Homeಮುಖಪುಟ‘ಇಂದು ಮತ್ತೆ ರಾಜರ ಕಾಲಕ್ಕೆ ಹೋದ ಅನುಭವ..’: ನಟ ಕಿಶೋರ್ ಕುಮಾರ್

‘ಇಂದು ಮತ್ತೆ ರಾಜರ ಕಾಲಕ್ಕೆ ಹೋದ ಅನುಭವ..’: ನಟ ಕಿಶೋರ್ ಕುಮಾರ್

- Advertisement -
- Advertisement -

‘ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣುತ್ತೇನೆ’ ಎಂದು ಪ್ರಮಾಣವಚನ ಸ್ವೀಕರಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಅಯೋಧ್ಯೆ ರಾಮಮಂದಿರ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯನ್ನು ವಿಜೃಂಭಣೆಯಿಂದ ನಡೆಸಿಕೊಟ್ಟಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿರುವವರ ಈ ರೀತಿಯ ವರ್ತನೆ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ದಕ್ಷಿಣ ಭಾರತದ ಹೆಸರಾಂತ ನಟ ಕಿಶೋರ್ ಕುಮಾರ್ (ಹುಲಿ), ‘ಇಂದು ಮತ್ತೆ ರಾಜರ ಕಾಲಕ್ಕೆ ಹೋದ ಅನುಭವ…’ ಎಂದು ಹೇಳಿದ್ದಾರೆ.

ಈ ಕುರಿತು ತಮ್ಮ ಫೇಸ್ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಮಂದಿರ, ರಾಜರು ಮತ್ತು ರಾಜಕೀಯ ನಿಯಂತ್ರಣ… ನಾವು ನೋಡದ್ದೇನಲ್ಲ. ಇಂದು ಮತ್ತೆ ರಾಜರ ಕಾಲಕ್ಕೆ ಹೋದ ಅನುಭವ.. ದೇವರ ಹೆಸರಲ್ಲಿ ಪೂಜಾರಿಯೊಂದಿಗೆ ಸೇರಿ ಜನರನ್ನು ನಿಯಂತ್ರಿಸಿ, ದೇಗುಲ ಕಟ್ಟಿಸಿ, ತಮ್ಮ ಹೆಸರು ಕೆತ್ತಿಸಿ, ದೇಗುಲದ ಶಿಲ್ಪಿಯ ಕೈ ಕತ್ತರಿಸಿ, ತಮ್ಮ ಕೀರ್ತಿ ಪತಾಕೆಯನ್ನು ಹಾರಿಸಿ, ಅಜರಾಮರರಾದ ದೊರೆಗಳು … ಉಧೋ ಉಧೋ ಎಂದ ಪ್ರಜೆಗಳು, ಭಟ್ಟಂಗಿಗಳು’ ಎಂದು ಕಿಶೋರ್ ವಾಗ್ದಾಳಿ ನಡೆಸಿದ್ದಾರೆ.

‘ಧರ್ಮ ಮತ್ತು ದೇವರು ರಾಜಕಾರಿಣಿಗಳ ಕೈಗೆ ಹೋಗಿ ತಾವೂ ಪ್ರಶ್ನಾತೀತವಾಗಿ ಅವರನ್ನೂ ಪ್ರಶ್ನಾತೀತರನ್ನಾಗಿಸಿಬಿಡುವುದು ಸಂಸ್ಕೃತಿಯ ಚಲನಶೀಲತೆಗೆ, ನಾಡಿನ ಭವಿಷ್ಯಕ್ಕೆ ಅತೀ ಅಪಾಯಕಾರಿ’ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಆಡಳಿತಕ್ಕೆ ಬಂದ ನಂತರದ ‘ಹಿಂದುತ್ವ ರಾಜಕೀಯ’ ಬೆಳವಣಿಗೆಗಳು, ಬಿಜೆಪಿ ಸರ್ಕಾರದ ಸಂವಿಧಾನ ವಿರೋಧಿ ನಡೆಗಳ ವಿರುದ್ಧ ತಮ್ಮ ಪೇಸ್ಬುಕ್ ಮತ್ತು ಮಾಧ್ಯಮ ಸಂದರ್ಶನಗಳಲ್ಲಿ ಕಿಶೋರ್ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸುತ್ತಾರೆ.

