Homeಮುಖಪುಟ2023ರಲ್ಲಿ ಹೆಚ್ಚಿದ ರೈತರ ಆತ್ಮಹತ್ಯೆ: ವರದಿ

2023ರಲ್ಲಿ ಹೆಚ್ಚಿದ ರೈತರ ಆತ್ಮಹತ್ಯೆ: ವರದಿ

- Advertisement -
- Advertisement -

ಭಾರತ ಕೃಷಿ ಪ್ರಧಾನ ದೇಶ. ರೈತರು ನಮ್ಮ ದೇಶದ ಬೆನ್ನೆಲುಬು. ದೇಶದ ಜನರು ಕೃಷಿಯನ್ನು ಹೆಚ್ಚು ಅವಲಂಬಿತರಾಗಿದ್ದಾರೆ. ದುರದೃಷ್ಟವಶಾತ್ ನಮ್ಮ ದೇಶದಲ್ಲಿ ರೈತರ ಆತ್ಮಹತ್ಯೆ ಕೂಡ ಹೆಚ್ಚಳವಾಗಿದೆ. ಪ್ರತಿ ವರ್ಷ ರೈತರ ಆತ್ಮಹತ್ಯೆ ಸರಣಿ ಮುಂದುವರಿಯುವುದನ್ನು ನಾವು ನೋಡುತ್ತೇವೆ. ಈ ಸಮಸ್ಯೆಯನ್ನು ತಡೆಗಟ್ಟಲು ಭಾರತ ಸರ್ಕಾರವು ವಿಫಲವಾಗಿದೆ ಎನ್ನುವುದನ್ನು ಇತ್ತೀಚಿನ ಆತ್ಮಹತ್ಯೆ ಕುರಿತ ಅಂಕಿ-ಅಂಶಗಳು ಬಹಿರಂಗಪಡಿಸುತ್ತದೆ.

2023ರಲ್ಲಿ ಮಹಾರಾಷ್ಟ್ರದ ಎಂಟು ಜಿಲ್ಲೆಗಳಲ್ಲಿ 1,088 ರೈತರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಮರಾಠವಾಡ ವಿಭಾಗೀಯ ಆಯುಕ್ತರ ಕಚೇರಿಯ ವರದಿಯು ಬಹಿರಂಗಪಡಿಸಿದೆ. ಇದು 2022ರಲ್ಲಿ ವರದಿಯಾಗಿದ್ದ ರೈತರ ಸಾವಿಗಳಿಗಿಂತ ಹೆಚ್ಚಳವಾಗಿದೆ ಎಂದು ಅಂಕಿ-ಅಂಶಗಳು ತಿಳಿಸಿದೆ.

2023ರಲ್ಲಿ ನಡೆದ 1,088 ಆತ್ಮಹತ್ಯೆಗಳಲ್ಲಿ ಮಹರಾಷ್ಟ್ರದ ಬೀಡ್‌ನಲ್ಲಿ 269 ಸಾವುಗಳು, ಛತ್ರಪತಿ ಸಂಭಾಜಿನಗರದಲ್ಲಿ 182, ನಾಂದೇಡ್‌ನಲ್ಲಿ 175, ಧಾರಶಿವ್‌ನಲ್ಲಿ 171 ಮತ್ತು ಪರ್ಭಾನಿಯಲ್ಲಿ 103 ಸಾವುಗಳು ಸಂಭವಿಸಿದೆ ಎಂದು ಅಂಕಿ-ಅಂಶಗಳು ವರದಿ ಮಾಡಿದೆ.

ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಲಾಗಿದೆ. 1,088 ಪ್ರಕರಣಗಳಲ್ಲಿ 151 ಪ್ರಕರಣಗಳು ಪ್ರಸ್ತುತ ವಿಚಾರಣೆಯಲ್ಲಿವೆ ಎಂದು ಪಿಟಿಐ ಹೇಳಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಾರ,  2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ  ದೇಶಾದ್ಯಂತ ದಿನಕ್ಕೆ ಸರಾಸರಿ 30ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ಸಾರ್ವಜನಿಕ ಹೂಡಿಕೆಗಳ ಕಡಿತ, ಪ್ರಮುಖ ಕೈಗಾರಿಕೆಗಳ ಖಾಸಗೀಕರಣ, ಬಾಹ್ಯ ವ್ಯಾಪಾರ, ರಾಜ್ಯಗಳ ಸಬ್ಸಿಡಿಗಳ ಕಡಿತ ಮತ್ತು ಕೃಷಿ ಸಾಲದ ಕಡಿತ ಇವೆಲ್ಲವೂ ರೈತರ ದೀರ್ಘ ಕಾಲದ ಸಂಕಷ್ಟಕ್ಕೆ ಕಾರಣವಾಗಿದೆ.

