Homeಮುಖಪುಟಮಧ್ಯಪ್ರದೇಶ: ಚರ್ಚ್‌ ಮೇಲೆ ಕೇಸರಿ ಧ್ವಜ ಹಾರಾಟ

ಮಧ್ಯಪ್ರದೇಶ: ಚರ್ಚ್‌ ಮೇಲೆ ಕೇಸರಿ ಧ್ವಜ ಹಾರಾಟ

- Advertisement -
- Advertisement -

ಮಧ್ಯಪ್ರದೇಶದ ಝಬುವಾದಲ್ಲಿ ಚರ್ಚ್‌ವೊಂದರ ಮೇಲೆ ಹತ್ತಿ ದುಷ್ಕರ್ಮಿಗಳು ಕೇಸರಿ ಧ್ವಜವನ್ನು ಹಾರಾಟ ನಡೆಸಿ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದಾರೆ.

ಈ ಕುರಿತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ವಿಡಿಯೋವು ದುಷ್ಕರ್ಮಿಯೋರ್ವ ಚರ್ಚ್‌ ಮೇಲೆ ಹತ್ತಿ ಕೇಸರಿ ಧ್ವಜವನ್ನು ಹಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಕೇಸರಿ ಧ್ವಜದಲ್ಲಿ ಅಯೋಧ್ಯೆಯ ರಾಮ ಮಂದಿರದ ಚಿತ್ರವಿತ್ತು ಮತ್ತು ಅದರ ಮೇಲೆ ‘ಜೈ ಶ್ರೀ ರಾಮ್’ ಎಂದು ಬರೆಯಲಾಗಿತ್ತು.

ಈ ಕುರಿತು ಮಾತನಾಡಿದ ಚರ್ಚ್‌ನ ಪಾದ್ರಿ ನರ್ಬು ಅಮಲಿಯಾರ್, ಭಾನುವಾರದ ಪ್ರಾರ್ಥನೆ ಮುಗಿದ ಕೂಡಲೇ ಜನರ ಗುಂಪು ಘೋಷಣೆಗಳನ್ನು ಕೂಗುತ್ತಾ ಚರ್ಚ್‌ಗೆ ಬಂದಿದೆ. ನಾವು ನಮ್ಮ ಭಾನುವಾರದ ಪ್ರಾರ್ಥನೆಯನ್ನು ಮುಗಿಸುವಾಗ ಮಧ್ಯಾಹ್ನ 3 ಗಂಟೆಯಾಗಿತ್ತು. ಈ ವ್ಯಕ್ತಿಗಳು ಎಲ್ಲಿಂದಲೋ ಬಂದರು, ಜೈ ಶ್ರೀ ರಾಮ್ ಎಂದು ಕೂಗಿದರು. ಗುಂಪಿನಲ್ಲಿ ಕನಿಷ್ಠ 25 ಮಂದಿ ಇದ್ದರು ಮತ್ತು ಅವರಲ್ಲಿ ಕೆಲವರು ಧ್ವಜ ಹಿಡಿದುಕೊಂಡು ಚರ್ಚ್‌ನ ಮೇಲೆ ಹತ್ತಿದ್ದಾರೆ ಎಂದು ಹೇಳಿದ್ದಾರೆ.

ದುಷ್ಕರ್ಮಿಗಳ ಗುಂಪಿನಲ್ಲಿದ್ದ ಕೆಲವರನ್ನು ನಾನು ಗುರುತಿಸಿದ್ದು, ಅವರು ನೆರೆಯ ಗ್ರಾಮದವರಾಗಿದ್ದರು. ಅವರಲ್ಲಿ ಕೆಲವರ ಹೆಸರುಗಳೂ ನನಗೆ ಗೊತ್ತು. ಇದು ಸರಿಯಲ್ಲ ಎಂದು ಅವರಿಗೆ ತಿಳಿಹೇಳಲು ನಾನು ಪ್ರಯತ್ನಿಸಿದ್ದೆ. ನಾವು ಇಲ್ಲಿ ಕೇವಲ ದೇವರ ಆರಾಧಕರು ಮತ್ತು ಅವರು ನಮಗೆ ತೊಂದರೆ ನೀಡಬಾರದು ಎಂದು ನಾನು ಕೇಳಿಕೊಂಡಿದ್ದ, ಆದರೆ ಅವರು ಕೇಳಲಿಲ್ಲ. ಅಲ್ಲೇನು ನಡೆಯುತ್ತಿದೆ ಎನ್ನುವುದು ನನಗೆ ಅರ್ಥವಾಗಿರಲಿಲ್ಲ, ಹೀಗೆ ಹಿಂದೆಂದೂ ಸಂಭವಿಸಿರಲಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಜಬುವಾ ಪೊಲೀಸ್ ವರಿಷ್ಠಾಧಿಕಾರಿ ಆಗಮ್ ಜೈನ್, ಈ ಬಗ್ಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ನಮ್ಮ ತಂಡ ಭಾನುವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿದೆ. ಏನಾಯಿತು ಎಂದು ವಿಚಾರಿಸಿದೆವು. ಇದು ಒಬ್ಬ ವ್ಯಕ್ತಿಯ ಮನೆ ಅವನು ಪ್ರಾರ್ಥನೆಗಾಗಿ ಬಳಸುತ್ತಾನೆ, ಅದು ಚರ್ಚ್ ಅಲ್ಲ. ಹಾಗಾಗಿ ನಾವು ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿಲ್ಲ. ವ್ಯಕ್ತಿಯು ದೂರು ನೀಡಲು ಮುಂದೆ ಬಂದಿಲ್ಲ ಎಂದು ಹೇಳಿದ್ದಾರೆ.

ಇದು ಮನೆ ಎಂಬ ಪೊಲೀಸರ ಹೇಳಿಕೆಯನ್ನು ಪಾದ್ರಿ ನಿರಾಕರಿಸಿದ್ದು, ಇದು ಪ್ರಾರ್ಥನಾಲಯ, ನಾನು 2016 ರಲ್ಲಿ ಪ್ರಾರಂಭಿಸಿದ ಚರ್ಚ್. ಪ್ರತಿ ಭಾನುವಾರ 30-40 ಜನರು ಇಲ್ಲಿ ಪ್ರಾರ್ಥನೆಗೆ ಬರುತ್ತಾರೆ. ಇದು ಪೂಜಾ ಸ್ಥಳವಾಗಿದೆ. ನನ್ನ ಮನೆ ಪ್ರತ್ಯೇಕವಾಗಿದೆ. ಯುವಕರ ಗುಂಪು ನಂತರ ನನ್ನನ್ನು ಕರೆದು ಕ್ಷಮೆಯಾಚಿಸಿದರು. ಹಾಗಾಗಿ ನಾನು ಇನ್ನೂ ದೂರು ದಾಖಲಿಸಿಲ್ಲ. ನಾನು ನನ್ನ ಗ್ರಾಮದ ಸರಪಂಚರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗ್ರಹಾಂ ಸ್ಟೇನ್ಸ್ ಮತ್ತು ಇಬ್ಬರು ಮಕ್ಕಳ ‘ಮಿಡ್‌ನೈಟ್‌’ ಮರ್ಡರ್‌ : ಬಲಪಂಥೀಯ ಕ್ರೌರ್ಯಕ್ಕೆ 25 ವರ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...