Homeಕರ್ನಾಟಕಗಾಂಧಿ ಚಿಂತನೆಗಳ ಕುರಿತು ಪ್ರಬಂಧ ಸ್ಪರ್ಧೆ; ಶಿಕ್ಷಣ ಸಚಿವರಿಗೆ ಪತ್ರ ಬರೆದ ಸಿಎಂ

ಗಾಂಧಿ ಚಿಂತನೆಗಳ ಕುರಿತು ಪ್ರಬಂಧ ಸ್ಪರ್ಧೆ; ಶಿಕ್ಷಣ ಸಚಿವರಿಗೆ ಪತ್ರ ಬರೆದ ಸಿಎಂ

- Advertisement -
- Advertisement -

’21ನೇ ಶತಮಾನದ ಕಳವಳಗಳು ಮತ್ತು ಗಾಂಧಿ ಚಿಂತನೆ ನೀಡಿದ ಪರಿಹಾರಗಳು’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸೂಚನೆ ನೀಡಿದ್ದಾರೆ.

ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿಗಳು, ‘ಬೋರ್ಡ್ ಪರೀಕ್ಷೆಗೆ ಹಾಜರಾಗುವ 10 ಮತ್ತು 12 ನೇ ತರಗತಿಯನ್ನು ಹೊರತುಪಡಿಸಿ 6 ನೇ ತರಗತಿ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಈ ತಿಂಗಳ ಅಂತ್ಯದೊಳಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲು ಶೀಘ್ರ ವ್ಯವಸ್ಥೆ ಮಾಡುವಂತೆ’ ಕೋರಿದ್ದಾರೆ.

‘ಮಹಾತ್ಮ ಗಾಂಧಿಯವರ ಹತ್ಯೆಯ ನಂತರ, ದೇಶವು ಅವರ ತತ್ವಗಳನ್ನು ಸಾಧ್ಯವಾದಷ್ಟು ಜಾರಿಗೆ ತಂದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ದ್ವೇಷ ಮತ್ತು ಹಿಂಸಾಚಾರವನ್ನು ಉತ್ತೇಜಿಸುವ ಶಕ್ತಿಗಳು ವಿಕೇಂದ್ರೀಕರಣವನ್ನು ಅಧೀನಗೊಳಿಸುವ ಮೂಲಕ ಕೇಂದ್ರೀಕರಣಕ್ಕೆ ಒತ್ತು ನೀಡುತ್ತವೆ. ದೀನದಲಿತರು, ದಲಿತರು, ಮಹಿಳೆಯರು, ಬುಡಕಟ್ಟು ಜನಾಂಗದವರ ಹಕ್ಕುಗಳನ್ನು ಕಸಿದುಕೊಳ್ಳುತ್ತವೆ. ರೈತರು, ಕಾರ್ಮಿಕರು ಮತ್ತು ಯುವಕರು ಕ್ರಿಯಾಶೀಲರಾಗುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

’21ನೆ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು” ಎಂಬ ವಿಷಯದ ಕುರಿತಾದ ಪ್ರತಿ ಶಾಲೆಗಳ 6ನೆ ತರಗತಿ ನಂತರದ ವಿದ್ಯಾರ್ಥಿಗಳಿಗೆ ( ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜು, ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ವರೆಗೆ, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವುದರಿಂದ ಗಾಂಧೀಜಿಯವರನ್ನು ಅರಿತುಕೊಳ್ಳಲು ಇನ್ನೂ ಹೆಚ್ಚಿನ ಅವಕಾಶ ನೀಡಿದಂತಾಗುತ್ತದೆ. ಹಾಗಾಗಿ, ಈ ತಿಂಗಳ ಅಂತ್ಯದೊಳಗೆ ಸ್ಪರ್ಧೆಗಳನ್ನು ನಡೆಸಲು ಕ್ರಮ ವಹಿಸಬೇಕು ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಸೂಚಿಸಿದ್ದೇನೆ’ ಎಂದು ಹೇಳಿದ್ದಾರೆ.

ಪತ್ರದಲ್ಲಿ ಏನಿದೆ?

‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಯಾಗಿ ಏಳೂವರೆ ದಶಕಗಳು ಮುಗಿದಿದ್ದು, ಗಾಂಧೀಜಿಯವರು ತಮ್ಮ ಜೀವಿತಾವಧಿಯುದ್ಧಕ್ಕೂ ಶಾಂತಿ, ಅಹಿಂಸೆ, ಸತ್ಯ, ವಿಕೇಂದ್ರೀಕರಣ, ಸಾಮಾಜಿಕ ಸಮಾನತೆಯಂತಹ ಮುಂತಾದ ಜೀವಪರ ನಿಲುವುಗಳನ್ನು ಆಚರಿಸಿ ಪ್ರತಿಪಾದಿಸಿದ್ದರು. ಅದೇ ಸಂದರ್ಭದಲ್ಲಿ ದೇಶದ ವೈವಿಧ್ಯತೆ ಹಾಗೂ ಎಲ್ಲರನ್ನೂ ಒಳಗೊಂಡು ಬಾಳುವ ಅನಿವಾರ್ಯತೆಯನ್ನು ಪ್ರತಿಪಾದಿಸಿದ್ದರು. ಇಂಥ ಮಹಾನ್‌ ವ್ಯಕ್ತಿಯನ್ನು ಕೆಲವು ದುರುಳರು ಪಿತೂರಿ ಮಾಡಿ ಹತ್ಯೆ ಮಾಡಿದರು.

