Homeಫ್ಯಾಕ್ಟ್‌ಚೆಕ್Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

- Advertisement -
- Advertisement -

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡಿನ ಡಿಎಂಕೆ ಸರ್ಕಾರ ಪುರಾತನ ಹಿಂದೂ ದೇವಸ್ಥಾನವೊಂದನ್ನು ಕೆಡವಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬಲಪಂಥೀಯ ‘Tathvam-asi’ಎಂಬ ಎಕ್ಸ್‌ ಖಾತೆಯಲ್ಲಿ “ಇನ್ನು ಕಾಯಲು ಸಾಧ್ಯವಿಲ್ಲ, ಎಂ.ಕೆ ಸ್ಟಾಲಿನ್ ಮತ್ತು ಉದಯನಿಧಿ ಸ್ಟಾಲಿನ್ ನಮ್ಮ ಹಿಂದೂ ದೇವಾಲಯಗಳ ಮೇಲೆ ನಡೆಸುತ್ತಿರುವ ದಾಳಿಗೆ ಪರಿಣಾಮ ಎದುರಿಸಲಿದ್ದಾರೆ. ಕರ್ಮ ಅವರನ್ನು ಸುಮ್ಮನೆ ಬಿಡುವುದಿಲ್ಲ. ಅವರಿಗೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗಬೇಕು” ಎಂದು ಬರೆದುಕೊಳ್ಳಲಾಗಿದೆ.

‘Boiled Anda’ ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇದೇ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಸ್ಟಾಲಿನ್ ಕುಟುಂಬಕ್ಕೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗ್ಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್ ಚೆಕ್‌ : ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾನುಗೌರಿ.ಕಾಂ ಮೊದಲು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಸುದ್ದಿಯ ವಿಡಿಯೋ ಹುಡುಕಿದೆ. ಈ ವೇಳೆ ಜನವರಿ 22,2024ರಂದು ಇನ್‌ಶಾರ್ಟ್‌ ಶಾರ್ಟ್‌ ನ್ಯೂಸ್‌ ವೆಬ್‌ಸೈಟ್‌ ಈ ಬಗ್ಗೆ ಸುದ್ದಿ ಮಾಡಿರುವುದು ದೊರೆತಿದೆ. ಆ ಸುದ್ದಿಯಲ್ಲಿ “ತಮಿಳುನಾಡಿನಲ್ಲಿ ಖಾಸಗಿ ದೇವಸ್ಥಾನ ಕಡೆವಿರುವುದನ್ನು ತಪ್ಪಾಗಿ ವರದಿ ಮಾಡಲಾಗಿದೆ” ಎಂದು ಶೀರ್ಷಿಕೆ ಕೊಡಲಾಗಿದೆ.

“ಖಾಸಗಿ ಒಡೆತನದ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ಹಳೆಯ ದೇವಸ್ಥಾನವನ್ನು ಹೊಸದಾಗಿ ನಿರ್ಮಿಸುವ ಸಲುವಾಗಿ ದೇವಸ್ಥಾನದ ಟ್ರಸ್ಟ್‌ ಕೆಡವಿದೆ. ಅದನ್ನು ತಪ್ಪಾಗಿ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದ್ದಾಗಿ ಸುದ್ದಿ ಹಬ್ಬಲಾಗಿದೆ” ಎಂದು ಇನ್‌ಶಾರ್ಟ್‌ ವರದಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಇನ್ನಷ್ಟು ಪರಿಶೀಲನೆ ನಡೆಸಿದಾಗ ‘Tathvam-asi’ಎಕ್ಸ್‌ ಖಾತೆಯ ಪೋಸ್ಟ್‌ಗೆ ತಮಿಳುನಾಡು ಸರ್ಕಾರದ ಅಧಿಕೃತ ಸುಳ್ಳು ಸುದ್ದಿ ಪತ್ತೆ ಘಟಕ (ಫ್ಯಾಕ್ಟ್ ಚೆಕ್‌ ತಂಡ) ದ ‘TN Fact Check’ಎಂಬ ಎಕ್ಸ್‌ ಖಾತೆ ಪ್ರತಿಕ್ರಿಯೆ ಕೊಟ್ಟಿರುವುದು ಕಂಡು ಬಂದಿದೆ. ಅದರಲ್ಲಿ, ಈ ದೇವಾಲಯವು HR&CE (Hindu Religious and Charitable Endowments Department) ನಿಯಂತ್ರಣದಲ್ಲಿಲ್ಲ. ಇದು ಅವರ ಸ್ವಂತ ಆಡಳಿತದ ಖಾಸಗಿ ದೇವಾಲಯವಾಗಿದೆ. ಈ ದೇವಾಲಯವನ್ನು ತಮಿಳುನಾಡು ಸರ್ಕಾರ ಕೆಡವಲಿಲ್ಲ. ಖಾಸಗಿ ಆಡಳಿತವೇ ದೇವಾಲಯವನ್ನು ಕೆಡವಿದೆ” ಎಂದು ಸ್ಪಷ್ಟಪಡಿಸಿದೆ.

