Homeಮುಖಪುಟಅಯೋಧ್ಯೆ: ಕಳ್ಳರ ಕಾಟಕ್ಕೆ ಬೇಸತ್ತ ರಾಮಭಕ್ತರು!

ಅಯೋಧ್ಯೆ: ಕಳ್ಳರ ಕಾಟಕ್ಕೆ ಬೇಸತ್ತ ರಾಮಭಕ್ತರು!

- Advertisement -
- Advertisement -

ಅಯೋಧ್ಯೆಯಲ್ಲಿ ನಿನ್ನೆ ರಾಮಮಂದಿರ ಉದ್ಘಾಟನೆಯಾಗಿದೆ. ದೇಶದ ವಿವಿಧೆಡೆಯಿಂದ ರಾಮನ ಭಕ್ತರ ದಂಡು ಅಯೋಧ್ಯೆಗೆ ತೆರಳಿದ್ದಾರೆ. ಇದೀಗ ರಾಮ ಮಂದಿರದಲ್ಲಿ ಭಕ್ತಾದಿಗಳ ಭಾರೀ ನೂಕುನುಗ್ಗಲಿನ ನಡುವೆ ಜೇಬುಗಳ್ಳರು ಸಕ್ರಿಯರಾಗಿರುವ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ದೇವಸ್ಥಾನದ ದ್ವಾರಗಳಲ್ಲಿ ಜನಸಂದಣಿ ಹೆಚ್ಚಿರುವುದರಿಂದ ಅದನ್ನೇ ಬಳಸಿಕೊಂಡ ಜೇಬುಗಳ್ಳರು, ಕೈಚೀಲ  ನಗದು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ದೋಚುತ್ತಿದ್ದಾರೆ.

ಇಂದು ರಾಮಮಂದಿರವನ್ನು ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕೊಟ್ಟ ಹಿನ್ನೆಲೆ ಸಾವಿರಾರು ರಾಮಭಕ್ತರು  ಅಯೋಧ್ಯೆಗೆ ತಲುಪಿದ್ದಾರೆ. ನಿನ್ನೆ ದೇವಾಲಯದಲ್ಲಿ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮ ನಡೆದಿತ್ತು. ಇಂದು ಬೆಳಗ್ಗೆ 7 ಗಂಟೆಯಿಂದ ಜನರಿಗೆ ರಾಮಮಂದಿರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.

ಪೂರ್ಣಿಮಾ ಎಂಬವರು ಅಯೋಧ್ಯೆಗೆ ರಾಮಮಂದಿರ ವೀಕ್ಷಣೆಗೆ ಬಂದಿದ್ದರು. ಭಕ್ತಾದಿಗಳ ಸರತಿ ಸಾಲುಗಳ ಮೂಲಕ ಸಾಗುತ್ತಿದ್ದರು. ಆ ಬಳಿಕ ಅವರು ಚೀಲವನ್ನು ಪರಿಶೀಲಿಸಿದಾಗ ಬ್ಲೇಡ್‌ನಿಂದ ಬ್ಯಾಗ್‌ನ್ನು ಕತ್ತರಿಸಿ ನಗದು ಮತ್ತು ಇತರ ವಸ್ತುಗಳು ಕಳ್ಳತನ ಮಾಡಲಾಗಿತ್ತು. ಭಕ್ತರ ಭಾರೀ ನೂಕುನುಗ್ಗಲು ಹಿನ್ನೆಲೆ ನಿಯಂತ್ರಿಸಲು ಆಡಳಿತಕ್ಕೆ ಕಷ್ಟವಾಗಬಹುದು. ಆದರೆ ಕಳ್ಳರಿಂದ ಭಕ್ತರನ್ನು ಉಳಿಸಬೇಕು ಎಂದು ಅವರು ಹೇಳಿದ್ದಾರೆ. ತಮ್ಮ ಕೈಚೀಲದಲ್ಲಿ ಬಿರುಕು ಬಿಟ್ಟಿರುವುದನ್ನು ತೋರಿಸಿ ಜನರ ಗುಂಪಿನಲ್ಲಿ ಚೀಲವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದೆ, ಆದರೆ ಜೇಬುಗಳ್ಳರು ತಮ್ಮ ಕೆಲಸ ಮಾಡಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಅಹಮದಾಬಾದ್ ನಿವಾಸಿಯಾದ ಪ್ರಾಪ್ತಿ ಅಯೋಧ್ಯೆಗೆ ಬಂದಿದ್ದರು. ಆಕೆಯ ಬ್ಯಾಗ್‌ನ ಜಿಪ್ ತೆರೆದು ಆಕೆಯ ಆಧಾರ್ ಕಾರ್ಡ್, ಎಟಿಎಂ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಹಾಗೂ ಇತರೆ ದಾಖಲೆಗಳನ್ನು ಕದ್ದೊಯ್ದಿದ್ದಾರೆ. ಅವುಗಳನ್ನು ದುರುಪಯೋಗಪಡಿಸಿಕೊಳ್ಳಬಹುದೆಂಬ ಭಯ ಈಗ ಆಕೆಗೆ ಕಾಡುತ್ತಿದೆ. ನಾನು ನನ್ನ ಬ್ಯಾಗ್‌ನ್ನು ಎಚ್ಚರಿಕೆಯಿಂದ ಹಿಡಿದುಕೊಂಡಿದ್ದೆ. ಅವರು ಜಿಪ್‌ ಹೇಗೆ ತೆರೆದು ದಾಖಲೆಗಳನ್ನು ತೆಗೆದುಕೊಂಡರು ಎಂಬುದರ ಬಗ್ಗೆ ನನಗೆ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಜೇಬುಗಳ್ಳರ ಕೆಂಗಣ್ಣಿಗೆ ಗುರಿಯಾಗಿ ಹಣ ಮತ್ತು ಇತರ ವಸ್ತುಗಳನ್ನು ಹಲವಾರು ಯಾತ್ರಾರ್ಥಿಗಳು ಕಳೆದುಕೊಂಡಿದ್ದಾರೆ. ನಗರದ ಹೊರಗಿನಿಂದ ಬಂದಿರುವ ಅಪರಾಧಿಗಳ ತಂಡ ಕಳ್ಳತನದ ಹಿಂದೆ ಇರಬಹುದೆಂದು ಸ್ಥಳೀಯ ನಿವಾಸಿಗಳು ಶಂಕಿಸಿದ್ದಾರೆ.