ಗಾಂಧೀಜಿಯವರ ಹತ್ಯೆಯ ನ೦ತರವೂ ದೇಶ ನಿರಂತರವಾಗಿ ಅವರ ಆದರ್ಶಗಳನ್ನು ಸಾಧ್ಯವಾದ ಮಟ್ಟಿಗೆ ಅನುಷ್ಠಾನ ಮಾಡಿಕೊಂಡೇ ಬಂದಿದೆ. ಆದರೆ, ಇತ್ತೀಚೆಗೆ ದ್ವೇಷ-ಹಿಂಸೆಯನ್ನು ಪ್ರತಿಪಾದಿಸುವ. ವಿಕೇಂದ್ರೀಕರಣವನ್ನು ದಮನಿಸಿ, ಕೇ೦ದ್ರೀಕರಣಕ್ಕೆ ಒತ್ತು ನೀಡುವ, ದೀನ-ದಲಿತ, ಮಹಿಳೆ, ಆದಿವಾಸಿ, ರೈತ, ಕಾರ್ಮಿಕ ಮತ್ತು ಯುವಜನರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರವೃತ್ತಿಯುಳ್ಳ ಶಕ್ತಿಗಳು ಕ್ರಿಯಾಶೀಲವಾಗುತ್ತಿವೆ. ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಯವರ ವಿರುದ್ಧ ಸ್ವಾತಂತ್ರ್ಯ ಹೋರಾಟದಲ್ಲಿ ಎಂದೂ ಭಾಗವಹಿಸದ ಶಕ್ತಿಗಳು ಪ್ರವರ್ಧಮಾನಕ್ಕೆ ಬರಲು ಪ್ರಯತ್ನಿಸುತ್ತಿವೆ.

ಇಂದು ಜಾಗತಿಕ ಪರಿಸರದ ಬಿಕ್ಕಟ್ಟುಗಳು, ಆರ್ಟಿಫಿಷಿಯಲ್‌ ಇಂಟೆಲಿಜೆನ್ಸ್‌, ಹಿಂಸಾ ವಿನೋದ ಮುಂತಾದವುಗಳಿಂದಾಗಿ ಮನುಷ್ಯರು ಈ ಭೂಮಿಯ ಮೇಲಿಂದಲೆ ಅಳಿಸಿ ಹೋಗುವ ದುಸ್ಥಿತಿಗೆ ತಲುಪಿಯಾಗಿದೆ ಎಂದು ಸ್ಟೀಫನ್‌ ಹಾಕಿಂಗ್‌ ಸೇರಿದಂತೆ ಮುಂತಾದ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಇದೇ ಸ೦ದರ್ಭದಲ್ಲಿ ದೊಡ್ಡ ಭಾಷೆಗಳು ಸಣ್ಣ ಸಣ್ಣ ಭಾಷೆಗಳನ್ನು ನುಂಗಿ ಹಾಕುತ್ತಿವೆ. ಯಾವುದೆ ಸಮಾಜ ಸಮುದಾಯಗಳು ತಮ್ಮ ಭಾಷೆಗಳನ್ನು ಕಳೆದುಕೊಳ್ಳುವುದೆಂದರೆ, ತಮ್ಮ ಅಸ್ತಿತ್ವವನ್ನೆ ಕಳೆದುಕೊಳ್ಳುವುದು ಎಂದರ್ಥ ಎಂಬುದು ಈಗಾಗಲೆ ಸಾಬೀತಾದ ವಿಚಾರವಾಗಿದೆ.

ಆದರೆ, ಗಾಂಧೀಜಿಯವರ ಚಿಂತನೆಗಳಲ್ಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರವಿದೆ. ಆದ್ದರಿಂದ ’21ನೆ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು’ ಎಂಬ ವಿಷಯವನ್ನು ಪ್ರತಿ ಶಾಲೆ [6ನೆ ಶರಗತಿಯ ನ೦ತರ] ಮತ್ತು ಪ್ರತಿ ಕಾಲೇಜಿನ ಪ್ರತಿ ವಿದ್ಯಾರ್ಥಿಗಳಿಗೆ (ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ, ಕಾಲೇಜು-ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳವರೆಗೆ. ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಸ್‌.ಎಸ್‌.ಎಲ್‌.ಸಿ ಮತ್ತು ಪಿ.ಯು.ಸಿ ಮಕ್ಕಳನ್ನು ಹೊರತುಪಡಿಸಿ) ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಗಾಂಧೀಜಿಯವರನ್ನು ಅರಿತುಕೊಳ್ಳಲು ಅವಕಾಶ ಒದಗಿಸಿದಂತಾಗುತ್ತದೆ. ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿ ತರಗತಿಯ ಮಕ್ಕಳಿಗೆ ಸೂಕ್ತ ಬಹುಮಾನವನ್ನು ನೀಡುವುದು, ಉಳಿದವರ ಭಾಗವಹಿಸುವಿಕೆಗಾಗಿ ಪ್ರಶ೦ಸನಾ ಪತ್ರಗಳನ್ನು ನೀಡಲು ಕ್ರಮವಹಿಸುವುದು.

ಈ ನಿಟ್ಟಿನಲ್ಲಿ ತಾವುಗಳು ತುರ್ತಾಗಿ ಕಾರ್ಯಯೋಜನೆಯನ್ನು ರೂಪಿಸಿ, ಈ ತಿ೦ಗಳ ಅಂತ್ಯದೊಳಗೆ ಸ್ಪರ್ಧೆಗಳನ್ನು ನಡೆಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ವಿನಂತಿಸುತ್ತೇನೆ.

ಇದನ್ನೂ ಓದಿ; ಕಲಬುರಗಿ: ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಖಂಡಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...