Homeಮುಖಪುಟಗ್ರಹಾಂ ಸ್ಟೇನ್ಸ್ ಮತ್ತು ಇಬ್ಬರು ಮಕ್ಕಳ 'ಮಿಡ್‌ನೈಟ್‌' ಮರ್ಡರ್‌ : ಬಲಪಂಥೀಯ ಕ್ರೌರ್ಯಕ್ಕೆ 25...

ಗ್ರಹಾಂ ಸ್ಟೇನ್ಸ್ ಮತ್ತು ಇಬ್ಬರು ಮಕ್ಕಳ ‘ಮಿಡ್‌ನೈಟ್‌’ ಮರ್ಡರ್‌ : ಬಲಪಂಥೀಯ ಕ್ರೌರ್ಯಕ್ಕೆ 25 ವರ್ಷ!

- Advertisement -
- Advertisement -

ಒಡಿಶಾದ ಕಿಯೋಂಜಾರ್ ಜಿಲ್ಲೆಯ ಮನೋಹರಪುರ ಹಳ್ಳಿಯ ನಿವಾಸಿಗಳು ಮಾನವೀಯತೆಯನ್ನು ಅಣಕಿಸಿರುವ ಆಸ್ಟ್ರೇಲಿಯಾದ ಮಿಷನರಿ ‘ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಅಪ್ರಾಪ್ತ ಪುತ್ರರ’ ಜೀವಂತ ದಹನದ ನೆನಪಿನಲ್ಲಿ 25ನೇ ಪುಣ್ಯತಿಥಿಯನ್ನು ಆಚರಿಸಿದ್ದಾರೆ.

ಜನವರಿ 22, 1999ರ ರಾತ್ರಿ ಮನೋಹರಪುರದಲ್ಲಿ ಜಂಗಲ್ ಕ್ಯಾಂಪ್‌ನಲ್ಲಿ ಭಾಗವಹಿಸಿದ್ದ ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಲಾಗಿತ್ತು. ಬಿಜೆಪಿಯ ಸಂಬಂಧ ಹೊಂದಿರುವ ಬಲಪಂಥೀಯ ಬಜರಂಗದಳದ ಕಾರ್ಯಕರ್ತರ ಗುಂಪು ಈ ಕೃತ್ಯವನ್ನು ಎಸಗಿತ್ತು.

ಜಂಗಲ್ ಶಿಬಿರವು ಈ ಪ್ರದೇಶದ ಕ್ರಿಶ್ಚಿಯನ್ನರಿಗೆ ಸಾಮಾಜಿಕ ವೇದಿಕೆಯಾಗಿ ಕಾರ್ಯನಿರ್ವಹಿಸಿತ್ತು. ಭೀಕರ ಘಟನೆಯ ಸಮಯದಲ್ಲಿ ಅವರು ವ್ಯಾನ್‌ನಲ್ಲಿ ಮಲಗಿದ್ದರು. ಬಲಪಂಥೀಯ ಗುಂಪುಗಳು ಸ್ಟೇನ್ಸ್ ಬಲವಂತದ ಮತಾಂತರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿತ್ತು.

ಘಟನೆ ನಡೆದು 25 ವರ್ಷಗಳು ಕಳೆದರೂ ಈ ಘಟನೆಯು ನಮ್ಮ ಸ್ಮರಣೆಯಿಂದ ಎಂದಿಗೂ ಅಳಿಸಿಹೋಗುವುದಿಲ್ಲ. ಆದರೆ ಜನವರಿ 22 ನಮಗೆ ಚಿಂತನಶೀಲ ದಿನವಾಗಿದೆ. ಸ್ಟೇನ್ಸ್ ತನ್ನ ಜೀವಿತಾವಧಿಯಲ್ಲಿ ಅಭ್ಯಾಸ ಮಾಡಿದ ಮಾನವೀಯತೆಯ ತತ್ವಶಾಸ್ತ್ರವನ್ನು ಮುಂದುವರಿಸಲು ನಾವು ನಿರ್ಧರಿಸುತ್ತೇವೆ ಎಂದು 40 ವರ್ಷದ ಜೊಹಾನ್ ಮುರ್ಮು ಹೇಳಿದ್ದಾರೆ.

