Homeಫ್ಯಾಕ್ಟ್‌ಚೆಕ್Fact Check: ಸಿದ್ದರಾಮಯ್ಯ ಸರ್ಕಾರ ಅಂಗನವಾಡಿ ಹುದ್ದೆಗಳ ನೇಮಕಕ್ಕೆ 'ಉರ್ದು ಭಾಷೆ' ಕಡ್ಡಾಯಗೊಳಿಸಿದೆಯಾ?

Fact Check: ಸಿದ್ದರಾಮಯ್ಯ ಸರ್ಕಾರ ಅಂಗನವಾಡಿ ಹುದ್ದೆಗಳ ನೇಮಕಕ್ಕೆ ‘ಉರ್ದು ಭಾಷೆ’ ಕಡ್ಡಾಯಗೊಳಿಸಿದೆಯಾ?

- Advertisement -
- Advertisement -

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ‘ಉರ್ದು ಭಾಷೆ’ ಗೊತ್ತಿರುವುದನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕಡ್ಡಾಯಗೊಳಿಸಿದೆ ಎಂಬ ಸುದ್ದಿಯೊಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತುಮಕೂರು ನಗರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಗೌರವಧನ ಆಧಾರಿತ ಅಂಗನವಾಡಿ ಕಾರ್ಯರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂಬ ಪತ್ರಿಕೆಯ ಪ್ರಕಟಣೆಯೊಂದನ್ನು ಮುಂದಿಟ್ಟುಕೊಂಡು ಈ ಸುದ್ದಿ ಹಬ್ಬಲಾಗಿದೆ.

Accidental Bhakth‘ಎಂಬ ಎಕ್ಸ್‌ ಖಾತೆಯಲ್ಲಿ “ಅಂಗನವಾಡಿ ಸಹಾಯಕಿಯರಿಗೆ ಉರ್ದು ಬರಲೇಬೇಕು, ಮಹಾನಗರ ಪಾಲಿಕೆ ಮೇಲೆ ಉರ್ದು ಬೋರ್ಡ್ ಇರಲೇ ಬೇಕು, ಕನ್ನಡ ಪರ ಬೋರ್ಡ್ ಹಾಕಿ ಅಂದವರನ್ನು ಒದ್ದು ಒಳಗೆ ಹಾಕಿದ್ದಾಯಿತು, ಕನ್ನಡರಾಮಯ್ಯ ಅಂತ ಅವನಿಗೆ ಮೆರವಣಿಗೆ ಮಾಡಿದ ಹೇಲಾಟಗಾರರ ಆತ್ಮಕ್ಕೆ ಎರಡು ನಿಮಿಷ ಮೌನಾಚರಣೆ ಮಾಡೋಣ ಬ್ರದರ್” ಎಂದು ಬರೆದುಕೊಂಡು ಮೇಲಿನ ಸುದ್ದಿಯ ಪತ್ರಿಕಾ ವರದಿ ಹಂಚಿಕೊಳ್ಳಲಾಗಿದೆ.

ಸಂವಾದ (Samvada) ಎಂಬ ಬಲಪಂಥೀಯ ಫೇಸ್‌ಬುಕ್ ಚಾನೆಲ್‌ನಲ್ಲಿ “ಉರ್ದು ಬಲ್ಲವರಿಗೆ ಮಾತ್ರ ಕೆಲಸ ಕರ್ನಾಟಕದಲ್ಲಿ ಘಾಜ್ವ-ಎ-ಹಿಂದ್‌ ಶುರು” ಎಂಬ ಶೀರ್ಷೆಕೆಯಲ್ಲಿ ವಿಡಿಯೋ ವರದಿಯನ್ನು ಮಾಡಲಾಗಿದೆ. ಈ ವರದಿಯಲ್ಲಿ ಈ ಹಿಂದಿನ ಆಗು-ಹೋಗುಗಳನ್ನು ಸೇರಿಸಿ ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನು ಕನ್ನಡ ವಿರೋಧಿ, ಉರ್ದು ಭಾಷೆ ಮತ್ತು ಮುಸ್ಲಿಮರ ಪರ ಎಂದು ಬಿಂಬಿಸಲಾಗಿದೆ. ವರದಿಯಲ್ಲಿ ಕನ್ನಡ ಹೋರಾಟಗಾರರು ಮತ್ತು ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಕಾರಲಾಗಿದೆ.

ಫ್ಯಾಕ್ಟ್‌ಚೆಕ್‌ : ತುಮಕೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಕನ್ನಡ ಭಾಷೆಯ ಜೊತೆಗೆ ಉರ್ದು ಗೊತ್ತಿರಬೇಕು ಎಂಬ ಪತ್ರಿಕಾ ಪ್ರಕಟಣೆ ಮತ್ತು ಅದರ ಸುತ್ತ ಹರಡುತ್ತಿರುವ ಕೋಮು ಆಯಾಮದ ಸುದ್ದಿಗಳ ಸತ್ಯಾಸತ್ಯತೆ ಪರಿಶೀಲನೆಯನ್ನು ನಾನುಗೌರಿ. ಕಾಂ ಮಾಡಿದೆ.

ಸರ್ಕಾರ ಅಥವಾ ತುಮಕೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿಜವಾಗಿಯೂ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿದೆಯಾ? ಎಂಬ ಸತ್ಯವನ್ನು ನಾವು ಹೊರಗೆಳೆದಿದ್ದೇವೆ.

ಇದಕ್ಕಾಗಿ ನಾವು ಮೊದಲು ತುಮಕೂರಿನ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇವೆ.

ಚಿದಾನಂದ ಅವರು ನೀಡಿದ ಮಾಹಿತಿ ಪ್ರಕಾರ, ಪ್ರಸ್ತುತ ಅಂಗನವಾಡಿ ಹುದ್ದೆಗಳ ಭರ್ತಿಗೆ 2022ರ ಡಿಸೆಂಬರ್ ತಿಂಗಳಲ್ಲಿ ಅಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ನೀಡಿದ ಆದೇಶದಂತೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರದ ಆದೇಶದ ಪ್ರಕಾರ ರಾಜ್ಯದ ಯಾವುದೇ ಪ್ರದೇಶದ ಅಂಗನವಾಡಿಗಳಿಗೆ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ನೇಮಕ ಮಾಡಿಕೊಳ್ಳುವಾಗ, ‘ಆ ಪ್ರದೇಶದಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಜನಸಂಖ್ಯೆಯ ಶೇ.25ರಷ್ಟು ಜನರು ಮಾತನಾಡುವ ಭಾಷೆ’ ಅರ್ಜಿ ಸಲ್ಲಿಸುವವರಿಗೆ ಗೊತ್ತಿರಬೇಕು.

ಉದಾಹರಣೆಗೆ : ಮುಸ್ಲಿಮರು ಹೆಚ್ಚಿರುವ ಪ್ರದೇಶಗಳ ಅಂಗನವಾಡಿಗಳಿಗೆ ಕಾರ್ಯಕರ್ತೆಯರನ್ನು ನೇಮಿಸಿಕೊಳ್ಳುವಾಗ ಅವರಿಗೆ ಕನ್ನಡದ ಜೊತೆಗೆ ಉರ್ದು ಭಾಷೆ ಗೊತ್ತಿರಬೇಕು. ಕ್ರೈಸ್ತ ಸಮುದಾಯದ ಜನರು ಹೆಚ್ಚಿರುವ ಪ್ರದೇಶಗಳ ಅಂಗನವಾಡಿಗೆ ನೇಮಿಸಿಕೊಳ್ಳುವುದಾದರೆ ಅವರಿಗೆ ಕ್ರೈಸ್ತರು ಮಾತನಾಡುವ ಕೊಂಕಣಿಯೋ ಇತರ ಯಾವುದೇ ಭಾಷೆ ತಿಳಿದಿರಬೇಕು.

ಇಲ್ಲಿ ಕನ್ನಡದ ಜೊತೆಗೆ ಉರ್ದು ಮಾತ್ರ ಗೊತ್ತಿರಬೇಕು ಎಂದು ಎಲ್ಲೂ ಕಡ್ಡಾಯ ಮಾಡಿಲ್ಲ. ಅಂಗನವಾಡಿ ಇರುವ ಪ್ರದೇಶದ ಜನ ಸಂಖ್ಯೆಯ ಶೇ.25ರಷ್ಟು ಅಲ್ಪ ಸಂಖ್ಯಾತರು ಮಾತನಾಡುವ ಭಾಷೆ ಗೊತ್ತಿರಬೇಕು ಎಂದು ಹೇಳಲಾಗಿದೆ. ಆ ಭಾಷೆ ಉರ್ದು, ಕೊಂಕಣಿ, ಪಂಜಾಬಿ ಇತರ ಯಾವುದೂ ಆಗಿರಬಹುದು. ಇಲ್ಲಿ ಗಮನಾರ್ಹ ಸಂಗತಿ ಏನೆಂದರೆ, ಎಲ್ಲಾ ಕಡೆಯೂ ಕನ್ನಡ ಗೊತ್ತಿರಬೇಕೆನ್ನುವುದು ಮೊದಲ ಆದ್ಯತೆಯಾಗಿದೆ. ನಂತರ ಇತರ ಭಾಷೆಗಳು ತಿಳಿದಿರಬೇಕು ಎಂದು ಹೇಳಲಾಗಿದೆ.

