Homeಮುಖಪುಟಪಶ್ಚಿಮ ಬಂಗಾಳ: 'ಸರ್ವಧರ್ಮ ಸೌಹಾರ್ದ ರ‍್ಯಾಲಿ' ಆರಂಭಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ: ‘ಸರ್ವಧರ್ಮ ಸೌಹಾರ್ದ ರ‍್ಯಾಲಿ’ ಆರಂಭಿಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಸಮಾರಂಭ ನಡೆಯುತ್ತಿರುವಾಗಲೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಮಧ್ಯಾಹ್ನ ಕಲ್ಕತ್ತಾದಲ್ಲಿ ‘ಸರ್ವಧರ್ಮ ಸಮನ್ವಯ ರ‍್ಯಾಲಿ’ಯನ್ನು ಪ್ರಾರಂಭಿಸಿದರು.

ವಿವಿಧ ಧರ್ಮಗಳ ಧಾರ್ಮಿಕ ಮುಖಂಡರು ಮತ್ತು ಪಕ್ಷದ ಮುಖಂಡರೊಂದಿಗೆ, ಕಲ್ಕತ್ತಾದ ಹಜ್ರಾ ಮೋರ್ನಿಂದ ‘ಸಂಗತಿ ಮಾರ್ಚ್’ ಅನ್ನು ಪ್ರಾರಂಭಿಸಿದರು.

ತಮ್ಮ ಎಂದಿನ ಶೈಲಿಯ ಬಿಳಿ ಮತ್ತು ನೀಲಿ ಬಾರ್ಡರ್ ಇರುವ ಕಾಟನ್ ಸೀರೆಯನ್ನು ತನ್ನ ಕುತ್ತಿಗೆಗೆ ಸುತ್ತಿಕೊಂಡು, ಮಮತಾ ಬ್ಯಾನರ್ಜಿ ರಸ್ತೆಯ ಎರಡೂ ಬದಿಗಳಲ್ಲಿ ಸೇರಿದ್ದ ಜನರತ್ತ ಕೈ ಬೀಸುತ್ತಾ ನಡೆದರು.
ನಗರದ ಪ್ರಸಿದ್ಧ ಕಾಳಿಘಾಟ್ ದೇವಸ್ಥಾನದಲ್ಲಿ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ ನಂತರ ಅವರು ರ‍್ಯಾಲಿಯನ್ನು ಪ್ರಾರಂಭಿಸಿದರು. ಬೃಹತ್ ಸಮಾವೇಶದೊಂದಿಗೆ ಪಾರ್ಕ್ ಸರ್ಕಸ್ ಮೈದಾನದಲ್ಲಿ ಪಾದಯಾತ್ರೆ ಸಮಾರೋಪಗೊಳ್ಳಲಿದೆ.

ಹಜ್ರಾ ಮೋರ್‌ನಿಂದ ರ‍್ಯಾಲಿಯನ್ನು ಮುನ್ನಡೆಸುತ್ತಿದ್ದಾರೆ, ಈ ಸಂದರ್ಭದಲ್ಲಿ ಅವರು ಮಸೀದಿಗಳು ಸೇರಿದಂತೆ ವಿವಿಧ ಧರ್ಮಗಳನ್ನು ಪ್ರತಿನಿಧಿಸುವ ವಿವಿಧ ಪೂಜಾ ಸ್ಥಳಗಳಿಗೆ, ಚರ್ಚುಗಳು ಮತ್ತು ಗುರುದ್ವಾರಗಳಿಗೆ ಭೇಟಿ ನೀಡಲಿದ್ದಾರೆ.

ಈ ಹಿಂದೆ ರಾಮ ಮಂದಿರದ ಘಟನೆಯ ಬಗ್ಗೆ ಬಿಜೆಪಿಯನ್ನು ಟೀಕಿಸಿದ್ದ ಮಮತಾ ಬ್ಯಾನರ್ಜಿ, “ಲೋಕಸಭಾ ಚುನಾವಣೆಯ ಹಿಂದಿರುವ ಗಿಮಿಕ್ ಶೋ” ಎಂದು ಟೀಕಿಸಿದ್ದರು. ‘ಲೋಕಸಭೆ ಚುನಾವಣೆಗೆ ಮುನ್ನ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡುವ ಮೂಲಕ ಬಿಜೆಪಿ ಗಿಮಿಕ್ ಶೋನಲ್ಲಿ ತೊಡಗಿದೆ. ಇತರ ಸಮುದಾಯಗಳನ್ನು ಹೊರಗಿಡುವ ಹಬ್ಬಗಳನ್ನು ನಾನು ಬೆಂಬಲಿಸುವುದಿಲ್ಲ’ ಎಂದು ಅವರು ಪ್ರತಿಪಾದಿಸಿದ್ದರು.

‘ಎಲ್ಲ ಸಮುದಾಯದ ಜನರನ್ನು ಕರೆದುಕೊಂಡು ಹೋಗುವ ಮತ್ತು ಒಗ್ಗಟ್ಟಿನ ಬಗ್ಗೆ ಮಾತನಾಡುವ ಹಬ್ಬಗಳನ್ನು ನಾನು ನಂಬುತ್ತೇನೆ. ಬಿಜೆಪಿ ಇದನ್ನು (ರಾಮಮಂದಿರ ಉದ್ಘಾಟನೆ) ನ್ಯಾಯಾಲಯದ ಸೂಚನೆಯ ಮೇರೆಗೆ ಮಾಡುತ್ತಿದೆ. ಆದರೆ ಅದನ್ನು ಗಿಮಿಕ್ ಪ್ರದರ್ಶನವಾಗಿ ಲೋಕಸಭೆ ಚುನಾವಣೆಗೆ ಮುನ್ನ ಮಾಡುತ್ತಿದೆ’ ಎಂದು ಅವರು ಟೀಕಿಸಿದ್ದರು.

ಬಿಜೆಪಿ ವಿರುದ್ಧ ಅಭಿಷೇಕ್ ಬ್ಯಾನರ್ಜಿ ವಾಗ್ದಾಳಿ:

ದ್ವೇಷ ಮತ್ತು ಹಿಂಸಾಚಾರದ ಮೇಲೆ ನಿರ್ಮಿಸಲಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ನನ್ನ ಧರ್ಮ ನನಗೆ ಕಲಿಸಿಲ್ಲ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ದ್ವೇಷ, ಹಿಂಸಾಚಾರ ಮತ್ತು ಅಮಾಯಕರ ಶವಗಳ ಮೇಲೆ ನಿರ್ಮಿಸಲಾದ ಮಂದಿರ, ಮಸೀದಿ, ಚರ್ಚ್ ಅಥವಾ ಗುರುದ್ವಾರವೇ ಆಗಿರಲಿ, ಅತಂಹ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ನನ್ನ ಧರ್ಮ ನನಗೆ ಕಲಿಸಿಲ್ಲ’ ಎಂದು ಅಭಿಷೇಕ್ ಬ್ಯಾನರ್ಜಿ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ; ದ್ವೇಷ, ಹಿಂಸೆಯ ಮೇಲೆ ನಿರ್ಮಾಣವಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...