ಒಡಿಶಾದ ರಾಜಧಾನಿ ಭುವನೇಶ್ವರದಿಂದ 200 ಕಿಮೀ ದೂರದಲ್ಲಿರುವ ಮನೋಹರಪುರದಲ್ಲಿ 260 ಕುಟುಂಬಗಳಿವೆ. ಅದರಲ್ಲಿ 45 ಕುಟುಂಬಗಳು ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಿದ್ದಾರೆ. ಜನವರಿ 23ರ ಮಧ್ಯರಾತ್ರಿ ಈ ಕೊಲೆ ನಡೆದಿತ್ತು. ಅದು ರಾತ್ರಿಯ ಸಮಯವಾದ್ದರಿಂದ ಮನೋಹರಪುರವು ಪ್ರತಿ ವರ್ಷ ಜನವರಿ 22ರಂದು ಮರಣ ವಾರ್ಷಿಕೋತ್ಸವವನ್ನು ಆಚರಿಸುತ್ತದೆ ಆದರೆ ಜನವರಿ 23ರಂದು ಮಯೂರ್ಭಂಜ್ ಜಿಲ್ಲೆಯ ಜಿಲ್ಲಾ ಕೇಂದ್ರ ಪಟ್ಟಣವಾದ ಬರಿಪಾಡಾದಲ್ಲಿ ಸ್ಮರಣಾರ್ಥ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಅಲ್ಲಿ ಈ ಮಿಷನರಿಗಳು ಕುಷ್ಠ ರೋಗಿಗಳಿಗೆ ಸೇವೆ ಸಲ್ಲಿಸುತ್ತಿದ್ದರು.

ಬಿಜೆಪಿಯಲ್ಲಿ ಸಕ್ರಿಯನಾಗಿದ್ದ ದಾರಾ ಸಿಂಗ್ ಮತ್ತು ತಂಡ

ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಿದ್ದ ತಂಡದಲ್ಲಿದ್ದ ದಾರಾ ಸಿಂಗ್ ಬಿಜೆಪಿಯ ಸದಸ್ಯನಾಗಿದ್ದ. ಆತ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಾಗಿದ್ದ, ಗೋ ಸುರಕ್ಷಾ ಸಮಿತಿಯ ಸಕ್ರಿಯ ಸದಸ್ಯನಾಗಿದ್ದ. ಈತ 1998ರ ಚುನಾವಣೆಯ ಸಮಯದಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ರ್ಯಾಲಿಗಳಲ್ಲಿ ತೊಡಗಿಸಿಕೊಂಡಿದ್ದ. ಇದಲ್ಲದೆ 1991ರ ಚುನಾವಣೆಯ ಸಮಯದಲ್ಲಿ ಪಾಟ್ನಾದಲ್ಲಿ ಬಿಜೆಪಿಗಾಗಿ ಕೆಲಸ ಮಾಡಿದ್ದ. ಹಿಂದುತ್ವದ ಬಲವಾದ ಪ್ರತಿಪಾದಕನಾಗಿದ್ದ.

