Homeಮುಖಪುಟದಲಿತ ಯುವತಿಗೆ ಕಿರುಕುಳ: ಎಫ್‌ಐಆರ್‌ ದಾಖಲಾಗಿ 5 ದಿನ ಕಳೆದರೂ ಅರೆಸ್ಟ್‌ ಆಗದ ಶಾಸಕರ ಮಗ,...

ದಲಿತ ಯುವತಿಗೆ ಕಿರುಕುಳ: ಎಫ್‌ಐಆರ್‌ ದಾಖಲಾಗಿ 5 ದಿನ ಕಳೆದರೂ ಅರೆಸ್ಟ್‌ ಆಗದ ಶಾಸಕರ ಮಗ, ಸೊಸೆ

- Advertisement -
- Advertisement -

ಹದಿನೆಂಟು ವರ್ಷದ ದಲಿತ ಯುವತಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಶಾಸಕರ ಪುತ್ರ ಮತ್ತು ಸೊಸೆಯ ವಿರುದ್ಧ ಚೆನ್ನೈ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿ ಐದು ದಿನಗಳು ಕಳೆದರೂ, ಆರೋಪಿಗಳ ಬಂಧನವಾಗಿಲ್ಲ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿಗಳಾದ ಆಂಟೊ ಮತ್ತು ಮೆರ್ಲಿನಾ ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

“ನಾವು ಶಾಸಕ ಕರುಣಾನಿಧಿಗೆ ಕರೆ ಮಾಡಿ ವಿಚಾರಿಸಿದಾಗ ಅವರು, ನನ್ನ ಮಗ ಸೊಸೆ ಮದುವೆಯಾಗಿ ಏಳು ವರ್ಷ ಕಳೆದಿದೆ. ಈಗ ಅವರು ಎಲ್ಲಿದ್ದಾರೋ ನನಗೆ ಗೊತ್ತಿಲ್ಲ. ದಲಿತ ಯುವತಿಯ ಮೇಲೆ ಹಲ್ಲೆ ಮಾಡಿರುವ ಕುರಿತು ನನಗೆ ಮಾಹಿತಿಯಿಲ್ಲವೆಂದು ಹೇಳಿದ್ದಾಗಿ” ನ್ಯೂಸ್‌ ಮಿನಿಟ್ ತಿಳಿಸಿದೆ.

ಆರೋಪಿಗಳ ಫೋನ್ ನಂಬರ್ ಬಳಸಿಕೊಂಡು ಅವರು ಇರುವ ಸ್ಥಳವನ್ನು ಪತ್ತೆ ಹಚ್ಚಲು ಸಾಧ್ಯವಾಗದ ಕಾರಣ ಇನ್ನೂ ಬಂಧಿಸಿಲ್ಲ. ಶೋಧ ಕಾರ್ಯ ನಡೆಯುತ್ತಿದೆ ಎಂದು ಚೆನ್ನೈನ ತಿರುವನ್ಮಿಯೂರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣ ಹಿನ್ನೆಲೆ: ಹನ್ನೆರಡನೇ ತರಗತಿ ಓದಿರುವ ಅನು (ಹೆಸರು ಬದಲಾಯಿಸಲಾಗಿದೆ) ಎಂಬ ದಲಿತ ಹುಡುಗಿಯನ್ನು ಶಾಕರ ಮಗ ಆಂಟೊ ಮತ್ತು ಆತನ ಪತ್ನಿ ಮೆರ್ಲಿನಾ 2023ರಲ್ಲಿ ತಮ್ಮ ಮನೆ ಕೆಲಸಗಾರ್ತಿಯಾಗಿ ನೇಮಿಸಿಕೊಂಡಿದ್ದರು. ಯುವತಿ ತಮಿಳುನಾಡಿನಲ್ಲಿ ಪರಿಶಿಷ್ಟ ಜಾತಿ ಎಂದು ವರ್ಗೀಕರಿಸಲಾಗಿರುವ ಪರಯ್ಯರ್ ಸಮುದಾಯಕ್ಕೆ ಸೇರಿದವಳು. “ತಾನು ಮೆರ್ಲಿನಾ ಮತ್ತು ಆಂಟೊ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ, ಮೆರ್ಲಿನಾ ನನಗೆ ಥಳಿಸುತ್ತಿದ್ದರು. ಸಿಗರೇಟ್ ತುಂಡುಗಳಿಂದ ಚರ್ಮವನ್ನು ಸುಡುತ್ತಿದ್ದರು. ಕೂದಲನ್ನು ಚಿಕ್ಕದಾಗಿ ಕತ್ತರಿಸಿದ್ದರು” ಎಂದು ಯುವತಿ ಆರೋಪಿಸಿದ್ದಾಳೆ.

