Homeಮುಖಪುಟವಿದ್ಯಾರ್ಥಿಗಳನ್ನು ಭೇಟಿಯಾಗಲು ಬಿಜೆಪಿ ಸರ್ಕಾರ ನನಗೆ ಅವಕಾಶ ನೀಡ್ತಿಲ್ಲ: ರಾಹುಲ್ ಗಾಂಧಿ

ವಿದ್ಯಾರ್ಥಿಗಳನ್ನು ಭೇಟಿಯಾಗಲು ಬಿಜೆಪಿ ಸರ್ಕಾರ ನನಗೆ ಅವಕಾಶ ನೀಡ್ತಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ‘ಭಾರತ್ ಜೋಡೋ ನ್ಯಾಯ್‌ ಯಾತ್ರೆ’ ಅಸ್ಸಾಂನಲ್ಲಿ ತೀವ್ರ ಜಟಾಪಟಿಗೆ ಕಾರಣವಾಗಿದೆ. ಅಸ್ಸಾಂನ ಆಡಳಿತರೂಢ ಬಿಜೆಪಿ ಸರ್ಕಾರ ಯಾತ್ರೆಗೆ ತಡೆಯೊಡ್ಡಿರುವ ಆರೋಪ ಕೇಳಿ ಬಂದಿದೆ.

ಗುವಾಹಟಿಯಲ್ಲಿ ಇಂದು ಯಾತ್ರೆಗಾಗಿ ಸಿದ್ದಪಡಿಸಲಾದ ವಿಶೇಷ ಬಸ್‌ ಮೇಲೆ ನಿಂತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕೇಂದ್ರ ಮತ್ತು ಅಸ್ಸಾಂ ಸರ್ಕಾರ ವಿರುದ್ದ ವಾಗ್ದಾಳಿ ನಡೆಸಿದರು.

“ನಾನು ನಿಮ್ಮ ವಿಶ್ವವಿದ್ಯಾನಿಲಯಕ್ಕೆ ಬಂದು ನಿಮ್ಮೊಂದಿಗೆ ಮಾತನಾಡಲು ಬಯಸಿದ್ದೇನೆ. ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಮತ್ತು ಸಾಧ್ಯವಾದ ರೀತಿಯಲ್ಲಿ ನಿಮಗೆ ಸಹಾಯ ಮಾಡಲು ಉದ್ದೆಶಿಸಿದ್ದೇನೆ. ಆದರೆ, ಕೇಂದ್ರ ಗೃಹ ಸಚಿವಾಲಯ ಅಸ್ಸಾಂ ಸಿಎಂ ಮತ್ತು ಅವರ ಕಚೇರಿಗೆ ಕರೆ ಮಾಡಿ ನಾನು ನಿಮ್ಮೊಂದಿಗೆ ಮಾತನಾಡಲು ಅವಕಾಶ ನೀಡದಂತೆ ಸೂಚಿಸಿದೆ. ಇಲ್ಲಿ ರಾಹುಲ್ ಗಾಂಧಿ ಬಂದರೂ, ಬಾರದಿದ್ದರೂ ಅದು ಮುಖ್ಯ ವಿಷಯವಲ್ಲ. ಆದರೆ, ನಿಮಗೆ ಯಾರ ಮಾತನ್ನು ಬೇಕಾದರೂ ಕೇಳುವ ಸ್ವಾತಂತ್ರ್ಯ ಇದೆ. ಅದನ್ನು ಬಿಜೆಪಿ ಸರ್ಕಾರ ಕಸಿದುಕೊಳ್ಳುತ್ತಿದೆ. ಇದು ಅಸ್ಸಾಂನಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ವಿಶ್ವವಿದ್ಯಾಲಯ, ಕಾಲೇಜು ಮತ್ತು ಶಾಲೆಗಳಲ್ಲಿ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಭಾರತ್ ಜೋಡೋ ನ್ಯಾಯ್‌ ಯಾತ್ರೆಯು ಗುವಾಹಟಿಯ ಒಳ ರಸ್ತೆಗಳ ಮೂಲಕ ತೆರಳಲು ಅನುಮತಿ ನಿರಾಕರಿಸಿಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಯಾತ್ರೆಯು ಇಂದು ಮೇಘಾಲಯದ ನಂತರ ಅಸ್ಸಾಂಗೆ ಮರುಪ್ರವೇಶಿಸಿದೆ.

ಗುವಾಹಟಿಯ ಪ್ರಮುಖ ರಸ್ತೆಗಳ ಮೂಲಕ ಯಾತ್ರೆ ಚಲಿಸಲು ಅವಕಾಶ ನೀಡುವುದರಿಂದ ಸಂಚಾರ ದಟ್ಟಣೆಗೆ ಕಾರಣವಾಗಬಹುದು ಎಂದು ವಾದಿಸಿ, ರಾಜ್ಯ ಆಡಳಿತವು ಯಾತ್ರೆಯು ಕೆಳ ಅಸ್ಸಾಂ ಕಡೆಗೆ ಚಲಿಸುವ ಮೂಲಕ, ರಾಷ್ಟ್ರೀಯ ಹೆದ್ದಾರಿ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿದೆ. ನಗರದ ಸುತ್ತ ವರ್ತುಲ ರಸ್ತೆಯಂತೆ ಕಾರ್ಯನಿರ್ವಹಿಸುವ ರಾಷ್ಟ್ರೀಯ ಹೆದ್ದಾರಿ 27ರಲ್ಲಿ ಯಾತ್ರೆ ಕೈಗೊಳ್ಳುವಂತೆ ಕೋರಲಾಗಿದೆ ಎಂದು ತಿಳಿದು ಬಂದಿದೆ.

ರಾಹುಲ್ ಗಾಂಧಿ ಅವರು ನಿನ್ನೆ ಗುವಾಹಟಿ ಬಳಿಯ ವೈಷ್ಣವ ಸಂತ ಶ್ರೀಮಂತ ಶಂಕರದೇವರ ಜನ್ಮಸ್ಥಳಕ್ಕೆ ಭೇಟಿ ನೀಡಲು ಯೋಜಿಸಿದ್ದರು. ಆದರೆ, ಅದಕ್ಕೆ ದೇವಾಲಯದ ಆಡಳಿತ ಮಂಡಳಿ ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ನೆಪ ಹೇಳಿ ಅವಕಾಶ ನಿರಾಕರಿಸಿತ್ತು.

ಇದನ್ನೂ ಓದಿ : ಭಾರತ್ ಜೋಡೋ ನ್ಯಾಯ ಯಾತ್ರೆ: ಗುವಾಹಟಿ ನಗರ ಪ್ರವೇಶಿಸಲು ಅನುಮತಿ ನಿರಾಕರಿಸಿದ ಅಸ್ಸಾಂ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...