ದನದ ವ್ಯಾಪಾರಿಗಳನ್ನು ಟಾರ್ಗೆಟ್‌ ಮಾಡಿ ದುಷ್ಕೃತ್ಯ ನಡೆಸುತ್ತಿದ್ದ ಗಂಗಾನದಿ ಬಯಲು ಪ್ರದೇಶದ ಬಜರಂಗದಳದ ಕಾರ್ಯಕರ್ತ ದಾರಾ ಸಿಂಗ್, ಕುಷ್ಠರೋಗದ ಸಂತ್ರಸ್ತರ ಸೇವೆ ಮಾಡುತ್ತಿದ್ದ ಆಸ್ಟ್ರೇಲಿಯಾದ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೈನ್ಸ್(58) ಮತ್ತು ಅವನ ಇಬ್ಬರು ಮಕ್ಕಳಾದ ಫಿಲಿಪ್ (10) ಮತ್ತು ತಿಮೋತಿ(6) ಅವರನ್ನು ಜೀವಂತ ಸುಟ್ಟು ಹಾಕಿದ್ದ. ಈ ಘಟನೆ 1999ರ ಜನವರಿ 21-22 ರಾತ್ರಿ ವೇಳೆ ನಡೆದಿದೆ. ಘಟನೆ ನಡೆದು ಇಂದಿಗೆ 25 ವರ್ಷವಾಗಿದೆ. ಪ್ರಕರಣದಲ್ಲಿ ದಾರಾ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯ ಈ ಪ್ರಕರಣದಲ್ಲಿ ಕೊಲೆಗಾರನ ಸಿದ್ದಾಂತವನ್ನು ಅರ್ಥಮಾಡಿಕೊಂಡಿಲ್ಲ ಎಂದು ಕ್ರಿಶ್ಚಿಯನ್ ಸಮುದಾಯವು ಹೇಳಿಕೊಂಡಿತ್ತು.

ಆಸ್ಟ್ರೇಲಿಯಾದಿಂದ ಒರಿಸ್ಸಾ(ಒಡಿಶಾ)ಗೆ ಬಂದು ನೆಲೆಸಿದ್ದ ಗ್ರಹನ್ ಸ್ಟೇನ್ಸ್ ಸ್ಥಳೀಯ ಭಾಷೆ ಕಲಿತು ಕುಷ್ಠರೋಗಿಗಳ ಸೇವೆ ಮಾಡುತ್ತಿದ್ದರು. ರಾಜ್ಯದ ಮಯೂರ್‌ ಬಂಜ್ ಎಂಬ ಊರಿನಲ್ಲಿ ಕುಷ್ಠರೋಗಿಗಳ ಚಿಕಿತ್ಸೆಗಾಗಿ ಒಂದು ಸಂಸ್ಥೆಯನ್ನು ಹುಟ್ಟುಹಾಕಿದ್ದರು. ಇವರು ಎರಡನೇ ಮದರ್ ತೆರೇಸಾ ಎಂದು ಕೂಡ ಕರೆಯಲ್ಪಟ್ಟಿದ್ದರು. ಗ್ರಹನ್ ಸ್ಟೇನ್ಸ್ ಹತ್ಯೆಯನ್ನು ಘಟನೆಯನ್ನು ಅಂದಿನ ಭಾರತದ ರಾಷ್ಟ್ರಪತಿ ಕೆ.ಆರ್.ನಾರಾಯಣನ್ ರಾಷ್ಟ್ರಕ್ಕೆ ಕಪ್ಪು ಚುಕ್ಕೆ ಎಂದು ಕರೆದಿದ್ದರು. ಇದಲ್ಲದೆ ಬಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಕೂಡ ಇದೇ ರೀತಿಯ ಖಂಡನೆಯನ್ನು ವ್ಯಕ್ತಪಡಿಸಿದ್ದಾರೆ.

