Homeಮುಖಪುಟರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

- Advertisement -
- Advertisement -

ರಾಮಮಂದಿರದ ಉದ್ಘಾಟನೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಲಂಡನ್‌, ಅಮೆರಿಕ ಮತ್ತು ಆಸ್ಟ್ರೇಲಿಯಾದ 22 ದಕ್ಷಿಣ ಏಷ್ಯಾ ಮೂಲದ ವಲಸೆ(ಅನಿವಾಸಿ) ಸಂಸ್ಥೆಗಳು ಜನವರಿ 22 ಸೋಮವಾರದಂದು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

16ನೇ ಶತಮಾನದ ಬಾಬರಿ ಮಸೀದಿಯನ್ನು ನೆಲಸಮಗೊಳಿಸಿದ್ದ ಸ್ಥಳದಲ್ಲಿ ನಿರ್ಮಿಸಲಾದ ರಾಮ ಮಂದಿರವನ್ನು ಉದ್ಘಾಟಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಪಾಯಕಾರಿ ಮುನ್ನುಡಿಯನ್ನು  ಬರೆದಿದ್ದಾರೆ ಎಂದು ಸಂಘಟನೆಗಳು ಹೇಳಿವೆ. ಇದು ಭಾರತದ ಜಾತ್ಯತೀತ ಸಂವಿಧಾನವನ್ನು ಬದಲಿಸುವ ಮತ್ತು ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವೆಂದು ವಲಸೆ ಸಂಘಟನೆಗಳು ಹೇಳಿವೆ.