ತುಮಕೂರಿನಲ್ಲಿ ಕನ್ನಡ ಜೊತೆ ಉರ್ದು ಭಾಷೆಯನ್ನೇ ಯಾಕೆ ಕಡ್ಡಾಯ ಮಾಡಲಾಗಿದೆ?

ತುಮಕೂರು ನಗರ ವ್ಯಾಪ್ತಿಯ 11 ವಾರ್ಡ್‌ಗಳ ವಿವಿಧ ಪ್ರದೇಶಗಳ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಅರ್ಜಿ ಸಲ್ಲಿಸುವವರಿಗೆ ಕನ್ನಡದ ಜೊತೆ ಉರ್ದು ಭಾಷೆ ತಿಳಿದಿರಬೇಕು ಎಂದು ಹೇಳಲಾಗಿದೆ.

ಚಿದಾನಂದ ಅವರು ನೀಡಿದ ಮಾಹಿತಿ ಪ್ರಕಾರ, ಮೇಲೆ ಅರ್ಜಿ ಆಹ್ವಾನಿಸಿರುವ ತುಮಕೂರಿನ 11 ವಾರ್ಡ್‌ಗಳ ಎಲ್ಲಾ ಅಂಗನವಾಡಿಗಳು ಕೂಡ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ ಸಮುದಾಯದ ಜನರು ಹೆಚ್ಚಾಗಿ ಇರುವ ಪ್ರದೇಶಗಳದ್ದಾಗಿವೆ. ಮುಸ್ಲಿಮರು ಉರ್ದು ಭಾಷೆ ಮಾತನಾಡುವ ಕಾರಣ, ಸರ್ಕಾರದ ನಿಯಮದಂತೆ ಕನ್ನಡದ ಜೊತೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ಪ್ರದೇಶದಲ್ಲಿ ಒಂದು ವೇಳೆ ಕೊಂಕಣಿ ಮಾತನಾಡುವವರು ಹೆಚ್ಚಿದ್ದರೆ, ಕನ್ನಡದ ಜೊತೆ ಅವರ ಭಾಷೆಯನ್ನು ಕಡ್ಡಾಯಗೊಳಿಸಲಾಗುತ್ತಿತ್ತು.

‘Accidental Bhakth’ಎಕ್ಸ್‌ ಖಾತೆಯ ಪೋಸ್ಟ್‌ಗೆ ಜನವರಿ 18ರಂದು ಪ್ರತಿಕ್ರಿಯೆ ನೀಡಿದ್ದ ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ “ನಾಳೆ ಇದರ ಅಸಲಿ ಸತ್ಯ ಎಲ್ಲೆರೆದುರು ಗೊತ್ತು ಮಾಡುತ್ತೇವೆ. ಈ ವಿಷಯವಾಗಿ ನೂರಾರು ಜನ ನನ್ನನ್ನು ಟ್ಯಾಗ್ ಮಾಡಿ ಕನ್ನಡ ಹೋರಾಟಗಾರರ ಮೇಲೆ ಅಸಭ್ಯ ಪದಗಳನ್ನು ಬಳಸಿ ಪ್ರಶ್ನೆ ಮಾಡಿದ್ದೀರಿ. ಇರಲಿ ನಾವಂತೂ ಯಾವುದಕ್ಕೂ ಹಿಂದೆ ಬೀಳೊಲ್ಲ. ನಾಳೆ ಇದಕ್ಕೆ ಉತ್ತರ ಸಿಗಲಿದೆ. ಪೋಸ್ಟ್ ಡಿಲೀಟ್ ಮಾಡದೆ ನಮ್ಮ ಉತ್ತರವನ್ನು ಹೀಗೆ ತಮ್ಮ ವಾಲ್ ಮೇಲೆ ಹಾಕಬೇಕು” ಎಂದಿದ್ದರು.

