Homeಮುಖಪುಟದಲಿತ ಯುವತಿಗೆ ಕಿರುಕುಳ: ಎಫ್‌ಐಆರ್‌ ದಾಖಲಾಗಿ 5 ದಿನ ಕಳೆದರೂ ಅರೆಸ್ಟ್‌ ಆಗದ ಶಾಸಕರ ಮಗ,...

ದಲಿತ ಯುವತಿಗೆ ಕಿರುಕುಳ: ಎಫ್‌ಐಆರ್‌ ದಾಖಲಾಗಿ 5 ದಿನ ಕಳೆದರೂ ಅರೆಸ್ಟ್‌ ಆಗದ ಶಾಸಕರ ಮಗ, ಸೊಸೆ

- Advertisement -
- Advertisement -

ಹದಿನೆಂಟು ವರ್ಷದ ದಲಿತ ಯುವತಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಶಾಸಕರ ಪುತ್ರ ಮತ್ತು ಸೊಸೆಯ ವಿರುದ್ಧ ಚೆನ್ನೈ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿ ಐದು ದಿನಗಳು ಕಳೆದರೂ, ಆರೋಪಿಗಳ ಬಂಧನವಾಗಿಲ್ಲ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿಗಳಾದ ಆಂಟೊ ಮತ್ತು ಮೆರ್ಲಿನಾ ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

“ನಾವು ಶಾಸಕ ಕರುಣಾನಿಧಿಗೆ ಕರೆ ಮಾಡಿ ವಿಚಾರಿಸಿದಾಗ ಅವರು, ನನ್ನ ಮಗ ಸೊಸೆ ಮದುವೆಯಾಗಿ ಏಳು ವರ್ಷ ಕಳೆದಿದೆ. ಈಗ ಅವರು ಎಲ್ಲಿದ್ದಾರೋ ನನಗೆ ಗೊತ್ತಿಲ್ಲ. ದಲಿತ ಯುವತಿಯ ಮೇಲೆ ಹಲ್ಲೆ ಮಾಡಿರುವ ಕುರಿತು ನನಗೆ ಮಾಹಿತಿಯಿಲ್ಲವೆಂದು ಹೇಳಿದ್ದಾಗಿ” ನ್ಯೂಸ್‌ ಮಿನಿಟ್ ತಿಳಿಸಿದೆ.

ಆರೋಪಿಗಳ ಫೋನ್ ನಂಬರ್ ಬಳಸಿಕೊಂಡು ಅವರು ಇರುವ ಸ್ಥಳವನ್ನು ಪತ್ತೆ ಹಚ್ಚಲು ಸಾಧ್ಯವಾಗದ ಕಾರಣ ಇನ್ನೂ ಬಂಧಿಸಿಲ್ಲ. ಶೋಧ ಕಾರ್ಯ ನಡೆಯುತ್ತಿದೆ ಎಂದು ಚೆನ್ನೈನ ತಿರುವನ್ಮಿಯೂರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣ ಹಿನ್ನೆಲೆ: ಹನ್ನೆರಡನೇ ತರಗತಿ ಓದಿರುವ ಅನು (ಹೆಸರು ಬದಲಾಯಿಸಲಾಗಿದೆ) ಎಂಬ ದಲಿತ ಹುಡುಗಿಯನ್ನು ಶಾಕರ ಮಗ ಆಂಟೊ ಮತ್ತು ಆತನ ಪತ್ನಿ ಮೆರ್ಲಿನಾ 2023ರಲ್ಲಿ ತಮ್ಮ ಮನೆ ಕೆಲಸಗಾರ್ತಿಯಾಗಿ ನೇಮಿಸಿಕೊಂಡಿದ್ದರು. ಯುವತಿ ತಮಿಳುನಾಡಿನಲ್ಲಿ ಪರಿಶಿಷ್ಟ ಜಾತಿ ಎಂದು ವರ್ಗೀಕರಿಸಲಾಗಿರುವ ಪರಯ್ಯರ್ ಸಮುದಾಯಕ್ಕೆ ಸೇರಿದವಳು. “ತಾನು ಮೆರ್ಲಿನಾ ಮತ್ತು ಆಂಟೊ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ, ಮೆರ್ಲಿನಾ ನನಗೆ ಥಳಿಸುತ್ತಿದ್ದರು. ಸಿಗರೇಟ್ ತುಂಡುಗಳಿಂದ ಚರ್ಮವನ್ನು ಸುಡುತ್ತಿದ್ದರು. ಕೂದಲನ್ನು ಚಿಕ್ಕದಾಗಿ ಕತ್ತರಿಸಿದ್ದರು” ಎಂದು ಯುವತಿ ಆರೋಪಿಸಿದ್ದಾಳೆ.

