲ್ಲಿ ವಾಸಿಸುವ ಬಗ್ಗೆ ಯೋಚಿಸಲು ಕೂಡ ಸಾಧ್ಯವಿಲ್ಲ ಎಂದು 2002ರ ಗುಜರಾತ್ ಗಲಭೆಯಲ್ಲಿ ಬದುಕುಳಿದ ಸೈಯದ್ ನೂರ್ ಬಾನೊ ಹೇಳಿದ್ದಾರೆ.

ಬಾನೋ ಅವರು ನರೋಡಾ ಪಾಟಿಯಾದ ಮಾಜಿ ನಿವಾಸಿಯಾಗಿದ್ದಾರೆ. ಗೋಧ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ನಂತರ ನಡೆದ ಹಿಂಸಾಚಾರದಲ್ಲಿ ಬದುಕುಳಿದವರು ಮತ್ತು ನರೋಡಾ ಪಾಟಿಯಾ ಹತ್ಯಾಕಾಂಡದ ಸಾಕ್ಷಿಯೂ ಆಗಿದ್ದಾರೆ. ಆ ಪ್ರದೇಶದಲ್ಲಿ ಮುಸ್ಲಿಮರ ಅತ್ಯಾಚಾರ-ಕೊಲೆ ಪ್ರಕರಣ ಎಸಗಿದ್ದ ಕನಿಷ್ಠ 4 ಗಲಭೆಕೋರರ ಗುರುತನ್ನು ಕೂಡ ಅವರು ಪತ್ತೆಹಚ್ಚಿದ್ದರು. ಬಾನೊ ಅವರಲ್ಲದೆ ಗುಜರಾತ್‌ ಹತ್ಯಾಕಾಂಡದ ಇತರ ಕೆಲ ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ಡಿಸೆಂಬರ್‌ನಲ್ಲಿ ಪೊಲೀಸರು ಹಿಂತೆಗೆದುಕೊಂಡಿದ್ದರು.

ಸುಪ್ರೀಂಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡವು 2002ರ ಗಲಭೆಯ ದೂರುದಾರರು, ಸಾಕ್ಷಿಗಳು, ವಕೀಲರು, ಜಡ್ಜ್‌ ಸೇರಿ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದಿತ್ತು, ಸಾಕ್ಷಿಗಳಿಗೆ ಯಾವುದೇ ಬೆದರಿಕೆಗಳು ಸುದೀರ್ಘ ಅವಧಿಯಲ್ಲಿ ಬಂದಿಲ್ಲ ಎಂದು ಹೇಳಿಕೊಂಡಿತ್ತು. ಸಂತ್ರಸ್ತರಿಗೆ ಕಾನೂನು ಹೋರಾಟದಲ್ಲಿ ಸಹಾಯ ಮಾಡಿದ ಇಬ್ಬರು ವಕೀಲರಾದ ಎಂ ಎಂ ತಿರ್ಮಿಜಿ ಮತ್ತು ಎಸ್ ಎಂ ವೋಹ್ರಾ  ಮತ್ತು ನರೋಡಾ ಪಾಟಿಯಾ ಪ್ರಕರಣದಲ್ಲಿ 32 ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದ್ದ ಜಡ್ಜ್‌ ಜ್ಯೋತ್ಸ್ನಾ ಯಾಗ್ನಿಕ್‌ ಅವರ ಭದ್ರತೆಯನ್ನು ಕೂಡ ಹಿಂಪಡೆಯಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ಗುಜರಾತ್‌ ಹತ್ಯಾಕಾಂಡದ ಸಾಕ್ಷಿ ಹಾಗೂ ಅಹಮದಾಬಾದ್‌ನ ಸಿಟಿಝನ್ ನಗರದಲ್ಲಿ ವಾಸಿಸುತ್ತಿರುವ ಮೊಹಮ್ಮದ್ ಅಬ್ದುಲ್ ಹಮೀದ್ ಶೇಖ್, ಈ ಪ್ರದೇಶದಲ್ಲಿ ಸರಿಯಾದ ರಸ್ತೆಗಳಿಲ್ಲ, ಅಗಾಧವಾದ ದುರ್ವಾಸನೆಯಿಂದ ಕೂಡಿದೆ ಮತ್ತು ಕಸದ ರಾಶಿಗಳ ಮಧ್ಯೆ ಜನರು ಬದುಕುತ್ತಿದ್ದಾರೆ. 2002ರ ಗಲಭೆಯಲ್ಲಿ ನಿರಾಶ್ರಿತರಾದ 50ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು ಕಳೆದ 22 ವರ್ಷಗಳಿಂದ ಸಿಟಿಝನ್ ನಗರದಲ್ಲಿ ವಾಸಿಸುತ್ತಿದ್ದಾರೆ. ಸಾಕ್ಷಿಗಳ ಭದ್ರತೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವು ಯೋಜಿತವಾಗಿದೆ. ನಮ್ಮ ಮಾತು ಕೇಳುವವರು ಯಾರು? ನಮ್ಮ ಭದ್ರತೆಯನ್ನು ಮರುಸ್ಥಾಪಿಸಲು ನಾವು ಅವರನ್ನು ಒತ್ತಾಯಿಸಿದರೆ, ಅವರು ಸ್ಪಂದಿಸುತ್ತಾರೆ ಎಂದು ನಾನು ಭಾವಿಸುವುದಿಲ್ಲ ಎಂದು ಶೇಖ್ ಹೇಳಿದ್ದಾರೆ.