ನಾವು ಜನವರಿ 16ರಿಂದ ಅಯೋಧ್ಯೆಯಲ್ಲಿದ್ದೇವೆ. ಈ ಕಳ್ಳರು ಅಯೋಧ್ಯೆಯವರಲ್ಲ. ನಾವು ಇಲ್ಲಿ ಭೇಟಿಯಾದ ಆಟೋ ಚಾಲಕರು, ಬಸ್ ಚಾಲಕರು ಮತ್ತು ಕ್ಯಾಬ್ ಡ್ರೈವರ್‌ಗಳು ತುಂಬಾ ಪ್ರಾಮಾಣಿಕರು. ನಾವು ನಮ್ಮ ಲಗೇಜ್‌ಗಳನ್ನು ಸಹ ಅವರ ಬಳಿ ಬಿಟ್ಟು ಹೋಗಿದ್ದೆವು, ಆದರೆ ಯಾವುದೇ ವಸ್ತು ಕಾಣೆಯಾಗಲಿಲ್ಲ. ಜೇಬುಗಳ್ಳರು ಇಲ್ಲಿಂದ ಬಂದವರಲ್ಲ, ಭಕ್ತಾದಿಗಳು ಸರಿಯಾದ ಸರತಿ ಸಾಲಿನಲ್ಲಿ ದರ್ಶನಕ್ಕೆ ತೆರಳಲು ಮತ್ತು ಅಂತಹ ಘಟನೆಗಳನ್ನು ತಡೆಯಲು ದೇವಸ್ಥಾನದಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕೆಂದು ಕೆಲವರು  ಒತ್ತಾಯಿಸಿದ್ದಾರೆ.

ಆಂಧ್ರಪ್ರದೇಶದ ಕಲ್ಯಾಣ್ ಎಂಬಾತನ ಮೊಬೈಲ್‌ ಫೋನ್‌ ಕಳ್ಳತನ ಮಾಡಲಾಗಿದ್ದು, ರಾಮನ ದರ್ಶನಕ್ಕೆ ಬಂದವ ಮೊಬೈಲ್‌ ಕಳೆದುಕೊಂಡು ದೇವಸ್ಥಾನದ ಸಮೀಪವಿರುವ ಸೈಬರ್ ಸೆಂಟರ್‌ಗೆ ಭೇಟಿ ನೀಡಿ ಆನ್‌ಲೈನ್ ದೂರು ದಾಖಲಿಸಿದ್ದಾನೆ. ಕಳೆದ ಎರಡು ದಿನಗಳಿಂದ ಕಳ್ಳತನದ ದೂರುಗಳನ್ನು ದಾಖಲಿಸಲು ಕನಿಷ್ಠ 20 ಜನರು ತಮ್ಮ ಸೈಬರ್‌ಗೆ ಭೇಟಿ ನೀಡಿದ್ದಾರೆ ಎಂದು ಸೈಬರ್ ಮಾಲಕ ವಿನೋದ್ ತಿಳಿಸಿದ್ದಾರೆ. ನಗದು, ವ್ಯಾಲೆಟ್‌ಗಳು ಮತ್ತು ಸೆಲ್‌ಫೋನ್‌ಗಳನ್ನು ಕಳ್ಳತನ ಮಾಡಲಾಗಿದೆ. ಕಳ್ಳರ ತಂಡ ಜನರ ಗುಂಪನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೇರಳ: ರಾಮಮಂದಿರ ಉದ್ಘಾಟನೆ ದಿನ ಅನುಮತಿಯಿಲ್ಲದೆ ಶಾಲೆಗೆ ರಜೆ; ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Why you are not showing, Mumbai Meera road incident. Always against BJP. Why Karnataka CM openly telling Ten thousand crores for Muslims. Who’s Money he is giving. Why you are paper not comment

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...