1528ರಲ್ಲಿ ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ ನಿರ್ಮಿಸಿದ ಬಾಬರಿ ಮಸೀದಿಯನ್ನು ಡಿಸೆಂಬರ್ 6, 1992ರಂದು ಹಿಂದುತ್ವ ಸಂಘಟನೆಗಳಿಗೆ ಸೇರಿದ ಕರಸೇವಕರು ಕೆಡವಿದ್ದರು. ರಾಮಮಂದಿರ ಉದ್ಘಾಟನೆಯಲ್ಲಿ ಮೋದಿ ಭಾಗವಹಿಸಿದ್ದು ಲೋಕಸಭಾ ಚುನಾವಣಾ ಪ್ರಚಾರಕ್ಕೆ ನಾಂದಿ ಹಾಡಿದೆ. ಗಣರಾಜ್ಯೋತ್ಸವಕ್ಕೆ 4 ದಿನಗಳ ಮೊದಲು ನಡೆದ ಈ ಕಾರ್ಯಕ್ರಮವು ಡಾ ಬಿ ಆರ್ ಅಂಬೇಡ್ಕರ್‌ ರಚಿಸಿದ ಭಾರತದ ಜಾತ್ಯತೀತ ಸಂವಿಧಾನವನ್ನು ಬದಿಗಿಡುವ ಮತ್ತು ಬದಲಿಸುವ ಪ್ರಯತ್ನವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸೌತ್ ಏಷ್ಯಾ ಜಸ್ಟಿಸ್ ಕ್ಯಾಂಪೇನ್, ಸೌತ್ ಏಷ್ಯಾ ಸಾಲಿಡಾರಿಟಿ ಗ್ರೂಪ್, ಅಲೈಯನ್ಸ್ ಎಗೇನ್ಸ್ಟ್ ಇಸ್ಲಾಮೋಫೋಬಿಯಾ-ಆಸ್ಟ್ರೇಲಿಯಾ, ಭಾರತದಲ್ಲಿ ಫ್ಯಾಸಿಸಂ ವಿರುದ್ಧದ ಒಕ್ಕೂಟ, ಕ್ರೇಗಿಬರ್ನ್ ಮಸೀದಿ ಮತ್ತು ಸಮುದಾಯ ಕೇಂದ್ರ, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ – ಯುಕೆ, ಇಂಡಿಯಾ ಸಿವಿಲ್ ವಾಚ್ ಇಂಟರ್ ನ್ಯಾಷನಲ್, ಉತ್ತರ ಅಮೆರಿಕಾ , ಇಂಡಿಯಾ ಲೇಬರ್ ಸಾಲಿಡಾರಿಟಿ (ಯುಕೆ), ಇಂಡಿಯನ್ ಅಲೈಯನ್ಸ್ ಪ್ಯಾರಿಸ್ – ಫ್ರಾನ್ಸ್, ಇಂಡಿಯನ್ ಅಮೆರಿಕನ್ ಮುಸ್ಲಿಂ ಕೌನ್ಸಿಲ್, ಇಂಟರ್‌ನ್ಯಾಷನಲ್ ಸಾಲಿಡಾರಿಟಿ ಫಾರ್‌ ಅಕಾಡೆಮಿಕ್‌ ಫ್ರೀಡಂ ಇನ್‌ ಇಂಡಿಯಾ (ಇನ್ಸಾಫ್ ಇಂಡಿಯಾ), ಮೆಲ್ಬೋರ್ನ್ ಗ್ರ್ಯಾಂಡ್ ಮಸೀದಿ, ಮುಸ್ಲಿಂ ಕಲೆಕ್ಟಿವ್ – ಆಸ್ಟ್ರೇಲಿಯಾ, ಪೀಸ್ ಇನ್ ಇಂಡಿಯಾ (ಯುಕೆ), ಪೆರಿಯಾರ್ ಅಂಬೇಡ್ಕರ್ ಥಾಟ್ಸ್ ಸರ್ಕಲ್ ಆಫ್ ಆಸ್ಟ್ರೇಲಿಯಾ, ಸ್ಕಾಟಿಷ್ ಇಂಡಿಯನ್ಸ್ ಫಾರ್ ಜಸ್ಟಿಸ್, ಸೌತ್ ಏಷ್ಯನ್ ಡಯಾಸ್ಪೊರಾ ಆಕ್ಷನ್ ಕಲೆಕ್ಟಿವ್ (SADAC), ಸ್ಟ್ರೈವ್ ಯುಕೆ, ದಿ ರೈಟ್ಸ್ ಕಲೆಕ್ಟಿವ್ (ಯುಕೆ), ಯುಕೆ ಇಂಡಿಯನ್ ಮುಸ್ಲಿಂ ಕೌನ್ಸಿಲ್, ಯುನೈಟಿಂಗ್ ಉಮ್ಮಾ ಆಫ್ ಆಸ್ಟ್ರೇಲಿಯಾ ಆರ್ಗನೈಸೇಶನ್ ಮತ್ತು ವಿಮೆನ್ ಎಗೇನ್ಸ್ಟ್ ಕಾಸ್ಟ್ ಸಂಸ್ಥೆಗಳು ಜಂಟಿ ಹೇಳಿಕೆಗೆ ಸಹಿಯನ್ನು ಹಾಕಿದೆ.

ಪ್ರಧಾನಿ ಮೋದಿ ಮತ್ತು ಬಿಜೆಪಿ, ಆರೆಸ್ಸೆಸ್‌ನಿಂದ ದೇವಾಲಯದ ‘ಪ್ರತಿಷ್ಠಾಪನೆ’ ಭಾರತವು ದೀರ್ಘಾವಧಿಯ ಆರೆಸ್ಸೆಸ್‌ ಗುರಿಗಳನ್ನು ಅನುಷ್ಠಾನಗೊಳಿಸುವತ್ತ ಸಾಗಿದೆ ಎಂಬುದರ ಸಂಕೇತವಾಗಿದೆ. ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವುದು ಮತ್ತು ಸಂವಿಧಾನದ ಬದಲು ಮನುಸ್ಮೃತಿಯನ್ನು ಜಾರಿಗೆ ತರುವ ಪ್ರಯತ್ನವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ, ವಿಶೇಷವಾಗಿ ಮುಸ್ಲಿಮರ ವಿರುದ್ಧ ತಾರತಮ್ಯ ಮತ್ತು ಹಿಂಸಾಚಾರ ದೇಶದ ಜಾತ್ಯತೀತ ರಚನೆ ಮತ್ತು ಸಂವಿಧಾನದ ವಿರುದ್ಧವಾಗಿದೆ ಎಂದು ಸಂಘಟನೆಗಳು ಹೇಳಿದೆ.

ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ಭಾರತದಲ್ಲಿ ಮುಸ್ಲಿಂ ಪರಂಪರೆಯ ಕುರುಹುಗಳನ್ನು ಅಳಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿದೆ. ಉದಾಹರಣೆಗೆ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಮತ್ತು ಮಾದ್ಯಮಗಳಲ್ಲಿ ಮತ್ತು ಸಾರ್ವಜನಿಕ ಹೇಳಿಕೆಗಳಲ್ಲಿ ಇತಿಹಾಸವನ್ನು ಮರು ವ್ಯಾಖ್ಯಾನ ಮಾಡುತ್ತಿದೆ. ಇದು ಅಲ್ಪಸಂಖ್ಯಾತ ಸಮುದಾಯವನ್ನು ಅನ್ಯ ಮತ್ತು ಬೇರೆಯವರು ಎಂದು ಪ್ರಸ್ತುತಪಡಿಸುವ ಪ್ರಯತ್ನವಾಗಿದೆ. ಹಿಂದೂ ರಾಷ್ಟ್ರೀಯವಾದಿ ಗುಂಪುಗಳು ಮುಸ್ಲಿಂ ಧಾರ್ಮಿಕ ಸ್ಥಳಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಬಾಬರಿ ಮಸೀದಿ ತೀರ್ಪು ಮತ್ತು ವಾರಣಾಸಿ ಮತ್ತು ಮಥುರಾದಲ್ಲಿನ ಮಸೀದಿಯ ವಿವಾದವನ್ನು ಉಲ್ಲೇಖಿಸಿ ಹೇಳಿದೆ.

ಭಾರತವು ಮುಂಬರುವ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವಾಗ, ಬಾಬರಿ ಮಸೀದಿ ಮಸೀದಿ ಇದ್ದ ಭೂಮಿಯಲ್ಲಿ ರಾಮ ಮಂದಿರ ಉದ್ಘಾಟನೆಯು ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕನ್ನು ಬಿಜೆಪಿ ಕಡೆಗಣಿಸುವುದರ ಪ್ರಬಲ ಸಂಕೇತವಾಗಿದೆ. ನಂಬಿಕೆಯ ಜನರ ಸ್ವತಂತ್ರ ಹಕ್ಕು, ಈ ಬೆಳವಣಿಗೆಗಳು ಭಾರತೀಯ ನಾಗರಿಕರಾಗಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಮುಸ್ಲಿಮರು, ಕ್ರಿಶ್ಚಿಯನ್ನರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧದ ಮೋದಿ ಆಡಳಿತದ ಅಮಾನವೀಯ ಆಕ್ರಮಣಗಳು, ಜಾತಿವಾದ ಮತ್ತು ಸ್ತ್ರೀದ್ವೇಷ, ದೌರ್ಜನ್ಯವನ್ನು ವಿರೋಧಿಸುತ್ತಿರುವ ಭಾರತದ ಎಲ್ಲರೊಂದಿಗೆ ತಾವು ನಿಲ್ಲುತ್ತೇವೆ ಎಂದು ಸಂಘಟನೆಗಳು ಹೇಳಿಕೆಯಲ್ಲಿ ಪ್ರತಿಪಾದಿಸಿದೆ.

ಇದನ್ನು ಓದಿ: ಕಾರು ಓವರ್‌ಟೇಕ್‌ ಮಾಡಿದ್ದಕ್ಕೆ ಯುವಕರಿಗೆ ಗಂಭೀರವಾಗಿ ಥಳಿತ: ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ಧಾರ್‌ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...