ದೌರ್ಜನ್ಯದ ಬಗ್ಗೆ ಯಾರಿಗೂ ಹೇಳದಂತೆ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಅನು ಆರೋಪಿಸಿದ್ದಾರೆ. ದಂಪತಿ ತನ್ನನ್ನು ಡಾಕ್ಯುಮೆಂಟ್‌ಗೆ ಸಹಿ ಮಾಡುವಂತೆ ಒತ್ತಾಯಿಸಿದ್ದರು. ಅದರ, ಪ್ರಕಾರ ನಾನು ಅವರಿಗೆ 2 ಲಕ್ಷ ರೂ. ಕೊಡಲು ಬಾಕಿ ಇದೆ. ಅದಕ್ಕಾಗಿ ನಾನು ಇನ್ನೂ ಮೂರು ವರ್ಷಗಳ ಕಾಲ ಅವರ ಮನೆಯಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿಕೊಂಡಿದ್ದಳು.

ಪೊಂಗಲ್ ಹಬ್ಬಕ್ಕೆ ಉಲುಂದೂರುಪೇಟೆಯಲ್ಲಿರುವ ತನ್ನ ಮನೆಗೆ ತೆರಳಿದ್ದ ವೇಳೆ ಅನು ವೈದ್ಯಕೀಯ ಚಿಕಿತ್ಸೆ ಪಡೆದಿದ್ದಳು. ಆ ಸಮಯದಲ್ಲಿ ಆಕೆಯ ತಾಯಿ ಆಕೆಯ ದೇಹದ ಮೇಲೆ ಗಾಯಗಳನ್ನು ಗಮನಿಸಿದ್ದರು. ಅನು ಚಿಕಿತ್ಸೆ ಪಡೆದ ಉಲುಂದೂರುಪೇಟೆ ಸರ್ಕಾರಿ ಆಸ್ಪತ್ರೆಯ ವೈದ್ಯರು, ಆಕೆಯ ಮೇಲೆ ದೊಣ್ಣೆ, ಹೇರ್ ಸ್ಟ್ರೈಟ್ನರ್‌ನಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿಸಿದ್ದರು. ಆಕೆಯ ಕಣ್ಣು, ಹಣೆ ಮತ್ತು ಗಲ್ಲದ ಮೇಲೆ ಗಾಯದ ಗುರುತಿತ್ತು ಮತ್ತು ಎರಡೂ ಮುಂದೋಳಿನ ಮೇಲೆ ಸುಟ್ಟ ಗಾಯಗಳು ಕಂಡು ಬಂದಿತ್ತು.

ಈ ಬಗ್ಗೆ ಆಸ್ಪತ್ರೆಯ ಆಡಳಿತ ಮಂಡಳಿ ಉಲುಂದೂರ್‌ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ತಿರುವನ್ಮಿಯೂರ್ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದರು.

ತಿರುವನ್ಮಿಯೂರ್ ಪೊಲೀಸರು ಜನವರಿ 18 ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಬಿ) (ಅಶ್ಲೀಲ ಕೃತ್ಯಗಳು), 324 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು), 325 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ನೋವುಂಟು ಮಾಡುವ ಶಿಕ್ಷೆ), 506(1) (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಸೆಕ್ಷನ್ 3(1)(ಆರ್) ಮತ್ತು 3(1)(ಗಳು) (ಅಪರಾಧ ದೌರ್ಜನ್ಯಗಳಿಗೆ ಶಿಕ್ಷೆ) ಅಡಿಯಲ್ಲಿ ಆರೋಪಿಗಳ ವಿರುದ್ದ ಎಫ್ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಜಯಲಲಿತಾ ಆಸ್ತಿ ಹರಾಜು ಬೇಡ: ಬೆಂಗಳೂರು ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...