Homeಮುಖಪುಟಇಸ್ರೇಲ್‌-ಹಮಾಸ್ ಸಂಘರ್ಷ: ಒಂದೇ ದಿನ 24 ಇಸ್ರೇಲಿ ಸೈನಿಕರು ಸಾವು

ಇಸ್ರೇಲ್‌-ಹಮಾಸ್ ಸಂಘರ್ಷ: ಒಂದೇ ದಿನ 24 ಇಸ್ರೇಲಿ ಸೈನಿಕರು ಸಾವು

- Advertisement -
- Advertisement -

ಗಾಝಾದಲ್ಲಿ ಮಾರಣಹೋಮ ನಡೆಸುತ್ತಿರುವ ಇಸ್ರೇಲ್‌ ಸೇನೆಗೆ ಸೋಮವಾರ ತೀವ್ರ ಹಿನ್ನೆಡೆಯಾಗಿದೆ. ಹಮಾಸ್ ಗುಂಪು ನಡೆಸಿದ ದಾಳಿಯಲ್ಲಿ 24 ಇಸ್ರೇಲಿ ಸೈನಿಕರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಪೈಕಿ 21 ಸೈನಿಕರು ಒಂದೇ ಸ್ಪೋಟದಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ನ್ಯೂಯಾರ್ಕ್‌ ಟೈಮ್ಸ್ ವರದಿ ತಿಳಿಸಿದೆ.

ಇಸ್ರೇಲಿ ಮಿಲಿಟರಿ ಮಂಗಳವಾರ ಮುಂಜಾನೆ ಸೈನಿಕರ ಸಾವಿನ ಕುರಿತು ಘೋಷಿಸಿದೆ. ಇಸ್ರೇಲಿ ಮಿಲಿಟರಿಯ ಮುಖ್ಯ ವಕ್ತಾರರಾದ ರಿಯರ್ ಅಡ್ಮ್ ಡೇನಿಯಲ್ ಹಗರಿ ಪ್ರಕಾರ, ಗಾಝಾದಲ್ಲಿ ಕಟ್ಟಡಗಳನ್ನು ನೆಲಸಮಗೊಳಿಸಲು ಇಸ್ರೇಲ್‌ ಮಿಲಿಟರಿ ಇಟ್ಟಿದ್ದ ಸ್ಫೋಟಕಗಳಿಂದ ಉಂಟಾದ ಸ್ಫೋಟದಲ್ಲಿ ಸೈನಿಕರು ಸಾವನ್ನಪ್ಪಿದ್ದಾರೆ. ಸೋಮವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಈ ವೇಳೆ ಇಸ್ರೇಲಿ ಸೈನಿಕರು ಕುಸಿದ ಎರಡು ಅಂತಸ್ತಿನ ಕಟ್ಟಡಗಳ ಒಳಗೆ ಇದ್ದರು.

ಒಂದೇ ಸ್ಪೋಟದಲ್ಲಿ ಮೃತಪಟ್ಟ 21 ಸೈನಿಕರು ದಕ್ಷಿಣ ಇಸ್ರೇಲ್‌ನಲ್ಲಿರುವ ಜನರು ತಮ್ಮ ಮನೆಗಳಿಗೆ ಮರಳದಂತೆ ತಡೆಯಲು ಇಸ್ರೇಲ್ ಮತ್ತು ಗಾಜಾ ನಡುವಿನ ಗಡಿ ಬಳಿ ಕಟ್ಟಡಗಳು ಮತ್ತು ಇತರ ಮೂಲಸೌಕರ್ಯಗಳನ್ನು ತೆಗೆದು ಹಾಕುವ ಕೆಲಸ ಮಾಡುತ್ತಿದ್ದರು ಎಂದು ಅಡ್ಮಿರಲ್ ಹಗರಿ ಹೇಳಿದ್ದಾರೆ. ಸ್ಫೋಟದ ಸಮಯದಲ್ಲಿ ಹತ್ತಿರದ ಟ್ಯಾಂಕ್‌ಗೆ ಕ್ಷಿಪಣಿಯನ್ನು ಹಾರಿಸಲಾಗಿತ್ತು. ಇದೂ ಕೂಡ ಕಟ್ಟಡ ಕುಸಿತಕ್ಕೆ ಕಾರಣವಾಗಿರಬಹುದು ಎಂದು ಅವರು ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಯುದ್ದ ಆರಂಭವಾದಾಗಿನಿಂದ ನಮ್ಮ ಸೇನೆ ಅತ್ಯಂತ ಕಷ್ಟಕರವಾದ ದಿನಗಳನ್ನು ಮುಂದೂಡುತ್ತಿದೆ. ನಿನ್ನೆಯ ಘಟನೆಯ ಬಗ್ಗೆ ಸೇನೆಯು ಪರಿಶೀಲನೆ ನಡೆಸುತ್ತಿದೆ. ನಾವು ಕೆಲವೊಂದು ಪಾಠಗಳನ್ನು ಕಲಿಯಬೇಕಾಗಿದೆ. ನಮ್ಮ ಸೈನಿಕರ ಜೀವಗಳನ್ನು ಸಂರಕ್ಷಿಸಲು ಎಲ್ಲವನ್ನೂ ಮಾಡಬೇಕಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ

ಇಸ್ರೇಲ್‌ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಮೃತ ಸೈನಿಕರಿಗೆ ಸಂತಾಪ ಸೂಚಿಸಿದ್ದಾರೆ. ಬೆಳಿಗ್ಗೆ ಎದ್ದೇಳುವಾಗ ಬಂದ ಸೈನಿಕರ ಸಾವಿನ ಸುದ್ದಿ ಆರಗಿಸಿಕೊಳ್ಳಲಾಗಿಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್ 7 ರಂದು ಪ್ರಾರಂಭಗೊಂಡ ಗಾಝಾ ಮೇಲಿನ ಇಸ್ರೇಲ್ ದಾಳಿಯಲ್ಲಿ ಇದುವರೆಗೆ 25,000ಕ್ಕೂ ಹೆಚ್ಚು ಪ್ಯಾಲೆಸ್ತೀನ್ ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 62,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯವನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ : ಮುಂದುವರೆದ ಇಸ್ರೇಲ್ ಆಕ್ರಮಣ: 25 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...