ಜನವರಿ 19ರಂದು ಎಕ್ಸ್‌ನಲ್ಲಿ ಮತ್ತೊಂದು ಪೋಸ್ಟ್ ಹಾಕಿದ್ದ ಅವರು, “ಅಂಗನವಾಡಿ ಶಿಕ್ಷಕರ ನೇಮಕ ವಿಚಾರವಾಗಿ ಇಂದು ತುಮಕೂರಿನ ಮಹಿಳಾ ಮಕ್ಕಳ ಇಲಾಖೆಗೆ ಹೋಗಿ ವಿಚಾರಿಸಲಾಗಿದೆ. ಈ ಆದೇಶ ಕಳೆದ ಸರ್ಕಾರದ ಅವಧಿ ದಿನಾಂಕ 3-12-2022 ರಂದು ಆಗಿದ್ದು, ಅದನ್ನು ಈಗ ಜಾರಿ ಮಾಡಿರೋದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಆದೇಶ ಪರಿಶೀಲಿಸಿ ಕನ್ನಡ ಕಡ್ಡಾಯ ಮಾಡಲು ಮುಖ್ಯ ಇಲಾಖೆಗೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ಮನವಿ ನೀಡಿದ್ದೇವೆ” ಎಂದು ತಿಳಿಸಿದ್ದರು.

ದಿನಾಂಕ 3 ಡಿಸೆಂಬರ್ 2022ರಂದು ಮಹಿಳಾ ಮತ್ತು ಮಕ್ಕಳ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರ ಇಲಾಖೆಯ ಅಂದಿನ ಸರ್ಕಾರದ ಅಧೀನ ಕಾರ್ಯದರ್ಶಿ ನಿರ್ಮಲಾ ಎಸ್‌ ಖಟಾವರ್‌ಕರ್‌ ಅವರ ಹೆಸರಿನಲ್ಲಿ ಹೊರಡಿಸಲಾಗಿದ್ದ ಸುತ್ತೋಲೆಯ ಪ್ರತಿಯನ್ನು ಹಂಚಿಕೊಂಡಿದ್ದರು.

ಖಚಿತ ಮೂಲಗಳಿಂದ ನಮಗೆ ದೊರೆತಿರುವ ಮಾಹಿತಿ ಪ್ರಕಾರ, ರಾಜ್ಯ ಸರ್ಕಾರದ ಆದೇಶದಂತೆ ತುಮಕೂರು ನಗರ ವ್ಯಾಪ್ತಿಯ 11 ವಾರ್ಡ್‌ ವ್ಯಾಪ್ತಿಯ ಅಂಗನವಾಡಿಗಳಿಗೆ ಕಾರ್ಯರ್ತೆಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಮುಸ್ಲಿಂ ಜನ ಸಂಖ್ಯೆ ಹೆಚ್ಚಿರುವ ಪ್ರದೇಶವಾದ್ದರಿಂದ ಕನ್ನಡದ ಜೊತೆ ಉರ್ದು ಭಾಷೆ ಕಡ್ಡಾಯಗೊಳಿಸಲಾಗಿದೆ. ಇಲ್ಲಿ ಮುಸ್ಲಿಮರನ್ನು ಓಲೈಸಲು ಪ್ರಸ್ತುತ ಇರುವ ರಾಜ್ಯ ಕಾಂಗ್ರೆಸ್ ಸರ್ಕಾರ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿಲ್ಲ.

ಸಂವಾದ ಸೇರಿದಂತ ಬಲಪಂಥೀಯ ಮಾಧ್ಯಮಗಳಲ್ಲಿ ಉರ್ದು ಭಾಷೆಯನ್ನು ಮುಂದಿಟ್ಟುಕೊಂಡು ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಕಾರಲಾಗಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮುಸ್ಲಿಮರನ್ನು ಓಲೈಸುತ್ತಿದೆ, ಹಿಂದೂ ವಿರೋಧಿ ಸರ್ಕಾರ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗಿದೆ.

ಇದನ್ನೂ ಓದಿ : Fact Check: ರಾಹುಲ್ ಗಾಂಧಿ ಬಿಜೆಪಿ ಚಿಹ್ನೆಯಿರುವ ಟಿ ಶರ್ಟ್‌ ಧರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...