ದೌರ್ಜನ್ಯದ ಬಗ್ಗೆ ಯಾರಿಗೂ ಹೇಳದಂತೆ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಅನು ಆರೋಪಿಸಿದ್ದಾರೆ. ದಂಪತಿ ತನ್ನನ್ನು ಡಾಕ್ಯುಮೆಂಟ್‌ಗೆ ಸಹಿ ಮಾಡುವಂತೆ ಒತ್ತಾಯಿಸಿದ್ದರು. ಅದರ, ಪ್ರಕಾರ ನಾನು ಅವರಿಗೆ 2 ಲಕ್ಷ ರೂ. ಕೊಡಲು ಬಾಕಿ ಇದೆ. ಅದಕ್ಕಾಗಿ ನಾನು ಇನ್ನೂ ಮೂರು ವರ್ಷಗಳ ಕಾಲ ಅವರ ಮನೆಯಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿಕೊಂಡಿದ್ದಳು.

ಪೊಂಗಲ್ ಹಬ್ಬಕ್ಕೆ ಉಲುಂದೂರುಪೇಟೆಯಲ್ಲಿರುವ ತನ್ನ ಮನೆಗೆ ತೆರಳಿದ್ದ ವೇಳೆ ಅನು ವೈದ್ಯಕೀಯ ಚಿಕಿತ್ಸೆ ಪಡೆದಿದ್ದಳು. ಆ ಸಮಯದಲ್ಲಿ ಆಕೆಯ ತಾಯಿ ಆಕೆಯ ದೇಹದ ಮೇಲೆ ಗಾಯಗಳನ್ನು ಗಮನಿಸಿದ್ದರು. ಅನು ಚಿಕಿತ್ಸೆ ಪಡೆದ ಉಲುಂದೂರುಪೇಟೆ ಸರ್ಕಾರಿ ಆಸ್ಪತ್ರೆಯ ವೈದ್ಯರು, ಆಕೆಯ ಮೇಲೆ ದೊಣ್ಣೆ, ಹೇರ್ ಸ್ಟ್ರೈಟ್ನರ್‌ನಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿಸಿದ್ದರು. ಆಕೆಯ ಕಣ್ಣು, ಹಣೆ ಮತ್ತು ಗಲ್ಲದ ಮೇಲೆ ಗಾಯದ ಗುರುತಿತ್ತು ಮತ್ತು ಎರಡೂ ಮುಂದೋಳಿನ ಮೇಲೆ ಸುಟ್ಟ ಗಾಯಗಳು ಕಂಡು ಬಂದಿತ್ತು.

ಈ ಬಗ್ಗೆ ಆಸ್ಪತ್ರೆಯ ಆಡಳಿತ ಮಂಡಳಿ ಉಲುಂದೂರ್‌ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ತಿರುವನ್ಮಿಯೂರ್ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದರು.

ತಿರುವನ್ಮಿಯೂರ್ ಪೊಲೀಸರು ಜನವರಿ 18 ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಬಿ) (ಅಶ್ಲೀಲ ಕೃತ್ಯಗಳು), 324 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು), 325 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ನೋವುಂಟು ಮಾಡುವ ಶಿಕ್ಷೆ), 506(1) (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಸೆಕ್ಷನ್ 3(1)(ಆರ್) ಮತ್ತು 3(1)(ಗಳು) (ಅಪರಾಧ ದೌರ್ಜನ್ಯಗಳಿಗೆ ಶಿಕ್ಷೆ) ಅಡಿಯಲ್ಲಿ ಆರೋಪಿಗಳ ವಿರುದ್ದ ಎಫ್ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಜಯಲಲಿತಾ ಆಸ್ತಿ ಹರಾಜು ಬೇಡ: ಬೆಂಗಳೂರು ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...