Homeಮುಖಪುಟಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

- Advertisement -
- Advertisement -

ದೇಶದಲ್ಲಿ ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪುಗಳ ದೌರ್ಜನ್ಯ ಮುಂದುವರಿದಿದೆ. ಮತಾಂತರದ ಆರೋಪದಲ್ಲಿ ಕ್ರಿಶ್ಚಿಯನ್‌ ಪಾದ್ರಿಗಳು, ಪ್ರಾರ್ಥನಾ ಸಭೆಗಳ ಮೇಲೆ ದಾಳಿಗಳು, ಧಾರ್ಮಿಕ ಕೇಂದ್ರಗಳ ಮೇಲೆ ದಾಳಿಗಳು ದೇಶದ ವಿವಿಧೆಡೆ ಈ ಮೊದಲು ನಡೆದಿತ್ತು. ಇಂತದ್ದೇ ಸಾಮ್ಯತೆಯ ಘಟನೆ ರಾಮಮಂದಿರದ ಉದ್ಘಾಟನೆಯ ಹೊಸ್ತಿಲಲ್ಲಿ ಛತ್ತೀಸ್‌ಗಢದಲ್ಲಿ ನಡೆದಿದೆ.

ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಪ್ರತಿನಿಧಿಸುವ ಕುಂಕುರಿ  ವಿಧಾನಸಭಾ ಕ್ಷೇತ್ರದ ಕ್ರಿಶ್ಚಿಯನ್‌ ಸಮುದಾಯದ ಜನರ ಗುಂಪಿನ ಮೇಲೆ ಜನವರಿ 21ರಂದು ಹಿಂದುತ್ವದ ಗುಂಪಿನ ಸದಸ್ಯರು ಹಲ್ಲೆ ನಡೆಸಿದ್ದಾರೆ ಮತ್ತು ಸಮುದಾಯದ ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಕುರಿತು ಸ್ಥಳೀಯರಾದ ಶಿವಪ್ರಸಾದ್ ಮೆಹ್ತೋ, ಪಾದ್ರಿ ಮಹಾನಂದ ಎಫ್‌ಐಆರ್‌ ದಾಖಲಿಸಿದ್ದು, ದುಲ್ದುಲಾ ಪೊಲೀಸ್ ಠಾಣಾ ವ್ಯಾಪ್ತಿಯ ಬಸುದೋಪುರ ಗ್ರಾಮದ ಶಿವನ ಮನೆಗೆ ಊಟಕ್ಕೆಂದು ತೆರಳಿದ್ದೆವು. ಊಟ ಮುಗಿಸಿ ವಾಪಸ್ಸು ಬರುವಾಗ ನಮ್ಮ ಮೇಲೆ ಹಿಂದುತ್ವವಾದಿ ಗುಂಪಿನ ಸದಸ್ಯರು ಹಲ್ಲೆ ನಡೆಸಿದ್ದಾರೆ ಮತ್ತು ಸಮುದಾಯದ ಜನರಿಗೆ ಗ್ರಾಮಕ್ಕೆ ಮತ್ತೆ ಭೇಟಿ ನೀಡದಂತೆ ಬೆದರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಕ್ರಿಶ್ಚಿಯನ್‌ ಸಮುದಾಯ ಜನರ ತಂಡದಲ್ಲಿದ್ದ ಕಿಶೋರ್, ನಾವು ಶಿವ ಅವರ ಮನೆಯಿಂದ ವಾಪಾಸ್ಸು ಬರುವಾಗ ಅವರು ಕೈಯಲ್ಲಿ ಕೋಲುಗಳನ್ನು ಹಿಡಿದುಕೊಂಡು ನಮ್ಮನ್ನು ತಡೆದಿದ್ದಾರೆ. ಅದೇ ಜನರು ರಾಮ ಮಂದಿರದ ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದರು. ಉತ್ತರ ಭಾರತದ ವಿವಿಧ ಭಾಗಗಳಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಮೆರವಣಿಗೆ ನಡೆದಿತ್ತು. ಅವರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ, ಈ ವೇಳೆ ತಡೆಯಲು ಪ್ರಯತ್ನಿಸಿದ ಮಹಿಳೆಯರನ್ನು ರಸ್ತೆಯಲ್ಲಿ ಎಳೆದಾಡಿ ದೌರ್ನಜ್ಯ ನಡೆಸಿದ್ದಾರೆ. ಘಟನೆ ವೇಳೆ ಪಾದ್ರಿ ಮಹಾನಂದ ಪ್ರಜ್ಞೆ ಕಳೆದುಕೊಂಡಿದ್ದಾರೆ ಮತ್ತು ಅವರ ಕುಟುಂಬವು ಅವರನ್ನು ಸ್ಥಳೀಯ ಸ್ವಾಸ್ಥ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿಂದ ಅವರನ್ನು ಕುಂಕೂರಿನ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಎಫ್‌ಐಆರ್‌ನಲ್ಲಿ ಆರೋಪಿಗಳಾಗಿ ಹೆಸರಿಸಲಾದ ನರೇಶ್ ಕುಮಾರ್ ಯಾದವ್ ಮತ್ತು ಇತರರು ಶಿವ ಮತ್ತು ಇತರರ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ. ಪಾದ್ರಿ ಮತ್ತು ಇತರರನ್ನು ಗ್ರಾಮಕ್ಕೆ ಏಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದೇವೆ ಈ ವೇಳೆ ಅವರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿಲಾಗಿದೆ.

ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ವರದಿಯ ಪ್ರಕಾರ 2023ರಲ್ಲಿ 23 ರಾಜ್ಯಗಳಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಹಿಂಸಾಚಾರ ಸಂಭವಿಸಿದೆ. ಉತ್ತರ ಪ್ರದೇಶವೊಂದರಲ್ಲೇ 155 ಘಟನೆಗಳು ನಡೆದಿದ್ದು, ಕ್ರಿಶ್ಚಿಯನ್ನರ ವಿರುದ್ಧ ಹಿಂಸಾಚಾರದಲ್ಲಿ ಉತ್ತರಪ್ರದೇಶ ಮುಂಚೂಣಿಯಲ್ಲಿದೆ. ಛತ್ತೀಸ್‌ಗಢದಲ್ಲಿ 84 ಘಟನೆಗಳು ನಡೆದಿದೆ. ಕಳೆದವಾರ  ಜಶ್ಪುರ್ ಪ್ರದೇಶದಲ್ಲಿ ಹಿಂದುತ್ವದ ಗುಂಪು ಐವರು ಪಾದ್ರಿಗಳನ್ನು ಥಳಿಸಿದ್ದರು.

ಜನವರಿ 21ರಂದು ಕುಂದ್ರಾ ಗ್ರಾಮದಲ್ಲಿ ಹಿಂದುತ್ವವಾದಿಗಳ ಗುಂಪೊಂದು ಸ್ಥಳೀಯ ಪಾದ್ರಿಯ ಮನೆಗೆ ನುಗ್ಗಿ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ ಮತ್ತು ಅವರ ಮನೆಯಲ್ಲಿ ಕೇಸರಿ ಧ್ವಜವನ್ನು ಹಾರಾಟ ಮಾಡಿದ್ದಾರೆ ಎಂದು ಛತ್ತೀಸ್‌ಗಢ ಕ್ರಿಶ್ಚಿಯನ್ ಫೋರಂ ಹೇಳಿದೆ. ಹಿಂದೂ ಧರ್ಮಕ್ಕೆ ಮತಾಂತರಗೊಳ್ಳದಿದ್ದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು.

ಕಳೆದ ಭಾನುವಾರದಂದು ಮಧ್ಯಪ್ರದೇಶದ ಝಬುವಾದಲ್ಲಿ ಚರ್ಚ್‌ವೊಂದರ ಮೇಲೆ ಹತ್ತಿದ ದುಷ್ಕರ್ಮಿಗಳ ಗುಂಪು ಕೇಸರಿ ಧ್ವಜವನ್ನು ಹಾರಾಟ ನಡೆಸಿ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ವಿಡಿಯೋವು ದುಷ್ಕರ್ಮಿಯೋರ್ವ ಚರ್ಚ್‌ ಮೇಲೆ ಹತ್ತಿ ಕೇಸರಿ ಧ್ವಜವನ್ನು ಹಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಕೇಸರಿ ಧ್ವಜದಲ್ಲಿ ಅಯೋಧ್ಯೆಯ ರಾಮ ಮಂದಿರದ ಚಿತ್ರವಿತ್ತು ಮತ್ತು ಅದರ ಮೇಲೆ ‘ಜೈ ಶ್ರೀ ರಾಮ್’ ಎಂದು ಬರೆಯಲಾಗಿತ್ತು.

ಇದನ್ನು ಓದಿ: ದಲಿತ ಯುವತಿಗೆ ಕಿರುಕುಳ: ಎಫ್‌ಐಆರ್‌ ದಾಖಲಾಗಿ 5 ದಿನ ಕಳೆದರೂ ಅರೆಸ್ಟ್‌ ಆಗದ ಶಾಸಕರ ಮಗ, ಸೊಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...