ಖಾಸಗಿ ಆಡಳಿತವು 1882 ರಲ್ಲಿ ನಿರ್ಮಿಸಿದ್ದ ಹಳೆಯ ಕಟ್ಟಡದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ನಿರ್ಮಿಸಲು ಮುಂದಾಗಿದೆ. 8ನೇ ಡಿಸೆಂಬರ್ 2023ರಂದು ದೇವಸ್ಥಾನ ಕೆಡವಲು ಪ್ರಾರಂಭಿಸಲಾಗಿತ್ತು. ಅದಕ್ಕೂ ಮೊದಲು ದೇವಾಲಯ ಸಮಿತಿಯು ‘ಬಾಲಯಂ’ ಧಾರ್ಮಿಕ ಆಚರಣೆ ನಡೆಸಿದೆ ಎಂದು ತಿಳಿಸಿದೆ.

ತಮಿಳುನಾಡು ಸರ್ಕಾರವು ಹಿಂದೂ ದೇವಾಲಯಗಳನ್ನು ಕೆಡವುತ್ತಿದೆ ಎಂದು ಹೇಳುವ ಈ ವದಂತಿಗಳು ಮತ್ತು ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ನಾವು ಸಾರ್ವಜನಿಕರಲ್ಲಿ ವಿನಂತಿಸುತ್ತೇವೆ. ನಮ್ಮ Fact Check Unit (FCU)ಈ ಬಗ್ಗೆ ಪರಿಶೀಲನೆ ನಡೆಸಿದೆ ಎಂದು ಹೇಳಿದೆ.

ಇಂಗ್ಲಿಷ್ ಫ್ಯಾಕ್ಟ್ ಚೆಕ್ ವೆಬ್‌ಸೈಟ್‌ ಬೂಮ್ ಈ ಕುರಿತು ಮಾಹಿತಿ ಕಲೆ ಹಾಕಿದೆ. ಅದು ಕೆಡವಲ್ಪಟ್ಟ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನದ ಟ್ರಸ್ಟಿ ಕೆ. ಸೆಂಥಿಲ್ ಕುಮಾರ್ ಅವರ ಪುತ್ರ ರಂಜಿತ್ ಕುಮಾರ್ ಅವರಿಂದ ಮಾಹಿತಿ ಕೇಳಿದೆ. ಈ ವೇಳೆ ರಂಜಿತ್ ಕುಮಾರ್ ಅವರು, “ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ 140 ವರ್ಷ ಹಳೆಯದು. ಅದು ನಮ್ಮ ಖಾಸಗಿ ದೇವಸ್ಥಾನ. ಹೊಸ ದೇವಸ್ಥಾನ ನಿರ್ಮಿಸುವ ಸಲುವಾಗಿ ಜನವರಿ 2, 2024ರಂದು ಹಳೆಯ ಕಟ್ಟಡ ಕೆಡವಿದ್ದೇವೆ. ಅದಕ್ಕೂ ಮುನ್ನ ‘ಬಾಲಯಂ’ ಆಚರಣೆ ಮಾಡಿದ್ದೇವೆ. ಹಳೆಯ ಕಟ್ಟಡ ಕೆಡವಿದ ಜಾಗದಲ್ಲೇ ದೇವಸ್ಥಾನ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ವೈರಲ್ ವಿಡಿಯೋದಲ್ಲಿರುವುದು ತಮಿಳುನಾಡಿನ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ. ಈ ಖಾಸಗಿ ದೇವಸ್ಥಾನವನ್ನು ಹೊಸದಾಗಿ ನಿರ್ಮಾಣ ಮಾಡುವ ಸಲುವಾಗಿ ಅದರ ಆಡಳಿತ ಮಂಡಳಿಯೇ ಕೆಡವಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಡಿಎಂಕೆ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದೆ ಎಂಬುವುದು ಸುಳ್ಳು ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...