ಒರಿಸ್ಸಾ ರಾಜ್ಯದ ಹೊಸ ಹೆಸರಾದ ಒಡಿಶಾದಲ್ಲಿ ಗ್ರಹನ್ ಸ್ಟೇನ್ಸ್ ಪತ್ನಿ ಗ್ಲಾಡಿಸ್ ಸ್ಟೇನ್ಸ್ ಇನ್ನೂ ಇದ್ದಾರೆ. ಆಕೆಯ ಬದುಕುಳಿದ ಮಗು, ಮಗಳು, ಈಗ ಆಸ್ಟ್ರೇಲಿಯಾದಲ್ಲಿ ವೈದ್ಯರಾಗಿದ್ದಾರೆ. ದುಷ್ಕರ್ಮಿಗಳು ಜೀಪಿಗೆ ಬೆಂಕಿ ಹಚ್ಚಿದಾಗ ಗ್ರಹನ್ ಮತ್ತು ಅವರ ಮಕ್ಕಳು ಎಚ್ಚರಗೊಂಡು ಹೊರಬರಲು ಪ್ರಯತ್ನಿಸಿದರೂ ದಾರಾ ಸಿಂಗ್‌ನ ತಂಡ ಅವರನ್ನು ಲಾಠಿ ಬಳಸಿ ಬೆಂಕಿಗೆ ತಳ್ಳಿಹಾಕಿ ಜೀವಂತವಾಗಿ ದಹನ ಮಾಡಿತ್ತು. ತನ್ನ ಕುಟುಂಬದ ಮೇಲೆ ಅನ್ಯಾಯ ನಡೆದರೂ ಗ್ರಹನ್ ಅವರ ಪತ್ನಿ ಗ್ಲ್ಯಾಡಿಸ್ ಅವರು, ನನ್ನ ಗಂಡ ಮತ್ತು ನನ್ನ ಇಬ್ಬರು ಮಕ್ಕಳನ್ನು ಕೊಂದವರನ್ನು ನಾನು ಕ್ಷಮಿಸುತ್ತೇನೆ ಎಂದು ಹೇಳಿದ್ದರು. ತನ್ನ ಪ್ರೀತಿಯ‌ ಗಂಡ ಮತ್ತು ಇಬ್ಬರು ಕಂದಮ್ಮಗಳನ್ನು ಕೊಂದ ಆರೋಪಿಗಳನ್ನು ಕ್ಷಮಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ ಗ್ಲ್ಯಾಡ್ಲಿಸ್ ಧರ್ಮ ಅಂದರೆ ಏನು ಎಂದು ತೋರಿಸಿಕೊಟ್ಟರು. ಆದರೆ ಅಪರಾಧಿಗಳಿಗೆ ಕ್ಷಮೆ ನೀಡುವ ಕಾನೂನು ಭಾರತದಲ್ಲಿ ಇಲ್ಲ.

ಸಂಘ ಪರಿವಾರ ಗುಂಪುಗಳು ಭಾರತದಲ್ಲಿ ಕ್ರಿಶ್ಚಿಯನ್ ಸಮುದಾಯದ ಮೇಲೆ ಹಿಂಸಾಚಾರ ನಡೆಸುತ್ತಿದೆ ಎಂದು ಈ ವೇಳೆ ಪಾಶ್ಚಿಮಾತ್ಯ ಜಗತ್ತು ಕಳವಳ ವ್ಯಕ್ತಪಡಿಸಿತ್ತು. 2007 ಮತ್ತು 2008ರಲ್ಲಿ ಒಡಿಶಾದಲ್ಲಿ ಸಂಘ ಪರಿವಾರವು ಮತ್ತೊಮ್ಮೆ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿತ್ತು. ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಸಾವುಗಳಿಗೆ ಕಾರಣವಾಯಿತು, 6,000 ಕ್ಕೂ ಹೆಚ್ಚು ಮನೆಗಳು ಮತ್ತು 300 ಚರ್ಚ್‌ಗಳನ್ನು ಸುಟ್ಟುಹಾಕಲಾಯಿತು ಮತ್ತು 60,000 ಜನರನ್ನು ಸ್ಥಳಾಂತರಿಸಲಾಗಿತ್ತು.

ಇದನ್ನು ಓದಿ: ಭದ್ರತೆ ಹಿಂಪಡೆದ ಬಳಿಕ ಭಯದಿಂದ ಬದುಕುತ್ತಿರುವ ಗುಜರಾತ್‌ ಗಲಭೆ ಸಾಕ್ಷಿಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...