ರಾಮಮಂದಿರದ ಕುರಿತು ಈ ಹಿಂದೆ ಒಂದು ಪೋಸ್ಟ್ನಲ್ಲಿ, ‘ಅಸಲಿ ಹಿಂದೂ ವಿರೋಧಿ ಯಾರು? ಧರ್ಮದ ರಾಜಕೀಕರಣವನ್ನು ವಿರೋಧಿಸುವವರನ್ನು ಹಿಂದೂ ವಿರೋಧಿಗಳು, ದೇಶ ವಿರೋಧಿಗಳೆಂದು ಟ್ರೋಲ್ ಮಾಡುವ ವಿಶ್ವಗುರು ಭಕ್ತರು ಮತ್ತು ತನ್ನ ವೃತ್ತಿಧರ್ಮಕ್ಕೆ ದ್ರೋಹ ಬಗೆದ ಗೋದಿ ಮಾಧ್ಯಮದವರು ಈಗೇನು ಮಾಡುತ್ತಾರೆ ಶಂಕರಾಚಾರ್ಯರುಗಳನ್ನೂ ಹಿಂದೂ ವಿರೋಧಿಗಳು ದೇಶ ವಿರೋಧಿಗಳೆಂದು ಟ್ರೋಲ್ ಮಾಡುತ್ತಾರೆಯೇ? ರಾಮ ಮಂದಿರದ ರಾಜಕೀಕರಣವನ್ನು ವಿರೋಧಿಸುತ್ತಿರುವ ಶಂಕರಾಚಾರ್ಯರುಗಳು ಹಿಂದೂ ವಿರೋಧಿಗಳಲ್ಲವೆಂದರೆ ನಿಜವಾದ ಹಿಂದೂ ವಿರೋಧಿಗಳು ಯಾರು? ಅರ್ಧಂಬರ್ಧ ದೇವಸ್ಥಾನದ ಉದ್ಘಾಟನೆ ಮಾಡಿ ಓಟು ಬಾಚಲು ನಿಂತಿರುವ ಧೂರ್ತರು ಅವರ ಅಂಧಭಕ್ತರು ಹಿಂದೂ ವಿರೋಧಿಗಳೇ ಅಲ್ಲವೇ’ ಎಂದು ತರಾಟೆಗೆ ತೆಗೆದುಕೊಂಡಿದ್ದರು.

‘ಅವರ ಧರ್ಮಾಂಧತೆಯ ಮಂಕುಬೂದಿಯ ಭ್ರಮೆಯಲ್ಲಿ ಮಂತ್ರಾಕ್ಷತೆ ಹಂಚುತ್ತಿರುವವರೂ ಅದೇ ಆಗಿಬಿಡುವುದಿಲ್ಲವೇ? ಈ ಅಯೋಗ್ಯ ರಾಜಕಾರಿಣಿಗಳಿಗೆ ರಾಮ ಬರೀ ರಾಜಕೀಯ ಲಾಭಕ್ಕಾಗಿಯೇ ಇರುವ ವ್ಯಾಪಾರದ ಸರಕು.. ಅಷ್ಟೇ. ನಿಜವಾದ ದೈವವೆನ್ನುವ ನಂಬಿಕೆ ಇರುವುದು ಮಂದಿರ ಮಸೀದಿ ಚರ್ಚುಗಳಲ್ಲಲ್ಲ. ಗಾಂಧಿಯಂತೆ, ಜೀವನದ ಪ್ರತಿ ನಡೆಯಲ್ಲಿ ರಾಮ.. ಪ್ರತಿ ನುಡಿಯಲ್ಲಿ ರಾಮ.. ಸಾವಲ್ಲೂ ಹೇ ರಾಮ.. ಈ ಢೋಂಗಿಗಳಿಗೆ ಎಂದಾದರೂ ಅದು ಸಾಧ್ಯವೇ? ಎಷ್ಟೇ ಆಗಲಿ ಆ ಗಾಂಧಿಯನ್ನು ಕೊಂದವರಲ್ಲವೇ’ ಎಂದು ರಾಮನ ಹೆಸರಿನಲ್ಲಿ ರಾಜಕೀಯ ಮಾಡುವವರಿಗೆ ಮಾತಿನಲ್ಲೇ ಚಾಟಿ ಏಟು ಬೀಸಿದ್ದರು.

ಇದನ್ನೂ ಓದಿ; ಪಶ್ಚಿಮ ಬಂಗಾಳ: ‘ಸರ್ವಧರ್ಮ ಸೌಹಾರ್ದ ರ‍್ಯಾಲಿ’ ಆರಂಭಿಸಿದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...