ವರದಿಯ ಪ್ರಕಾರ ಛತ್ರಪತಿ ಸಂಭಾಜಿನಗರ, ಜಲ್ನಾ, ಬೀಡ್, ಹಿಂಗೋಲಿ, ಧಾರಶಿವ್, ಲಾತೂರ್, ನಾಂದೇಡ್ ಮತ್ತು ಪರ್ಭಾನಿ ಜಿಲ್ಲೆಗಳನ್ನು ಒಳಗೊಂಡಿರುವ ಮರಾಠವಾಡದಲ್ಲಿ 2022ರಲ್ಲಿ 1,023 ರೈತರ ಆತ್ಮಹತ್ಯೆಗಳು ವರದಿಯಾಗಿತ್ತು. ಈ ವರ್ಷ ಈ ಜಿಲ್ಲೆಗಳಲ್ಲಿ ಆತ್ಮಹತ್ಯೆಗಳ ಅಂಕಿ-ಅಂಶಗಳಲ್ಲಿ ಹೆಚ್ಚಳ ಕಂಡು ಬಂದಿದೆ.

ರೈತರ ಆತ್ಮಹತ್ಯೆಗೆ ಕಾರಣಗಳೇನು?

ನಮ್ಮ ದೇಶದಲ್ಲಿ ರೈತರ ಆತ್ಮಹತ್ಯೆ ಏಕೆ ನಡೆಯುತ್ತಿದೆ ಎಂಬುದನ್ನು ನೋಡಿದಾಗ ಸಾಕಷ್ಟು ಕಾರಣಗಳು ನಮ್ಮ ಮುಂದೆ ಕಂಡು ಬರುತ್ತದೆ. ಮಳೆಯ ಕೊರತೆಯಿಂದಾಗಿ ಬೆಳೆಗಳ ನಾಶವಾಗುತ್ತದೆ. ರೈತರು ತಾವು ಹೂಡಿಕೆ ಮಾಡಿದ ಹಣ ವ್ಯರ್ಥವಾಗಿ ಸಾಲದ ಸುಳಿಯಲ್ಲಿ ಸಿಲುಕಿ ನಷ್ಟ ಅನುಭವಿಸುತ್ತಾರೆ. ಪದೇ ಪದೇ ಬರಗಾಲಕ್ಕೆ ತುತ್ತಾಗುವ ಪ್ರದೇಶಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ಎಂಬುವುದು ಗಮನಾರ್ಹ. ಅದೇ ರೀತಿ ಪ್ರವಾಹಗಳು ಕೂಡ ಬರಗಾಲದಷ್ಟೇ ಅಪಾಯಕಾರಿ. ರೈತರ ಬೆಳೆಗಳು ಕೊಚ್ಚಿ ಹೋಗುತ್ತವೆ ಮತ್ತು ಆ ಬೆಳೆಗಳಿಂದ ಅವರಿಗೆ ಯಾವುದೇ ಉತ್ಪನ್ನ ಸಿಗುವುದಿಲ್ಲ. ಬೆಳೆ ಬೆಳೆಯಲು ಭಾರೀ ಸಾಲ ಪಡೆದು ನಷ್ಟವುಂಟಾಗಿ ಅದನ್ನು ತೀರಿಸಲು ಹಣವಿಲ್ಲದೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಡವಾಳೀಕರಣ ಮತ್ತು ಖಾಸಗೀಕರಣವು ಕೂಡ ಆತ್ಮಹತ್ಯೆಗೆ ಕಾರಣವಾಗಿದ್ದು,  ಹೆಚ್ಚಿನ ಸಾಲಗಳು ಮತ್ತು ಕುಟುಂಬದ ಒತ್ತಡವೂ ರೈತರನ್ನು ದುಡುಕಿನ ನಿರ್ಧಾರ ತೆಗೆದುಕೊಳ್ಳಲು ಪ್ರೇರೇಪಿಸುತ್ತದೆ. ಸಾಮೂಹಿಕ ಪ್ರಯತ್ನದಿಂದ ರೈತರ ಆತ್ಮಹತ್ಯೆ ತಡೆಯಬಹುದು. ಸರಕಾರ ರೈತರಿಗೆ ಆಧುನಿಕ ತಂತ್ರಜ್ಞಾನ ಕಲಿಸಬೇಕು. ಇದಲ್ಲದೆ ಅವರಿಗೆ ಸರಿಯಾದ ನೀರಾವರಿ ಸೌಲಭ್ಯಗಳನ್ನು ನೀಡಬೇಕು. ರೈತರ ನಷ್ಟವನ್ನು ಸರಿದೂಗಿಸುವ ನಿಜವಾದ ಬೆಳೆ ವಿಮಾ ಪಾಲಿಸಿಗಳನ್ನು ಜಾರಿಗೆ ತರಬೇಕಿದೆ.

ಇದನ್ನು ಓದಿ: ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...