2002ರ ಫೆ.27ರಂದು ಅಯೋಧ್ಯೆಯಿಂದ ಕರಸೇವಕರು ಬರುವಾಗ ಸಬರಮತಿ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ಗೋಧ್ರಾ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿತ್ತು. ಆಗ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ತಗುಲಿ 59 ಮಂದಿ ಮೃತಪಟ್ಟಿದ್ದರು. ಅವರಲ್ಲಿ 29 ಮಂದಿ ಪುರುಷರು, 22 ಮಂದಿ ಮಹಿಳೆಯರು ಹಾಗೂ 8 ಮಕ್ಕಳು ಸೇರಿದ್ದರು. ಘಟನೆಗೆ ಕಾರಣ ಇಂದಿಗೂ ಅಸ್ಪಷ್ಟವಾಗಿದೆ. ನರೇಂದ್ರ ಮೋದಿ ನೇತೃತ್ವದ ಗುಜರಾತ್ ರಾಜ್ಯ ಸರ್ಕಾರವು, ಸತ್ತವರಲ್ಲಿ ಹೆಚ್ಚಿನವರು ಕರಸೇವಕರು ಎಂದು ಹೇಳಿದ್ದರು. ಗೋಧ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಸುದ್ದಿ ಹರಡಿದ ನಂತರ ಸ್ವತಂತ್ರ ಭಾರತದ ಇತಿಹಾಸದಲ್ಲಿ ಅತ್ಯಂತ ಭೀಕರವಾದ ಹಿಂಸಾಚಾರ ಗುಜರಾತ್‌ನಲ್ಲಿ ನಡೆದಿತ್ತು. ಇದರಲ್ಲಿ ಸುಮಾರು 2,000 ಜನರು ಕೊಲ್ಲಲ್ಪಟ್ಟಿದ್ದರು. ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ನಡೆದಿತ್ತು. ರಾಜ್ಯಾದ್ಯಂತ ಸಾವಿರಾರು ಮನೆಗಳು ಮತ್ತು ಮಸೀದಿಗಳನ್ನು ಕಡೆವಲಾಗಿತ್ತು.

ಅಂದಿನ ಘಟನೆಯನ್ನು ನೆನಪಿಸಿಕೊಂಡ ಬಾನೊ, ಇಂದು ಅದೇ ವಾತಾವರಣ ನಿರ್ಮಾಣವಾಗುತ್ತಿದೆ, ಅದೇ ಕೇಸರಿ ಧ್ವಜಗಳು ಹಾರಾಡುತ್ತಿದೆ, ಇದಕ್ಕೆ ನಾವು ಹೆದರುತ್ತೇವೆ ಎಂದು ಹೇಳಿದರು. ಶೇಖ್‌, ಬಾನೊ ಅವರು ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹೊಸ್ತಿಲಲ್ಲಿ ತಮ್ಮ ಭದ್ರತೆ ಹಿಂಪಡೆಯುವಿಕೆ ಬಗ್ಗೆ ಭಯವನ್ನು ವ್ಯಕ್ತಪಡಿಸಿದ್ದಾರೆ. ಗಲಭೆಯ ಮತ್ತೋರ್ವ ಸಾಕ್ಷಿಯಾದ ಮರೂಫ್ ಪಠಾಣ್ ತಮಗೆ ಕೊಟ್ಟ ರಕ್ಷಣೆಯನ್ನು ಹಿಂತೆಗೆದುಕೊಂಡಿರುವುದರಿಂದ ತನ್ನ ಕುಟುಂಬ ಅಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ. ಪಠಣ್‌ ಗಲಭೆ ಪ್ರಕರಣದಲ್ಲಿ ಗುಡ್ಡುಚಾರ, ಭವಾನಿ ಸಿನ್ಹ್, ಮಾಯಾ ಕೊಡ್ನಾನಿ ಮತ್ತು ಬಾಬು ಬಜರಂಗಿ ಅವರ ಕೈವಾಡದ ಬಗ್ಗೆ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರು. 2002ರಲ್ಲಿ ಅವರು ಮಕ್ಕಳನ್ನು ಕೊಲೆ ಮಾಡಿದ್ದನ್ನು ಮತ್ತು ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡಿದ್ದನ್ನು ನಾನು ನೋಡಿದ್ದೇನೆ. ನಮಗೆ ಯಾವುದೇ ಮಂದಿರದಿಂದ ಯಾವುದೇ ಸಮಸ್ಯೆಗಳಿಲ್ಲ. ನಮ್ಮವರನ್ನು ಕೊಲೆ ಮಾಡಲಾಗಿದೆ. ನಮಗೆ ಯಾವುದೇ ಕಾರಣವನ್ನು ನೀಡಲಾಗಿಲ್ಲ ಮತ್ತು ಪ್ರಸ್ತುತ ಪರಿಸ್ಥಿತಿಯಿಂದ ನಾವು ಭಯಭೀತರಾಗಿದ್ದೇವೆ. ಎರಡು ದಶಕಗಳಿಂದ ಭಯದಿಂದಲೇ ಬದುಕುತ್ತಿವೆ ಎಂದು ಪಠಾಣ್ ಹೇಳಿದ್ದಾರೆ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...